Homeಮುಖಪುಟದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಮನೆಯಲ್ಲಿ ಅಪಾರ ಪ್ರಮಾಣದ ಹಣ ಪತ್ತೆ: ಆಂತರಿಕ ತನಿಖೆ ಪ್ರಾರಂಭಿಸಿದ ಸುಪ್ರೀಂ...

ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಮನೆಯಲ್ಲಿ ಅಪಾರ ಪ್ರಮಾಣದ ಹಣ ಪತ್ತೆ: ಆಂತರಿಕ ತನಿಖೆ ಪ್ರಾರಂಭಿಸಿದ ಸುಪ್ರೀಂ ಕೋರ್ಟ್; ವರದಿ

- Advertisement -
- Advertisement -

ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ಮನೆಯಲ್ಲಿ ಭಾರೀ ಪ್ರಮಾಣದಲ್ಲಿ ಹಣ ಪತ್ತೆಯಾಗಿದ್ದು, ದೇಶದಾದ್ಯಂತ ಬಿಸಿ ಬಿಸಿ ಚರ್ಚೆಯಾಗುತ್ತಿದೆ. ಸುಪ್ರೀಂ ಕೋರ್ಟ್ ಈ ಬಗ್ಗೆ ಆಂತರಿಕ ತನಿಖೆ ಪ್ರಾರಂಭಿಸಿದೆ ಎಂದು Bar & Bench ವರದಿ ಮಾಡಿದೆ.

ನ್ಯಾಯಮೂರ್ತಿ ಯಶವಂತ್ ವರ್ಮಾ ಊರಲ್ಲಿ ಇಲ್ಲದ ವೇಳೆ, ಮಾರ್ಚ್ 14 ರಂದು ಬೆಳಿಗ್ಗೆ 11.30ಕ್ಕೆ ದೆಹಲಿಯ ನ್ಯಾಯಾಂಗ ಬಡಾವಣೆಯ ಅವರ ಮನೆಯಲ್ಲಿ ಬೆಂಕಿ ಅವಘಡ ಸಂಭವಿಸಿತ್ತು. ಕುಟುಂಬಸ್ಥರು ಅಗ್ನಿಶಾಮಕ ದಳ ಮತ್ತು ಪೊಲೀಸರಿಗೆ ಕರೆ ಮಾಡಿದ್ದರು. ಸ್ಥಳಕ್ಕೆ ಬಂದ ಅಗ್ನಿಶಾಮಕದ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ನಂತರ ಮನೆಯ ಒಂದು ಕೋಣೆಯಲ್ಲಿ ಪೊಲೀಸರಿಗೆ ಭಾರೀ ಪ್ರಮಾಣದ ಹಣ ಕಂಡು ಬಂದಿದೆ.

ಈ ಬಗ್ಗೆ ಸ್ಥಳೀಯ ಪೊಲೀಸರು ಅವರ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಅವರು ಹಿರಿಯ ಸರ್ಕಾರಿ ಅಧಿಕಾರಿಗಳ ಗಮನಕ್ಕೆ ತಂದಿದ್ದರು. ಈ ಮಾಹಿತಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸಂಜೀವ್ ಖನ್ನಾ ಅವರಿಗೆ ತಲುಪಿತ್ತು. ಅವರು ಗುರುವಾರ (ಮಾ.20) ಸಂಜೆ ತುರ್ತು ಕೊಲಿಜಿಯಂ ಸಭೆ ಕರೆದಿದ್ದರು. ಕೊಲಿಜಿಯಂ, ನ್ಯಾಯಮೂರ್ತಿ ವರ್ಮಾ ಅವರನ್ನು ಅವರ ಮಾತೃ ನ್ಯಾಯಾಲಯವಾದ ಅಲಹಾಬಾದ್ ಹೈಕೋರ್ಟ್‌ಗೆ ವರ್ಗಾಯಿಸಲು ಸರ್ವಾನುಮತದಿಂದ ನಿರ್ಧರಿಸಿದೆ.

ಆದಾಗ್ಯೂ, ಕೊಲಿಜಿಯಂನ ಕೆಲ ಸದಸ್ಯರು ವರ್ಮಾ ಅವರನ್ನು ವರ್ಗಾವಣೆ ಮಾಡುವುದರಿಂದ ನ್ಯಾಯಾಂಗದ ಖ್ಯಾತಿಗೆ ಧಕ್ಕೆಯಾಗಬಹುದು ಎಂದು ಕಳವಳ ವ್ಯಕ್ತಪಡಿಸಿದ್ದಾರೆ ಮತ್ತು ಅವರು ರಾಜೀನಾಮೆ ನೀಡಬೇಕು ಅಥವಾ ಆಂತರಿಕ ತನಿಖೆ ಎದುರಿಸಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸಾಂವಿಧಾನಿಕ ನ್ಯಾಯಾಲಯದ ನ್ಯಾಯಾಧೀಶರ ವಿರುದ್ಧದ ಆರೋಪಗಳ ತನಿಖೆಯ ಸುಪ್ರೀಂ ಕೋರ್ಟ್‌ನ ಆಂತರಿಕ ಕಾರ್ಯವಿಧಾನದ ಪ್ರಕಾರ, ತನಿಖೆಯನ್ನು ಪ್ರಾರಂಭಿಸಬೇಕೆ ಅಥವಾ ಬೇಡವೇ ಎಂದು ನಿರ್ಧರಿಸುವ ಮೊದಲು ಸಿಜೆಐ ಆರೋಪಿತ ನ್ಯಾಯಾಧೀಶರ ಪ್ರತಿಕ್ರಿಯೆಯನ್ನು ಕೇಳುತ್ತಾರೆ. ಹೆಚ್ಚಿನ ತನಿಖೆ ಅಗತ್ಯವಿದ್ದರೆ, ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಮತ್ತು ಇಬ್ಬರು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳನ್ನು ಒಳಗೊಂಡ ಸಮಿತಿಯನ್ನು ರಚಿಸಬಹುದು.

ನ್ಯಾಯಮೂರ್ತಿ ಯಶವಂತ್ ವರ್ಮಾ ಯಾರು?

ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ಜನವರಿ 6, 1969 ರಂದು ಅಲಹಾಬಾದ್‌ನಲ್ಲಿ ಜನಿಸಿದರು. ಅವರು ದೆಹಲಿ ವಿಶ್ವವಿದ್ಯಾಲಯದ ಹನ್ಸ್‌ರಾಜ್ ಕಾಲೇಜಿನಲ್ಲಿ ಬಿಕಾಂ (ಆನರ್ಸ್) ಪದವಿ ಪೂರ್ಣಗೊಳಿಸಿ, ನಂತರ ಮಧ್ಯಪ್ರದೇಶದ ರೇವಾ ವಿಶ್ವವಿದ್ಯಾಲಯದಿಂದ ಎಲ್‌ಎಲ್‌ಬಿ ಪದವಿ ಪಡೆದಿದ್ದಾರೆ. ಅವರು ಆಗಸ್ಟ್ 8,1992 ರಂದು ವಕೀಲ ವೃತ್ತಿಗೆ ಸೇರಿಕೊಂಡರು.

ಅಲಹಾಬಾದ್ ಹೈಕೋರ್ಟ್‌ನಲ್ಲಿ ತಮ್ಮ ಕಾನೂನು ವೃತ್ತಿಜೀವನದ ಅವಧಿಯಲ್ಲಿ, ನ್ಯಾಯಮೂರ್ತಿ ವರ್ಮಾ ಅವರು ಸಾಂವಿಧಾನಿಕ ಕಾನೂನು, ಕಾರ್ಮಿಕ ಮತ್ತು ಕೈಗಾರಿಕಾ ಕಾನೂನುಗಳು, ಕಾರ್ಪೊರೇಟ್ ಕಾನೂನುಗಳು, ತೆರಿಗೆ ಮತ್ತು ಸಂಬಂಧಿತ ಕ್ಷೇತ್ರಗಳಲ್ಲಿ ಪರಿಣತಿ ಹೊಂದಿದ್ದರು. ಅವರು 2006 ರಿಂದ ಬಡ್ತಿ ಪಡೆಯುವವರೆಗೆ ಅಲಹಾಬಾದ್ ಹೈಕೋರ್ಟ್‌ಗೆ ವಿಶೇಷ ವಕೀಲರಾಗಿ ಸೇವೆ ಸಲ್ಲಿಸಿದ್ದರು ಮತ್ತು ಹಿರಿಯ ವಕೀಲರಾಗಿ ನೇಮಕಗೊಳ್ಳುವ ಮೊದಲು 2012 ರಿಂದ 2013 ರವರೆಗೆ ಉತ್ತರ ಪ್ರದೇಶದ ಮುಖ್ಯ ಸ್ಥಾಯಿ ಸಲಹೆಗಾರರಾಗಿದ್ದರು.

ವರ್ಮಾ ಅವರನ್ನು ಅಕ್ಟೋಬರ್ 13, 2014 ರಂದು ಅಲಹಾಬಾದ್ ಹೈಕೋರ್ಟ್‌ಗೆ ಹೆಚ್ಚುವರಿ ನ್ಯಾಯಾಧೀಶರನ್ನಾಗಿ ನೇಮಿಸಲಾಯಿತು ಮತ್ತು ಫೆಬ್ರವರಿ 1, 2016 ರಂದು ಖಾಯಂ ನ್ಯಾಯಾಧೀಶರಾಗಿ ಬಡ್ತಿ ನೀಡಲಾಯಿತು. ನಂತರ ಅವರನ್ನು ಅಕ್ಟೋಬರ್ 11, 2021 ರಂದು ದೆಹಲಿ ಹೈಕೋರ್ಟ್‌ಗೆ ವರ್ಗಾಯಿಸಲಾಯಿತು.

ಉದ್ಯಮಿಯಿಂದ 2.5 ಲಕ್ಷ ಲಂಚ ಪಡೆದ ದೆಹಲಿ ಪೊಲೀಸ್ ಅಧಿಕಾರಿಯನ್ನು ಬಂಧಿಸಿದ ಸಿಬಿಐ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...