Homeಕರ್ನಾಟಕಪ್ರೇಮಿಗಳ ದಿನ ‘ಹಸು ತಬ್ಬಿಕೊಳ್ಳಿ’: ಹೊಸ ಆಚರಣೆಗೆ ಕೇಂದ್ರೀಯ ಪಶು ಕಲ್ಯಾಣ ಮಂಡಳಿ ಕರೆ

ಪ್ರೇಮಿಗಳ ದಿನ ‘ಹಸು ತಬ್ಬಿಕೊಳ್ಳಿ’: ಹೊಸ ಆಚರಣೆಗೆ ಕೇಂದ್ರೀಯ ಪಶು ಕಲ್ಯಾಣ ಮಂಡಳಿ ಕರೆ

- Advertisement -
- Advertisement -

ಫೆಬ್ರುವರಿ 14 ಪ್ರೇಮಿಗಳ ದಿನವನ್ನು ಆಚರಿಸಲಾಗುತ್ತಿದೆ. ಅದೇ ದಿನ “ಹಸು ತಬ್ಬಿಕೊಳ್ಳುವ ದಿನ” ಆಚರಿಸಲು ಕೇಂದ್ರೀಯ ಪಶು ಕಲ್ಯಾಣ ಮಂಡಳಿ ಮನವಿ ಮಾಡಿದೆ.

“ಅನಿಮಲ್‌ ವೆಲ್‌ಫೇರ್‌ ಆಫ್‌ ಇಂಡಿಯಾ”ದ ಅಧಿಕೃತ ವೆಬ್‌ಸೈಟ್‌ನಲ್ಲಿಈ ಕುರಿತು ಪ್ರಕಟಿಸಲಾಗಿದ್ದು, ಮಂಡಳಿಯ ಕಾರ್ಯದರ್ಶಿ ಎಸ್‌.ಕೆ.ದುತ್ತ ಅವರು ಇದಕ್ಕೆ ಸಹಿ ಮಾಡಿದ್ದಾರೆ.

ಮನವಿಯಲ್ಲಿ ಏನಿದೆ?

“ಗೋವು ಭಾರತೀಯ ಸಂಸ್ಕೃತಿ ಮತ್ತು ಗ್ರಾಮೀಣ ಆರ್ಥಿಕತೆಯ ಬೆನ್ನೆಲುಬು ಎಂದು ನಮಗೆಲ್ಲರಿಗೂ ತಿಳಿದಿದೆ, ಗೋವು ನಮ್ಮ ಜೀವನವನ್ನು ಉಳಿಸಿಕೊಳ್ಳುತ್ತದೆ, ಸಂಪತ್ತು ಮತ್ತು ಜೀವವೈವಿಧ್ಯತೆಯನ್ನು ಪಶುಗಳು ಪ್ರತಿನಿಧಿಸುತ್ತವೆ. ತಾಯಿಯಂತೆ ಪೋಷಿಸುವ ಸ್ವಭಾವದಿಂದಾಗಿ, ಮನುಷ್ಯನ ಶ್ರೀಮಂತಿಕೆಗೆ ಎಲ್ಲವನ್ನೂ ನೀಡುವ ಕಾರಣದಿಂದಾಗಿ ಹಸುವನ್ನು ‘ಕಾಮಧೇನು’ ಮತ್ತು ‘ಗೋ ಮಾತಾ’ ಎಂದು ಕರೆಯಲಾಗುತ್ತದೆ” ಎಂದು ಮಂಡಲಿಯ ಮನವಿಯಲ್ಲಿ ಉದ್ದೇಶಿಸಲಾಗಿದೆ.

“ಕಾಲಾನಂತರದಲ್ಲಿ ಪಾಶ್ಚಿಮಾತ್ಯ ಸಂಸ್ಕೃತಿಯ ಬೆಳವಣಿಗೆಯಿಂದಾಗಿ ವೈದಿಕ ಸಂಪ್ರದಾಯಗಳು ಬಹುತೇಕ ಅಳಿವಿನ ಅಂಚಿನಲ್ಲಿವೆ. ಪಾಶ್ಚಿಮಾತ್ಯ ನಾಗರಿಕತೆಯ ಬೆರಗು ನಮ್ಮ ಭೌತಿಕ ಸಂಸ್ಕೃತಿ ಮತ್ತು ಪರಂಪರೆಯನ್ನು ಬಹುತೇಕ ಮರೆತುಹೋಗುವಂತೆ ಮಾಡಿದೆ” ಎಂದಿದೆ.

“ಹಸುಗಳಿಂದಾಗುವ ಅಪಾರ ಪ್ರಯೋಜನದ ದೃಷ್ಟಿಯಿಂದ, ಹಸುವಿನ ಜೊತೆ ಅಪ್ಪಿಕೊಳ್ಳುವುದು ಭಾವನಾತ್ಮಕ ಶ್ರೀಮಂತಿಕೆಯನ್ನು ತರುತ್ತದೆ. ಆದ್ದರಿಂದ ನಮ್ಮ ವೈಯಕ್ತಿಕ ಮತ್ತು ಸಾಮೂಹಿಕ ಸಂತೋಷ ಹೆಚ್ಚಿಸುತ್ತದೆ. ಎಲ್ಲಾ ಗೋ ಪ್ರೇಮಿಗಳು ಫೆಬ್ರವರಿ 14 ಅನ್ನು ಕೌ ಹಗ್‌ ಡೇ (ಗೋವು ತಬ್ಬಿಕೊಳ್ಳುವ ದಿನ) ಆಚರಿಸಬಹುದು. ಗೋಮಾತೆಯ ಮಹತ್ವವನ್ನು ಗಮನದಲ್ಲಿಟ್ಟುಕೊಳ್ಳಿ. ಜೀವನವನ್ನು ಸಂತೋಷದಾಯಕವಾಗಿಸಿ. ಸಕಾರಾತ್ಮಕ ಶಕ್ತಿ ತುಂಬಿಕೊಳ್ಳಿ” ಎಂದು ಸಲಹೆ ನೀಡಲಾಗಿದೆ.

No photo description available.

ಅಪಹಾಸ್ಯಕ್ಕೀಡಾದ ಹಸು ಅಪ್ಪುವ ಕರೆ

‘ಹಸು ತಬ್ಬುವ ದಿನ ಆಚರಣೆ’ ಮಾಡಬೇಕೆಂದು ಪಶು ಕಲ್ಯಾಣ ಮಂಡಳಿ ನೀಡಿರುವ ಕರೆಗೆ ಟೀಕೆಗಳು ವ್ಯಕ್ತವಾಗಿವೆ.

ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ಗಳನ್ನು ಮಾಡುವ ಮೂಲಕ ಅನೇಕರು ವಿರೋಧ ವ್ಯಕ್ತಪಡಿಸಿದ್ದಾರೆ. ಕನ್ನಡ ಪರ ಹೋರಾಟಗಾರ ಎಸ್.ಸಿ.ದಿನೇಶ್‌ ಕುಮಾರ್‌, “ಪ್ರೇಮಿಗಳ ದಿನಕ್ಕೆ ಕೇಂದ್ರ ಸರ್ಕಾರದ ಕೌಂಟರ್. ಕೌ ಹಗ್‌ ಡೇ ಅಂತೆ. ದನ ತಬ್ಬಿಕೊಳ್ಳೋ ದಿನ! ಬಹುಶಃ ಮೋದಿಯವರೇ ಒಂದು ದನ ತಬ್ಕೊಂಡು ಉದ್ಘಾಟನೆ ಮಾಡಬಹುದು. ಆದರೆ ದನ ತಬ್ಕೊಳ್ಳೋದು ಹೆಂಗೆ? ಇದೊಂಥರ ಬಡಪಾಯಿ ದನಗಳಿಗೆ ಲೈಂಗಿಕ ಕಿರುಕುಳದ ಥರ ಅನ್ನಿಸಲ್ವಾ? ತೀರ್ಮಾನ ತೆಗೆದುಕೊಳ್ಳೋದಕ್ಕೆ ಮುಂಚೆ ದನಗಳಿಗೂ ಒಂದು ಮಾತು ಕೇಳಬೇಕಿತ್ತು ಅಲ್ವಾ? ನಿಮಗೇನನ್ನಿಸುತ್ತೆ?” ಎಂದು ಪ್ರಶ್ನಿಸಿದ್ದಾರೆ.

ಬರಹಗಾರ ಚಂದ್ರಪ್ರಭ ಕಠಾರಿ ಅವರು, “ಪ್ರೇಮಿಗಳ ದಿನಾಚರಣೆ (Valentines day) ಬಂದರೆ ಸಾಕು, ಈ ಮತಾಂಧರಿಗೆ ಯಾಕೊ ಮೈಯೆಲ್ಲ ತುರಿಕೆ ಶುರುವಾಗುತ್ತೆ. ಸಾಲದಕ್ಕೆ ಎಲೆಕ್ಷನ್ ಬೇರೆ ಹತ್ತಿರ ಇದೆ. 40% ಕಮಿಷನ್ ಭ್ರಷ್ಟ ಸರ್ಕಾರ ಅನ್ನೋ ಇಮೇಜ್ ಇನ್ನೂ ಅಳಿಸಲಾಗಿಲ್ಲ. ಏನೋ ಒಂದು ಡೈವರ್ಷನ್ ಟ್ಯಾಕ್ ಟಿಕ್ಸ್ ಮಾಡ್ಬೇಕಲ್ಲ. ಅದಕ್ಕೆ ಫೆಬ್ರವರಿ 14ರಂದು ಹಸುಗಳನ್ನು ತಬ್ಬಿಕೊ ಬೇಕಂತೆ (ಅದು ಎಗರಿಸಿ ಒದಿದಿದ್ರೆ ಸಾಕು). ಅವತ್ತೇ ಏಕೆ ದಿನಾ ತಬ್ಕೊಂಡು ಕೊಟ್ಟಿಗೆಯಲ್ಲೇ ಮಲಗಿ…ಯಾರು ಬೇಡ ಅಂದದ್ದು” ಎಂದು ಕುಟುಕಿದ್ದಾರೆ.

ಮುಂದುವರಿದು, “ಅದಿರಲಿ, ಸಾರ್ವಜನಿಕವಾಗಿ ಈ ಕೇಸರಿಗಳು ಇಂಥ ಹೇಳಿಕೆ ಕೊಟ್ರೆ ಆಶ್ಚರ್ಯವೇನಿಲ್ಲ. ಆದರೆ ಅನಿಮಲ್ ವೇಲ್‌ಫೇರ್‌ ಬೋರ್ಡ್ ಆಫ್ ಇಂಡಿಯಾದಂತಹ ಸರ್ಕಾರಿ ಸಂಸ್ಥೆಯ ಮೂಲಕ ಆರ್ಡರ್ ಮಾಡುವಷ್ಟು ಲಜ್ಜೆಗೇಡಿತನ ಈ ಫ್ಯಾಶಿಸ್ಟ್ ಮೋದಿ ಸರ್ಕಾರದ್ದು” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...