Homeಮುಖಪುಟಬೃಹತ್ ಮುನ್ನಡೆ: ಗುಜರಾತ್‌ನಲ್ಲಿ ಸತತ 7ನೇ ಬಾರಿಗೆ ಅಧಿಕಾರದತ್ತ ಬಿಜೆಪಿ

ಬೃಹತ್ ಮುನ್ನಡೆ: ಗುಜರಾತ್‌ನಲ್ಲಿ ಸತತ 7ನೇ ಬಾರಿಗೆ ಅಧಿಕಾರದತ್ತ ಬಿಜೆಪಿ

- Advertisement -
- Advertisement -

ಗುಜರಾತ್ ವಿಧಾನಸಭಾ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು ಹಲವು ಸುತ್ತಿನ ಮತ ಎಣಿಕೆಯಲ್ಲಿ ಆಡಳಿತರೂಢ ಬಿಜೆಪಿಯು ಭರ್ಜರಿ ಮುನ್ನಡೆ ಕಾಯ್ದುಕೊಂಡಿದೆ. ಸದ್ಯಕ್ಕೆ ಒಟ್ಟು 182 ಕ್ಷೇತ್ರಗಳ ಪೈಕಿ ಬಿಜೆಪಿಯು 152 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಸತತ 7ನೇ ಬಾರಿಗೆ ರಾಜ್ಯದ ಅಧಿಕಾರದ ಚುಕ್ಕಾಣಿ ಹಿಡಿಯಲು ಮುಂದಾಗಿದೆ.

ಕಳೆದ 2017ರ ಚುನಾವಣೆಯಲ್ಲಿ ಬಿಜೆಪಿಯು 99 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲು ಏದುಸಿರು ಬಿಟ್ಟಿತ್ತು. ಆದರೆ ಈ ಬಾರಿ ಅನಾಯಾಸವಾಗಿ 140-150 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಸಾಧ್ಯತೆಯಿದೆ. ಆ ಮೂಲಕ ಇದುವರೆಗಿನ ಅತಿ ದೊಡ್ಡ ಅಂತರದ ಬೃಹತ್ ವಿಜಯಕ್ಕೆ ಸನಿಹದಲ್ಲಿದೆ. ಗುಜರಾತ್‌ನಲ್ಲಿ ಇದುವರೆಗಿನ ಬಿಜೆಪಿ ಸಾಧನೆ ಕೆಳಗಿನಂತಿದೆ.

1980: ಬಿಜೆಪಿ – 09, ಕಾಂಗ್ರೆಸ್- 141

1985: ಬಿಜೆಪಿ -11, ಕಾಂಗ್ರೆಸ್- 149

1990: ಬಿಜೆಪಿ -67, ಕಾಂಗ್ರೆಸ್- 33, ಜನತಾದಳ-70

1995: ಬಿಜೆಪಿ -121, ಕಾಂಗ್ರೆಸ್- 45

1998: ಬಿಜೆಪಿ -117, ಕಾಂಗ್ರೆಸ್- 53

2002: ಬಿಜೆಪಿ -127, ಕಾಂಗ್ರೆಸ್- 51

2007: ಬಿಜೆಪಿ -117, ಕಾಂಗ್ರೆಸ್- 59

2012: ಬಿಜೆಪಿ -119, ಕಾಂಗ್ರೆಸ್- 57

2017: ಬಿಜೆಪಿ -99, ಕಾಂಗ್ರೆಸ್- 77

2022: ಬಿಜೆಪಿ -152(ಮುನ್ನಡೆ), ಕಾಂಗ್ರೆಸ್- 20(ಮುನ್ನಡೆ)

2002ರ ನಂತರ ಅತಿ ದೊಡ್ಡ ಸಾಧನೆ

ಬಿಜೆಪಿಯು ಗುಜರಾತ್‌ನಲ್ಲಿ 1995ರಿಂದ ಅಧಿಕಾರದಲ್ಲಿದೆ. ಅದು 2002ರಲ್ಲಿ 127 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಅತಿದೊಡ್ಡ ಸಾಧನೆ ಮಾಡಿತ್ತು. ಆದರೆ 2017ರ ವೇಳೆಗೆ ಅದರ ಸಾಧನೆ 99 ಸೀಟುಗಳಿಗೆ ಕುಸಿದಿತ್ತು. ಈಗ 2022ರಲ್ಲಿ 150 ರಷ್ಟು ಸ್ಥಾನ ಗೆಲ್ಲುವ ಮೂಲಕ ತನ್ನ ಐಸಿಹಾಸಿಕ ಸಾಧನೆಗೆ ಸಜ್ಜಾಗಿದೆ.

ಕುಸಿದ ಕಾಂಗ್ರೆಸ್

ಕಾಂಗ್ರೆಸ್ ಪಕ್ಷವು 1985ರಲ್ಲಿ 149 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಭರ್ಜರಿ ಸಾಧನೆ ಮಾಡಿತ್ತು. ಆದರೆ ಆನಂತರ ಅದು ನಿಧಾನವಾಗಿ ಕುಸಿಯುತ್ತಲೇ ಸಾಗಿದೆ. 1990ರಲ್ಲಿ ಅದು ಕೇವಲ 33 ಸ್ಥಾನ ಗಳಿಸುವ ಮೂಲಕ ಕಳಪೆ ಸಾಧನೆ ತೋರಿತ್ತು. ಆದರೆ ಈ ಬಾರಿ ಅದು ಇನ್ನೂ ಕುಸಿಯುವ ಸಾಧ್ಯತೆಯಿದೆ.

ವೋಟು ಗಳಿಸಿದರೆ ಹೆಚ್ಚು ಸೀಟು ಗಳಿಸಲಾಗದ ಆಪ್

ಗುಜರಾತ್ ಚುನಾವಣೆಗೆ ಭರ್ಜರಿ ಎಂಟ್ರಿ ಕೊಟ್ಟಿದ್ದ ಆಪ್ ಪಕ್ಷವು ಶೇ.13 ರಷ್ಟು ಮತಗಳನ್ನು ಪಡೆದಿದೆ ಗಮನ ಸೆಳೆದಿದೆ. ಆದರೆ 6 ಸ್ಥಾನಗಳಲ್ಲಿ ಮಾತ್ರ ಮುನ್ನಡೆ ಕಾಯ್ದುಕೊಂಡಿದೆ. ಆಪ್ ನಗರ ಪ್ರದೇಶಗಳಲ್ಲಿ ಬಿಜೆಪಿಯ ಮತ ಕಬಳಿಸುತ್ತದೆ ಎಂದು ಅಂದಾಜಿಸಲಾಗಿತ್ತು, ಆದರೆ ಅದು ಕಾಂಗ್ರೆಸ್‌ನ ಮತಗಳನ್ನು ಬುಟ್ಟಿಗೆ ಹಾಕಿಕೊಂಡಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಚುನಾವಣಾ ಫಲಿತಾಂಶ; ಗುಜರಾತ್‌ನಲ್ಲಿ ಬಿಜೆಪಿ, ಹಿಮಾಚಲದಲ್ಲಿ ಕಾಂಗ್ರೆಸ್ ಮುನ್ನಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...