Homeಮುಖಪುಟಹತ್ರಾಸ್, ಬಿಜ್ನೋರ್‌ ಗಳಲ್ಲಿ ಬೃಹತ್ ಮಹಾಪಂಚಾಯತ್: ಸರ್ಕಾರದ ವಿರುದ್ಧ ರೈತರ ಗುಡುಗು

ಹತ್ರಾಸ್, ಬಿಜ್ನೋರ್‌ ಗಳಲ್ಲಿ ಬೃಹತ್ ಮಹಾಪಂಚಾಯತ್: ಸರ್ಕಾರದ ವಿರುದ್ಧ ರೈತರ ಗುಡುಗು

- Advertisement -
- Advertisement -

ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೇಶಾದ್ಯಂತ ಮಹಾಪಂಚಾಯತ್‌ಗಳು ಮುಂದುವರೆದಿವೆ. ಇಂದು ಹತ್ರಾಸ್, ಬಿಜ್ನೋರ್‌ ಮತ್ತು ಶಾದಾಬಾದ್ ಗಳಲ್ಲಿ ಬೃಹತ್ ಮಹಾಪಂಚಾಯತ್‌ಗಳು ನಡೆದಿದ್ದು ಕೇಂದ್ರ ಸರ್ಕಾರದ ವಿರುದ್ಧ ರೈತರು ಶಕ್ತಿ ಪ್ರದರ್ಶನ ಮಾಡಿದ್ದಾರೆ.

ಹತ್ರಾಸ್ ಮತ್ತು ಶಾಜಾಬಾದ್ ಗಳಲ್ಲಿ ನಡೆದ ಕಿಸಾನ್ ಮಹಾಪಂಚಾಯತ್‌ಗಳಲ್ಲಿ ಮಾಜಿ ಸಂಸದ, ಆರ್‌ಎಲ್‌ಡಿ ಮುಖಂಡ ಜಯಂತ್ ಚೌಧರಿ ಭಾಗವಹಿಸಿ “ರೈತರೊಟ್ಟಿಗೆ ಯುವಜನರು ನಿಂತಿದ್ದಾರೆ” ಎಂದು ಘೋಷಿಸಿದ್ದಾರೆ.

ಉತ್ತರ ಪ್ರದೇಶದ ಬಿಜ್ನೋರ್‌ನಲ್ಲಿ ನಡೆದ ಮಹಾಪಂಚಾಯತ್‌ನಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಭಾಗವಹಿಸಿ, “ಅವರು ಮಂತ್ರಿಯಾಗಲಿ, ಈ ದೇಶದ ಪ್ರಧಾನಿಯಾಗಲಿ ಅಥವಾ ಯಾರೇ ಆಗಿರಲಿ ತನ್ನ ಅಧಿಕಾರಕ್ಕಾಗಿ ಹುತಾತ್ಮರನ್ನು ಗೇಲಿ ಮಾಡುವ ಹಕ್ಕು ಯಾರಿಗೂ ಇಲ್ಲ” ಎಂದು ಕಿಡಿಕಾರಿದ್ದಾರೆ.

ಕೈಗಾರಿಕೋದ್ಯಮಿ ವಿರುದ್ಧ ರೈತ ಹೋರಾಟದಲ್ಲಿ, ಯಾರು ಗೆಲ್ಲುತ್ತಾರೆ ಎಂದು ನೀವು ಭಾವಿಸುತ್ತೀರಿ? ರೈತನಿಗೆ ಎಂದಾದರೂ ನ್ಯಾಯ ಸಿಗುತ್ತದೆಯೇ? ಎಂದು ಪ್ರಶ್ನಿಸಿದ್ದಾರೆ.

ದೆಹಲಿ ಗಡಿಯಲ್ಲಿ 80 ದಿನಗಳ ಕಾಲ ಚಳಿಯಲ್ಲಿ ಕುಳಿತಿರುವ ರೈತರು ಈಗ ಬೇಸಿಗೆ ಕಾಲದಲ್ಲಿ ಹೋರಾಡಬೇಕಾಗಿದೆ. ಅವರು ಏಕೆ ಅಷ್ಟೆಲ್ಲ ಕಷ್ಟಪಡಬೇಕು? “ಕಾನೂನುಗಳು ರೈತರ ಅನುಕೂಲಕ್ಕಾಗಿ ಎಂದು ಪ್ರಧಾನಿ ಹೇಳುತ್ತಾರೆ. ರೈತರು ಅದನ್ನು ಬಯಸುವುದಿಲ್ಲ ಎಂದು ಹೇಳುತ್ತಿರುವಾಗ ನೀವು ಅವನ್ನು ಏಕೆ ಹಿಂತೆಗೆದುಕೊಳ್ಳುತ್ತಿಲ್ಲ?” ಎಂದು ಪ್ರಿಯಾಂಕ ಪ್ರಶ್ನಿಸಿದ್ದಾರೆ.

ಇನ್ನೊಂದೆಡೆ ಮಾಧ್ಯಮಗಳೊಂದಿಗೆ ರಾಕೇಶ್ ಟಿಕಾಯತ್ ಮಾತನಾಡಿ “ಕೇಂದ್ರದ ಕೃಷಿ ಕಾನೂನುಗಳ ವಿರುದ್ಧದ ಆಂದೋಲನಕ್ಕೆ ನಾಂದಿ ಹಾಡಿದ 40 ರೈತ ನಾಯಕರು ಇಡೀ ದೇಶದಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಎಲ್ಲೆಡೆ ಕಿಸಾನ್ ಮಹಾಪಂಚಾಯತ್‌ಗಳು ನಡೆಯಲಿವೆ. ಈ ಸರ್ಕಾರ ನೆಮ್ಮದಿಯಿಂದಿರಲು ಬಿಡುವುದಿಲ್ಲ” ಎಂದು ಘೋಷಿಸಿದ್ದಾರೆ.

ಇನ್ನು ಫೆಬ್ರವರಿ 28 ರಂದು ಉತ್ತರ ಪ್ರದೇಶದ ಮೀರತ್‌ನಲ್ಲಿ ರೈತರ ಪ್ರತಿಭಟನೆಯನ್ನು ಬೆಂಬಲಿಸಿ ಕಿಸಾನ್ ಮಹಾಪಂಚಾಯತ್ ನಡೆಯಲಿದ್ದು, ದೆಹಲಿ ಸಿಎಂ ಮತ್ತು ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಭಾಗವಹಿಸಲಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.


ಇದನ್ನೂ ಓದಿ: ದಿಶಾ ಬಂಧನಕ್ಕೂ ಮುನ್ನ ಬೆಂಗಳೂರು ಪೊಲೀಸರಿಗೆ ಮಾಹಿತಿಯೇ ಇಲ್ಲ: ಇದೆಂಥ ಒಕ್ಕೂಟ ವ್ಯವಸ್ಥೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...