Homeಮುಖಪುಟಹುಬ್ಬಳ್ಳಿ ನೇಹಾ ಹತ್ಯೆ ಪ್ರಕರಣ: 'ಲವ್ ಜಿಹಾದ್' ಆರೋಪ ನಿರಾಕರಿಸಿದ ಸರ್ಕಾರ; ಆರೋಪಿ ಬಂಧನ

ಹುಬ್ಬಳ್ಳಿ ನೇಹಾ ಹತ್ಯೆ ಪ್ರಕರಣ: ‘ಲವ್ ಜಿಹಾದ್’ ಆರೋಪ ನಿರಾಕರಿಸಿದ ಸರ್ಕಾರ; ಆರೋಪಿ ಬಂಧನ

- Advertisement -
- Advertisement -

ಹುಬ್ಬಳ್ಳಿಯ ಕಾಲೇಜು ಕ್ಯಾಂಪಸ್‌ನಲ್ಲಿ ಕಾಂಗ್ರೆಸ್ ಕಾರ್ಪೊರೇಟರ್ ಮಗಳ ಹತ್ಯೆ ಪ್ರಕರಣಕ್ಕೆ ಬಿಜೆಪಿ ಸೇರಿದಂತೆ ಸಂಘಪರಿವಾರದ ಬೆಂಬಲಿಗರು ‘ಲವ್ ಜಿಹಾದ್’ ಆರೋಪ ಮಾಡುತ್ತಿದ್ದು, ರಾಜ್ಯ ಗೃಹ ಇಲಾಖೆ ಇದನ್ನು ನಿರಾಕರಿಸಿದ್ದು, ಕೊಲೆ ಆರೋಪಿಯನ್ನು ವಶಕ್ಕೆ ಪಡೆದಿದೆ.

ಗುರುವಾರ ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ 23 ವರ್ಷದ ಮಾಸ್ಟರ್ಸ್ ಆಫ್ ಕಂಪ್ಯೂಟರ್ ಅಪ್ಲಿಕೇಷನ್ಸ್ (ಎಂಸಿಎ) ವಿದ್ಯಾರ್ಥಿನಿ ನೇಹಾ ಮೇಲೆ ಫಯಾಜ್ ಎಂಬಾತ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ. ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ ನೇಹಾಳನ್ನು ತಡೆದಿದ್ದ ಫಯಾಜ್, ಹಲವು ಬಾರಿ ಇರಿದಿರುವುದನ್ನು ಸಿಸಿಟಿವಿ ದೃಶ್ಯಾವಳಿಗಳು ತೋರಿಸಿವೆ. ಘಟನೆ ನಂತರ ಕೂಡನೇ ಆತನನ್ನು ಬಂಧಿಸಲಾಯಿತು.

ಯುವತಿ ತಂದೆ ಹೇಳಿದ್ದೇನು?

ಸಂತ್ರಸ್ತೆಯ ತಂದೆ, ಕಾಂಗ್ರೆಸ್ ಕಾರ್ಪೊರೇಟರ್ ನಿರಂಜನ್ ಹಿರೇಮಠ ಮಾತನಾಡಿ, ಆರೋಪಿ ಫಯಾಜ್ ಮನೆಯವರಿಗೆ ಪರಿಚಿತನಾಗಿದ್ದು, ನೇಹಾಳನ್ನು ಹಿಂಬಾಲಿಸದಂತೆ ತಡೆಯಲು ಈ ಹಿಂದೆ ಯತ್ನಿಸಿದ್ದರು ಎನ್ನಲಾಗಿದೆ.

ಆತ ಹಳೆ ವಿದ್ಯಾರ್ಥಿಯಾಗಿದ್ದು, ನನ್ನ ಮಗಳಿಗೆ ಪ್ರಪೋಸ್ ಮಾಡಿದ್ದ.ಆದರೆ, ಆಕೆ ಅವನ ಪ್ರಸ್ತಾವನೆಯನ್ನು ತಿರಸ್ಕರಿಸಿದ್ದಳು ಎಂದು ಹಿರೇಮಠ್ ತಿಳಿಸಿದ್ದಾರೆ. ಅವಳು ಅವನನ್ನು ಇಷ್ಟಪಡುವುದಿಲ್ಲ ಮತ್ತು ಅವಳು ಸಾಮಾನ್ಯವಾಗಿ ಈ ಎಲ್ಲದರಿಂದ ದೂರವಿದ್ದಳು… ಅವಳು ಅವನ ಪ್ರಸ್ತಾಪವನ್ನು ನಿರಾಕರಿಸಿದಳು, ಇಬ್ಬರೂ ಬೇರೆ ಬೇರೆ ಜಾತಿಗೆ ಸೇರಿದವರು ಮತ್ತು ಅವನೊಂದಿಗೆ ಯಾವುದೇ ಸಂಬಂಧವನ್ನು ಹೊಂದಲು ಬಯಸುತ್ತಿರಲಿಲ್ಲ. ಆ ಕೋಪದಿಂದ ನನ್ನ ಮಗಳಿಗೆ ಚಾಕುವಿನಿಂದ ಇರಿದಿದ್ದಾನೆ ಎಂದು ಹೇಳಿದ್ದಾರೆ.

ಬಿಜೆಪಿಯಿಂದ ‘ಲವ್ ಜಿಹಾದ್’ ಆರೋಪ

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕಾನೂನು ಮತ್ತು ಸುವ್ಯವಸ್ಥೆಯನ್ನು ಹದಗೆಡಿಸುವ ರಾಜಕಾರಣ ಮಾಡುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.

“ಇದೊಂದು ದುರದೃಷ್ಟಕರ ಘಟನೆಯಾಗಿದೆ ಮತ್ತು ಇದರಲ್ಲಿ ‘ಲವ್ ಜಿಹಾದ್’ ಆಯಾಮವಿದೆ ಎಂದು ನಾನು ನಂಬುತ್ತೇನೆ. ಹುಡುಗಿ (ಹುಡುಗನ) ಪ್ರೇಮ ಪ್ರಸ್ತಾಪವನ್ನು ನಿರಾಕರಿಸಿದಾಗ, ಅವಳನ್ನು ಕೊಲೆ ಮಾಡಲಾಗಿದೆ. ಕಾಂಗ್ರೆಸ್ ಸರ್ಕಾರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಇಲ್ಲ” ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.

ಆದರೆ, ಬಿಜೆಪಿ ಆರೋಪಗಳನ್ನು ಕರ್ನಾಟಕ ಸರ್ಕಾರ ಬಲವಾಗಿ ತಳ್ಳಿಹಾಕಿದೆ. ರಾಜ್ಯ ಗೃಹ ಸಚಿವ ಜಿ ಪರಮೇಶ್ವರ ಮಾತನಾಡಿ, “ನೇಹಾ ಬೇರೊಬ್ಬರನ್ನು ಮದುವೆಯಾಗಲಿದ್ದ ಕಾರಣ ಅವನು ಅವಳನ್ನು ಇರಿದಿರಬಹುದು. ಆದರೆ, ನನಗೆ ಇನ್ನೂ ವಿವರಗಳು ತಿಳಿದಿಲ್ಲ. ಲವ್ ಜಿಹಾದ್ ಆಗಿರುವಂತೆ ಕಾಣುತ್ತಿಲ್ಲ” ಎಂದು ಪರಮೇಶ್ವರ್ ಹೇಳಿದರು.

ಬಿಜೆಪಿಯವರು ಭಯ ಮತ್ತು ಗಾಬರಿ ಮೂಡಿಸಲು ಯತ್ನಿಸುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ. ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಇಲ್ಲ ಎಂದು ಬಿಜೆಪಿ ಬೆದರಿಕೆ ಹಾಕುತ್ತಿದೆ. ಕರ್ನಾಟಕದಲ್ಲಿ ಅತ್ಯುತ್ತಮ ಕಾನೂನು ಸುವ್ಯವಸ್ಥೆ ಇದೆ, ರಾಜ್ಯದಲ್ಲಿ ರಾಜ್ಯಪಾಲರ ಆಳ್ವಿಕೆ ತರುತ್ತೇವೆ ಎಂದು ಮತದಾರರಿಗೆ ಹೇಳಲು ಯತ್ನಿಸುತ್ತಿದ್ದಾರೆ; ಹಾಗೆ ಮಾಡಲು ಸಾಧ್ಯವಿಲ್ಲ. ಪ್ರತಿಯೊಬ್ಬರಿಗೂ ಕಾನೂನು ತನ್ನದೇ ಆದ ಮಾರ್ಗವನ್ನು ತೆಗೆದುಕೊಳ್ಳುತ್ತದೆ ಎಂದು ಶಿವಕುಮಾರ್ ಹೇಳಿದರು.

‘ಲವ್ ಜಿಹಾದ್’ ಎಂಬುದು ಮುಸ್ಲಿಂ ಪುರುಷ ಮತ್ತು ಮುಸ್ಲಿಮೇತರ ಮಹಿಳೆಯ ನಡುವಿನ ಸಂಬಂಧವನ್ನು ಸೂಚಿಸಲು ಹಿಂದುತ್ವ ಸಂಘಟನೆಗಳು ಜನಪ್ರಿಯಗೊಳಿಸಿರುವ ನುಡಿಗಟ್ಟು, ಅಲ್ಲಿ ಮುಸ್ಲಿಂ ವ್ಯಕ್ತಿಯು ಮುಸ್ಲಿಮೇತರರನ್ನು ಮತಾಂತರಿಸಲು ಬಯಸುತ್ತಾನೆ.

ಇದನ್ನೂ ಓದಿ; ‘ಹೆಣಗಳ ಮೇಲೆ ಹಣದ ರಾಜ್ಯ; ಇದೇ ಇವರ ಸಂವೇದನಾ ಹೀನತೆಯ ಗ್ಯಾರಂಟಿ..’; ಬಿಜೆಪಿ ವಿರುದ್ಧ ನಟ ಕಿಶೋರ್ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...

ಕ್ಷುಲ್ಲಕ ಕಾರಣಕ್ಕೆ ಮೂವರು ಮುಸ್ಲಿಮರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿ

ಕ್ಷುಲ್ಲಕ ಕಾರಣಕ್ಕೆ ಇಬ್ಬರು ಹಿರಿಯ ವಯಸ್ಕರು ಸೇರಿದಂತೆ ಮೂವರು ಮುಸ್ಲಿಂ ವ್ಯಕ್ತಿಗಳ ಮೇಲೆ ದುಷ್ಕರ್ಮಿಯೊಬ್ಬ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ. ಫೆಬ್ರವರಿ 15ರಂದು ಜಿಲ್ಲೆಯ ರುದಾಯನ್ ಪಟ್ಟಣದಲ್ಲಿ...

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...