Homeಅಂತರಾಷ್ಟ್ರೀಯಭಾರೀ ಬೆಲೆ ಕುಸಿತ: ತರಕಾರಿ ಬೆಳೆಗಳನ್ನು ಹೊಲದಲ್ಲಿ ನಾಶಮಾಡುತ್ತಿರುವ ಜಾರ್ಖಂಡ್ ರೈತರು

ಭಾರೀ ಬೆಲೆ ಕುಸಿತ: ತರಕಾರಿ ಬೆಳೆಗಳನ್ನು ಹೊಲದಲ್ಲಿ ನಾಶಮಾಡುತ್ತಿರುವ ಜಾರ್ಖಂಡ್ ರೈತರು

- Advertisement -
- Advertisement -

ರಾಂಚಿ: ಜಾರ್ಖಂಡ್‌ನಲ್ಲಿ ಕಳೆದ ವಾರದಿಂದ ರಾಜ್ಯಾದ್ಯಂತ ಮಾರುಕಟ್ಟೆಗಳಲ್ಲಿ ತರಕಾರಿ ಬೆಳೆಯ ಬೆಲೆಗಳು ಭಾರೀ ಕುಸಿದಿದ್ದು, ರೈತರು ಬೇಸಾಯದ ಮೂಲ ವೆಚ್ಚವನ್ನು ಸಹ ಮರುಪಡೆಯಲು ಸಾಧ್ಯವಾಗದ ಕಾರಣ ಬಂಪರ್ ಫಸಲು ಹೊರತಾಗಿಯೂ ತೀವ್ರ ಆರ್ಥಿಕ ಸಂಕಷ್ಟದಲ್ಲಿ ಸಿಲುಕಿದ್ದು, ಹತಾಶೆಗೊಂಡು ಹೊಲದಲ್ಲಿಯೇ ಅವುಗಳನ್ನು ನಾಶಪಡಿಸುತ್ತಿದ್ದಾರೆ.

ರಾಂಚಿಯ ನಗರದ ಮಾರುಕಟ್ಟೆಗಳಲ್ಲಿ ಪ್ರಮುಖ ತರಕಾರಿಗಳಾದ ಹೂಕೋಸು, ಎಲೆಕೋಸು, ಪಾಲಕ್ ಮತ್ತು ಟೊಮೆಟೊಗಳನ್ನು ಕೆಜಿಗೆ 5-10 ರೂ.ಗೆ ಮಾರಾಟ ಮಾಡಲಾಗುತ್ತಿದೆ. ಗ್ರಾಮೀಣ ಪ್ರದೇಶದಲ್ಲಿ ಈ ಬೆಲೆ ಇನ್ನೂ ಕಡಿಮೆ ಇದೆ. ಇದರಿಂದ ರೈತರು ಹತಾಶರಾಗಿ ತಮ್ಮ ತರಕಾರಿ ಬೆಳೆ ನಾಶ ಮಾಡುತ್ತಿದ್ದಾರೆ. ಮಧ್ಯವರ್ತಿಗಳು ರೈತರಿಗೆ ನ್ಯಾಯಯುತ ಬೆಲೆ ನೀಡಲು ಸಿದ್ಧರಿಲ್ಲ. ಈ ಕುರಿತು ಸರಕಾರವು ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವಂತೆ ರೈತರು ಒತ್ತಾಯಿಸುತ್ತಿದ್ದಾರೆ.

ಚಿತಾರ್‌ಪುರ ಬ್ಲಾಕ್‌ನ ಬಡ್ಕಿಪೋನಾ ಗ್ರಾಮದ ರೈತ ರಾಧೇಶ್ಯಾಮ್ ಮಹತೋ ಎಂಬುವರು ತಮ್ಮ ಒಂದು ಎಕರೆ ಜಮೀನಿನಲ್ಲಿದ್ದ ಎಲೆಕೋಸು ಬೆಳೆಯನ್ನು ಟ್ರ್ಯಾಕ್ಟರ್ ಓಡಿಸಿ ನೆಲಸಮಗೊಳಿಸಿದ್ದಾರೆ. ಇದೇ ರೀತಿಯ ಘಟನೆ ಗೋಳಾ ಬ್ಲಾಕ್‌ನಲ್ಲಿ ಸಂಭವಿಸಿದ್ದು, ನ್ಯಾಯಯುತ ಬೆಲೆ ಸಿಗದ ಕಾರಣ ಮತ್ತೊಬ್ಬ ರೈತ ತನ್ನ ಹೂಕೋಸು ಬೆಳೆಯನ್ನು ನಾಶಪಡಿಸಿದ್ದಾನೆ. ರಾಂಚಿ ಜಿಲ್ಲೆಯ ಒರ್ಮಾಂಜಿಯಲ್ಲಿ ರೈತರು ತಮ್ಮ ತರಕಾರಿ ಬೆಳೆಗಳನ್ನು ಕಿತ್ತು ಬಿಸಾಡುತ್ತಿದ್ದಾರೆ. ಐದಾರು ಎಕರೆಯಲ್ಲಿ ಹೂಕೋಸು ಹಾಗೂ ಎಲೆಕೋಸು ಕೃಷಿ ಮಾಡಿರುವುದಾಗಿ ಉಕ್ರೀಡ್ ಗ್ರಾಮದ ರೈತ ಕಾಮೇಶ್ವರ ಮಹತೋ ತಿಳಿಸಿದ್ದಾರೆ.

ಈ ತರಕಾರಿ ಬೆಳೆಗಳಿಗೆ ಕೆ.ಜಿ.ಗೆ ಕೇವಲ 2-3 ರೂ.ಗೆ ಸಿಗುತ್ತಿದ್ದು, ಮಾರುಕಟ್ಟೆಯ ಸಾಗಣೆ ವೆಚ್ಚವೂ ಗಳಿಕೆಗಿಂತ ಹೆಚ್ಚಾಗಿದೆ ಎಂದು ರೈತರು ತಮ್ಮ ಅಳಲು ತೋಡಿಕೊಳ್ಳುತ್ತಿದ್ದಾರೆ. ರಮೇಶ್ ವರ್ಮಾ, ರಾಮಚಂದ್ರ ಮಹತೋ, ಲಖನ್‌ಲಾಲ್ ಮಹತೋ ಮತ್ತು ನಿರಂಜನ್ ಮಹತೋ ಸೇರಿದಂತೆ ಬೊಕಾರೊ ಜಿಲ್ಲೆಯ ಕಸ್ಮಾರ್ ಬ್ಲಾಕ್‌ನ ಜಮ್ಹರ್ ಗ್ರಾಮದ ರೈತರು ಇದೇ ರೀತಿಯ ದುಃಖಗಳನ್ನು ಹಂಚಿಕೊಂಡಿದ್ದಾರೆ.

ಈ ಹಿಂದೆ ಅಕಾಲಿಕ ಮಳೆಯಿಂದಾಗಿ ಬೆಳೆ ಹಾನಿಯನ್ನು ಸಹಿಸಿಕೊಂಡಿದ್ದ ರೈತರು, ಹೆಚ್ಚಿನ ಭರವಸೆಯೊಂದಿಗೆ ತಮ್ಮ ಹೊಲಗಳಲ್ಲಿ ತರಕಾರಿ ಬೆಳೆಗಳನ್ನು ಮರುನಾಟಿ ಮಾಡಿದ್ದರು. ಈಗ ಈ ತರಕಾರಿ ಬೆಳೆಗಳ ಬೆಲೆಯು ಮಾರುಕಟ್ಟೆಯಲ್ಲಿ ಬೆಲೆ ಕುಸಿತವನ್ನು ಎದುರಿಸಬೇಕಾಗಿದೆ.

ಈ ಸಮಸ್ಯೆಯು ರಾಜ್ಯಾದ್ಯಂತ ವ್ಯಾಪಕವಾಗಿ ಹರಡಿದೆ. ಪ್ರಮುಖ ತರಕಾರಿ ಬೆಳೆಯುವ ಪ್ರದೇಶಗಳಾದ ಇಟ್ಕಿ, ಬೆಡೋ ಮತ್ತು ರಾಂಚಿ ಜಿಲ್ಲೆಯ ಮಂದರ್, ಬೊಕಾರೊ ಜಿಲ್ಲೆಯ ಪೆಟಾರ್ವಾರ್ ಮತ್ತು ಕಸ್ಮಾರ್, ರಾಮಗಢ ಜಿಲ್ಲೆಯ ಗೋಲಾ ಮತ್ತು ಚಿತಾರ್‌ಪುರ್ ಮತ್ತು ಕೊಡೆರ್ಮಾ ಜಿಲ್ಲೆಯ ಡೊಮ್‌ಚಾಂಚ್ ಮತ್ತು ದರ್ಗಾಂವ್ ಮುಂತಾದೆಡೆ ಈ ಬೆಲೆ ಕುಸಿತದ ಬಿಸಿ ತಟ್ಟಿದೆ.

ಹಜಾರಿಬಾಗ್ ಜಿಲ್ಲೆಯ ಚೌಪರಾನ್ ಬ್ಲಾಕ್‌ನ ದಾದ್‌ಪುರ ಗ್ರಾಮದ ರೈತ ಶಿಬು ಮಹತೋ ಮಾತನಾಡಿ, ಮೂಲಂಗಿ ಮತ್ತು ಎಲೆಕೋಸು ಕೆಜಿಗೆ ಕೇವಲ 4-5 ರೂ.ಗೆ ಮಾರಾಟವಾಗುತ್ತಿದೆ. ಖರೀದಿದಾರರು ಕಡಿಮೆ ದರಕ್ಕೆ ತರಕಾರಿ ಬೆಳೆಗಳನ್ನು ಖರೀದಿಸುತ್ತಿದ್ದಾರೆ. ಇದರಿಂದಾಗಿ ನಮ್ಮ ಹೊಲಗಳಿಂದ ಮಾರುಕಟ್ಟೆಗಳಿಗೆ ಬೆಳೆಗಳನ್ನು ಸಾಗಿಸಲು ಸಾಧ್ಯವಾಗುತ್ತಿಲ್ಲ ಎಂದು ತಮ್ಮ ಆಳಲನ್ನು ತೋಡಿಕೊಂಡಿದ್ದಾರೆ.

ಪ್ರತಿ ವರ್ಷ ಫೆಬ್ರವರಿಯಿಂದ ಏಪ್ರಿಲ್-ಮೇ ವರೆಗೆ ತರಕಾರಿಗಳ ಬೆಲೆ ಕುಸಿತವು ಪುನರಾವರ್ತಿತ ಸಮಸ್ಯೆಯಾಗಿದೆ. ತರಕಾರಿ ಸಂಸ್ಕರಣಾ ಘಟಕಗಳು ಮತ್ತು ಇವುಗಳಿಗೆ ನ್ಯಾಯಯುತ ಬೆಲೆಯನ್ನು ಖಚಿತಪಡಿಸಿಕೊಳ್ಳುವ ಕಾರ್ಯವಿಧಾನಗಳ ಮಾರ್ಪಾಡು ಅಗತ್ಯ. ಇಂತಹ ಕ್ರಮಗಳಿಲ್ಲದೆ, ರೈತರ ಪರಿಸ್ಥಿತಿ ಕತ್ತಲೆಕೂಪವಾಗುತ್ತದೆ ಎಂದು ಚತ್ರಾ ಜಿಲ್ಲೆಯ ಇತ್ಖೋರಿಯ ಸ್ಥಳೀಯ ಪತ್ರಕರ್ತ ರಾಮದೇವ್ ಕೇಸರಿ ಹೇಳಿದ್ದಾರೆ.

ಯುವ ಪತ್ರಕರ್ತನ ಕೊಲೆ ಪ್ರಕರಣ : ಪ್ರಮುಖ ಆರೋಪಿ ಹೈದರಾಬಾದ್‌ನಲ್ಲಿ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...