Homeಕರ್ನಾಟಕಅಭಿವ್ಯಕ್ತಿ ಸ್ವಾತಂತ್ರ್ಯ ಉಳಿವಿಗೆ ಇಂದು ಬೃಹತ್‌ ಜಾಥಾ, ಸಮಾವೇಶ; ‘ಬಾಡೂಟದ ಬುತ್ತಿಯೊಂದಿಗೆ ಬನ್ನಿ...’

ಅಭಿವ್ಯಕ್ತಿ ಸ್ವಾತಂತ್ರ್ಯ ಉಳಿವಿಗೆ ಇಂದು ಬೃಹತ್‌ ಜಾಥಾ, ಸಮಾವೇಶ; ‘ಬಾಡೂಟದ ಬುತ್ತಿಯೊಂದಿಗೆ ಬನ್ನಿ…’

ಸಂಗೀತ ನಿರ್ದೇಶಕ ಹಂಸಲೇಖ ಅವರ ಮೇಲೆ ನಡೆಯುತ್ತಿರುವ ಮಾನಸಿಕ ದಾಳಿಗಳನ್ನು ಖಂಡಿಸಿ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯದ ಉಳಿವಿಗಾಗಿ ನವೆಂಬರ್ 26ರಂದು (ಶುಕ್ರವಾರ) ಬೃಹತ್‌ ಜಾಥಾ ಹಾಗೂ ಸಮಾವೇಶವನ್ನು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದೆ.

- Advertisement -
- Advertisement -

ಸಂಗೀತ ನಿರ್ದೇಶಕ, ನೆಲದ ಕವಿ ಹಂಸಲೇಖ ಅವರ ಮೇಲೆ ನಡೆಯುತ್ತಿರುವ ಮಾನಸಿಕ ದಾಳಿಗಳನ್ನು ಖಂಡಿಸಿ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯದ ಉಳಿವಿಗಾಗಿ ನವೆಂಬರ್ 26ರಂದು (ಶುಕ್ರವಾರ) ಬೃಹತ್‌ ಜಾಥಾವನ್ನು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದೆ.

ಸಂವಿಧಾನ ಸಂರಕ್ಷಣಾ ಐಕ್ಯತಾ ಸಮಿತಿ (ಕರ್ನಾಟಕ) ವತಿಯಿಂದ ಸಂವಿಧಾನ ಸಮರ್ಪಣಾ ದಿನ ಮತ್ತು ಕಾನೂನು ದಿನದ ಅಂಗವಾಗಿ ಸಂವಿಧಾನ ಜಾಗೃತಿ ಜಾಥಾ ಮತ್ತು ಸಮಾವೇಶ ಹಮ್ಮಿಕೊಳ್ಳಲಾಗಿದೆ.

ಭಾರತದ ಸಂವಿಧಾನ ನೀಡಿರುವ ವಾಕ್‌ ಮತ್ತು ಅಭಿವೃಕ್ತಿ ಸ್ವಾತಂತ್ರ್ಯದ ಮೇಲಿನ ಬ್ರಾಹ್ಮಣ್ಯದ ಹಲ್ಲೆಯನ್ನು ಖಂಡಿಸಿ ಹಂಸಲೇಖರ ಸತ್ಯದ ನುಡಿಗಳನ್ನು ಬೆಂಬಲಿಸಿ ಸಂವಿಧಾನ ಜಾಗೃತಿ ಜಾಥಾ ಮತ್ತು ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ನವೆಂಬರ್‌‌ 26ರಂದು ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ಕೇಂದ್ರ ರೈಲು ನಿಲ್ದಾಣದಿಂದ ಫ್ರೀಡಂ ಪಾರ್ಕಿನವರೆಗೆ ಜಾಥಾ ನಡೆಯಲಿದ್ದು, “ಹಂಸಲೇಖರವರ ಸತ್ಯದ ಮಾತುಗಳನ್ನು ಬೆಂಬಲಿಸುವವರು ರಾಜಧಾನಿಗೆ ಬನ್ನಿ” ಎಂದು ಸಂಘಟಕರು ಕರೆ ನೀಡಿದ್ದಾರೆ.


ಇದನ್ನೂ ಓದಿರಿ: ಹಂಸಲೇಖರ ಪರ ಕಾಂಗ್ರೆಸ್‌ ನಾಯಕರಾದ ಜಿ.ಪರಮೇಶ್ವರ, ಟಿ.ಬಿ.ಜಯಚಂದ್ರ, ಕೆ.ಎನ್‌.ರಾಜಣ್ಣ ಪ್ರತಿಭಟನೆ


ಈ ಕುರಿತು ಮಾತನಾಡಿರುವ ಸಾಹಿತಿ ಎಲ್.ಎನ್‌.ಮುಕುಂದರಾಜು, “ಹಂಸಲೇಖರಂತಹ ಹಿರಿಯ ಕಲಾವಿದ ಕ್ಷಮೆ ಕೇಳಿದ ಮೇಲೂ ನಡೆಯುತ್ತಿರುವ ಮಾತಿನ ದಾಳಿ ಮತ್ತು ಅವರ ಮೇಲೆ ದಾಖಲಾಗುತ್ತಿರುವ ದೂರುಗಳನ್ನು ಗಮನಿಸಿದಾಗ ನಮ್ಮ ದೇಶದಲ್ಲಿ ವ್ಯಕ್ತಿ ಸ್ವಾತಂತ್ರ್ಯದ ಬಹಳ ದೊಡ್ಡ ಅಪಾಯ ಬಂದಿದೆ” ಎಂದಿದ್ದಾರೆ.

ಮುಂದುವರಿದು, “ಬರೀ ವ್ಯಕ್ತಿ ಸ್ವಾತಂತ್ರ್ಯಕ್ಕಷ್ಟೇ ಅಲ್ಲದೆ ನಮ್ಮ ದೇಶದ ಪ್ರಜಾಪ್ರಭುತ್ವಕ್ಕೂ, ಸಂವಿಧಾನಕ್ಕೂ ಅಪಾಯ ಬಂದಿದೆ. ಈ ದೇಶದಲ್ಲಿ ಇನ್ನು ಮುಂದೆ ದಲಿತರು, ಶೂದ್ರರು ಮತ್ತು ಮಹಿಳೆಯರ ಸ್ವಾತಂತ್ರ್ಯ ಇರುವುದಿಲ್ಲ ಅನಿಸುತ್ತಿದೆ. ನಾವು ಎಚ್ಚರಗೊಂಡು ಹೋರಾಟವನ್ನು ಮಾಡಬೇಕಾಗಿದೆ” ಎಂದು ತಿಳಿಸಿದ್ದಾರೆ.

“ಪ್ರತಿಭಟನೆಯಲ್ಲಿ ಸಾವಿರಾರು ಜನ ಭಾಗವಹಿಸಲಿದ್ದಾರೆ. ಅಂದು ತಮ್ಮ ತಮ್ಮ ಬುತ್ತಿಗಳನ್ನು ತಮ್ಮ ಮನೆಗಳಿಂದ ತೆಗೆದುಕೊಂದು ಬಂದು ಊಟ ಮಾಡಲಿದ್ದಾರೆ. ಅದರಲ್ಲೂ ಬಾಡೂಟವಾದರೆ ಬಹಳ ಚೆನ್ನಾಗಿರುತ್ತದೆ. ಪ್ರತಿಭಟನೆಗೆ ತಾವೆಲ್ಲರೂ ಬರಬೇಕೆಂದು ವಿನಂತಿ ಮಾಡುತ್ತೇನೆ. ಬನ್ನಿ ದೇಶವನ್ನು, ಸಂವಿಧಾನವನ್ನು ಉಳಿಸೋಣ. ಅಂಬೇಡ್ಕರ್‌, ಬುದ್ಧ, ಬಸವ, ಗಾಂಧಿ, ಕುವೆಂಪು ಮುಂತಾದವರ ಆಶಯಗಳನ್ನು ನಮ್ಮ ಮುಂದಿನ ಪೀಳಿಗೆಗೂ ತಲುಪಿಸೋಣ. ಈ ದೇಶದ ಸ್ವಾತಂತ್ರ್ಯವನ್ನು, ಘನತೆಯನ್ನು, ಗೌರವವನ್ನು ಕಾಪಾಡೋಣ” ಎಂದು ಜನರಲ್ಲಿ ಮನವಿ ಮಾಡಿದ್ದಾರೆ.

“ಮಳೆ ಬರುವ ಸೂಚನೆ ಇರುವುದರಿಂದ ಎಲ್ಲರೂ ಒಂದೊಂದು ಕೊಡೆ (ಛತ್ರಿ) ತರತಕ್ಕದ್ದು ಮತ್ತು ಅವರವರ ಊಟದ ಬುತ್ತಿಯನ್ನು ಅವರವರೇ ತರಕ್ಕದ್ದು. ಸಾಮೂಹಿಕ ಊಟದ ಮೂಲಕವೇ ಕಾರ್ಯಕ್ರಮಕ್ಕೆ ಚಾಲನೆ ಮತ್ತು ಪ್ರತಿರೋಧ ಮಾಡೋಣ ಎಂಬುದು ಹಿರಿಯರ ಸಲಹೆ. ನಾವೆಲ್ಲರೂ ಇವುಗಳನ್ನು ಪಾಲಿಸೋಣ. ನವೆಂಬರ್ 26ರ ರಾಜ್ಯಮಟ್ಟದ ರ್‍ಯಾಲಿಗೆ ಎಲ್ಲಾ ಸಂಘಟನೆಗಳು ಮತ್ತು ಎಲ್ಲಾ ಪ್ರಜ್ಞಾವಂತರು ಸ್ವಯಂಪ್ರೇರಿತರಾಗಿ ಸಹಕರಿಸಿ ಅವರವರ ಸಂಘದ ಹೆಸರಿನಲ್ಲಿ ಪೋಸ್ಟರ್ ಮಾಡಿಸಿ ಹಂಚಿ ಮತ್ತು ಸ್ವಯಂಪ್ರೇರಿತರಾಗಿ ಆಗಮಿಸಿ” ಎಂದು ಕೋರಿದ್ದಾರೆ.


ಇದನ್ನೂ ಓದಿರಿ: ನಿಮ್ಮ ಪ್ರೀತಿ ನನಗೆ ತಲುಪಿದೆ: ಕನ್ನಡಿಗರಿಗೆ ಹಂಸಲೇಖ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...