Homeಮುಖಪುಟಗೋವಾ BJPಗೆ ಭಾರಿ ಮುಖಭಂಗ: ಒಂದೇ ದಿನದಲ್ಲಿ ಇಬ್ಬರು ಶಾಸಕರು ರಾಜೀನಾಮೆ!

ಗೋವಾ BJPಗೆ ಭಾರಿ ಮುಖಭಂಗ: ಒಂದೇ ದಿನದಲ್ಲಿ ಇಬ್ಬರು ಶಾಸಕರು ರಾಜೀನಾಮೆ!

ಇಂದು ಬೆಳಿಗ್ಗೆಯಷ್ಟೇ ಸಚಿವರೊಬ್ಬರು ರಾಜೀನಾಮೆ ನೀಡಿ ಪಕ್ಷದಿಂದ ಹೊರಬಂದಿದ್ದರು

- Advertisement -
- Advertisement -

ಫೆಬ್ರವರಿ ತಿಂಗಳಲ್ಲಿ ಗೋವಾ ವಿಧಾನಸಭಾ ಚುನಾವಣೆ ನಡೆಯಲಿದೆ. ಆದರೆ, ಆಡಳಿತರೂಢ ಬಿಜೆಪಿಯ ಇಬ್ಬರು ಶಾಸಕರು ಒಂದೇ ದಿನದಲ್ಲಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದು, ಪಕ್ಷವು ತೀವ್ರ ಮುಖಭಂಗ ಅನುಭವಿಸಿದೆ. ರಾಜೀನಾಮೆ ನೀಡಿರುವವರಲ್ಲಿ, ಪ್ರವೀಣ್ ಜಾಂತ್ಯೆ ಅವರು ಮೇಮ್‌ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರೆ, ಮೈಕೆಲ್ ಲೋಬೋ ಅವರು ಕ್ಯಾಲಂಗುಟ್ ಕ್ಷೇತ್ರದ ಪ್ರತಿನಿಧಿಯಾಗಿದ್ದರು. ಸಚಿವರೂ ಆಗಿರುವ ಲೋಬೋ ಇಂದು ಬೆಳಿಗ್ಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ತನ್ನ ನಿರ್ಧಾರವನ್ನು ಸಮರ್ಥಿಸಿಕೊಂಡಿರುವ ಲೋಬೋ ಅವರು, “ನಾನು ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತೇನೆ. ಮುಂದಕ್ಕೆ ಯಾವ ಹೆಜ್ಜೆ ಇಡಬೇಕೆಂದು ನೋಡುತ್ತೇನೆ. ಇತರ ರಾಜಕೀಯ ಪಕ್ಷಗಳೊಂದಿಗೆ ಮಾತುಕತೆ ನಡೆಸುತ್ತಿದ್ದೇನೆ. ಪಕ್ಷವು ನಮ್ಮನ್ನು ನೋಡುವ ರೀತಿಯಿಂದ ನಾನು ಅಸಮಾಧಾನಗೊಂಡಿದ್ದು, ಪಕ್ಷದ ಕಾರ್ಯಕರ್ತರು ಅತೃಪ್ತರಾಗಿದ್ದಾರೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:‘ಕೋಮುವಾದಿ ಪಕ್ಷ’: TMC ಸೇರಿದ ಮೂರೇ ತಿಂಗಳಲ್ಲಿ ಪಕ್ಷದಿಂದ ಹೊರ ನಡೆದ ಗೋವಾದ ಮಾಜಿ ಶಾಸಕ!

“ಗೋವಾ ಬಿಜೆಪಿಯಲ್ಲಿ, ಮನೋಹರ್ ಪರಿಕ್ಕರ್ ಅವರ ಪರಂಪರೆಯನ್ನು ಮುಂದಕ್ಕೆ ತೆಗೆದುಕೊಂಡು ಹೋಗುವುದನ್ನು ನಾನು ನೋಡುತ್ತಿಲ್ಲ. ಅವರನ್ನು ಬೆಂಬಲಿಸಿದ ಪಕ್ಷದ ಕಾರ್ಯಕರ್ತರನ್ನು ಬಿಜೆಪಿ ಬದಿಗೆ ತಳ್ಳಿದೆ” ಎಂದು ಅವರು ಹೇಳಿದ್ದಾರೆ.

ಮೇಮ್ ಕ್ಷೇತ್ರವನ್ನು ಪ್ರತಿನಿಧಿಸುವ ಪ್ರವೀಣ್ ಜಾಂತ್ಯೆ, 1991 ರಿಂದ 1996 ರವರೆಗೆ ಉತ್ತರ ಗೋವಾದಿಂದ ಕಾಂಗ್ರೆಸ್ ಸಂಸದರಾಗಿದ್ದ ಹರೀಶ್ ಜಾಂತ್ಯೆ ಅವರ ಮಗ. 2012 ರ ವಿಧಾನಸಭಾ ಚುನಾವಣೆಗೆ ಟಿಕೆಟ್ ನಿರಾಕರಿಸಿದ ನಂತರ 2017 ರ ಚುನಾವಣೆಗೆ ಮುಂಚಿತವಾಗಿ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು.

ಪರಿಕ್ಕರ್ ಅವರ ಆಶ್ವಾಸನೆಗಳ ಆಧಾರದ ಮೇಲೆ ನಾನು ಬಿಜೆಪಿಗೆ ಸೇರ್ಪಡೆಗೊಂಡಿದ್ದೆ, ಆದರೆ ಬಿಜೆಪಿಯು ಅಂದಿನ ಪಕ್ಷವಾಗಿ ಉಳಿದಿಲ್ಲ ಎಂದು ಪ್ರವೀಣ್ ಜಾಂತ್ಯೆ ಹೇಳಿದ್ದಾರೆ. ಗಣಿಗಾರಿಕೆಯನ್ನು ಪುನರಾರಂಭಿಸುವಲ್ಲಿ ಮತ್ತು ತನ್ನ ಕ್ಷೇತ್ರದಲ್ಲಿ ಉದ್ಯೋಗಗಳನ್ನು ಒದಗಿಸುವಲ್ಲಿ ಸರ್ಕಾರ ವಿಫಲಾಗಿದ್ದು, “ನಾನು ಮಹಾರಾಷ್ಟ್ರವಾದಿ ಗೋಮಾಂತಕ್ ಪಾರ್ಟಿ (ಎಂಜಿಪಿ) ಗೆ ಸೇರುತ್ತೇನೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ:ಗೋವಾ: ಕಾಂಗ್ರೆಸ್‌‌‌ನ ಮಾಜಿ ಕಾರ್ಯಾಧ್ಯಕ್ಷ, ಶಾಸಕ ಅಲೆಕ್ಸೊ ಟಿಎಂಸಿಗೆ ಸೇರ್ಪಡೆ

ಇತ್ತೀಚಿನ ವಾರಗಳಲ್ಲಿ ನಾಲ್ವರು ಶಾಸಕರು ಬಿಜೆಪಿ ತೊರೆದಿದ್ದು, ಲೋಬೋ ಅವರು ಪ್ರತಿಪಕ್ಷ ಕಾಂಗ್ರೆಸ್‌ಗೆ ಸೇರುವ ನಿರೀಕ್ಷೆಯಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಲೋಬೋ ಬಿಜೆಪಿಯನ್ನು ತೊರೆದ ಮೂರನೇ ಕ್ರಿಶ್ಚಿಯನ್‌ ಶಾಸಕರಾಗಿದ್ದಾರೆ. ಈ ಹಿಂದೆ ಅಲೀನಾ ಸಲ್ಡಾನ್ಹಾ ಮತ್ತು ಕಾರ್ಲೋಸ್ ಅಲ್ಮೇಡಾ ಬಿಜೆಪಿಯನ್ನು ತೊರೆದಿದ್ದರು. ಸಲ್ಡಾನ್ಹಾ ಆಮ್ ಆದ್ಮಿ ಪಕ್ಷಕ್ಕೆ ಸೇರಿದ್ದರೆ, ಅಲ್ಮೇಡಾ ಕಾಂಗ್ರೆಸ್ ಪಕ್ಷವನ್ನು ಸೇರಿದ್ದಾರೆ.

ರಾಜ್ಯದ ಜನಸಂಖ್ಯೆಯಲ್ಲಿ ಕ್ರಿಶ್ಚಿಯನ್ನರು 25% ಕ್ಕಿಂತ ಹೆಚ್ಚಾಗಿದ್ದಾರೆ. ಗೋವಾದಲ್ಲಿ ಫೆಬ್ರವರಿ 14 ರಂದು ಒಂದೇ ಹಂತದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ.

ಪಕ್ಷ ತೊರೆದವರ ವಿರುದ್ಧ ವಾಗ್ದಾಳಿ ನಡೆಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್, “ಬಿಜೆಪಿ ದೊಡ್ಡ ಕುಟುಂಬವಾಗಿದ್ದು, ಮಾತೃಭೂಮಿಗೆ ಸಂಪೂರ್ಣ ಭಕ್ತಿಯಿಂದ ಸೇವೆ ಸಲ್ಲಿಸುತ್ತಿದೆ. ಕೆಲವು ಪಕ್ಷಾಂತರಗಳು, ದುರಾಶೆ ಮತ್ತು ವೈಯಕ್ತಿಕ ಹಿತಾಸಕ್ತಿಗಳ ಕಾರ್ಯಸೂಚಿಯನ್ನು ಪೂರೈಸಲು ನಮ್ಮ ಉತ್ತಮ ಆಡಳಿತದ ಕಾರ್ಯಸೂಚಿಯನ್ನು ತಡೆಯಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್: ದೇಶದ ಇತರ ಭಾಗಗಳು ಮೊಘಲರಿಂದ ಆಳುತ್ತಿದ್ದಾಗ ಗೋವಾ ಪೋರ್ಚುಗಲ್ ಆಳ್ವಿಕೆಗೆ ಒಳಪಟ್ಟಿತು ಎಂಬ ಮೋದಿ ಹೇಳಿಕೆ ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....