Homeಕರ್ನಾಟಕಹುಬ್ಬಳ್ಳಿ ಈದ್ಗಾ ಮೈದಾನದ ಗಣೇಶ ಉತ್ಸವಕ್ಕೆ ತಡೆ ಇಲ್ಲ: ತಡರಾತ್ರಿ ವಿಚಾರಣೆಯಲ್ಲಿ ಹೈಕೋರ್ಟ್ ಹೇಳಿದ್ದೇನು?

ಹುಬ್ಬಳ್ಳಿ ಈದ್ಗಾ ಮೈದಾನದ ಗಣೇಶ ಉತ್ಸವಕ್ಕೆ ತಡೆ ಇಲ್ಲ: ತಡರಾತ್ರಿ ವಿಚಾರಣೆಯಲ್ಲಿ ಹೈಕೋರ್ಟ್ ಹೇಳಿದ್ದೇನು?

- Advertisement -
- Advertisement -

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ್ ಉತ್ಸವ ಆಚರಿಸುವ ಸಂಬಂಧ ಕರ್ನಾಟಕ ಹೈಕೋರ್ಟ್ ಇಂದು ರಾತ್ರಿ ಹತ್ತು ಗಂಟೆಯಲ್ಲಿ ವಿಚಾರಣೆ ನಡೆಸಿತು. ಹುಬ್ಬಳ್ಳಿ ಪಾಲಿಕೆ ಅಧಿಕಾರಿಗಳ ನಿಲುವಿನಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ತಿಳಿಸಿತು.

ವಕ್ಫ್ ಆಸ್ತಿಯಲ್ಲಿ ಗಣೇಶ ಚತುರ್ಥಿ ಆಚರಣೆಗಳನ್ನು ನಿಲ್ಲಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಹೈಕೋರ್ಟ್ ಮಂಗಳವಾರ ರಾತ್ರಿ 10 ಗಂಟೆಗೆ ವಿಚಾರಣೆ ಆರಂಭಿಸಿತು.

ಚಾಮರಾಜಪೇಟೆಯಲ್ಲಿರುವ ಈದ್ಗಾ ಮೈದಾನದಲ್ಲಿ ಗಣಪತಿ ಉತ್ಸವ ಆಚರಿಸದಂತೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದು, ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿರುವ ಗಣೇಶ್ ಉತ್ಸವದ ತಡೆ ಅರ್ಜಿ ಸಲ್ಲಿಕೆಯಾಗಿತ್ತು. ಈ ವಿಚಾರವಾಗಿ ತುರ್ತು ವಿಚಾರಣೆ ನಡೆಸಿ, ಅರ್ಜಿದಾರರು ಹಾಗೂ ಪ್ರತಿವಾದಿಯ ವಾದಗಳನ್ನು ಆಲಿಸಿತು.

ಈ ಆಸ್ತಿಯು ಸರ್ಕಾರಕ್ಕೆ ಸೇರಿದ್ದು, ಪಾಲಿಕೆ ನಿರ್ಧಾರದಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.

ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ಅಶೋಕ್ ಎಸ್ ಕಿಣಗಿ ಅವರು ವಿಚಾರಣೆ ನಡೆಸಿದರು.

ವಿಚಾರಣೆ ಹೀಗಿತ್ತು:

ರಾತ್ರಿ 10: 06

ಅರ್ಜಿದಾರರು: (ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲೇಖಿಸಿ) ಸುಪ್ರೀಂ ಕೋರ್ಟ್ ಮಧ್ಯಂತರ ಆದೇಶದ ದೃಷ್ಟಿಯಿಂದ, ಈ ಅರ್ಜಿಯಲ್ಲೂ ಅದೇ ಆದೇಶವನ್ನು ನೀಡಬಹುದು.

ರಾತ್ರಿ 10: 08

ಪ್ರತಿವಾದಿಗಳು: ಸರ್ವೋಚ್ಚ ನ್ಯಾಯಾಲಯದ ಮುಂದಿರುವ ಪ್ರಶ್ನೆಗಳು ಆಸ್ತಿಯ ಒಡೆತನಕ್ಕೆ ಸಂಬಂಧಿಸಿದೆ. ಇದು ಸರ್ಕಾರಿ ಭೂಮಿಯಾಗಿದೆ. ಅಲ್ಲಿನ ಪ್ರಶ್ನೆ ಇಲ್ಲಿ ಬರುವುದಿಲ್ಲ.

ಪ್ರತಿವಾದಿಗಳು: ಈ ಪ್ರಕರಣದಲ್ಲಿ ಖಾಸಗಿ ಕಕ್ಷಿದಾರರು ಮೊಕದ್ದಮೆ ಹೂಡಿದರು, ಅದು ಅಂತಿಮವಾಗಿ ಮೇಲ್ಮನವಿಯಲ್ಲಿ ದೃಢೀಕರಿಸಲ್ಪಟ್ಟಿದೆ.

ಪ್ರತಿವಾದಿಗಳು: ವಿಚಾರಣಾ ನ್ಯಾಯಾಲಯ ತೀರ್ಪು ನೀಡಿದೆ. 1991ರ ವಹಿವಾಟು ಪರವಾನಗಿಯಾಗಿದೆ, ಗುತ್ತಿಗೆ ಅಲ್ಲ ಎಂದು ಹೇಳಿದೆ. ಇಲ್ಲಿನ ಭೂಮಿಯನ್ನು ಬಳಸುವ ಹಕ್ಕು ಸಾರ್ವಜನಿಕರಿಗೆ ಇದೆ ಎಂದು ಘೋಷಿಸಲಾಗಿದೆ.

ರಾತ್ರಿ 10: 12

ಪ್ರತಿವಾದಿಗಳು: ಈ ಜಾಗವನ್ನು ಸಾರ್ವಜನಿಕರ ಬಳಕೆಗೆ ಮುಕ್ತವಾಗಿ ಇಡಬೇಕಿತ್ತು. ವಕ್ಫ್ ಮಂಡಳಿ ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾಗೊಳಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಇದನ್ನು ವಿಶ್ಲೇಷಿಸಬೇಕಾಗುತ್ತದೆ.

ಕೋರ್ಟ್: ಯಾವುದೇ ವಿವಾದವಿಲ್ಲವೇ? ಆದರೆ ಸತ್ಯಗಳು ವಿಭಿನ್ನವಾಗಿವೆ.

ಪ್ರತಿವಾದಿ: ಯಾವುದೇ ವಿವಾದವಿಲ್ಲ. ಇದು ಕಾರ್ಪೋರೇಷನ್‌ ಆಸ್ತಿಯಾಗಿದೆ. ಆಸ್ತಿಯನ್ನು ತನಗೆ ಬೇಕಾದಂತೆ ಬಳಸುವ ಸಂಪೂರ್ಣ ಹಕ್ಕು ಪಾಲಿಕೆಗೆ ಇದೆ. ಮಧ್ಯಂತರ ಆದೇಶದ ಬಳಿಕ ಆಯುಕ್ತರು ಈ ಆದೇಶ ಹೊರಡಿಸಿರುವುದು ಕುತೂಹಲ ಮೂಡಿಸಿದೆ.

ಪ್ರತಿವಾದಿ: ಇದು ಕೇವಲ ಮೂರು ದಿನಗಳ ಆಚರಣೆ. ಸೂಚಿಸಿದಂತೆ ನಿರ್ಬಂಧಗಳನ್ನು ಹೇರಲಾಗಿದೆ. ಕೇವಲ 30×30 ಪ್ಯಾಂಡಲ್ ಹಾಕಲಾಗಿದೆ. ನಾವು ಅದನ್ನು ನ್ಯಾಯಯುತ ಮತ್ತು ಸರಿಯಾದ ಉದ್ದೇಶಕ್ಕಾಗಿ ಬಳಸುತ್ತೇವೆ.

ರಾತ್ರಿ 10: 23

ಪ್ರತಿವಾದಿ: ಅರ್ಜಿಯಲ್ಲಿ ಪರಿಗಣಿಸಲು ನಿಜವಾಗಿಯೂ ಏನೂ ಉಳಿದಿಲ್ಲ.

ರಾತ್ರಿ 10: 25

ಅರ್ಜಿದಾರರು: ಆಕ್ಷೇಪಣೆಗಳನ್ನು ಪರಿಗಣಿಸದೆ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಅದು ಅವರ ಆಸ್ತಿ, ಅವರು ಏನು ಬೇಕಾದರೂ ಮಾಡಬಹುದು. ಆದರೆ ಈ ಸಮಯದಲ್ಲಿ ಅಲ್ಲ. ಅವರು ವಾಸ್ತವಿಕ ಸಂಗತಿಗಳು ಮತ್ತು ಸಂದರ್ಭಗಳನ್ನು ಪರಿಗಣಿಸಬೇಕು. ಇದೇ ಮೊದಲ ಬಾರಿಗೆ ಪಾಲಿಕೆ ಇಂಥ ನಿರ್ಧಾರ ಕೈಗೊಂಡಿದೆ. ಇದು ಪಾಲಿಕೆ ಆಸ್ತಿಯಾಗಿದ್ದರೂ ಇಂದಿನ ವಾಸ್ತವ ಮತ್ತು ಪರಿಸ್ಥಿತಿಯನ್ನು ಪರಿಗಣಿಸಿ ನ್ಯಾಯಾಲಯ ನಿರ್ಧರಿಸಬೇಕು.

ಕೋರ್ಟ್: ರಾತ್ರಿ 10:45ಕ್ಕೆ ಆದೇಶ ನೀಡಲಾಗುವುದು.

ರಾತ್ರಿ 11: 18

ಆದೇಶ ಮಾಡಲು ಮುಂದಾದ ಪೀಠ

ರಾತ್ರಿ 11: 23

ನ್ಯಾಯಾಲಯ: ಆಸ್ತಿಯು ಪ್ರತಿವಾದಿಯವರಿಗೆ ಸೇರಿದೆ ಎಂಬುದರಲ್ಲಿ ವಿವಾದವಿಲ್ಲ. ತೀರ್ಪಿನ ಪರಿಶೀಲನೆಯಿಂದ ಪ್ರತಿವಾದಿಯು ಆಸ್ತಿಯ ಮಾಲೀಕರೆಂದು ಸ್ಪಷ್ಟವಾಗುತ್ತದೆ. ಅರ್ಜಿದಾರರು ಎರಡು ಸಂದರ್ಭಗಳಲ್ಲಿ ಮಾತ್ರ ಜಾಗವನ್ನು ಬಳಸಲು ಅನುಮತಿ ಪಡೆದಿದ್ದಾರೆ.

ರಾತ್ರಿ 11:30

ನ್ಯಾಯಾಲಯ: ಸದರಿ ಆಸ್ತಿಯು ಪ್ರತಿವಾದಿಯದ್ದಾಗಿದೆ. ನಿಯಮಿತ ಚಟುವಟಿಕೆಗಳನ್ನು ಕೈಗೊಳ್ಳಲು ಈ ಆಸ್ತಿಯನ್ನು ಬಳಸಲಾಗುತ್ತಿದೆ. ಇದನ್ನು ಪೂಜಾಸ್ಥಳ ಎಂದು ಘೋಷಿಸಿಲ್ಲ. ಪ್ರತಿವಾದಿಯು 1991ರ ಕಾಯಿದೆಯ ನಿಬಂಧನೆಗಳನ್ನು ಉಲ್ಲಂಘಿಸಿದ್ದರೆ, ಅರ್ಜಿದಾರರಿಗೆ ಪರಿಹಾರವಿರುತ್ತದೆ.

ಕೋರ್ಟ್ ನಿಲುವು

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಚತುರ್ಥಿ ಆಚರಣೆಗೆ ಅನುಮತಿ ನೀಡುವ ಅಧಿಕಾರಿಗಳ ನಿರ್ಧಾರ‌ಕ್ಕೆ ಮಧ್ಯಪ್ರವೇಶಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ. (ಇಲ್ಲಿ ಗಣೇಶ್ ಚತುರ್ಥಿ ಆಚರಿಸಲು ತಡೆಯುವುದಕ್ಕೆ ಸಾಧ್ಯವಿಲ್ಲವೆಂದು ಕೋರ್ಟ್ ತಿಳಿಸಿದೆ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...