Homeಕರ್ನಾಟಕಅಭಿವ್ಯಕ್ತಿ ಸ್ವಾತಂತ್ರ್ಯ ಉಳಿವಿಗೆ ಇಂದು ಬೃಹತ್‌ ಜಾಥಾ, ಸಮಾವೇಶ; ‘ಬಾಡೂಟದ ಬುತ್ತಿಯೊಂದಿಗೆ ಬನ್ನಿ...’

ಅಭಿವ್ಯಕ್ತಿ ಸ್ವಾತಂತ್ರ್ಯ ಉಳಿವಿಗೆ ಇಂದು ಬೃಹತ್‌ ಜಾಥಾ, ಸಮಾವೇಶ; ‘ಬಾಡೂಟದ ಬುತ್ತಿಯೊಂದಿಗೆ ಬನ್ನಿ…’

ಸಂಗೀತ ನಿರ್ದೇಶಕ ಹಂಸಲೇಖ ಅವರ ಮೇಲೆ ನಡೆಯುತ್ತಿರುವ ಮಾನಸಿಕ ದಾಳಿಗಳನ್ನು ಖಂಡಿಸಿ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯದ ಉಳಿವಿಗಾಗಿ ನವೆಂಬರ್ 26ರಂದು (ಶುಕ್ರವಾರ) ಬೃಹತ್‌ ಜಾಥಾ ಹಾಗೂ ಸಮಾವೇಶವನ್ನು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದೆ.

- Advertisement -
- Advertisement -

ಸಂಗೀತ ನಿರ್ದೇಶಕ, ನೆಲದ ಕವಿ ಹಂಸಲೇಖ ಅವರ ಮೇಲೆ ನಡೆಯುತ್ತಿರುವ ಮಾನಸಿಕ ದಾಳಿಗಳನ್ನು ಖಂಡಿಸಿ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯದ ಉಳಿವಿಗಾಗಿ ನವೆಂಬರ್ 26ರಂದು (ಶುಕ್ರವಾರ) ಬೃಹತ್‌ ಜಾಥಾವನ್ನು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದೆ.

ಸಂವಿಧಾನ ಸಂರಕ್ಷಣಾ ಐಕ್ಯತಾ ಸಮಿತಿ (ಕರ್ನಾಟಕ) ವತಿಯಿಂದ ಸಂವಿಧಾನ ಸಮರ್ಪಣಾ ದಿನ ಮತ್ತು ಕಾನೂನು ದಿನದ ಅಂಗವಾಗಿ ಸಂವಿಧಾನ ಜಾಗೃತಿ ಜಾಥಾ ಮತ್ತು ಸಮಾವೇಶ ಹಮ್ಮಿಕೊಳ್ಳಲಾಗಿದೆ.

ಭಾರತದ ಸಂವಿಧಾನ ನೀಡಿರುವ ವಾಕ್‌ ಮತ್ತು ಅಭಿವೃಕ್ತಿ ಸ್ವಾತಂತ್ರ್ಯದ ಮೇಲಿನ ಬ್ರಾಹ್ಮಣ್ಯದ ಹಲ್ಲೆಯನ್ನು ಖಂಡಿಸಿ ಹಂಸಲೇಖರ ಸತ್ಯದ ನುಡಿಗಳನ್ನು ಬೆಂಬಲಿಸಿ ಸಂವಿಧಾನ ಜಾಗೃತಿ ಜಾಥಾ ಮತ್ತು ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ನವೆಂಬರ್‌‌ 26ರಂದು ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ಕೇಂದ್ರ ರೈಲು ನಿಲ್ದಾಣದಿಂದ ಫ್ರೀಡಂ ಪಾರ್ಕಿನವರೆಗೆ ಜಾಥಾ ನಡೆಯಲಿದ್ದು, “ಹಂಸಲೇಖರವರ ಸತ್ಯದ ಮಾತುಗಳನ್ನು ಬೆಂಬಲಿಸುವವರು ರಾಜಧಾನಿಗೆ ಬನ್ನಿ” ಎಂದು ಸಂಘಟಕರು ಕರೆ ನೀಡಿದ್ದಾರೆ.


ಇದನ್ನೂ ಓದಿರಿ: ಹಂಸಲೇಖರ ಪರ ಕಾಂಗ್ರೆಸ್‌ ನಾಯಕರಾದ ಜಿ.ಪರಮೇಶ್ವರ, ಟಿ.ಬಿ.ಜಯಚಂದ್ರ, ಕೆ.ಎನ್‌.ರಾಜಣ್ಣ ಪ್ರತಿಭಟನೆ


ಈ ಕುರಿತು ಮಾತನಾಡಿರುವ ಸಾಹಿತಿ ಎಲ್.ಎನ್‌.ಮುಕುಂದರಾಜು, “ಹಂಸಲೇಖರಂತಹ ಹಿರಿಯ ಕಲಾವಿದ ಕ್ಷಮೆ ಕೇಳಿದ ಮೇಲೂ ನಡೆಯುತ್ತಿರುವ ಮಾತಿನ ದಾಳಿ ಮತ್ತು ಅವರ ಮೇಲೆ ದಾಖಲಾಗುತ್ತಿರುವ ದೂರುಗಳನ್ನು ಗಮನಿಸಿದಾಗ ನಮ್ಮ ದೇಶದಲ್ಲಿ ವ್ಯಕ್ತಿ ಸ್ವಾತಂತ್ರ್ಯದ ಬಹಳ ದೊಡ್ಡ ಅಪಾಯ ಬಂದಿದೆ” ಎಂದಿದ್ದಾರೆ.

ಮುಂದುವರಿದು, “ಬರೀ ವ್ಯಕ್ತಿ ಸ್ವಾತಂತ್ರ್ಯಕ್ಕಷ್ಟೇ ಅಲ್ಲದೆ ನಮ್ಮ ದೇಶದ ಪ್ರಜಾಪ್ರಭುತ್ವಕ್ಕೂ, ಸಂವಿಧಾನಕ್ಕೂ ಅಪಾಯ ಬಂದಿದೆ. ಈ ದೇಶದಲ್ಲಿ ಇನ್ನು ಮುಂದೆ ದಲಿತರು, ಶೂದ್ರರು ಮತ್ತು ಮಹಿಳೆಯರ ಸ್ವಾತಂತ್ರ್ಯ ಇರುವುದಿಲ್ಲ ಅನಿಸುತ್ತಿದೆ. ನಾವು ಎಚ್ಚರಗೊಂಡು ಹೋರಾಟವನ್ನು ಮಾಡಬೇಕಾಗಿದೆ” ಎಂದು ತಿಳಿಸಿದ್ದಾರೆ.

“ಪ್ರತಿಭಟನೆಯಲ್ಲಿ ಸಾವಿರಾರು ಜನ ಭಾಗವಹಿಸಲಿದ್ದಾರೆ. ಅಂದು ತಮ್ಮ ತಮ್ಮ ಬುತ್ತಿಗಳನ್ನು ತಮ್ಮ ಮನೆಗಳಿಂದ ತೆಗೆದುಕೊಂದು ಬಂದು ಊಟ ಮಾಡಲಿದ್ದಾರೆ. ಅದರಲ್ಲೂ ಬಾಡೂಟವಾದರೆ ಬಹಳ ಚೆನ್ನಾಗಿರುತ್ತದೆ. ಪ್ರತಿಭಟನೆಗೆ ತಾವೆಲ್ಲರೂ ಬರಬೇಕೆಂದು ವಿನಂತಿ ಮಾಡುತ್ತೇನೆ. ಬನ್ನಿ ದೇಶವನ್ನು, ಸಂವಿಧಾನವನ್ನು ಉಳಿಸೋಣ. ಅಂಬೇಡ್ಕರ್‌, ಬುದ್ಧ, ಬಸವ, ಗಾಂಧಿ, ಕುವೆಂಪು ಮುಂತಾದವರ ಆಶಯಗಳನ್ನು ನಮ್ಮ ಮುಂದಿನ ಪೀಳಿಗೆಗೂ ತಲುಪಿಸೋಣ. ಈ ದೇಶದ ಸ್ವಾತಂತ್ರ್ಯವನ್ನು, ಘನತೆಯನ್ನು, ಗೌರವವನ್ನು ಕಾಪಾಡೋಣ” ಎಂದು ಜನರಲ್ಲಿ ಮನವಿ ಮಾಡಿದ್ದಾರೆ.

“ಮಳೆ ಬರುವ ಸೂಚನೆ ಇರುವುದರಿಂದ ಎಲ್ಲರೂ ಒಂದೊಂದು ಕೊಡೆ (ಛತ್ರಿ) ತರತಕ್ಕದ್ದು ಮತ್ತು ಅವರವರ ಊಟದ ಬುತ್ತಿಯನ್ನು ಅವರವರೇ ತರಕ್ಕದ್ದು. ಸಾಮೂಹಿಕ ಊಟದ ಮೂಲಕವೇ ಕಾರ್ಯಕ್ರಮಕ್ಕೆ ಚಾಲನೆ ಮತ್ತು ಪ್ರತಿರೋಧ ಮಾಡೋಣ ಎಂಬುದು ಹಿರಿಯರ ಸಲಹೆ. ನಾವೆಲ್ಲರೂ ಇವುಗಳನ್ನು ಪಾಲಿಸೋಣ. ನವೆಂಬರ್ 26ರ ರಾಜ್ಯಮಟ್ಟದ ರ್‍ಯಾಲಿಗೆ ಎಲ್ಲಾ ಸಂಘಟನೆಗಳು ಮತ್ತು ಎಲ್ಲಾ ಪ್ರಜ್ಞಾವಂತರು ಸ್ವಯಂಪ್ರೇರಿತರಾಗಿ ಸಹಕರಿಸಿ ಅವರವರ ಸಂಘದ ಹೆಸರಿನಲ್ಲಿ ಪೋಸ್ಟರ್ ಮಾಡಿಸಿ ಹಂಚಿ ಮತ್ತು ಸ್ವಯಂಪ್ರೇರಿತರಾಗಿ ಆಗಮಿಸಿ” ಎಂದು ಕೋರಿದ್ದಾರೆ.


ಇದನ್ನೂ ಓದಿರಿ: ನಿಮ್ಮ ಪ್ರೀತಿ ನನಗೆ ತಲುಪಿದೆ: ಕನ್ನಡಿಗರಿಗೆ ಹಂಸಲೇಖ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...