Homeಕರ್ನಾಟಕಪ್ರೇಮಿಗಳ ದಿನ ‘ಹಸು ತಬ್ಬಿಕೊಳ್ಳಿ’: ಹೊಸ ಆಚರಣೆಗೆ ಕೇಂದ್ರೀಯ ಪಶು ಕಲ್ಯಾಣ ಮಂಡಳಿ ಕರೆ

ಪ್ರೇಮಿಗಳ ದಿನ ‘ಹಸು ತಬ್ಬಿಕೊಳ್ಳಿ’: ಹೊಸ ಆಚರಣೆಗೆ ಕೇಂದ್ರೀಯ ಪಶು ಕಲ್ಯಾಣ ಮಂಡಳಿ ಕರೆ

- Advertisement -
- Advertisement -

ಫೆಬ್ರುವರಿ 14 ಪ್ರೇಮಿಗಳ ದಿನವನ್ನು ಆಚರಿಸಲಾಗುತ್ತಿದೆ. ಅದೇ ದಿನ “ಹಸು ತಬ್ಬಿಕೊಳ್ಳುವ ದಿನ” ಆಚರಿಸಲು ಕೇಂದ್ರೀಯ ಪಶು ಕಲ್ಯಾಣ ಮಂಡಳಿ ಮನವಿ ಮಾಡಿದೆ.

“ಅನಿಮಲ್‌ ವೆಲ್‌ಫೇರ್‌ ಆಫ್‌ ಇಂಡಿಯಾ”ದ ಅಧಿಕೃತ ವೆಬ್‌ಸೈಟ್‌ನಲ್ಲಿಈ ಕುರಿತು ಪ್ರಕಟಿಸಲಾಗಿದ್ದು, ಮಂಡಳಿಯ ಕಾರ್ಯದರ್ಶಿ ಎಸ್‌.ಕೆ.ದುತ್ತ ಅವರು ಇದಕ್ಕೆ ಸಹಿ ಮಾಡಿದ್ದಾರೆ.

ಮನವಿಯಲ್ಲಿ ಏನಿದೆ?

“ಗೋವು ಭಾರತೀಯ ಸಂಸ್ಕೃತಿ ಮತ್ತು ಗ್ರಾಮೀಣ ಆರ್ಥಿಕತೆಯ ಬೆನ್ನೆಲುಬು ಎಂದು ನಮಗೆಲ್ಲರಿಗೂ ತಿಳಿದಿದೆ, ಗೋವು ನಮ್ಮ ಜೀವನವನ್ನು ಉಳಿಸಿಕೊಳ್ಳುತ್ತದೆ, ಸಂಪತ್ತು ಮತ್ತು ಜೀವವೈವಿಧ್ಯತೆಯನ್ನು ಪಶುಗಳು ಪ್ರತಿನಿಧಿಸುತ್ತವೆ. ತಾಯಿಯಂತೆ ಪೋಷಿಸುವ ಸ್ವಭಾವದಿಂದಾಗಿ, ಮನುಷ್ಯನ ಶ್ರೀಮಂತಿಕೆಗೆ ಎಲ್ಲವನ್ನೂ ನೀಡುವ ಕಾರಣದಿಂದಾಗಿ ಹಸುವನ್ನು ‘ಕಾಮಧೇನು’ ಮತ್ತು ‘ಗೋ ಮಾತಾ’ ಎಂದು ಕರೆಯಲಾಗುತ್ತದೆ” ಎಂದು ಮಂಡಲಿಯ ಮನವಿಯಲ್ಲಿ ಉದ್ದೇಶಿಸಲಾಗಿದೆ.

“ಕಾಲಾನಂತರದಲ್ಲಿ ಪಾಶ್ಚಿಮಾತ್ಯ ಸಂಸ್ಕೃತಿಯ ಬೆಳವಣಿಗೆಯಿಂದಾಗಿ ವೈದಿಕ ಸಂಪ್ರದಾಯಗಳು ಬಹುತೇಕ ಅಳಿವಿನ ಅಂಚಿನಲ್ಲಿವೆ. ಪಾಶ್ಚಿಮಾತ್ಯ ನಾಗರಿಕತೆಯ ಬೆರಗು ನಮ್ಮ ಭೌತಿಕ ಸಂಸ್ಕೃತಿ ಮತ್ತು ಪರಂಪರೆಯನ್ನು ಬಹುತೇಕ ಮರೆತುಹೋಗುವಂತೆ ಮಾಡಿದೆ” ಎಂದಿದೆ.

“ಹಸುಗಳಿಂದಾಗುವ ಅಪಾರ ಪ್ರಯೋಜನದ ದೃಷ್ಟಿಯಿಂದ, ಹಸುವಿನ ಜೊತೆ ಅಪ್ಪಿಕೊಳ್ಳುವುದು ಭಾವನಾತ್ಮಕ ಶ್ರೀಮಂತಿಕೆಯನ್ನು ತರುತ್ತದೆ. ಆದ್ದರಿಂದ ನಮ್ಮ ವೈಯಕ್ತಿಕ ಮತ್ತು ಸಾಮೂಹಿಕ ಸಂತೋಷ ಹೆಚ್ಚಿಸುತ್ತದೆ. ಎಲ್ಲಾ ಗೋ ಪ್ರೇಮಿಗಳು ಫೆಬ್ರವರಿ 14 ಅನ್ನು ಕೌ ಹಗ್‌ ಡೇ (ಗೋವು ತಬ್ಬಿಕೊಳ್ಳುವ ದಿನ) ಆಚರಿಸಬಹುದು. ಗೋಮಾತೆಯ ಮಹತ್ವವನ್ನು ಗಮನದಲ್ಲಿಟ್ಟುಕೊಳ್ಳಿ. ಜೀವನವನ್ನು ಸಂತೋಷದಾಯಕವಾಗಿಸಿ. ಸಕಾರಾತ್ಮಕ ಶಕ್ತಿ ತುಂಬಿಕೊಳ್ಳಿ” ಎಂದು ಸಲಹೆ ನೀಡಲಾಗಿದೆ.

No photo description available.

ಅಪಹಾಸ್ಯಕ್ಕೀಡಾದ ಹಸು ಅಪ್ಪುವ ಕರೆ

‘ಹಸು ತಬ್ಬುವ ದಿನ ಆಚರಣೆ’ ಮಾಡಬೇಕೆಂದು ಪಶು ಕಲ್ಯಾಣ ಮಂಡಳಿ ನೀಡಿರುವ ಕರೆಗೆ ಟೀಕೆಗಳು ವ್ಯಕ್ತವಾಗಿವೆ.

ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ಗಳನ್ನು ಮಾಡುವ ಮೂಲಕ ಅನೇಕರು ವಿರೋಧ ವ್ಯಕ್ತಪಡಿಸಿದ್ದಾರೆ. ಕನ್ನಡ ಪರ ಹೋರಾಟಗಾರ ಎಸ್.ಸಿ.ದಿನೇಶ್‌ ಕುಮಾರ್‌, “ಪ್ರೇಮಿಗಳ ದಿನಕ್ಕೆ ಕೇಂದ್ರ ಸರ್ಕಾರದ ಕೌಂಟರ್. ಕೌ ಹಗ್‌ ಡೇ ಅಂತೆ. ದನ ತಬ್ಬಿಕೊಳ್ಳೋ ದಿನ! ಬಹುಶಃ ಮೋದಿಯವರೇ ಒಂದು ದನ ತಬ್ಕೊಂಡು ಉದ್ಘಾಟನೆ ಮಾಡಬಹುದು. ಆದರೆ ದನ ತಬ್ಕೊಳ್ಳೋದು ಹೆಂಗೆ? ಇದೊಂಥರ ಬಡಪಾಯಿ ದನಗಳಿಗೆ ಲೈಂಗಿಕ ಕಿರುಕುಳದ ಥರ ಅನ್ನಿಸಲ್ವಾ? ತೀರ್ಮಾನ ತೆಗೆದುಕೊಳ್ಳೋದಕ್ಕೆ ಮುಂಚೆ ದನಗಳಿಗೂ ಒಂದು ಮಾತು ಕೇಳಬೇಕಿತ್ತು ಅಲ್ವಾ? ನಿಮಗೇನನ್ನಿಸುತ್ತೆ?” ಎಂದು ಪ್ರಶ್ನಿಸಿದ್ದಾರೆ.

ಬರಹಗಾರ ಚಂದ್ರಪ್ರಭ ಕಠಾರಿ ಅವರು, “ಪ್ರೇಮಿಗಳ ದಿನಾಚರಣೆ (Valentines day) ಬಂದರೆ ಸಾಕು, ಈ ಮತಾಂಧರಿಗೆ ಯಾಕೊ ಮೈಯೆಲ್ಲ ತುರಿಕೆ ಶುರುವಾಗುತ್ತೆ. ಸಾಲದಕ್ಕೆ ಎಲೆಕ್ಷನ್ ಬೇರೆ ಹತ್ತಿರ ಇದೆ. 40% ಕಮಿಷನ್ ಭ್ರಷ್ಟ ಸರ್ಕಾರ ಅನ್ನೋ ಇಮೇಜ್ ಇನ್ನೂ ಅಳಿಸಲಾಗಿಲ್ಲ. ಏನೋ ಒಂದು ಡೈವರ್ಷನ್ ಟ್ಯಾಕ್ ಟಿಕ್ಸ್ ಮಾಡ್ಬೇಕಲ್ಲ. ಅದಕ್ಕೆ ಫೆಬ್ರವರಿ 14ರಂದು ಹಸುಗಳನ್ನು ತಬ್ಬಿಕೊ ಬೇಕಂತೆ (ಅದು ಎಗರಿಸಿ ಒದಿದಿದ್ರೆ ಸಾಕು). ಅವತ್ತೇ ಏಕೆ ದಿನಾ ತಬ್ಕೊಂಡು ಕೊಟ್ಟಿಗೆಯಲ್ಲೇ ಮಲಗಿ…ಯಾರು ಬೇಡ ಅಂದದ್ದು” ಎಂದು ಕುಟುಕಿದ್ದಾರೆ.

ಮುಂದುವರಿದು, “ಅದಿರಲಿ, ಸಾರ್ವಜನಿಕವಾಗಿ ಈ ಕೇಸರಿಗಳು ಇಂಥ ಹೇಳಿಕೆ ಕೊಟ್ರೆ ಆಶ್ಚರ್ಯವೇನಿಲ್ಲ. ಆದರೆ ಅನಿಮಲ್ ವೇಲ್‌ಫೇರ್‌ ಬೋರ್ಡ್ ಆಫ್ ಇಂಡಿಯಾದಂತಹ ಸರ್ಕಾರಿ ಸಂಸ್ಥೆಯ ಮೂಲಕ ಆರ್ಡರ್ ಮಾಡುವಷ್ಟು ಲಜ್ಜೆಗೇಡಿತನ ಈ ಫ್ಯಾಶಿಸ್ಟ್ ಮೋದಿ ಸರ್ಕಾರದ್ದು” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...