Homeಮುಖಪುಟಗೋವಾ BJPಗೆ ಭಾರಿ ಮುಖಭಂಗ: ಒಂದೇ ದಿನದಲ್ಲಿ ಇಬ್ಬರು ಶಾಸಕರು ರಾಜೀನಾಮೆ!

ಗೋವಾ BJPಗೆ ಭಾರಿ ಮುಖಭಂಗ: ಒಂದೇ ದಿನದಲ್ಲಿ ಇಬ್ಬರು ಶಾಸಕರು ರಾಜೀನಾಮೆ!

ಇಂದು ಬೆಳಿಗ್ಗೆಯಷ್ಟೇ ಸಚಿವರೊಬ್ಬರು ರಾಜೀನಾಮೆ ನೀಡಿ ಪಕ್ಷದಿಂದ ಹೊರಬಂದಿದ್ದರು

- Advertisement -
- Advertisement -

ಫೆಬ್ರವರಿ ತಿಂಗಳಲ್ಲಿ ಗೋವಾ ವಿಧಾನಸಭಾ ಚುನಾವಣೆ ನಡೆಯಲಿದೆ. ಆದರೆ, ಆಡಳಿತರೂಢ ಬಿಜೆಪಿಯ ಇಬ್ಬರು ಶಾಸಕರು ಒಂದೇ ದಿನದಲ್ಲಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದು, ಪಕ್ಷವು ತೀವ್ರ ಮುಖಭಂಗ ಅನುಭವಿಸಿದೆ. ರಾಜೀನಾಮೆ ನೀಡಿರುವವರಲ್ಲಿ, ಪ್ರವೀಣ್ ಜಾಂತ್ಯೆ ಅವರು ಮೇಮ್‌ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರೆ, ಮೈಕೆಲ್ ಲೋಬೋ ಅವರು ಕ್ಯಾಲಂಗುಟ್ ಕ್ಷೇತ್ರದ ಪ್ರತಿನಿಧಿಯಾಗಿದ್ದರು. ಸಚಿವರೂ ಆಗಿರುವ ಲೋಬೋ ಇಂದು ಬೆಳಿಗ್ಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ತನ್ನ ನಿರ್ಧಾರವನ್ನು ಸಮರ್ಥಿಸಿಕೊಂಡಿರುವ ಲೋಬೋ ಅವರು, “ನಾನು ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತೇನೆ. ಮುಂದಕ್ಕೆ ಯಾವ ಹೆಜ್ಜೆ ಇಡಬೇಕೆಂದು ನೋಡುತ್ತೇನೆ. ಇತರ ರಾಜಕೀಯ ಪಕ್ಷಗಳೊಂದಿಗೆ ಮಾತುಕತೆ ನಡೆಸುತ್ತಿದ್ದೇನೆ. ಪಕ್ಷವು ನಮ್ಮನ್ನು ನೋಡುವ ರೀತಿಯಿಂದ ನಾನು ಅಸಮಾಧಾನಗೊಂಡಿದ್ದು, ಪಕ್ಷದ ಕಾರ್ಯಕರ್ತರು ಅತೃಪ್ತರಾಗಿದ್ದಾರೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:‘ಕೋಮುವಾದಿ ಪಕ್ಷ’: TMC ಸೇರಿದ ಮೂರೇ ತಿಂಗಳಲ್ಲಿ ಪಕ್ಷದಿಂದ ಹೊರ ನಡೆದ ಗೋವಾದ ಮಾಜಿ ಶಾಸಕ!

“ಗೋವಾ ಬಿಜೆಪಿಯಲ್ಲಿ, ಮನೋಹರ್ ಪರಿಕ್ಕರ್ ಅವರ ಪರಂಪರೆಯನ್ನು ಮುಂದಕ್ಕೆ ತೆಗೆದುಕೊಂಡು ಹೋಗುವುದನ್ನು ನಾನು ನೋಡುತ್ತಿಲ್ಲ. ಅವರನ್ನು ಬೆಂಬಲಿಸಿದ ಪಕ್ಷದ ಕಾರ್ಯಕರ್ತರನ್ನು ಬಿಜೆಪಿ ಬದಿಗೆ ತಳ್ಳಿದೆ” ಎಂದು ಅವರು ಹೇಳಿದ್ದಾರೆ.

ಮೇಮ್ ಕ್ಷೇತ್ರವನ್ನು ಪ್ರತಿನಿಧಿಸುವ ಪ್ರವೀಣ್ ಜಾಂತ್ಯೆ, 1991 ರಿಂದ 1996 ರವರೆಗೆ ಉತ್ತರ ಗೋವಾದಿಂದ ಕಾಂಗ್ರೆಸ್ ಸಂಸದರಾಗಿದ್ದ ಹರೀಶ್ ಜಾಂತ್ಯೆ ಅವರ ಮಗ. 2012 ರ ವಿಧಾನಸಭಾ ಚುನಾವಣೆಗೆ ಟಿಕೆಟ್ ನಿರಾಕರಿಸಿದ ನಂತರ 2017 ರ ಚುನಾವಣೆಗೆ ಮುಂಚಿತವಾಗಿ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು.

ಪರಿಕ್ಕರ್ ಅವರ ಆಶ್ವಾಸನೆಗಳ ಆಧಾರದ ಮೇಲೆ ನಾನು ಬಿಜೆಪಿಗೆ ಸೇರ್ಪಡೆಗೊಂಡಿದ್ದೆ, ಆದರೆ ಬಿಜೆಪಿಯು ಅಂದಿನ ಪಕ್ಷವಾಗಿ ಉಳಿದಿಲ್ಲ ಎಂದು ಪ್ರವೀಣ್ ಜಾಂತ್ಯೆ ಹೇಳಿದ್ದಾರೆ. ಗಣಿಗಾರಿಕೆಯನ್ನು ಪುನರಾರಂಭಿಸುವಲ್ಲಿ ಮತ್ತು ತನ್ನ ಕ್ಷೇತ್ರದಲ್ಲಿ ಉದ್ಯೋಗಗಳನ್ನು ಒದಗಿಸುವಲ್ಲಿ ಸರ್ಕಾರ ವಿಫಲಾಗಿದ್ದು, “ನಾನು ಮಹಾರಾಷ್ಟ್ರವಾದಿ ಗೋಮಾಂತಕ್ ಪಾರ್ಟಿ (ಎಂಜಿಪಿ) ಗೆ ಸೇರುತ್ತೇನೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ:ಗೋವಾ: ಕಾಂಗ್ರೆಸ್‌‌‌ನ ಮಾಜಿ ಕಾರ್ಯಾಧ್ಯಕ್ಷ, ಶಾಸಕ ಅಲೆಕ್ಸೊ ಟಿಎಂಸಿಗೆ ಸೇರ್ಪಡೆ

ಇತ್ತೀಚಿನ ವಾರಗಳಲ್ಲಿ ನಾಲ್ವರು ಶಾಸಕರು ಬಿಜೆಪಿ ತೊರೆದಿದ್ದು, ಲೋಬೋ ಅವರು ಪ್ರತಿಪಕ್ಷ ಕಾಂಗ್ರೆಸ್‌ಗೆ ಸೇರುವ ನಿರೀಕ್ಷೆಯಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಲೋಬೋ ಬಿಜೆಪಿಯನ್ನು ತೊರೆದ ಮೂರನೇ ಕ್ರಿಶ್ಚಿಯನ್‌ ಶಾಸಕರಾಗಿದ್ದಾರೆ. ಈ ಹಿಂದೆ ಅಲೀನಾ ಸಲ್ಡಾನ್ಹಾ ಮತ್ತು ಕಾರ್ಲೋಸ್ ಅಲ್ಮೇಡಾ ಬಿಜೆಪಿಯನ್ನು ತೊರೆದಿದ್ದರು. ಸಲ್ಡಾನ್ಹಾ ಆಮ್ ಆದ್ಮಿ ಪಕ್ಷಕ್ಕೆ ಸೇರಿದ್ದರೆ, ಅಲ್ಮೇಡಾ ಕಾಂಗ್ರೆಸ್ ಪಕ್ಷವನ್ನು ಸೇರಿದ್ದಾರೆ.

ರಾಜ್ಯದ ಜನಸಂಖ್ಯೆಯಲ್ಲಿ ಕ್ರಿಶ್ಚಿಯನ್ನರು 25% ಕ್ಕಿಂತ ಹೆಚ್ಚಾಗಿದ್ದಾರೆ. ಗೋವಾದಲ್ಲಿ ಫೆಬ್ರವರಿ 14 ರಂದು ಒಂದೇ ಹಂತದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ.

ಪಕ್ಷ ತೊರೆದವರ ವಿರುದ್ಧ ವಾಗ್ದಾಳಿ ನಡೆಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್, “ಬಿಜೆಪಿ ದೊಡ್ಡ ಕುಟುಂಬವಾಗಿದ್ದು, ಮಾತೃಭೂಮಿಗೆ ಸಂಪೂರ್ಣ ಭಕ್ತಿಯಿಂದ ಸೇವೆ ಸಲ್ಲಿಸುತ್ತಿದೆ. ಕೆಲವು ಪಕ್ಷಾಂತರಗಳು, ದುರಾಶೆ ಮತ್ತು ವೈಯಕ್ತಿಕ ಹಿತಾಸಕ್ತಿಗಳ ಕಾರ್ಯಸೂಚಿಯನ್ನು ಪೂರೈಸಲು ನಮ್ಮ ಉತ್ತಮ ಆಡಳಿತದ ಕಾರ್ಯಸೂಚಿಯನ್ನು ತಡೆಯಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್: ದೇಶದ ಇತರ ಭಾಗಗಳು ಮೊಘಲರಿಂದ ಆಳುತ್ತಿದ್ದಾಗ ಗೋವಾ ಪೋರ್ಚುಗಲ್ ಆಳ್ವಿಕೆಗೆ ಒಳಪಟ್ಟಿತು ಎಂಬ ಮೋದಿ ಹೇಳಿಕೆ ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...