Homeಮುಖಪುಟದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಮನೆಯಲ್ಲಿ ಅಪಾರ ಪ್ರಮಾಣದ ಹಣ ಪತ್ತೆ: ಆಂತರಿಕ ತನಿಖೆ ಪ್ರಾರಂಭಿಸಿದ ಸುಪ್ರೀಂ...

ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಮನೆಯಲ್ಲಿ ಅಪಾರ ಪ್ರಮಾಣದ ಹಣ ಪತ್ತೆ: ಆಂತರಿಕ ತನಿಖೆ ಪ್ರಾರಂಭಿಸಿದ ಸುಪ್ರೀಂ ಕೋರ್ಟ್; ವರದಿ

- Advertisement -
- Advertisement -

ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ಮನೆಯಲ್ಲಿ ಭಾರೀ ಪ್ರಮಾಣದಲ್ಲಿ ಹಣ ಪತ್ತೆಯಾಗಿದ್ದು, ದೇಶದಾದ್ಯಂತ ಬಿಸಿ ಬಿಸಿ ಚರ್ಚೆಯಾಗುತ್ತಿದೆ. ಸುಪ್ರೀಂ ಕೋರ್ಟ್ ಈ ಬಗ್ಗೆ ಆಂತರಿಕ ತನಿಖೆ ಪ್ರಾರಂಭಿಸಿದೆ ಎಂದು Bar & Bench ವರದಿ ಮಾಡಿದೆ.

ನ್ಯಾಯಮೂರ್ತಿ ಯಶವಂತ್ ವರ್ಮಾ ಊರಲ್ಲಿ ಇಲ್ಲದ ವೇಳೆ, ಮಾರ್ಚ್ 14 ರಂದು ಬೆಳಿಗ್ಗೆ 11.30ಕ್ಕೆ ದೆಹಲಿಯ ನ್ಯಾಯಾಂಗ ಬಡಾವಣೆಯ ಅವರ ಮನೆಯಲ್ಲಿ ಬೆಂಕಿ ಅವಘಡ ಸಂಭವಿಸಿತ್ತು. ಕುಟುಂಬಸ್ಥರು ಅಗ್ನಿಶಾಮಕ ದಳ ಮತ್ತು ಪೊಲೀಸರಿಗೆ ಕರೆ ಮಾಡಿದ್ದರು. ಸ್ಥಳಕ್ಕೆ ಬಂದ ಅಗ್ನಿಶಾಮಕದ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ನಂತರ ಮನೆಯ ಒಂದು ಕೋಣೆಯಲ್ಲಿ ಪೊಲೀಸರಿಗೆ ಭಾರೀ ಪ್ರಮಾಣದ ಹಣ ಕಂಡು ಬಂದಿದೆ.

ಈ ಬಗ್ಗೆ ಸ್ಥಳೀಯ ಪೊಲೀಸರು ಅವರ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಅವರು ಹಿರಿಯ ಸರ್ಕಾರಿ ಅಧಿಕಾರಿಗಳ ಗಮನಕ್ಕೆ ತಂದಿದ್ದರು. ಈ ಮಾಹಿತಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸಂಜೀವ್ ಖನ್ನಾ ಅವರಿಗೆ ತಲುಪಿತ್ತು. ಅವರು ಗುರುವಾರ (ಮಾ.20) ಸಂಜೆ ತುರ್ತು ಕೊಲಿಜಿಯಂ ಸಭೆ ಕರೆದಿದ್ದರು. ಕೊಲಿಜಿಯಂ, ನ್ಯಾಯಮೂರ್ತಿ ವರ್ಮಾ ಅವರನ್ನು ಅವರ ಮಾತೃ ನ್ಯಾಯಾಲಯವಾದ ಅಲಹಾಬಾದ್ ಹೈಕೋರ್ಟ್‌ಗೆ ವರ್ಗಾಯಿಸಲು ಸರ್ವಾನುಮತದಿಂದ ನಿರ್ಧರಿಸಿದೆ.

ಆದಾಗ್ಯೂ, ಕೊಲಿಜಿಯಂನ ಕೆಲ ಸದಸ್ಯರು ವರ್ಮಾ ಅವರನ್ನು ವರ್ಗಾವಣೆ ಮಾಡುವುದರಿಂದ ನ್ಯಾಯಾಂಗದ ಖ್ಯಾತಿಗೆ ಧಕ್ಕೆಯಾಗಬಹುದು ಎಂದು ಕಳವಳ ವ್ಯಕ್ತಪಡಿಸಿದ್ದಾರೆ ಮತ್ತು ಅವರು ರಾಜೀನಾಮೆ ನೀಡಬೇಕು ಅಥವಾ ಆಂತರಿಕ ತನಿಖೆ ಎದುರಿಸಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸಾಂವಿಧಾನಿಕ ನ್ಯಾಯಾಲಯದ ನ್ಯಾಯಾಧೀಶರ ವಿರುದ್ಧದ ಆರೋಪಗಳ ತನಿಖೆಯ ಸುಪ್ರೀಂ ಕೋರ್ಟ್‌ನ ಆಂತರಿಕ ಕಾರ್ಯವಿಧಾನದ ಪ್ರಕಾರ, ತನಿಖೆಯನ್ನು ಪ್ರಾರಂಭಿಸಬೇಕೆ ಅಥವಾ ಬೇಡವೇ ಎಂದು ನಿರ್ಧರಿಸುವ ಮೊದಲು ಸಿಜೆಐ ಆರೋಪಿತ ನ್ಯಾಯಾಧೀಶರ ಪ್ರತಿಕ್ರಿಯೆಯನ್ನು ಕೇಳುತ್ತಾರೆ. ಹೆಚ್ಚಿನ ತನಿಖೆ ಅಗತ್ಯವಿದ್ದರೆ, ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಮತ್ತು ಇಬ್ಬರು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳನ್ನು ಒಳಗೊಂಡ ಸಮಿತಿಯನ್ನು ರಚಿಸಬಹುದು.

ನ್ಯಾಯಮೂರ್ತಿ ಯಶವಂತ್ ವರ್ಮಾ ಯಾರು?

ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ಜನವರಿ 6, 1969 ರಂದು ಅಲಹಾಬಾದ್‌ನಲ್ಲಿ ಜನಿಸಿದರು. ಅವರು ದೆಹಲಿ ವಿಶ್ವವಿದ್ಯಾಲಯದ ಹನ್ಸ್‌ರಾಜ್ ಕಾಲೇಜಿನಲ್ಲಿ ಬಿಕಾಂ (ಆನರ್ಸ್) ಪದವಿ ಪೂರ್ಣಗೊಳಿಸಿ, ನಂತರ ಮಧ್ಯಪ್ರದೇಶದ ರೇವಾ ವಿಶ್ವವಿದ್ಯಾಲಯದಿಂದ ಎಲ್‌ಎಲ್‌ಬಿ ಪದವಿ ಪಡೆದಿದ್ದಾರೆ. ಅವರು ಆಗಸ್ಟ್ 8,1992 ರಂದು ವಕೀಲ ವೃತ್ತಿಗೆ ಸೇರಿಕೊಂಡರು.

ಅಲಹಾಬಾದ್ ಹೈಕೋರ್ಟ್‌ನಲ್ಲಿ ತಮ್ಮ ಕಾನೂನು ವೃತ್ತಿಜೀವನದ ಅವಧಿಯಲ್ಲಿ, ನ್ಯಾಯಮೂರ್ತಿ ವರ್ಮಾ ಅವರು ಸಾಂವಿಧಾನಿಕ ಕಾನೂನು, ಕಾರ್ಮಿಕ ಮತ್ತು ಕೈಗಾರಿಕಾ ಕಾನೂನುಗಳು, ಕಾರ್ಪೊರೇಟ್ ಕಾನೂನುಗಳು, ತೆರಿಗೆ ಮತ್ತು ಸಂಬಂಧಿತ ಕ್ಷೇತ್ರಗಳಲ್ಲಿ ಪರಿಣತಿ ಹೊಂದಿದ್ದರು. ಅವರು 2006 ರಿಂದ ಬಡ್ತಿ ಪಡೆಯುವವರೆಗೆ ಅಲಹಾಬಾದ್ ಹೈಕೋರ್ಟ್‌ಗೆ ವಿಶೇಷ ವಕೀಲರಾಗಿ ಸೇವೆ ಸಲ್ಲಿಸಿದ್ದರು ಮತ್ತು ಹಿರಿಯ ವಕೀಲರಾಗಿ ನೇಮಕಗೊಳ್ಳುವ ಮೊದಲು 2012 ರಿಂದ 2013 ರವರೆಗೆ ಉತ್ತರ ಪ್ರದೇಶದ ಮುಖ್ಯ ಸ್ಥಾಯಿ ಸಲಹೆಗಾರರಾಗಿದ್ದರು.

ವರ್ಮಾ ಅವರನ್ನು ಅಕ್ಟೋಬರ್ 13, 2014 ರಂದು ಅಲಹಾಬಾದ್ ಹೈಕೋರ್ಟ್‌ಗೆ ಹೆಚ್ಚುವರಿ ನ್ಯಾಯಾಧೀಶರನ್ನಾಗಿ ನೇಮಿಸಲಾಯಿತು ಮತ್ತು ಫೆಬ್ರವರಿ 1, 2016 ರಂದು ಖಾಯಂ ನ್ಯಾಯಾಧೀಶರಾಗಿ ಬಡ್ತಿ ನೀಡಲಾಯಿತು. ನಂತರ ಅವರನ್ನು ಅಕ್ಟೋಬರ್ 11, 2021 ರಂದು ದೆಹಲಿ ಹೈಕೋರ್ಟ್‌ಗೆ ವರ್ಗಾಯಿಸಲಾಯಿತು.

ಉದ್ಯಮಿಯಿಂದ 2.5 ಲಕ್ಷ ಲಂಚ ಪಡೆದ ದೆಹಲಿ ಪೊಲೀಸ್ ಅಧಿಕಾರಿಯನ್ನು ಬಂಧಿಸಿದ ಸಿಬಿಐ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...