Homeಮುಖಪುಟಬೃಹತ್ ಮುನ್ನಡೆ: ಗುಜರಾತ್‌ನಲ್ಲಿ ಸತತ 7ನೇ ಬಾರಿಗೆ ಅಧಿಕಾರದತ್ತ ಬಿಜೆಪಿ

ಬೃಹತ್ ಮುನ್ನಡೆ: ಗುಜರಾತ್‌ನಲ್ಲಿ ಸತತ 7ನೇ ಬಾರಿಗೆ ಅಧಿಕಾರದತ್ತ ಬಿಜೆಪಿ

- Advertisement -
- Advertisement -

ಗುಜರಾತ್ ವಿಧಾನಸಭಾ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು ಹಲವು ಸುತ್ತಿನ ಮತ ಎಣಿಕೆಯಲ್ಲಿ ಆಡಳಿತರೂಢ ಬಿಜೆಪಿಯು ಭರ್ಜರಿ ಮುನ್ನಡೆ ಕಾಯ್ದುಕೊಂಡಿದೆ. ಸದ್ಯಕ್ಕೆ ಒಟ್ಟು 182 ಕ್ಷೇತ್ರಗಳ ಪೈಕಿ ಬಿಜೆಪಿಯು 152 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಸತತ 7ನೇ ಬಾರಿಗೆ ರಾಜ್ಯದ ಅಧಿಕಾರದ ಚುಕ್ಕಾಣಿ ಹಿಡಿಯಲು ಮುಂದಾಗಿದೆ.

ಕಳೆದ 2017ರ ಚುನಾವಣೆಯಲ್ಲಿ ಬಿಜೆಪಿಯು 99 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲು ಏದುಸಿರು ಬಿಟ್ಟಿತ್ತು. ಆದರೆ ಈ ಬಾರಿ ಅನಾಯಾಸವಾಗಿ 140-150 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಸಾಧ್ಯತೆಯಿದೆ. ಆ ಮೂಲಕ ಇದುವರೆಗಿನ ಅತಿ ದೊಡ್ಡ ಅಂತರದ ಬೃಹತ್ ವಿಜಯಕ್ಕೆ ಸನಿಹದಲ್ಲಿದೆ. ಗುಜರಾತ್‌ನಲ್ಲಿ ಇದುವರೆಗಿನ ಬಿಜೆಪಿ ಸಾಧನೆ ಕೆಳಗಿನಂತಿದೆ.

1980: ಬಿಜೆಪಿ – 09, ಕಾಂಗ್ರೆಸ್- 141

1985: ಬಿಜೆಪಿ -11, ಕಾಂಗ್ರೆಸ್- 149

1990: ಬಿಜೆಪಿ -67, ಕಾಂಗ್ರೆಸ್- 33, ಜನತಾದಳ-70

1995: ಬಿಜೆಪಿ -121, ಕಾಂಗ್ರೆಸ್- 45

1998: ಬಿಜೆಪಿ -117, ಕಾಂಗ್ರೆಸ್- 53

2002: ಬಿಜೆಪಿ -127, ಕಾಂಗ್ರೆಸ್- 51

2007: ಬಿಜೆಪಿ -117, ಕಾಂಗ್ರೆಸ್- 59

2012: ಬಿಜೆಪಿ -119, ಕಾಂಗ್ರೆಸ್- 57

2017: ಬಿಜೆಪಿ -99, ಕಾಂಗ್ರೆಸ್- 77

2022: ಬಿಜೆಪಿ -152(ಮುನ್ನಡೆ), ಕಾಂಗ್ರೆಸ್- 20(ಮುನ್ನಡೆ)

2002ರ ನಂತರ ಅತಿ ದೊಡ್ಡ ಸಾಧನೆ

ಬಿಜೆಪಿಯು ಗುಜರಾತ್‌ನಲ್ಲಿ 1995ರಿಂದ ಅಧಿಕಾರದಲ್ಲಿದೆ. ಅದು 2002ರಲ್ಲಿ 127 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಅತಿದೊಡ್ಡ ಸಾಧನೆ ಮಾಡಿತ್ತು. ಆದರೆ 2017ರ ವೇಳೆಗೆ ಅದರ ಸಾಧನೆ 99 ಸೀಟುಗಳಿಗೆ ಕುಸಿದಿತ್ತು. ಈಗ 2022ರಲ್ಲಿ 150 ರಷ್ಟು ಸ್ಥಾನ ಗೆಲ್ಲುವ ಮೂಲಕ ತನ್ನ ಐಸಿಹಾಸಿಕ ಸಾಧನೆಗೆ ಸಜ್ಜಾಗಿದೆ.

ಕುಸಿದ ಕಾಂಗ್ರೆಸ್

ಕಾಂಗ್ರೆಸ್ ಪಕ್ಷವು 1985ರಲ್ಲಿ 149 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಭರ್ಜರಿ ಸಾಧನೆ ಮಾಡಿತ್ತು. ಆದರೆ ಆನಂತರ ಅದು ನಿಧಾನವಾಗಿ ಕುಸಿಯುತ್ತಲೇ ಸಾಗಿದೆ. 1990ರಲ್ಲಿ ಅದು ಕೇವಲ 33 ಸ್ಥಾನ ಗಳಿಸುವ ಮೂಲಕ ಕಳಪೆ ಸಾಧನೆ ತೋರಿತ್ತು. ಆದರೆ ಈ ಬಾರಿ ಅದು ಇನ್ನೂ ಕುಸಿಯುವ ಸಾಧ್ಯತೆಯಿದೆ.

ವೋಟು ಗಳಿಸಿದರೆ ಹೆಚ್ಚು ಸೀಟು ಗಳಿಸಲಾಗದ ಆಪ್

ಗುಜರಾತ್ ಚುನಾವಣೆಗೆ ಭರ್ಜರಿ ಎಂಟ್ರಿ ಕೊಟ್ಟಿದ್ದ ಆಪ್ ಪಕ್ಷವು ಶೇ.13 ರಷ್ಟು ಮತಗಳನ್ನು ಪಡೆದಿದೆ ಗಮನ ಸೆಳೆದಿದೆ. ಆದರೆ 6 ಸ್ಥಾನಗಳಲ್ಲಿ ಮಾತ್ರ ಮುನ್ನಡೆ ಕಾಯ್ದುಕೊಂಡಿದೆ. ಆಪ್ ನಗರ ಪ್ರದೇಶಗಳಲ್ಲಿ ಬಿಜೆಪಿಯ ಮತ ಕಬಳಿಸುತ್ತದೆ ಎಂದು ಅಂದಾಜಿಸಲಾಗಿತ್ತು, ಆದರೆ ಅದು ಕಾಂಗ್ರೆಸ್‌ನ ಮತಗಳನ್ನು ಬುಟ್ಟಿಗೆ ಹಾಕಿಕೊಂಡಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಚುನಾವಣಾ ಫಲಿತಾಂಶ; ಗುಜರಾತ್‌ನಲ್ಲಿ ಬಿಜೆಪಿ, ಹಿಮಾಚಲದಲ್ಲಿ ಕಾಂಗ್ರೆಸ್ ಮುನ್ನಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....