Homeಕರ್ನಾಟಕಹುಬ್ಬಳ್ಳಿ ಈದ್ಗಾ ಮೈದಾನದ ಗಣೇಶ ಉತ್ಸವಕ್ಕೆ ತಡೆ ಇಲ್ಲ: ತಡರಾತ್ರಿ ವಿಚಾರಣೆಯಲ್ಲಿ ಹೈಕೋರ್ಟ್ ಹೇಳಿದ್ದೇನು?

ಹುಬ್ಬಳ್ಳಿ ಈದ್ಗಾ ಮೈದಾನದ ಗಣೇಶ ಉತ್ಸವಕ್ಕೆ ತಡೆ ಇಲ್ಲ: ತಡರಾತ್ರಿ ವಿಚಾರಣೆಯಲ್ಲಿ ಹೈಕೋರ್ಟ್ ಹೇಳಿದ್ದೇನು?

- Advertisement -
- Advertisement -

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ್ ಉತ್ಸವ ಆಚರಿಸುವ ಸಂಬಂಧ ಕರ್ನಾಟಕ ಹೈಕೋರ್ಟ್ ಇಂದು ರಾತ್ರಿ ಹತ್ತು ಗಂಟೆಯಲ್ಲಿ ವಿಚಾರಣೆ ನಡೆಸಿತು. ಹುಬ್ಬಳ್ಳಿ ಪಾಲಿಕೆ ಅಧಿಕಾರಿಗಳ ನಿಲುವಿನಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ತಿಳಿಸಿತು.

ವಕ್ಫ್ ಆಸ್ತಿಯಲ್ಲಿ ಗಣೇಶ ಚತುರ್ಥಿ ಆಚರಣೆಗಳನ್ನು ನಿಲ್ಲಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಹೈಕೋರ್ಟ್ ಮಂಗಳವಾರ ರಾತ್ರಿ 10 ಗಂಟೆಗೆ ವಿಚಾರಣೆ ಆರಂಭಿಸಿತು.

ಚಾಮರಾಜಪೇಟೆಯಲ್ಲಿರುವ ಈದ್ಗಾ ಮೈದಾನದಲ್ಲಿ ಗಣಪತಿ ಉತ್ಸವ ಆಚರಿಸದಂತೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದು, ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿರುವ ಗಣೇಶ್ ಉತ್ಸವದ ತಡೆ ಅರ್ಜಿ ಸಲ್ಲಿಕೆಯಾಗಿತ್ತು. ಈ ವಿಚಾರವಾಗಿ ತುರ್ತು ವಿಚಾರಣೆ ನಡೆಸಿ, ಅರ್ಜಿದಾರರು ಹಾಗೂ ಪ್ರತಿವಾದಿಯ ವಾದಗಳನ್ನು ಆಲಿಸಿತು.

ಈ ಆಸ್ತಿಯು ಸರ್ಕಾರಕ್ಕೆ ಸೇರಿದ್ದು, ಪಾಲಿಕೆ ನಿರ್ಧಾರದಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.

ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ಅಶೋಕ್ ಎಸ್ ಕಿಣಗಿ ಅವರು ವಿಚಾರಣೆ ನಡೆಸಿದರು.

ವಿಚಾರಣೆ ಹೀಗಿತ್ತು:

ರಾತ್ರಿ 10: 06

ಅರ್ಜಿದಾರರು: (ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲೇಖಿಸಿ) ಸುಪ್ರೀಂ ಕೋರ್ಟ್ ಮಧ್ಯಂತರ ಆದೇಶದ ದೃಷ್ಟಿಯಿಂದ, ಈ ಅರ್ಜಿಯಲ್ಲೂ ಅದೇ ಆದೇಶವನ್ನು ನೀಡಬಹುದು.

ರಾತ್ರಿ 10: 08

ಪ್ರತಿವಾದಿಗಳು: ಸರ್ವೋಚ್ಚ ನ್ಯಾಯಾಲಯದ ಮುಂದಿರುವ ಪ್ರಶ್ನೆಗಳು ಆಸ್ತಿಯ ಒಡೆತನಕ್ಕೆ ಸಂಬಂಧಿಸಿದೆ. ಇದು ಸರ್ಕಾರಿ ಭೂಮಿಯಾಗಿದೆ. ಅಲ್ಲಿನ ಪ್ರಶ್ನೆ ಇಲ್ಲಿ ಬರುವುದಿಲ್ಲ.

ಪ್ರತಿವಾದಿಗಳು: ಈ ಪ್ರಕರಣದಲ್ಲಿ ಖಾಸಗಿ ಕಕ್ಷಿದಾರರು ಮೊಕದ್ದಮೆ ಹೂಡಿದರು, ಅದು ಅಂತಿಮವಾಗಿ ಮೇಲ್ಮನವಿಯಲ್ಲಿ ದೃಢೀಕರಿಸಲ್ಪಟ್ಟಿದೆ.

ಪ್ರತಿವಾದಿಗಳು: ವಿಚಾರಣಾ ನ್ಯಾಯಾಲಯ ತೀರ್ಪು ನೀಡಿದೆ. 1991ರ ವಹಿವಾಟು ಪರವಾನಗಿಯಾಗಿದೆ, ಗುತ್ತಿಗೆ ಅಲ್ಲ ಎಂದು ಹೇಳಿದೆ. ಇಲ್ಲಿನ ಭೂಮಿಯನ್ನು ಬಳಸುವ ಹಕ್ಕು ಸಾರ್ವಜನಿಕರಿಗೆ ಇದೆ ಎಂದು ಘೋಷಿಸಲಾಗಿದೆ.

ರಾತ್ರಿ 10: 12

ಪ್ರತಿವಾದಿಗಳು: ಈ ಜಾಗವನ್ನು ಸಾರ್ವಜನಿಕರ ಬಳಕೆಗೆ ಮುಕ್ತವಾಗಿ ಇಡಬೇಕಿತ್ತು. ವಕ್ಫ್ ಮಂಡಳಿ ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾಗೊಳಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಇದನ್ನು ವಿಶ್ಲೇಷಿಸಬೇಕಾಗುತ್ತದೆ.

ಕೋರ್ಟ್: ಯಾವುದೇ ವಿವಾದವಿಲ್ಲವೇ? ಆದರೆ ಸತ್ಯಗಳು ವಿಭಿನ್ನವಾಗಿವೆ.

ಪ್ರತಿವಾದಿ: ಯಾವುದೇ ವಿವಾದವಿಲ್ಲ. ಇದು ಕಾರ್ಪೋರೇಷನ್‌ ಆಸ್ತಿಯಾಗಿದೆ. ಆಸ್ತಿಯನ್ನು ತನಗೆ ಬೇಕಾದಂತೆ ಬಳಸುವ ಸಂಪೂರ್ಣ ಹಕ್ಕು ಪಾಲಿಕೆಗೆ ಇದೆ. ಮಧ್ಯಂತರ ಆದೇಶದ ಬಳಿಕ ಆಯುಕ್ತರು ಈ ಆದೇಶ ಹೊರಡಿಸಿರುವುದು ಕುತೂಹಲ ಮೂಡಿಸಿದೆ.

ಪ್ರತಿವಾದಿ: ಇದು ಕೇವಲ ಮೂರು ದಿನಗಳ ಆಚರಣೆ. ಸೂಚಿಸಿದಂತೆ ನಿರ್ಬಂಧಗಳನ್ನು ಹೇರಲಾಗಿದೆ. ಕೇವಲ 30×30 ಪ್ಯಾಂಡಲ್ ಹಾಕಲಾಗಿದೆ. ನಾವು ಅದನ್ನು ನ್ಯಾಯಯುತ ಮತ್ತು ಸರಿಯಾದ ಉದ್ದೇಶಕ್ಕಾಗಿ ಬಳಸುತ್ತೇವೆ.

ರಾತ್ರಿ 10: 23

ಪ್ರತಿವಾದಿ: ಅರ್ಜಿಯಲ್ಲಿ ಪರಿಗಣಿಸಲು ನಿಜವಾಗಿಯೂ ಏನೂ ಉಳಿದಿಲ್ಲ.

ರಾತ್ರಿ 10: 25

ಅರ್ಜಿದಾರರು: ಆಕ್ಷೇಪಣೆಗಳನ್ನು ಪರಿಗಣಿಸದೆ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಅದು ಅವರ ಆಸ್ತಿ, ಅವರು ಏನು ಬೇಕಾದರೂ ಮಾಡಬಹುದು. ಆದರೆ ಈ ಸಮಯದಲ್ಲಿ ಅಲ್ಲ. ಅವರು ವಾಸ್ತವಿಕ ಸಂಗತಿಗಳು ಮತ್ತು ಸಂದರ್ಭಗಳನ್ನು ಪರಿಗಣಿಸಬೇಕು. ಇದೇ ಮೊದಲ ಬಾರಿಗೆ ಪಾಲಿಕೆ ಇಂಥ ನಿರ್ಧಾರ ಕೈಗೊಂಡಿದೆ. ಇದು ಪಾಲಿಕೆ ಆಸ್ತಿಯಾಗಿದ್ದರೂ ಇಂದಿನ ವಾಸ್ತವ ಮತ್ತು ಪರಿಸ್ಥಿತಿಯನ್ನು ಪರಿಗಣಿಸಿ ನ್ಯಾಯಾಲಯ ನಿರ್ಧರಿಸಬೇಕು.

ಕೋರ್ಟ್: ರಾತ್ರಿ 10:45ಕ್ಕೆ ಆದೇಶ ನೀಡಲಾಗುವುದು.

ರಾತ್ರಿ 11: 18

ಆದೇಶ ಮಾಡಲು ಮುಂದಾದ ಪೀಠ

ರಾತ್ರಿ 11: 23

ನ್ಯಾಯಾಲಯ: ಆಸ್ತಿಯು ಪ್ರತಿವಾದಿಯವರಿಗೆ ಸೇರಿದೆ ಎಂಬುದರಲ್ಲಿ ವಿವಾದವಿಲ್ಲ. ತೀರ್ಪಿನ ಪರಿಶೀಲನೆಯಿಂದ ಪ್ರತಿವಾದಿಯು ಆಸ್ತಿಯ ಮಾಲೀಕರೆಂದು ಸ್ಪಷ್ಟವಾಗುತ್ತದೆ. ಅರ್ಜಿದಾರರು ಎರಡು ಸಂದರ್ಭಗಳಲ್ಲಿ ಮಾತ್ರ ಜಾಗವನ್ನು ಬಳಸಲು ಅನುಮತಿ ಪಡೆದಿದ್ದಾರೆ.

ರಾತ್ರಿ 11:30

ನ್ಯಾಯಾಲಯ: ಸದರಿ ಆಸ್ತಿಯು ಪ್ರತಿವಾದಿಯದ್ದಾಗಿದೆ. ನಿಯಮಿತ ಚಟುವಟಿಕೆಗಳನ್ನು ಕೈಗೊಳ್ಳಲು ಈ ಆಸ್ತಿಯನ್ನು ಬಳಸಲಾಗುತ್ತಿದೆ. ಇದನ್ನು ಪೂಜಾಸ್ಥಳ ಎಂದು ಘೋಷಿಸಿಲ್ಲ. ಪ್ರತಿವಾದಿಯು 1991ರ ಕಾಯಿದೆಯ ನಿಬಂಧನೆಗಳನ್ನು ಉಲ್ಲಂಘಿಸಿದ್ದರೆ, ಅರ್ಜಿದಾರರಿಗೆ ಪರಿಹಾರವಿರುತ್ತದೆ.

ಕೋರ್ಟ್ ನಿಲುವು

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಚತುರ್ಥಿ ಆಚರಣೆಗೆ ಅನುಮತಿ ನೀಡುವ ಅಧಿಕಾರಿಗಳ ನಿರ್ಧಾರ‌ಕ್ಕೆ ಮಧ್ಯಪ್ರವೇಶಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ. (ಇಲ್ಲಿ ಗಣೇಶ್ ಚತುರ್ಥಿ ಆಚರಿಸಲು ತಡೆಯುವುದಕ್ಕೆ ಸಾಧ್ಯವಿಲ್ಲವೆಂದು ಕೋರ್ಟ್ ತಿಳಿಸಿದೆ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...