Homeಕರ್ನಾಟಕಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ; ವನ್ಯ ಜೀವಿಗಳ ಮೇಲಾಗುವ ಪರಿಣಾಮ ಸಮೀಕ್ಷೆಗೆ ಹೈಕೋರ್ಟ್ ನಿರ್ದೇಶನ

ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ; ವನ್ಯ ಜೀವಿಗಳ ಮೇಲಾಗುವ ಪರಿಣಾಮ ಸಮೀಕ್ಷೆಗೆ ಹೈಕೋರ್ಟ್ ನಿರ್ದೇಶನ

- Advertisement -
- Advertisement -

ಅಂಕೋಲಾ-ಹುಬ್ಬಳ್ಳಿ ಬ್ರಾಡ್‌ಗೇಜ್ ರೈಲು ಮಾರ್ಗ ನಿರ್ಮಾಣದಿಂದ ಪಶ್ಚಿಮ ಘಟ್ಟಗಳಲ್ಲಿನ ವನ್ಯ ಜೀವಿಗಳ ಮೇಲಾಗುವ ಪರಿಣಾಮದ ಸಾಧಕ-ಭಾದಕಗಳ ಸಮೀಕ್ಷೆ ಸ್ವತಂತ್ರವಾಗಿ ನಡೆಸಿ ವರದಿ ಸಲ್ಲಿಸುವಂತೆ ರಾಷ್ಟ್ರೀಯ ವನ್ಯ ಜೀವಿ ಮಂಡಳಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಕರ್ನಾಟಕದ ಕರಾವಳಿ ಮತ್ತು ಉತ್ತರ ಕರ್ನಾಟಕ ಜೋಡಿಸುವ ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ಯೋಜನೆ ಈ ಭಾಗದ ಜನರ ಬಹು ದಿನದ ಕನಸು. ದಶಕಗಳಿಂದ ನೆನೆಗುದಿಗೆ ಬಿದ್ದಿರುವ ಸದರಿ ರೈಲು ಮಾರ್ಗಕ್ಕಾಗಿ ಸುದೀರ್ಘ ಹೋರಾಟ ನಡೆಯುತ್ತ ಬಂದಿದೆ. ಆದರೆ ಇದನ್ನು ಪರಿಸರವಾದಿಗಳು ನಿರಂತರವಾಗಿ ವಿರೋಧಿಸ್ತುತ್ತಿದ್ದಾರೆ. ಹಲವು ವರ್ಷಗಳ ಹಿಂದೆಯೆ ಅರ್ಧಕ್ಕೆ ಬಂದುನಿಂತಿರುವ ಅಂಕೋಲಾ-ಹುಬ್ಬಳ್ಳಿ ನಡುವಿನ 164.44 ಕಿ.ಮೀ. ಉದ್ದದ ರೈಲು ಮಾರ್ಗ ನಿಮಾಣಕ್ಕೆ 20-3-2020ರಂದು ಕರ್ನಾಟಕ ರಾಜ್ಯ ವನ್ಯ ಜೀವಿ ಮಂಡಳಿ ಅನುಮತಿ ಕೊಟ್ಟಿತ್ತು.

ಇದನ್ನು ಪ್ರಶ್ನಿಸಿ ಪ್ರಾಜೆಕ್ಟ್ ವೃಕ್ಷ ಪೌಂಡೇಶನ್ ಮತ್ತು ಗಿರಿಧರ್ ಕುಲಕರ್ಣಿ ಎಂಬವರು ಪ್ರತ್ಯೇಕವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಇವೆರಡು ಅರ್ಜಿಗಳು ಬುಧವಾರ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗಿಯ ಪೀಠದ ಮುಂದೆ ಬಂದಿದ್ದವು. ವಾದ ಆಲಿಸಿದ ನ್ಯಾಯಪೀಠ “ಅಭಿವೃದ್ಧಿಯಾಗಬೇಕು, ಆದರೆ ಅದರಿಂದ ವನ್ಯ ಜೀವಿ ಸಂಪತ್ತಿಗೆ ತೊಂದರೆಯಾಗಬಾರದು. ಆದ್ದರಿಂದ ರಾಷ್ಟ್ರೀಯ ವನ್ಯಜೀವಿ ಮಂಡಳಿ ಯೋಜನೆಯ ಸಾಧಕ-ಬಾಧಕಗಳ ಮೌಲ್ಯಮಾಪನ ಮಾಡಿ ವರದಿ ಸಲ್ಲಿಸಬೇಕು. ಲಭ್ಯವಿರುವ ಸಮೀಕ್ಷೆ ಮತ್ತು ವರದಿ ಪರಿಶೀಲಿಸಬೇಕು. ತಜ್ಞರ ನೆರವು ಬೇಕಿದ್ದರೆ ಪಡೆದುಕೊಳ್ಳಬಹುದು” ಎಂದು ಅಭಿಪ್ರಾಯಪಟ್ಟಿತು.

ಉಚ್ಛ ನ್ಯಾಯಾಲಯದ ತೀರ್ಪನ್ನು ಹುಬ್ಬಳ್ಳಿ-ಅಂಕೋಲಾ ರೈಲು ಹೋರಾಟ ಕ್ರಿಯಾ ಸಮಿತಿ ಸ್ವಾಗತಿಸಿದ್ದು, ಹೈಕೋರ್ಟ್ ನಿರ್ದೇಶನವು ಯೋಜನೆ ಜಾರಿಗಾಗಿ ಸಮಿತಿ ನಡೆಸುತ್ತಿರುವ ಸುದೀರ್ಘ ಹೋರಾಟಕ್ಕೆ ಶಕ್ತಿ ತುಂಬಿದೆ. ಮುಖ್ಯ ಮಂತ್ರಿಗಳನ್ನು ಭೇಟಿಯಾಗಿ ಸರ್ಕಾರದ ವತಿಯಿಂದ ಯೋಜನೆಗೆ ಪೂರಕವಾಗಿ ಇರುವ ವಿವಿಧ ಅಧ್ಯಯನ ವರದಿಗಳನ್ನು ರಾಷ್ಟ್ರೀಯ ವನ್ಯಜೀವಿ ಮಂಡಳಿಗೆ ಒದಗಿಸಲು ಕ್ರಮಕೈಗೊಳ್ಳುವಂತೆ ವಿನಂತಿಸಲಾಗುವುದೆಂದು ಹೋರಾಟ ಸಮಿತಿಯ ಅಧ್ಯಕ್ಷ ರಮಾನಂದ ನಾಯಕ, ಕಾರ್ಯದರ್ಶಿ ವಿಠ್ಠಲದಾಸ ಕಾಮತ್ ಮತ್ತು ಪದಾಧಿಕಾರಿಗಳು ತಿಳಿಸಿದ್ದಾರೆ.

ಹೈಕೋರ್ಟ್ ನಿರ್ದೇಶನವನ್ನು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಮಂತ್ರಿ ಶಿವರಾಮ ಹೆಬ್ಬಾರ್ ಮತ್ತು ಕಾರವಾರದ ಶಾಸಕಿ ರೂಪಾಲಿ ನಾಯ್ಕ್ ಸ್ವಾಗತಿಸಿದ್ದಾರೆ. ರಾಜ್ಯ ಸರ್ಕಾರ ತಡೆಯಾಜ್ಞೆ ತೆರವಿಗಾಗಿ ವಿಶೇಷ ವಕೀಲರನ್ನು ನೇಮಿಸಿತ್ತು. ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ಯೋಜನೆ ಎಷ್ಟು ಲಾಭದಾಯಕ ಮತ್ತು ಪರಿಸರ ಪೂರಕವೆಂಬುದನ್ನು ಸರ್ಕಾರ ರಾಷ್ಟ್ರೀಯ ವನ್ಯಜೀವಿ ಮಂಡಳಿಗೂ ಮನವರಿಕೆ ಮಾಡಿಕೊಡಲಿದೆಯೆಂದು ಹೆಬ್ಬಾರ್ ಹೇಳಿದ್ದಾರೆ.


ಇದನ್ನೂ ಓದಿ: ಜೇನುಕುರುಬ ಆದಿವಾಸಿ ಯುವಕನಿಗೆ ಅರಣ್ಯ ಸಿಬ್ಬಂದಿಯಿಂದ ಗುಂಡೇಟು: ಭುಗಿಲೆದ್ದ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Hubli 🔁Ankola railway route plan is the best one for the goods and passangers also… So plz expand the surroundung lines connect with Hubli Dividion SSS

  2. Hubli 🔁Ankola railway route plan is the best one for the goods and passangers also… So plz expand the surroundung lines connect with Hubli Dividion SSS.

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....