Homeಕರ್ನಾಟಕಹುಬ್ಬಳ್ಳಿ ಈದ್ಗಾ ಮೈದಾನದ ಗಣೇಶ ಉತ್ಸವಕ್ಕೆ ತಡೆ ಇಲ್ಲ: ತಡರಾತ್ರಿ ವಿಚಾರಣೆಯಲ್ಲಿ ಹೈಕೋರ್ಟ್ ಹೇಳಿದ್ದೇನು?

ಹುಬ್ಬಳ್ಳಿ ಈದ್ಗಾ ಮೈದಾನದ ಗಣೇಶ ಉತ್ಸವಕ್ಕೆ ತಡೆ ಇಲ್ಲ: ತಡರಾತ್ರಿ ವಿಚಾರಣೆಯಲ್ಲಿ ಹೈಕೋರ್ಟ್ ಹೇಳಿದ್ದೇನು?

- Advertisement -
- Advertisement -

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ್ ಉತ್ಸವ ಆಚರಿಸುವ ಸಂಬಂಧ ಕರ್ನಾಟಕ ಹೈಕೋರ್ಟ್ ಇಂದು ರಾತ್ರಿ ಹತ್ತು ಗಂಟೆಯಲ್ಲಿ ವಿಚಾರಣೆ ನಡೆಸಿತು. ಹುಬ್ಬಳ್ಳಿ ಪಾಲಿಕೆ ಅಧಿಕಾರಿಗಳ ನಿಲುವಿನಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ತಿಳಿಸಿತು.

ವಕ್ಫ್ ಆಸ್ತಿಯಲ್ಲಿ ಗಣೇಶ ಚತುರ್ಥಿ ಆಚರಣೆಗಳನ್ನು ನಿಲ್ಲಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಹೈಕೋರ್ಟ್ ಮಂಗಳವಾರ ರಾತ್ರಿ 10 ಗಂಟೆಗೆ ವಿಚಾರಣೆ ಆರಂಭಿಸಿತು.

ಚಾಮರಾಜಪೇಟೆಯಲ್ಲಿರುವ ಈದ್ಗಾ ಮೈದಾನದಲ್ಲಿ ಗಣಪತಿ ಉತ್ಸವ ಆಚರಿಸದಂತೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದು, ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿರುವ ಗಣೇಶ್ ಉತ್ಸವದ ತಡೆ ಅರ್ಜಿ ಸಲ್ಲಿಕೆಯಾಗಿತ್ತು. ಈ ವಿಚಾರವಾಗಿ ತುರ್ತು ವಿಚಾರಣೆ ನಡೆಸಿ, ಅರ್ಜಿದಾರರು ಹಾಗೂ ಪ್ರತಿವಾದಿಯ ವಾದಗಳನ್ನು ಆಲಿಸಿತು.

ಈ ಆಸ್ತಿಯು ಸರ್ಕಾರಕ್ಕೆ ಸೇರಿದ್ದು, ಪಾಲಿಕೆ ನಿರ್ಧಾರದಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.

ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ಅಶೋಕ್ ಎಸ್ ಕಿಣಗಿ ಅವರು ವಿಚಾರಣೆ ನಡೆಸಿದರು.

ವಿಚಾರಣೆ ಹೀಗಿತ್ತು:

ರಾತ್ರಿ 10: 06

ಅರ್ಜಿದಾರರು: (ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲೇಖಿಸಿ) ಸುಪ್ರೀಂ ಕೋರ್ಟ್ ಮಧ್ಯಂತರ ಆದೇಶದ ದೃಷ್ಟಿಯಿಂದ, ಈ ಅರ್ಜಿಯಲ್ಲೂ ಅದೇ ಆದೇಶವನ್ನು ನೀಡಬಹುದು.

ರಾತ್ರಿ 10: 08

ಪ್ರತಿವಾದಿಗಳು: ಸರ್ವೋಚ್ಚ ನ್ಯಾಯಾಲಯದ ಮುಂದಿರುವ ಪ್ರಶ್ನೆಗಳು ಆಸ್ತಿಯ ಒಡೆತನಕ್ಕೆ ಸಂಬಂಧಿಸಿದೆ. ಇದು ಸರ್ಕಾರಿ ಭೂಮಿಯಾಗಿದೆ. ಅಲ್ಲಿನ ಪ್ರಶ್ನೆ ಇಲ್ಲಿ ಬರುವುದಿಲ್ಲ.

ಪ್ರತಿವಾದಿಗಳು: ಈ ಪ್ರಕರಣದಲ್ಲಿ ಖಾಸಗಿ ಕಕ್ಷಿದಾರರು ಮೊಕದ್ದಮೆ ಹೂಡಿದರು, ಅದು ಅಂತಿಮವಾಗಿ ಮೇಲ್ಮನವಿಯಲ್ಲಿ ದೃಢೀಕರಿಸಲ್ಪಟ್ಟಿದೆ.

ಪ್ರತಿವಾದಿಗಳು: ವಿಚಾರಣಾ ನ್ಯಾಯಾಲಯ ತೀರ್ಪು ನೀಡಿದೆ. 1991ರ ವಹಿವಾಟು ಪರವಾನಗಿಯಾಗಿದೆ, ಗುತ್ತಿಗೆ ಅಲ್ಲ ಎಂದು ಹೇಳಿದೆ. ಇಲ್ಲಿನ ಭೂಮಿಯನ್ನು ಬಳಸುವ ಹಕ್ಕು ಸಾರ್ವಜನಿಕರಿಗೆ ಇದೆ ಎಂದು ಘೋಷಿಸಲಾಗಿದೆ.

ರಾತ್ರಿ 10: 12

ಪ್ರತಿವಾದಿಗಳು: ಈ ಜಾಗವನ್ನು ಸಾರ್ವಜನಿಕರ ಬಳಕೆಗೆ ಮುಕ್ತವಾಗಿ ಇಡಬೇಕಿತ್ತು. ವಕ್ಫ್ ಮಂಡಳಿ ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾಗೊಳಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಇದನ್ನು ವಿಶ್ಲೇಷಿಸಬೇಕಾಗುತ್ತದೆ.

ಕೋರ್ಟ್: ಯಾವುದೇ ವಿವಾದವಿಲ್ಲವೇ? ಆದರೆ ಸತ್ಯಗಳು ವಿಭಿನ್ನವಾಗಿವೆ.

ಪ್ರತಿವಾದಿ: ಯಾವುದೇ ವಿವಾದವಿಲ್ಲ. ಇದು ಕಾರ್ಪೋರೇಷನ್‌ ಆಸ್ತಿಯಾಗಿದೆ. ಆಸ್ತಿಯನ್ನು ತನಗೆ ಬೇಕಾದಂತೆ ಬಳಸುವ ಸಂಪೂರ್ಣ ಹಕ್ಕು ಪಾಲಿಕೆಗೆ ಇದೆ. ಮಧ್ಯಂತರ ಆದೇಶದ ಬಳಿಕ ಆಯುಕ್ತರು ಈ ಆದೇಶ ಹೊರಡಿಸಿರುವುದು ಕುತೂಹಲ ಮೂಡಿಸಿದೆ.

ಪ್ರತಿವಾದಿ: ಇದು ಕೇವಲ ಮೂರು ದಿನಗಳ ಆಚರಣೆ. ಸೂಚಿಸಿದಂತೆ ನಿರ್ಬಂಧಗಳನ್ನು ಹೇರಲಾಗಿದೆ. ಕೇವಲ 30×30 ಪ್ಯಾಂಡಲ್ ಹಾಕಲಾಗಿದೆ. ನಾವು ಅದನ್ನು ನ್ಯಾಯಯುತ ಮತ್ತು ಸರಿಯಾದ ಉದ್ದೇಶಕ್ಕಾಗಿ ಬಳಸುತ್ತೇವೆ.

ರಾತ್ರಿ 10: 23

ಪ್ರತಿವಾದಿ: ಅರ್ಜಿಯಲ್ಲಿ ಪರಿಗಣಿಸಲು ನಿಜವಾಗಿಯೂ ಏನೂ ಉಳಿದಿಲ್ಲ.

ರಾತ್ರಿ 10: 25

ಅರ್ಜಿದಾರರು: ಆಕ್ಷೇಪಣೆಗಳನ್ನು ಪರಿಗಣಿಸದೆ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಅದು ಅವರ ಆಸ್ತಿ, ಅವರು ಏನು ಬೇಕಾದರೂ ಮಾಡಬಹುದು. ಆದರೆ ಈ ಸಮಯದಲ್ಲಿ ಅಲ್ಲ. ಅವರು ವಾಸ್ತವಿಕ ಸಂಗತಿಗಳು ಮತ್ತು ಸಂದರ್ಭಗಳನ್ನು ಪರಿಗಣಿಸಬೇಕು. ಇದೇ ಮೊದಲ ಬಾರಿಗೆ ಪಾಲಿಕೆ ಇಂಥ ನಿರ್ಧಾರ ಕೈಗೊಂಡಿದೆ. ಇದು ಪಾಲಿಕೆ ಆಸ್ತಿಯಾಗಿದ್ದರೂ ಇಂದಿನ ವಾಸ್ತವ ಮತ್ತು ಪರಿಸ್ಥಿತಿಯನ್ನು ಪರಿಗಣಿಸಿ ನ್ಯಾಯಾಲಯ ನಿರ್ಧರಿಸಬೇಕು.

ಕೋರ್ಟ್: ರಾತ್ರಿ 10:45ಕ್ಕೆ ಆದೇಶ ನೀಡಲಾಗುವುದು.

ರಾತ್ರಿ 11: 18

ಆದೇಶ ಮಾಡಲು ಮುಂದಾದ ಪೀಠ

ರಾತ್ರಿ 11: 23

ನ್ಯಾಯಾಲಯ: ಆಸ್ತಿಯು ಪ್ರತಿವಾದಿಯವರಿಗೆ ಸೇರಿದೆ ಎಂಬುದರಲ್ಲಿ ವಿವಾದವಿಲ್ಲ. ತೀರ್ಪಿನ ಪರಿಶೀಲನೆಯಿಂದ ಪ್ರತಿವಾದಿಯು ಆಸ್ತಿಯ ಮಾಲೀಕರೆಂದು ಸ್ಪಷ್ಟವಾಗುತ್ತದೆ. ಅರ್ಜಿದಾರರು ಎರಡು ಸಂದರ್ಭಗಳಲ್ಲಿ ಮಾತ್ರ ಜಾಗವನ್ನು ಬಳಸಲು ಅನುಮತಿ ಪಡೆದಿದ್ದಾರೆ.

ರಾತ್ರಿ 11:30

ನ್ಯಾಯಾಲಯ: ಸದರಿ ಆಸ್ತಿಯು ಪ್ರತಿವಾದಿಯದ್ದಾಗಿದೆ. ನಿಯಮಿತ ಚಟುವಟಿಕೆಗಳನ್ನು ಕೈಗೊಳ್ಳಲು ಈ ಆಸ್ತಿಯನ್ನು ಬಳಸಲಾಗುತ್ತಿದೆ. ಇದನ್ನು ಪೂಜಾಸ್ಥಳ ಎಂದು ಘೋಷಿಸಿಲ್ಲ. ಪ್ರತಿವಾದಿಯು 1991ರ ಕಾಯಿದೆಯ ನಿಬಂಧನೆಗಳನ್ನು ಉಲ್ಲಂಘಿಸಿದ್ದರೆ, ಅರ್ಜಿದಾರರಿಗೆ ಪರಿಹಾರವಿರುತ್ತದೆ.

ಕೋರ್ಟ್ ನಿಲುವು

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಚತುರ್ಥಿ ಆಚರಣೆಗೆ ಅನುಮತಿ ನೀಡುವ ಅಧಿಕಾರಿಗಳ ನಿರ್ಧಾರ‌ಕ್ಕೆ ಮಧ್ಯಪ್ರವೇಶಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ. (ಇಲ್ಲಿ ಗಣೇಶ್ ಚತುರ್ಥಿ ಆಚರಿಸಲು ತಡೆಯುವುದಕ್ಕೆ ಸಾಧ್ಯವಿಲ್ಲವೆಂದು ಕೋರ್ಟ್ ತಿಳಿಸಿದೆ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...