Homeಕರ್ನಾಟಕಹುಬ್ಬಳ್ಳಿ ಈದ್ಗಾ ಮೈದಾನದ ಗಣೇಶ ಉತ್ಸವಕ್ಕೆ ತಡೆ ಇಲ್ಲ: ತಡರಾತ್ರಿ ವಿಚಾರಣೆಯಲ್ಲಿ ಹೈಕೋರ್ಟ್ ಹೇಳಿದ್ದೇನು?

ಹುಬ್ಬಳ್ಳಿ ಈದ್ಗಾ ಮೈದಾನದ ಗಣೇಶ ಉತ್ಸವಕ್ಕೆ ತಡೆ ಇಲ್ಲ: ತಡರಾತ್ರಿ ವಿಚಾರಣೆಯಲ್ಲಿ ಹೈಕೋರ್ಟ್ ಹೇಳಿದ್ದೇನು?

- Advertisement -
- Advertisement -

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ್ ಉತ್ಸವ ಆಚರಿಸುವ ಸಂಬಂಧ ಕರ್ನಾಟಕ ಹೈಕೋರ್ಟ್ ಇಂದು ರಾತ್ರಿ ಹತ್ತು ಗಂಟೆಯಲ್ಲಿ ವಿಚಾರಣೆ ನಡೆಸಿತು. ಹುಬ್ಬಳ್ಳಿ ಪಾಲಿಕೆ ಅಧಿಕಾರಿಗಳ ನಿಲುವಿನಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ತಿಳಿಸಿತು.

ವಕ್ಫ್ ಆಸ್ತಿಯಲ್ಲಿ ಗಣೇಶ ಚತುರ್ಥಿ ಆಚರಣೆಗಳನ್ನು ನಿಲ್ಲಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಹೈಕೋರ್ಟ್ ಮಂಗಳವಾರ ರಾತ್ರಿ 10 ಗಂಟೆಗೆ ವಿಚಾರಣೆ ಆರಂಭಿಸಿತು.

ಚಾಮರಾಜಪೇಟೆಯಲ್ಲಿರುವ ಈದ್ಗಾ ಮೈದಾನದಲ್ಲಿ ಗಣಪತಿ ಉತ್ಸವ ಆಚರಿಸದಂತೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದು, ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿರುವ ಗಣೇಶ್ ಉತ್ಸವದ ತಡೆ ಅರ್ಜಿ ಸಲ್ಲಿಕೆಯಾಗಿತ್ತು. ಈ ವಿಚಾರವಾಗಿ ತುರ್ತು ವಿಚಾರಣೆ ನಡೆಸಿ, ಅರ್ಜಿದಾರರು ಹಾಗೂ ಪ್ರತಿವಾದಿಯ ವಾದಗಳನ್ನು ಆಲಿಸಿತು.

ಈ ಆಸ್ತಿಯು ಸರ್ಕಾರಕ್ಕೆ ಸೇರಿದ್ದು, ಪಾಲಿಕೆ ನಿರ್ಧಾರದಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.

ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ಅಶೋಕ್ ಎಸ್ ಕಿಣಗಿ ಅವರು ವಿಚಾರಣೆ ನಡೆಸಿದರು.

ವಿಚಾರಣೆ ಹೀಗಿತ್ತು:

ರಾತ್ರಿ 10: 06

ಅರ್ಜಿದಾರರು: (ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲೇಖಿಸಿ) ಸುಪ್ರೀಂ ಕೋರ್ಟ್ ಮಧ್ಯಂತರ ಆದೇಶದ ದೃಷ್ಟಿಯಿಂದ, ಈ ಅರ್ಜಿಯಲ್ಲೂ ಅದೇ ಆದೇಶವನ್ನು ನೀಡಬಹುದು.

ರಾತ್ರಿ 10: 08

ಪ್ರತಿವಾದಿಗಳು: ಸರ್ವೋಚ್ಚ ನ್ಯಾಯಾಲಯದ ಮುಂದಿರುವ ಪ್ರಶ್ನೆಗಳು ಆಸ್ತಿಯ ಒಡೆತನಕ್ಕೆ ಸಂಬಂಧಿಸಿದೆ. ಇದು ಸರ್ಕಾರಿ ಭೂಮಿಯಾಗಿದೆ. ಅಲ್ಲಿನ ಪ್ರಶ್ನೆ ಇಲ್ಲಿ ಬರುವುದಿಲ್ಲ.

ಪ್ರತಿವಾದಿಗಳು: ಈ ಪ್ರಕರಣದಲ್ಲಿ ಖಾಸಗಿ ಕಕ್ಷಿದಾರರು ಮೊಕದ್ದಮೆ ಹೂಡಿದರು, ಅದು ಅಂತಿಮವಾಗಿ ಮೇಲ್ಮನವಿಯಲ್ಲಿ ದೃಢೀಕರಿಸಲ್ಪಟ್ಟಿದೆ.

ಪ್ರತಿವಾದಿಗಳು: ವಿಚಾರಣಾ ನ್ಯಾಯಾಲಯ ತೀರ್ಪು ನೀಡಿದೆ. 1991ರ ವಹಿವಾಟು ಪರವಾನಗಿಯಾಗಿದೆ, ಗುತ್ತಿಗೆ ಅಲ್ಲ ಎಂದು ಹೇಳಿದೆ. ಇಲ್ಲಿನ ಭೂಮಿಯನ್ನು ಬಳಸುವ ಹಕ್ಕು ಸಾರ್ವಜನಿಕರಿಗೆ ಇದೆ ಎಂದು ಘೋಷಿಸಲಾಗಿದೆ.

ರಾತ್ರಿ 10: 12

ಪ್ರತಿವಾದಿಗಳು: ಈ ಜಾಗವನ್ನು ಸಾರ್ವಜನಿಕರ ಬಳಕೆಗೆ ಮುಕ್ತವಾಗಿ ಇಡಬೇಕಿತ್ತು. ವಕ್ಫ್ ಮಂಡಳಿ ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾಗೊಳಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಇದನ್ನು ವಿಶ್ಲೇಷಿಸಬೇಕಾಗುತ್ತದೆ.

ಕೋರ್ಟ್: ಯಾವುದೇ ವಿವಾದವಿಲ್ಲವೇ? ಆದರೆ ಸತ್ಯಗಳು ವಿಭಿನ್ನವಾಗಿವೆ.

ಪ್ರತಿವಾದಿ: ಯಾವುದೇ ವಿವಾದವಿಲ್ಲ. ಇದು ಕಾರ್ಪೋರೇಷನ್‌ ಆಸ್ತಿಯಾಗಿದೆ. ಆಸ್ತಿಯನ್ನು ತನಗೆ ಬೇಕಾದಂತೆ ಬಳಸುವ ಸಂಪೂರ್ಣ ಹಕ್ಕು ಪಾಲಿಕೆಗೆ ಇದೆ. ಮಧ್ಯಂತರ ಆದೇಶದ ಬಳಿಕ ಆಯುಕ್ತರು ಈ ಆದೇಶ ಹೊರಡಿಸಿರುವುದು ಕುತೂಹಲ ಮೂಡಿಸಿದೆ.

ಪ್ರತಿವಾದಿ: ಇದು ಕೇವಲ ಮೂರು ದಿನಗಳ ಆಚರಣೆ. ಸೂಚಿಸಿದಂತೆ ನಿರ್ಬಂಧಗಳನ್ನು ಹೇರಲಾಗಿದೆ. ಕೇವಲ 30×30 ಪ್ಯಾಂಡಲ್ ಹಾಕಲಾಗಿದೆ. ನಾವು ಅದನ್ನು ನ್ಯಾಯಯುತ ಮತ್ತು ಸರಿಯಾದ ಉದ್ದೇಶಕ್ಕಾಗಿ ಬಳಸುತ್ತೇವೆ.

ರಾತ್ರಿ 10: 23

ಪ್ರತಿವಾದಿ: ಅರ್ಜಿಯಲ್ಲಿ ಪರಿಗಣಿಸಲು ನಿಜವಾಗಿಯೂ ಏನೂ ಉಳಿದಿಲ್ಲ.

ರಾತ್ರಿ 10: 25

ಅರ್ಜಿದಾರರು: ಆಕ್ಷೇಪಣೆಗಳನ್ನು ಪರಿಗಣಿಸದೆ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಅದು ಅವರ ಆಸ್ತಿ, ಅವರು ಏನು ಬೇಕಾದರೂ ಮಾಡಬಹುದು. ಆದರೆ ಈ ಸಮಯದಲ್ಲಿ ಅಲ್ಲ. ಅವರು ವಾಸ್ತವಿಕ ಸಂಗತಿಗಳು ಮತ್ತು ಸಂದರ್ಭಗಳನ್ನು ಪರಿಗಣಿಸಬೇಕು. ಇದೇ ಮೊದಲ ಬಾರಿಗೆ ಪಾಲಿಕೆ ಇಂಥ ನಿರ್ಧಾರ ಕೈಗೊಂಡಿದೆ. ಇದು ಪಾಲಿಕೆ ಆಸ್ತಿಯಾಗಿದ್ದರೂ ಇಂದಿನ ವಾಸ್ತವ ಮತ್ತು ಪರಿಸ್ಥಿತಿಯನ್ನು ಪರಿಗಣಿಸಿ ನ್ಯಾಯಾಲಯ ನಿರ್ಧರಿಸಬೇಕು.

ಕೋರ್ಟ್: ರಾತ್ರಿ 10:45ಕ್ಕೆ ಆದೇಶ ನೀಡಲಾಗುವುದು.

ರಾತ್ರಿ 11: 18

ಆದೇಶ ಮಾಡಲು ಮುಂದಾದ ಪೀಠ

ರಾತ್ರಿ 11: 23

ನ್ಯಾಯಾಲಯ: ಆಸ್ತಿಯು ಪ್ರತಿವಾದಿಯವರಿಗೆ ಸೇರಿದೆ ಎಂಬುದರಲ್ಲಿ ವಿವಾದವಿಲ್ಲ. ತೀರ್ಪಿನ ಪರಿಶೀಲನೆಯಿಂದ ಪ್ರತಿವಾದಿಯು ಆಸ್ತಿಯ ಮಾಲೀಕರೆಂದು ಸ್ಪಷ್ಟವಾಗುತ್ತದೆ. ಅರ್ಜಿದಾರರು ಎರಡು ಸಂದರ್ಭಗಳಲ್ಲಿ ಮಾತ್ರ ಜಾಗವನ್ನು ಬಳಸಲು ಅನುಮತಿ ಪಡೆದಿದ್ದಾರೆ.

ರಾತ್ರಿ 11:30

ನ್ಯಾಯಾಲಯ: ಸದರಿ ಆಸ್ತಿಯು ಪ್ರತಿವಾದಿಯದ್ದಾಗಿದೆ. ನಿಯಮಿತ ಚಟುವಟಿಕೆಗಳನ್ನು ಕೈಗೊಳ್ಳಲು ಈ ಆಸ್ತಿಯನ್ನು ಬಳಸಲಾಗುತ್ತಿದೆ. ಇದನ್ನು ಪೂಜಾಸ್ಥಳ ಎಂದು ಘೋಷಿಸಿಲ್ಲ. ಪ್ರತಿವಾದಿಯು 1991ರ ಕಾಯಿದೆಯ ನಿಬಂಧನೆಗಳನ್ನು ಉಲ್ಲಂಘಿಸಿದ್ದರೆ, ಅರ್ಜಿದಾರರಿಗೆ ಪರಿಹಾರವಿರುತ್ತದೆ.

ಕೋರ್ಟ್ ನಿಲುವು

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಚತುರ್ಥಿ ಆಚರಣೆಗೆ ಅನುಮತಿ ನೀಡುವ ಅಧಿಕಾರಿಗಳ ನಿರ್ಧಾರ‌ಕ್ಕೆ ಮಧ್ಯಪ್ರವೇಶಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ. (ಇಲ್ಲಿ ಗಣೇಶ್ ಚತುರ್ಥಿ ಆಚರಿಸಲು ತಡೆಯುವುದಕ್ಕೆ ಸಾಧ್ಯವಿಲ್ಲವೆಂದು ಕೋರ್ಟ್ ತಿಳಿಸಿದೆ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...