Homeಮುಖಪುಟದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಮನೆಯಲ್ಲಿ ಅಪಾರ ಪ್ರಮಾಣದ ಹಣ ಪತ್ತೆ: ಆಂತರಿಕ ತನಿಖೆ ಪ್ರಾರಂಭಿಸಿದ ಸುಪ್ರೀಂ...

ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಮನೆಯಲ್ಲಿ ಅಪಾರ ಪ್ರಮಾಣದ ಹಣ ಪತ್ತೆ: ಆಂತರಿಕ ತನಿಖೆ ಪ್ರಾರಂಭಿಸಿದ ಸುಪ್ರೀಂ ಕೋರ್ಟ್; ವರದಿ

- Advertisement -
- Advertisement -

ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ಮನೆಯಲ್ಲಿ ಭಾರೀ ಪ್ರಮಾಣದಲ್ಲಿ ಹಣ ಪತ್ತೆಯಾಗಿದ್ದು, ದೇಶದಾದ್ಯಂತ ಬಿಸಿ ಬಿಸಿ ಚರ್ಚೆಯಾಗುತ್ತಿದೆ. ಸುಪ್ರೀಂ ಕೋರ್ಟ್ ಈ ಬಗ್ಗೆ ಆಂತರಿಕ ತನಿಖೆ ಪ್ರಾರಂಭಿಸಿದೆ ಎಂದು Bar & Bench ವರದಿ ಮಾಡಿದೆ.

ನ್ಯಾಯಮೂರ್ತಿ ಯಶವಂತ್ ವರ್ಮಾ ಊರಲ್ಲಿ ಇಲ್ಲದ ವೇಳೆ, ಮಾರ್ಚ್ 14 ರಂದು ಬೆಳಿಗ್ಗೆ 11.30ಕ್ಕೆ ದೆಹಲಿಯ ನ್ಯಾಯಾಂಗ ಬಡಾವಣೆಯ ಅವರ ಮನೆಯಲ್ಲಿ ಬೆಂಕಿ ಅವಘಡ ಸಂಭವಿಸಿತ್ತು. ಕುಟುಂಬಸ್ಥರು ಅಗ್ನಿಶಾಮಕ ದಳ ಮತ್ತು ಪೊಲೀಸರಿಗೆ ಕರೆ ಮಾಡಿದ್ದರು. ಸ್ಥಳಕ್ಕೆ ಬಂದ ಅಗ್ನಿಶಾಮಕದ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ನಂತರ ಮನೆಯ ಒಂದು ಕೋಣೆಯಲ್ಲಿ ಪೊಲೀಸರಿಗೆ ಭಾರೀ ಪ್ರಮಾಣದ ಹಣ ಕಂಡು ಬಂದಿದೆ.

ಈ ಬಗ್ಗೆ ಸ್ಥಳೀಯ ಪೊಲೀಸರು ಅವರ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಅವರು ಹಿರಿಯ ಸರ್ಕಾರಿ ಅಧಿಕಾರಿಗಳ ಗಮನಕ್ಕೆ ತಂದಿದ್ದರು. ಈ ಮಾಹಿತಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸಂಜೀವ್ ಖನ್ನಾ ಅವರಿಗೆ ತಲುಪಿತ್ತು. ಅವರು ಗುರುವಾರ (ಮಾ.20) ಸಂಜೆ ತುರ್ತು ಕೊಲಿಜಿಯಂ ಸಭೆ ಕರೆದಿದ್ದರು. ಕೊಲಿಜಿಯಂ, ನ್ಯಾಯಮೂರ್ತಿ ವರ್ಮಾ ಅವರನ್ನು ಅವರ ಮಾತೃ ನ್ಯಾಯಾಲಯವಾದ ಅಲಹಾಬಾದ್ ಹೈಕೋರ್ಟ್‌ಗೆ ವರ್ಗಾಯಿಸಲು ಸರ್ವಾನುಮತದಿಂದ ನಿರ್ಧರಿಸಿದೆ.

ಆದಾಗ್ಯೂ, ಕೊಲಿಜಿಯಂನ ಕೆಲ ಸದಸ್ಯರು ವರ್ಮಾ ಅವರನ್ನು ವರ್ಗಾವಣೆ ಮಾಡುವುದರಿಂದ ನ್ಯಾಯಾಂಗದ ಖ್ಯಾತಿಗೆ ಧಕ್ಕೆಯಾಗಬಹುದು ಎಂದು ಕಳವಳ ವ್ಯಕ್ತಪಡಿಸಿದ್ದಾರೆ ಮತ್ತು ಅವರು ರಾಜೀನಾಮೆ ನೀಡಬೇಕು ಅಥವಾ ಆಂತರಿಕ ತನಿಖೆ ಎದುರಿಸಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸಾಂವಿಧಾನಿಕ ನ್ಯಾಯಾಲಯದ ನ್ಯಾಯಾಧೀಶರ ವಿರುದ್ಧದ ಆರೋಪಗಳ ತನಿಖೆಯ ಸುಪ್ರೀಂ ಕೋರ್ಟ್‌ನ ಆಂತರಿಕ ಕಾರ್ಯವಿಧಾನದ ಪ್ರಕಾರ, ತನಿಖೆಯನ್ನು ಪ್ರಾರಂಭಿಸಬೇಕೆ ಅಥವಾ ಬೇಡವೇ ಎಂದು ನಿರ್ಧರಿಸುವ ಮೊದಲು ಸಿಜೆಐ ಆರೋಪಿತ ನ್ಯಾಯಾಧೀಶರ ಪ್ರತಿಕ್ರಿಯೆಯನ್ನು ಕೇಳುತ್ತಾರೆ. ಹೆಚ್ಚಿನ ತನಿಖೆ ಅಗತ್ಯವಿದ್ದರೆ, ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಮತ್ತು ಇಬ್ಬರು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳನ್ನು ಒಳಗೊಂಡ ಸಮಿತಿಯನ್ನು ರಚಿಸಬಹುದು.

ನ್ಯಾಯಮೂರ್ತಿ ಯಶವಂತ್ ವರ್ಮಾ ಯಾರು?

ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ಜನವರಿ 6, 1969 ರಂದು ಅಲಹಾಬಾದ್‌ನಲ್ಲಿ ಜನಿಸಿದರು. ಅವರು ದೆಹಲಿ ವಿಶ್ವವಿದ್ಯಾಲಯದ ಹನ್ಸ್‌ರಾಜ್ ಕಾಲೇಜಿನಲ್ಲಿ ಬಿಕಾಂ (ಆನರ್ಸ್) ಪದವಿ ಪೂರ್ಣಗೊಳಿಸಿ, ನಂತರ ಮಧ್ಯಪ್ರದೇಶದ ರೇವಾ ವಿಶ್ವವಿದ್ಯಾಲಯದಿಂದ ಎಲ್‌ಎಲ್‌ಬಿ ಪದವಿ ಪಡೆದಿದ್ದಾರೆ. ಅವರು ಆಗಸ್ಟ್ 8,1992 ರಂದು ವಕೀಲ ವೃತ್ತಿಗೆ ಸೇರಿಕೊಂಡರು.

ಅಲಹಾಬಾದ್ ಹೈಕೋರ್ಟ್‌ನಲ್ಲಿ ತಮ್ಮ ಕಾನೂನು ವೃತ್ತಿಜೀವನದ ಅವಧಿಯಲ್ಲಿ, ನ್ಯಾಯಮೂರ್ತಿ ವರ್ಮಾ ಅವರು ಸಾಂವಿಧಾನಿಕ ಕಾನೂನು, ಕಾರ್ಮಿಕ ಮತ್ತು ಕೈಗಾರಿಕಾ ಕಾನೂನುಗಳು, ಕಾರ್ಪೊರೇಟ್ ಕಾನೂನುಗಳು, ತೆರಿಗೆ ಮತ್ತು ಸಂಬಂಧಿತ ಕ್ಷೇತ್ರಗಳಲ್ಲಿ ಪರಿಣತಿ ಹೊಂದಿದ್ದರು. ಅವರು 2006 ರಿಂದ ಬಡ್ತಿ ಪಡೆಯುವವರೆಗೆ ಅಲಹಾಬಾದ್ ಹೈಕೋರ್ಟ್‌ಗೆ ವಿಶೇಷ ವಕೀಲರಾಗಿ ಸೇವೆ ಸಲ್ಲಿಸಿದ್ದರು ಮತ್ತು ಹಿರಿಯ ವಕೀಲರಾಗಿ ನೇಮಕಗೊಳ್ಳುವ ಮೊದಲು 2012 ರಿಂದ 2013 ರವರೆಗೆ ಉತ್ತರ ಪ್ರದೇಶದ ಮುಖ್ಯ ಸ್ಥಾಯಿ ಸಲಹೆಗಾರರಾಗಿದ್ದರು.

ವರ್ಮಾ ಅವರನ್ನು ಅಕ್ಟೋಬರ್ 13, 2014 ರಂದು ಅಲಹಾಬಾದ್ ಹೈಕೋರ್ಟ್‌ಗೆ ಹೆಚ್ಚುವರಿ ನ್ಯಾಯಾಧೀಶರನ್ನಾಗಿ ನೇಮಿಸಲಾಯಿತು ಮತ್ತು ಫೆಬ್ರವರಿ 1, 2016 ರಂದು ಖಾಯಂ ನ್ಯಾಯಾಧೀಶರಾಗಿ ಬಡ್ತಿ ನೀಡಲಾಯಿತು. ನಂತರ ಅವರನ್ನು ಅಕ್ಟೋಬರ್ 11, 2021 ರಂದು ದೆಹಲಿ ಹೈಕೋರ್ಟ್‌ಗೆ ವರ್ಗಾಯಿಸಲಾಯಿತು.

ಉದ್ಯಮಿಯಿಂದ 2.5 ಲಕ್ಷ ಲಂಚ ಪಡೆದ ದೆಹಲಿ ಪೊಲೀಸ್ ಅಧಿಕಾರಿಯನ್ನು ಬಂಧಿಸಿದ ಸಿಬಿಐ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...