Homeಅಂತರಾಷ್ಟ್ರೀಯಭಾರೀ ಬೆಲೆ ಕುಸಿತ: ತರಕಾರಿ ಬೆಳೆಗಳನ್ನು ಹೊಲದಲ್ಲಿ ನಾಶಮಾಡುತ್ತಿರುವ ಜಾರ್ಖಂಡ್ ರೈತರು

ಭಾರೀ ಬೆಲೆ ಕುಸಿತ: ತರಕಾರಿ ಬೆಳೆಗಳನ್ನು ಹೊಲದಲ್ಲಿ ನಾಶಮಾಡುತ್ತಿರುವ ಜಾರ್ಖಂಡ್ ರೈತರು

- Advertisement -
- Advertisement -

ರಾಂಚಿ: ಜಾರ್ಖಂಡ್‌ನಲ್ಲಿ ಕಳೆದ ವಾರದಿಂದ ರಾಜ್ಯಾದ್ಯಂತ ಮಾರುಕಟ್ಟೆಗಳಲ್ಲಿ ತರಕಾರಿ ಬೆಳೆಯ ಬೆಲೆಗಳು ಭಾರೀ ಕುಸಿದಿದ್ದು, ರೈತರು ಬೇಸಾಯದ ಮೂಲ ವೆಚ್ಚವನ್ನು ಸಹ ಮರುಪಡೆಯಲು ಸಾಧ್ಯವಾಗದ ಕಾರಣ ಬಂಪರ್ ಫಸಲು ಹೊರತಾಗಿಯೂ ತೀವ್ರ ಆರ್ಥಿಕ ಸಂಕಷ್ಟದಲ್ಲಿ ಸಿಲುಕಿದ್ದು, ಹತಾಶೆಗೊಂಡು ಹೊಲದಲ್ಲಿಯೇ ಅವುಗಳನ್ನು ನಾಶಪಡಿಸುತ್ತಿದ್ದಾರೆ.

ರಾಂಚಿಯ ನಗರದ ಮಾರುಕಟ್ಟೆಗಳಲ್ಲಿ ಪ್ರಮುಖ ತರಕಾರಿಗಳಾದ ಹೂಕೋಸು, ಎಲೆಕೋಸು, ಪಾಲಕ್ ಮತ್ತು ಟೊಮೆಟೊಗಳನ್ನು ಕೆಜಿಗೆ 5-10 ರೂ.ಗೆ ಮಾರಾಟ ಮಾಡಲಾಗುತ್ತಿದೆ. ಗ್ರಾಮೀಣ ಪ್ರದೇಶದಲ್ಲಿ ಈ ಬೆಲೆ ಇನ್ನೂ ಕಡಿಮೆ ಇದೆ. ಇದರಿಂದ ರೈತರು ಹತಾಶರಾಗಿ ತಮ್ಮ ತರಕಾರಿ ಬೆಳೆ ನಾಶ ಮಾಡುತ್ತಿದ್ದಾರೆ. ಮಧ್ಯವರ್ತಿಗಳು ರೈತರಿಗೆ ನ್ಯಾಯಯುತ ಬೆಲೆ ನೀಡಲು ಸಿದ್ಧರಿಲ್ಲ. ಈ ಕುರಿತು ಸರಕಾರವು ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವಂತೆ ರೈತರು ಒತ್ತಾಯಿಸುತ್ತಿದ್ದಾರೆ.

ಚಿತಾರ್‌ಪುರ ಬ್ಲಾಕ್‌ನ ಬಡ್ಕಿಪೋನಾ ಗ್ರಾಮದ ರೈತ ರಾಧೇಶ್ಯಾಮ್ ಮಹತೋ ಎಂಬುವರು ತಮ್ಮ ಒಂದು ಎಕರೆ ಜಮೀನಿನಲ್ಲಿದ್ದ ಎಲೆಕೋಸು ಬೆಳೆಯನ್ನು ಟ್ರ್ಯಾಕ್ಟರ್ ಓಡಿಸಿ ನೆಲಸಮಗೊಳಿಸಿದ್ದಾರೆ. ಇದೇ ರೀತಿಯ ಘಟನೆ ಗೋಳಾ ಬ್ಲಾಕ್‌ನಲ್ಲಿ ಸಂಭವಿಸಿದ್ದು, ನ್ಯಾಯಯುತ ಬೆಲೆ ಸಿಗದ ಕಾರಣ ಮತ್ತೊಬ್ಬ ರೈತ ತನ್ನ ಹೂಕೋಸು ಬೆಳೆಯನ್ನು ನಾಶಪಡಿಸಿದ್ದಾನೆ. ರಾಂಚಿ ಜಿಲ್ಲೆಯ ಒರ್ಮಾಂಜಿಯಲ್ಲಿ ರೈತರು ತಮ್ಮ ತರಕಾರಿ ಬೆಳೆಗಳನ್ನು ಕಿತ್ತು ಬಿಸಾಡುತ್ತಿದ್ದಾರೆ. ಐದಾರು ಎಕರೆಯಲ್ಲಿ ಹೂಕೋಸು ಹಾಗೂ ಎಲೆಕೋಸು ಕೃಷಿ ಮಾಡಿರುವುದಾಗಿ ಉಕ್ರೀಡ್ ಗ್ರಾಮದ ರೈತ ಕಾಮೇಶ್ವರ ಮಹತೋ ತಿಳಿಸಿದ್ದಾರೆ.

ಈ ತರಕಾರಿ ಬೆಳೆಗಳಿಗೆ ಕೆ.ಜಿ.ಗೆ ಕೇವಲ 2-3 ರೂ.ಗೆ ಸಿಗುತ್ತಿದ್ದು, ಮಾರುಕಟ್ಟೆಯ ಸಾಗಣೆ ವೆಚ್ಚವೂ ಗಳಿಕೆಗಿಂತ ಹೆಚ್ಚಾಗಿದೆ ಎಂದು ರೈತರು ತಮ್ಮ ಅಳಲು ತೋಡಿಕೊಳ್ಳುತ್ತಿದ್ದಾರೆ. ರಮೇಶ್ ವರ್ಮಾ, ರಾಮಚಂದ್ರ ಮಹತೋ, ಲಖನ್‌ಲಾಲ್ ಮಹತೋ ಮತ್ತು ನಿರಂಜನ್ ಮಹತೋ ಸೇರಿದಂತೆ ಬೊಕಾರೊ ಜಿಲ್ಲೆಯ ಕಸ್ಮಾರ್ ಬ್ಲಾಕ್‌ನ ಜಮ್ಹರ್ ಗ್ರಾಮದ ರೈತರು ಇದೇ ರೀತಿಯ ದುಃಖಗಳನ್ನು ಹಂಚಿಕೊಂಡಿದ್ದಾರೆ.

ಈ ಹಿಂದೆ ಅಕಾಲಿಕ ಮಳೆಯಿಂದಾಗಿ ಬೆಳೆ ಹಾನಿಯನ್ನು ಸಹಿಸಿಕೊಂಡಿದ್ದ ರೈತರು, ಹೆಚ್ಚಿನ ಭರವಸೆಯೊಂದಿಗೆ ತಮ್ಮ ಹೊಲಗಳಲ್ಲಿ ತರಕಾರಿ ಬೆಳೆಗಳನ್ನು ಮರುನಾಟಿ ಮಾಡಿದ್ದರು. ಈಗ ಈ ತರಕಾರಿ ಬೆಳೆಗಳ ಬೆಲೆಯು ಮಾರುಕಟ್ಟೆಯಲ್ಲಿ ಬೆಲೆ ಕುಸಿತವನ್ನು ಎದುರಿಸಬೇಕಾಗಿದೆ.

ಈ ಸಮಸ್ಯೆಯು ರಾಜ್ಯಾದ್ಯಂತ ವ್ಯಾಪಕವಾಗಿ ಹರಡಿದೆ. ಪ್ರಮುಖ ತರಕಾರಿ ಬೆಳೆಯುವ ಪ್ರದೇಶಗಳಾದ ಇಟ್ಕಿ, ಬೆಡೋ ಮತ್ತು ರಾಂಚಿ ಜಿಲ್ಲೆಯ ಮಂದರ್, ಬೊಕಾರೊ ಜಿಲ್ಲೆಯ ಪೆಟಾರ್ವಾರ್ ಮತ್ತು ಕಸ್ಮಾರ್, ರಾಮಗಢ ಜಿಲ್ಲೆಯ ಗೋಲಾ ಮತ್ತು ಚಿತಾರ್‌ಪುರ್ ಮತ್ತು ಕೊಡೆರ್ಮಾ ಜಿಲ್ಲೆಯ ಡೊಮ್‌ಚಾಂಚ್ ಮತ್ತು ದರ್ಗಾಂವ್ ಮುಂತಾದೆಡೆ ಈ ಬೆಲೆ ಕುಸಿತದ ಬಿಸಿ ತಟ್ಟಿದೆ.

ಹಜಾರಿಬಾಗ್ ಜಿಲ್ಲೆಯ ಚೌಪರಾನ್ ಬ್ಲಾಕ್‌ನ ದಾದ್‌ಪುರ ಗ್ರಾಮದ ರೈತ ಶಿಬು ಮಹತೋ ಮಾತನಾಡಿ, ಮೂಲಂಗಿ ಮತ್ತು ಎಲೆಕೋಸು ಕೆಜಿಗೆ ಕೇವಲ 4-5 ರೂ.ಗೆ ಮಾರಾಟವಾಗುತ್ತಿದೆ. ಖರೀದಿದಾರರು ಕಡಿಮೆ ದರಕ್ಕೆ ತರಕಾರಿ ಬೆಳೆಗಳನ್ನು ಖರೀದಿಸುತ್ತಿದ್ದಾರೆ. ಇದರಿಂದಾಗಿ ನಮ್ಮ ಹೊಲಗಳಿಂದ ಮಾರುಕಟ್ಟೆಗಳಿಗೆ ಬೆಳೆಗಳನ್ನು ಸಾಗಿಸಲು ಸಾಧ್ಯವಾಗುತ್ತಿಲ್ಲ ಎಂದು ತಮ್ಮ ಆಳಲನ್ನು ತೋಡಿಕೊಂಡಿದ್ದಾರೆ.

ಪ್ರತಿ ವರ್ಷ ಫೆಬ್ರವರಿಯಿಂದ ಏಪ್ರಿಲ್-ಮೇ ವರೆಗೆ ತರಕಾರಿಗಳ ಬೆಲೆ ಕುಸಿತವು ಪುನರಾವರ್ತಿತ ಸಮಸ್ಯೆಯಾಗಿದೆ. ತರಕಾರಿ ಸಂಸ್ಕರಣಾ ಘಟಕಗಳು ಮತ್ತು ಇವುಗಳಿಗೆ ನ್ಯಾಯಯುತ ಬೆಲೆಯನ್ನು ಖಚಿತಪಡಿಸಿಕೊಳ್ಳುವ ಕಾರ್ಯವಿಧಾನಗಳ ಮಾರ್ಪಾಡು ಅಗತ್ಯ. ಇಂತಹ ಕ್ರಮಗಳಿಲ್ಲದೆ, ರೈತರ ಪರಿಸ್ಥಿತಿ ಕತ್ತಲೆಕೂಪವಾಗುತ್ತದೆ ಎಂದು ಚತ್ರಾ ಜಿಲ್ಲೆಯ ಇತ್ಖೋರಿಯ ಸ್ಥಳೀಯ ಪತ್ರಕರ್ತ ರಾಮದೇವ್ ಕೇಸರಿ ಹೇಳಿದ್ದಾರೆ.

ಯುವ ಪತ್ರಕರ್ತನ ಕೊಲೆ ಪ್ರಕರಣ : ಪ್ರಮುಖ ಆರೋಪಿ ಹೈದರಾಬಾದ್‌ನಲ್ಲಿ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...