Homeಕರ್ನಾಟಕಅಭಿವ್ಯಕ್ತಿ ಸ್ವಾತಂತ್ರ್ಯ ಉಳಿವಿಗೆ ಇಂದು ಬೃಹತ್‌ ಜಾಥಾ, ಸಮಾವೇಶ; ‘ಬಾಡೂಟದ ಬುತ್ತಿಯೊಂದಿಗೆ ಬನ್ನಿ...’

ಅಭಿವ್ಯಕ್ತಿ ಸ್ವಾತಂತ್ರ್ಯ ಉಳಿವಿಗೆ ಇಂದು ಬೃಹತ್‌ ಜಾಥಾ, ಸಮಾವೇಶ; ‘ಬಾಡೂಟದ ಬುತ್ತಿಯೊಂದಿಗೆ ಬನ್ನಿ…’

ಸಂಗೀತ ನಿರ್ದೇಶಕ ಹಂಸಲೇಖ ಅವರ ಮೇಲೆ ನಡೆಯುತ್ತಿರುವ ಮಾನಸಿಕ ದಾಳಿಗಳನ್ನು ಖಂಡಿಸಿ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯದ ಉಳಿವಿಗಾಗಿ ನವೆಂಬರ್ 26ರಂದು (ಶುಕ್ರವಾರ) ಬೃಹತ್‌ ಜಾಥಾ ಹಾಗೂ ಸಮಾವೇಶವನ್ನು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದೆ.

- Advertisement -
- Advertisement -

ಸಂಗೀತ ನಿರ್ದೇಶಕ, ನೆಲದ ಕವಿ ಹಂಸಲೇಖ ಅವರ ಮೇಲೆ ನಡೆಯುತ್ತಿರುವ ಮಾನಸಿಕ ದಾಳಿಗಳನ್ನು ಖಂಡಿಸಿ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯದ ಉಳಿವಿಗಾಗಿ ನವೆಂಬರ್ 26ರಂದು (ಶುಕ್ರವಾರ) ಬೃಹತ್‌ ಜಾಥಾವನ್ನು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದೆ.

ಸಂವಿಧಾನ ಸಂರಕ್ಷಣಾ ಐಕ್ಯತಾ ಸಮಿತಿ (ಕರ್ನಾಟಕ) ವತಿಯಿಂದ ಸಂವಿಧಾನ ಸಮರ್ಪಣಾ ದಿನ ಮತ್ತು ಕಾನೂನು ದಿನದ ಅಂಗವಾಗಿ ಸಂವಿಧಾನ ಜಾಗೃತಿ ಜಾಥಾ ಮತ್ತು ಸಮಾವೇಶ ಹಮ್ಮಿಕೊಳ್ಳಲಾಗಿದೆ.

ಭಾರತದ ಸಂವಿಧಾನ ನೀಡಿರುವ ವಾಕ್‌ ಮತ್ತು ಅಭಿವೃಕ್ತಿ ಸ್ವಾತಂತ್ರ್ಯದ ಮೇಲಿನ ಬ್ರಾಹ್ಮಣ್ಯದ ಹಲ್ಲೆಯನ್ನು ಖಂಡಿಸಿ ಹಂಸಲೇಖರ ಸತ್ಯದ ನುಡಿಗಳನ್ನು ಬೆಂಬಲಿಸಿ ಸಂವಿಧಾನ ಜಾಗೃತಿ ಜಾಥಾ ಮತ್ತು ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ನವೆಂಬರ್‌‌ 26ರಂದು ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ಕೇಂದ್ರ ರೈಲು ನಿಲ್ದಾಣದಿಂದ ಫ್ರೀಡಂ ಪಾರ್ಕಿನವರೆಗೆ ಜಾಥಾ ನಡೆಯಲಿದ್ದು, “ಹಂಸಲೇಖರವರ ಸತ್ಯದ ಮಾತುಗಳನ್ನು ಬೆಂಬಲಿಸುವವರು ರಾಜಧಾನಿಗೆ ಬನ್ನಿ” ಎಂದು ಸಂಘಟಕರು ಕರೆ ನೀಡಿದ್ದಾರೆ.


ಇದನ್ನೂ ಓದಿರಿ: ಹಂಸಲೇಖರ ಪರ ಕಾಂಗ್ರೆಸ್‌ ನಾಯಕರಾದ ಜಿ.ಪರಮೇಶ್ವರ, ಟಿ.ಬಿ.ಜಯಚಂದ್ರ, ಕೆ.ಎನ್‌.ರಾಜಣ್ಣ ಪ್ರತಿಭಟನೆ


ಈ ಕುರಿತು ಮಾತನಾಡಿರುವ ಸಾಹಿತಿ ಎಲ್.ಎನ್‌.ಮುಕುಂದರಾಜು, “ಹಂಸಲೇಖರಂತಹ ಹಿರಿಯ ಕಲಾವಿದ ಕ್ಷಮೆ ಕೇಳಿದ ಮೇಲೂ ನಡೆಯುತ್ತಿರುವ ಮಾತಿನ ದಾಳಿ ಮತ್ತು ಅವರ ಮೇಲೆ ದಾಖಲಾಗುತ್ತಿರುವ ದೂರುಗಳನ್ನು ಗಮನಿಸಿದಾಗ ನಮ್ಮ ದೇಶದಲ್ಲಿ ವ್ಯಕ್ತಿ ಸ್ವಾತಂತ್ರ್ಯದ ಬಹಳ ದೊಡ್ಡ ಅಪಾಯ ಬಂದಿದೆ” ಎಂದಿದ್ದಾರೆ.

ಮುಂದುವರಿದು, “ಬರೀ ವ್ಯಕ್ತಿ ಸ್ವಾತಂತ್ರ್ಯಕ್ಕಷ್ಟೇ ಅಲ್ಲದೆ ನಮ್ಮ ದೇಶದ ಪ್ರಜಾಪ್ರಭುತ್ವಕ್ಕೂ, ಸಂವಿಧಾನಕ್ಕೂ ಅಪಾಯ ಬಂದಿದೆ. ಈ ದೇಶದಲ್ಲಿ ಇನ್ನು ಮುಂದೆ ದಲಿತರು, ಶೂದ್ರರು ಮತ್ತು ಮಹಿಳೆಯರ ಸ್ವಾತಂತ್ರ್ಯ ಇರುವುದಿಲ್ಲ ಅನಿಸುತ್ತಿದೆ. ನಾವು ಎಚ್ಚರಗೊಂಡು ಹೋರಾಟವನ್ನು ಮಾಡಬೇಕಾಗಿದೆ” ಎಂದು ತಿಳಿಸಿದ್ದಾರೆ.

“ಪ್ರತಿಭಟನೆಯಲ್ಲಿ ಸಾವಿರಾರು ಜನ ಭಾಗವಹಿಸಲಿದ್ದಾರೆ. ಅಂದು ತಮ್ಮ ತಮ್ಮ ಬುತ್ತಿಗಳನ್ನು ತಮ್ಮ ಮನೆಗಳಿಂದ ತೆಗೆದುಕೊಂದು ಬಂದು ಊಟ ಮಾಡಲಿದ್ದಾರೆ. ಅದರಲ್ಲೂ ಬಾಡೂಟವಾದರೆ ಬಹಳ ಚೆನ್ನಾಗಿರುತ್ತದೆ. ಪ್ರತಿಭಟನೆಗೆ ತಾವೆಲ್ಲರೂ ಬರಬೇಕೆಂದು ವಿನಂತಿ ಮಾಡುತ್ತೇನೆ. ಬನ್ನಿ ದೇಶವನ್ನು, ಸಂವಿಧಾನವನ್ನು ಉಳಿಸೋಣ. ಅಂಬೇಡ್ಕರ್‌, ಬುದ್ಧ, ಬಸವ, ಗಾಂಧಿ, ಕುವೆಂಪು ಮುಂತಾದವರ ಆಶಯಗಳನ್ನು ನಮ್ಮ ಮುಂದಿನ ಪೀಳಿಗೆಗೂ ತಲುಪಿಸೋಣ. ಈ ದೇಶದ ಸ್ವಾತಂತ್ರ್ಯವನ್ನು, ಘನತೆಯನ್ನು, ಗೌರವವನ್ನು ಕಾಪಾಡೋಣ” ಎಂದು ಜನರಲ್ಲಿ ಮನವಿ ಮಾಡಿದ್ದಾರೆ.

“ಮಳೆ ಬರುವ ಸೂಚನೆ ಇರುವುದರಿಂದ ಎಲ್ಲರೂ ಒಂದೊಂದು ಕೊಡೆ (ಛತ್ರಿ) ತರತಕ್ಕದ್ದು ಮತ್ತು ಅವರವರ ಊಟದ ಬುತ್ತಿಯನ್ನು ಅವರವರೇ ತರಕ್ಕದ್ದು. ಸಾಮೂಹಿಕ ಊಟದ ಮೂಲಕವೇ ಕಾರ್ಯಕ್ರಮಕ್ಕೆ ಚಾಲನೆ ಮತ್ತು ಪ್ರತಿರೋಧ ಮಾಡೋಣ ಎಂಬುದು ಹಿರಿಯರ ಸಲಹೆ. ನಾವೆಲ್ಲರೂ ಇವುಗಳನ್ನು ಪಾಲಿಸೋಣ. ನವೆಂಬರ್ 26ರ ರಾಜ್ಯಮಟ್ಟದ ರ್‍ಯಾಲಿಗೆ ಎಲ್ಲಾ ಸಂಘಟನೆಗಳು ಮತ್ತು ಎಲ್ಲಾ ಪ್ರಜ್ಞಾವಂತರು ಸ್ವಯಂಪ್ರೇರಿತರಾಗಿ ಸಹಕರಿಸಿ ಅವರವರ ಸಂಘದ ಹೆಸರಿನಲ್ಲಿ ಪೋಸ್ಟರ್ ಮಾಡಿಸಿ ಹಂಚಿ ಮತ್ತು ಸ್ವಯಂಪ್ರೇರಿತರಾಗಿ ಆಗಮಿಸಿ” ಎಂದು ಕೋರಿದ್ದಾರೆ.


ಇದನ್ನೂ ಓದಿರಿ: ನಿಮ್ಮ ಪ್ರೀತಿ ನನಗೆ ತಲುಪಿದೆ: ಕನ್ನಡಿಗರಿಗೆ ಹಂಸಲೇಖ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...