Homeಕರ್ನಾಟಕಚಡ್ಡಿಗಳು ಮಾಡುವುದು ಚಡ್ಡಿ ಕೆಲಸವನ್ನೇ: ಹುಬ್ಬಳ್ಳಿಯಲ್ಲಿ ಸಿದ್ದರಾಮಯ್ಯ ವ್ಯಂಗ್ಯ

ಚಡ್ಡಿಗಳು ಮಾಡುವುದು ಚಡ್ಡಿ ಕೆಲಸವನ್ನೇ: ಹುಬ್ಬಳ್ಳಿಯಲ್ಲಿ ಸಿದ್ದರಾಮಯ್ಯ ವ್ಯಂಗ್ಯ

’RSS ವಿರುದ್ಧ ಮಾತನಾಡಿದಾಗೆಲ್ಲಾ ನಾನು ಭಸ್ಮ ಆಗುತ್ತೇನೆ ಎನ್ನುತ್ತಾರೆ. ಆದರೆ, ನಾನು ಚೆನ್ನಾಗಿಯೇ ಇದ್ದೇನೆ'

- Advertisement -
- Advertisement -

ರಾಜ್ಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ‘ಚಡ್ಡಿ’ ಗದ್ದಲ ಹೆಚ್ಚಾಗುತ್ತಿದ್ದು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೆ ಹುಬ್ಬಳ್ಳಿಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಶಾಲಾ ಪಠ್ಯಪುಸ್ತಕಗಳ ಕೇಸರಿಕರಣವನ್ನು ವಿರೋಧಿಸಿ ಕಾಂಗ್ರೆಸ್‌ನ ವಿದ್ಯಾರ್ಥಿ ಘಟಕವಾದ ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾ (NSUI)ನ ಕಾರ್ಯಕರ್ತರು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರ ನಿವಾಸದ ಹೊರಗೆ ಚಡ್ಡಿಗಳನ್ನು ಸುಟ್ಟುಹಾಕಿದ ನಂತರ ಚಡ್ಡಿ ಗದ್ದಲ ಹೆಚ್ಚಾಗಿದೆ.

ಹುಬ್ಬಳ್ಳಿಯ ವಿಮಾನ ನಿಲ್ದಾಣದ ಬಳಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಆರ್‌ಎಸ್‌ಎಸ್ ಸಂಚಾಲಕರ ಹುದ್ದೆಯಲ್ಲಿ ದಲಿತ ಅಥವಾ ಇತರ ಹಿಂದುಳಿದ ಜಾತಿಗಳು ಏಕಿಲ್ಲ ಎಂದು ಕಿಡಿಕಾರಿದ್ದಾರೆ.

“ಆರ್‌ಎಸ್‌ಎಸ್ ಒಂದು ಜಾತ್ಯತೀತವಲ್ಲದ ಸಂಘಟನೆ ಎಂದು ನಾನು ಮೊದಲಿನಿಂದಲೂ ಹೇಳುತ್ತಿದ್ದೇನೆ. ದಲಿತ, ಒಬಿಸಿ ಅಥವಾ ಅಲ್ಪಸಂಖ್ಯಾತ ಸಮುದಾಯದ ಸದಸ್ಯರು ಎಂದಾದರೂ ಸರಸಂಚಾಲಕ ಆಗಿದ್ದಾರೆಯೇ..? ನನ್ನ ಆರೋಪ ಸತ್ಯವಾಗಿರುವುದರಿಂದ ಅವರು ಸುಮ್ಮನಿದ್ದಾರೆ” ಎಂದರು.

ಇದನ್ನೂ ಓದಿ: ಶಿಕ್ಷಣ ಸಚಿವರನ್ನು ತಕ್ಷಣ ಕಿತ್ತು ಹಾಕಿ- ಸಿಎಂ ಬೊಮ್ಮಾಯಿಗೆ ಸಿದ್ದರಾಮಯ್ಯ ಪತ್ರ

ಆರೆಸ್ಸೆಸ್ ಕಾರ್ಯಕರ್ತರು ಕಾಂಗ್ರೆಸ್ ಕಚೇರಿಗೆ ಕಳುಹಿಸಲು ಚಡ್ಡಿಗಳನ್ನು ಸಂಗ್ರಹಿಸುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಸಿದ್ದರಾಮಯ್ಯ,  “ಆರ್‌ಎಸ್‌ಎಸ್‌ ವಿರುದ್ಧ ಮಾತನಾಡಿದಾಗೆಲ್ಲಾ ನಾನು ಭಸ್ಮ ಆಗುತ್ತೇನೆ ಎನ್ನುತ್ತಾರೆ. ಆದರೆ, ನಾನು ಚೆನ್ನಾಗಿಯೇ ಇದ್ದೇನೆ. ಚಡ್ಡಿಗಳು ಇನ್ನೇನು ಮಾಡಬಹುದು..? ಅವರಿಗೆ ಬೇರೆ ಕೆಲಸ ಏನಿದೆ. ಜನರ ಕೆಲಸ, ಬಡವರ ಕೆಲಸ ಮಾಡಲ್ಲ, ದಲಿತರ ಕೆಲಸ ಮಾಡಲ್ಲ.  ಚಡ್ಡಿಗಳು ಚಡ್ಡಿ ಕೆಲಸ ಮಾಡುತ್ತಾರೆ” ಎಂದಿದ್ದಾರೆ.

ರಾಜ್ಯದಲ್ಲಿ ಶಾಲಾ ಪಠ್ಯಪುಸ್ತಕಗಳ ಕೇಸರಿಕರಣದ ಆರೋಪದ ಮೇಲೆ ಆರ್‌ಎಸ್‌ಎಸ್ ವಿರುದ್ಧ ಪ್ರತಿಭಟನೆಯ ಸಂಕೇತವಾಗಿ ‘ಚಡ್ಡಿಗಳನ್ನು’ ಸುಡಲಾಗುವುದು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಭಾನುವಾರ ಹೇಳಿದ್ದರು.

ಸಿದ್ದರಾಮಯ್ಯ ಅವರ ಟೀಕೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಕಾಂಗ್ರೆಸ್ ನಾಯಕರು ರಾಜ್ಯದ ಅಭಿವೃದ್ಧಿ ಮತ್ತು ಭವಿಷ್ಯದ ಬಗ್ಗೆ ಮಾತನಾಡಬೇಕು ಎಂದು ಮಂಗಳವಾರ ಹೇಳಿದ್ದಾರೆ.

“ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರಿಗೆ ಬೇರೆ ವಿಷಯವಿಲ್ಲ, ಆದ್ದರಿಂದ ಅವರು ಇಂತಹ ವಿಷಯಗಳ ಬಗ್ಗೆ ಮಾತನಾಡುತ್ತಿದ್ದಾರೆ. ರಾಜ್ಯದ ಜನರು ಎಲ್ಲವನ್ನು ನೋಡುತ್ತಿದ್ದಾರೆ. ಅವರು ರಾಜ್ಯದ ಅಭಿವೃದ್ಧಿ ಮತ್ತು ಭವಿಷ್ಯದ ಬಗ್ಗೆ ಮಾತನಾಡಬೇಕು” ಎಂದು ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ.


ಇದನ್ನೂ ಓದಿ: ‘ನಮ್ಮ ಹುಡುಗರು ಚಡ್ಡಿ ಸುಟ್ಟಿದ್ದಾರೆಯೇ ಹೊರತು ರಾಷ್ಟ್ರಧ್ವಜವನ್ನಲ್ಲ’ – ಡಿಕೆ ಶಿವಕುಮಾರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...