Homeಕರ್ನಾಟಕಪ್ರೇಮಿಗಳ ದಿನ ‘ಹಸು ತಬ್ಬಿಕೊಳ್ಳಿ’: ಹೊಸ ಆಚರಣೆಗೆ ಕೇಂದ್ರೀಯ ಪಶು ಕಲ್ಯಾಣ ಮಂಡಳಿ ಕರೆ

ಪ್ರೇಮಿಗಳ ದಿನ ‘ಹಸು ತಬ್ಬಿಕೊಳ್ಳಿ’: ಹೊಸ ಆಚರಣೆಗೆ ಕೇಂದ್ರೀಯ ಪಶು ಕಲ್ಯಾಣ ಮಂಡಳಿ ಕರೆ

- Advertisement -
- Advertisement -

ಫೆಬ್ರುವರಿ 14 ಪ್ರೇಮಿಗಳ ದಿನವನ್ನು ಆಚರಿಸಲಾಗುತ್ತಿದೆ. ಅದೇ ದಿನ “ಹಸು ತಬ್ಬಿಕೊಳ್ಳುವ ದಿನ” ಆಚರಿಸಲು ಕೇಂದ್ರೀಯ ಪಶು ಕಲ್ಯಾಣ ಮಂಡಳಿ ಮನವಿ ಮಾಡಿದೆ.

“ಅನಿಮಲ್‌ ವೆಲ್‌ಫೇರ್‌ ಆಫ್‌ ಇಂಡಿಯಾ”ದ ಅಧಿಕೃತ ವೆಬ್‌ಸೈಟ್‌ನಲ್ಲಿಈ ಕುರಿತು ಪ್ರಕಟಿಸಲಾಗಿದ್ದು, ಮಂಡಳಿಯ ಕಾರ್ಯದರ್ಶಿ ಎಸ್‌.ಕೆ.ದುತ್ತ ಅವರು ಇದಕ್ಕೆ ಸಹಿ ಮಾಡಿದ್ದಾರೆ.

ಮನವಿಯಲ್ಲಿ ಏನಿದೆ?

“ಗೋವು ಭಾರತೀಯ ಸಂಸ್ಕೃತಿ ಮತ್ತು ಗ್ರಾಮೀಣ ಆರ್ಥಿಕತೆಯ ಬೆನ್ನೆಲುಬು ಎಂದು ನಮಗೆಲ್ಲರಿಗೂ ತಿಳಿದಿದೆ, ಗೋವು ನಮ್ಮ ಜೀವನವನ್ನು ಉಳಿಸಿಕೊಳ್ಳುತ್ತದೆ, ಸಂಪತ್ತು ಮತ್ತು ಜೀವವೈವಿಧ್ಯತೆಯನ್ನು ಪಶುಗಳು ಪ್ರತಿನಿಧಿಸುತ್ತವೆ. ತಾಯಿಯಂತೆ ಪೋಷಿಸುವ ಸ್ವಭಾವದಿಂದಾಗಿ, ಮನುಷ್ಯನ ಶ್ರೀಮಂತಿಕೆಗೆ ಎಲ್ಲವನ್ನೂ ನೀಡುವ ಕಾರಣದಿಂದಾಗಿ ಹಸುವನ್ನು ‘ಕಾಮಧೇನು’ ಮತ್ತು ‘ಗೋ ಮಾತಾ’ ಎಂದು ಕರೆಯಲಾಗುತ್ತದೆ” ಎಂದು ಮಂಡಲಿಯ ಮನವಿಯಲ್ಲಿ ಉದ್ದೇಶಿಸಲಾಗಿದೆ.

“ಕಾಲಾನಂತರದಲ್ಲಿ ಪಾಶ್ಚಿಮಾತ್ಯ ಸಂಸ್ಕೃತಿಯ ಬೆಳವಣಿಗೆಯಿಂದಾಗಿ ವೈದಿಕ ಸಂಪ್ರದಾಯಗಳು ಬಹುತೇಕ ಅಳಿವಿನ ಅಂಚಿನಲ್ಲಿವೆ. ಪಾಶ್ಚಿಮಾತ್ಯ ನಾಗರಿಕತೆಯ ಬೆರಗು ನಮ್ಮ ಭೌತಿಕ ಸಂಸ್ಕೃತಿ ಮತ್ತು ಪರಂಪರೆಯನ್ನು ಬಹುತೇಕ ಮರೆತುಹೋಗುವಂತೆ ಮಾಡಿದೆ” ಎಂದಿದೆ.

“ಹಸುಗಳಿಂದಾಗುವ ಅಪಾರ ಪ್ರಯೋಜನದ ದೃಷ್ಟಿಯಿಂದ, ಹಸುವಿನ ಜೊತೆ ಅಪ್ಪಿಕೊಳ್ಳುವುದು ಭಾವನಾತ್ಮಕ ಶ್ರೀಮಂತಿಕೆಯನ್ನು ತರುತ್ತದೆ. ಆದ್ದರಿಂದ ನಮ್ಮ ವೈಯಕ್ತಿಕ ಮತ್ತು ಸಾಮೂಹಿಕ ಸಂತೋಷ ಹೆಚ್ಚಿಸುತ್ತದೆ. ಎಲ್ಲಾ ಗೋ ಪ್ರೇಮಿಗಳು ಫೆಬ್ರವರಿ 14 ಅನ್ನು ಕೌ ಹಗ್‌ ಡೇ (ಗೋವು ತಬ್ಬಿಕೊಳ್ಳುವ ದಿನ) ಆಚರಿಸಬಹುದು. ಗೋಮಾತೆಯ ಮಹತ್ವವನ್ನು ಗಮನದಲ್ಲಿಟ್ಟುಕೊಳ್ಳಿ. ಜೀವನವನ್ನು ಸಂತೋಷದಾಯಕವಾಗಿಸಿ. ಸಕಾರಾತ್ಮಕ ಶಕ್ತಿ ತುಂಬಿಕೊಳ್ಳಿ” ಎಂದು ಸಲಹೆ ನೀಡಲಾಗಿದೆ.

No photo description available.

ಅಪಹಾಸ್ಯಕ್ಕೀಡಾದ ಹಸು ಅಪ್ಪುವ ಕರೆ

‘ಹಸು ತಬ್ಬುವ ದಿನ ಆಚರಣೆ’ ಮಾಡಬೇಕೆಂದು ಪಶು ಕಲ್ಯಾಣ ಮಂಡಳಿ ನೀಡಿರುವ ಕರೆಗೆ ಟೀಕೆಗಳು ವ್ಯಕ್ತವಾಗಿವೆ.

ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ಗಳನ್ನು ಮಾಡುವ ಮೂಲಕ ಅನೇಕರು ವಿರೋಧ ವ್ಯಕ್ತಪಡಿಸಿದ್ದಾರೆ. ಕನ್ನಡ ಪರ ಹೋರಾಟಗಾರ ಎಸ್.ಸಿ.ದಿನೇಶ್‌ ಕುಮಾರ್‌, “ಪ್ರೇಮಿಗಳ ದಿನಕ್ಕೆ ಕೇಂದ್ರ ಸರ್ಕಾರದ ಕೌಂಟರ್. ಕೌ ಹಗ್‌ ಡೇ ಅಂತೆ. ದನ ತಬ್ಬಿಕೊಳ್ಳೋ ದಿನ! ಬಹುಶಃ ಮೋದಿಯವರೇ ಒಂದು ದನ ತಬ್ಕೊಂಡು ಉದ್ಘಾಟನೆ ಮಾಡಬಹುದು. ಆದರೆ ದನ ತಬ್ಕೊಳ್ಳೋದು ಹೆಂಗೆ? ಇದೊಂಥರ ಬಡಪಾಯಿ ದನಗಳಿಗೆ ಲೈಂಗಿಕ ಕಿರುಕುಳದ ಥರ ಅನ್ನಿಸಲ್ವಾ? ತೀರ್ಮಾನ ತೆಗೆದುಕೊಳ್ಳೋದಕ್ಕೆ ಮುಂಚೆ ದನಗಳಿಗೂ ಒಂದು ಮಾತು ಕೇಳಬೇಕಿತ್ತು ಅಲ್ವಾ? ನಿಮಗೇನನ್ನಿಸುತ್ತೆ?” ಎಂದು ಪ್ರಶ್ನಿಸಿದ್ದಾರೆ.

ಬರಹಗಾರ ಚಂದ್ರಪ್ರಭ ಕಠಾರಿ ಅವರು, “ಪ್ರೇಮಿಗಳ ದಿನಾಚರಣೆ (Valentines day) ಬಂದರೆ ಸಾಕು, ಈ ಮತಾಂಧರಿಗೆ ಯಾಕೊ ಮೈಯೆಲ್ಲ ತುರಿಕೆ ಶುರುವಾಗುತ್ತೆ. ಸಾಲದಕ್ಕೆ ಎಲೆಕ್ಷನ್ ಬೇರೆ ಹತ್ತಿರ ಇದೆ. 40% ಕಮಿಷನ್ ಭ್ರಷ್ಟ ಸರ್ಕಾರ ಅನ್ನೋ ಇಮೇಜ್ ಇನ್ನೂ ಅಳಿಸಲಾಗಿಲ್ಲ. ಏನೋ ಒಂದು ಡೈವರ್ಷನ್ ಟ್ಯಾಕ್ ಟಿಕ್ಸ್ ಮಾಡ್ಬೇಕಲ್ಲ. ಅದಕ್ಕೆ ಫೆಬ್ರವರಿ 14ರಂದು ಹಸುಗಳನ್ನು ತಬ್ಬಿಕೊ ಬೇಕಂತೆ (ಅದು ಎಗರಿಸಿ ಒದಿದಿದ್ರೆ ಸಾಕು). ಅವತ್ತೇ ಏಕೆ ದಿನಾ ತಬ್ಕೊಂಡು ಕೊಟ್ಟಿಗೆಯಲ್ಲೇ ಮಲಗಿ…ಯಾರು ಬೇಡ ಅಂದದ್ದು” ಎಂದು ಕುಟುಕಿದ್ದಾರೆ.

ಮುಂದುವರಿದು, “ಅದಿರಲಿ, ಸಾರ್ವಜನಿಕವಾಗಿ ಈ ಕೇಸರಿಗಳು ಇಂಥ ಹೇಳಿಕೆ ಕೊಟ್ರೆ ಆಶ್ಚರ್ಯವೇನಿಲ್ಲ. ಆದರೆ ಅನಿಮಲ್ ವೇಲ್‌ಫೇರ್‌ ಬೋರ್ಡ್ ಆಫ್ ಇಂಡಿಯಾದಂತಹ ಸರ್ಕಾರಿ ಸಂಸ್ಥೆಯ ಮೂಲಕ ಆರ್ಡರ್ ಮಾಡುವಷ್ಟು ಲಜ್ಜೆಗೇಡಿತನ ಈ ಫ್ಯಾಶಿಸ್ಟ್ ಮೋದಿ ಸರ್ಕಾರದ್ದು” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...