Homeಅಂತರಾಷ್ಟ್ರೀಯಭಾರೀ ಬೆಲೆ ಕುಸಿತ: ತರಕಾರಿ ಬೆಳೆಗಳನ್ನು ಹೊಲದಲ್ಲಿ ನಾಶಮಾಡುತ್ತಿರುವ ಜಾರ್ಖಂಡ್ ರೈತರು

ಭಾರೀ ಬೆಲೆ ಕುಸಿತ: ತರಕಾರಿ ಬೆಳೆಗಳನ್ನು ಹೊಲದಲ್ಲಿ ನಾಶಮಾಡುತ್ತಿರುವ ಜಾರ್ಖಂಡ್ ರೈತರು

- Advertisement -
- Advertisement -

ರಾಂಚಿ: ಜಾರ್ಖಂಡ್‌ನಲ್ಲಿ ಕಳೆದ ವಾರದಿಂದ ರಾಜ್ಯಾದ್ಯಂತ ಮಾರುಕಟ್ಟೆಗಳಲ್ಲಿ ತರಕಾರಿ ಬೆಳೆಯ ಬೆಲೆಗಳು ಭಾರೀ ಕುಸಿದಿದ್ದು, ರೈತರು ಬೇಸಾಯದ ಮೂಲ ವೆಚ್ಚವನ್ನು ಸಹ ಮರುಪಡೆಯಲು ಸಾಧ್ಯವಾಗದ ಕಾರಣ ಬಂಪರ್ ಫಸಲು ಹೊರತಾಗಿಯೂ ತೀವ್ರ ಆರ್ಥಿಕ ಸಂಕಷ್ಟದಲ್ಲಿ ಸಿಲುಕಿದ್ದು, ಹತಾಶೆಗೊಂಡು ಹೊಲದಲ್ಲಿಯೇ ಅವುಗಳನ್ನು ನಾಶಪಡಿಸುತ್ತಿದ್ದಾರೆ.

ರಾಂಚಿಯ ನಗರದ ಮಾರುಕಟ್ಟೆಗಳಲ್ಲಿ ಪ್ರಮುಖ ತರಕಾರಿಗಳಾದ ಹೂಕೋಸು, ಎಲೆಕೋಸು, ಪಾಲಕ್ ಮತ್ತು ಟೊಮೆಟೊಗಳನ್ನು ಕೆಜಿಗೆ 5-10 ರೂ.ಗೆ ಮಾರಾಟ ಮಾಡಲಾಗುತ್ತಿದೆ. ಗ್ರಾಮೀಣ ಪ್ರದೇಶದಲ್ಲಿ ಈ ಬೆಲೆ ಇನ್ನೂ ಕಡಿಮೆ ಇದೆ. ಇದರಿಂದ ರೈತರು ಹತಾಶರಾಗಿ ತಮ್ಮ ತರಕಾರಿ ಬೆಳೆ ನಾಶ ಮಾಡುತ್ತಿದ್ದಾರೆ. ಮಧ್ಯವರ್ತಿಗಳು ರೈತರಿಗೆ ನ್ಯಾಯಯುತ ಬೆಲೆ ನೀಡಲು ಸಿದ್ಧರಿಲ್ಲ. ಈ ಕುರಿತು ಸರಕಾರವು ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವಂತೆ ರೈತರು ಒತ್ತಾಯಿಸುತ್ತಿದ್ದಾರೆ.

ಚಿತಾರ್‌ಪುರ ಬ್ಲಾಕ್‌ನ ಬಡ್ಕಿಪೋನಾ ಗ್ರಾಮದ ರೈತ ರಾಧೇಶ್ಯಾಮ್ ಮಹತೋ ಎಂಬುವರು ತಮ್ಮ ಒಂದು ಎಕರೆ ಜಮೀನಿನಲ್ಲಿದ್ದ ಎಲೆಕೋಸು ಬೆಳೆಯನ್ನು ಟ್ರ್ಯಾಕ್ಟರ್ ಓಡಿಸಿ ನೆಲಸಮಗೊಳಿಸಿದ್ದಾರೆ. ಇದೇ ರೀತಿಯ ಘಟನೆ ಗೋಳಾ ಬ್ಲಾಕ್‌ನಲ್ಲಿ ಸಂಭವಿಸಿದ್ದು, ನ್ಯಾಯಯುತ ಬೆಲೆ ಸಿಗದ ಕಾರಣ ಮತ್ತೊಬ್ಬ ರೈತ ತನ್ನ ಹೂಕೋಸು ಬೆಳೆಯನ್ನು ನಾಶಪಡಿಸಿದ್ದಾನೆ. ರಾಂಚಿ ಜಿಲ್ಲೆಯ ಒರ್ಮಾಂಜಿಯಲ್ಲಿ ರೈತರು ತಮ್ಮ ತರಕಾರಿ ಬೆಳೆಗಳನ್ನು ಕಿತ್ತು ಬಿಸಾಡುತ್ತಿದ್ದಾರೆ. ಐದಾರು ಎಕರೆಯಲ್ಲಿ ಹೂಕೋಸು ಹಾಗೂ ಎಲೆಕೋಸು ಕೃಷಿ ಮಾಡಿರುವುದಾಗಿ ಉಕ್ರೀಡ್ ಗ್ರಾಮದ ರೈತ ಕಾಮೇಶ್ವರ ಮಹತೋ ತಿಳಿಸಿದ್ದಾರೆ.

ಈ ತರಕಾರಿ ಬೆಳೆಗಳಿಗೆ ಕೆ.ಜಿ.ಗೆ ಕೇವಲ 2-3 ರೂ.ಗೆ ಸಿಗುತ್ತಿದ್ದು, ಮಾರುಕಟ್ಟೆಯ ಸಾಗಣೆ ವೆಚ್ಚವೂ ಗಳಿಕೆಗಿಂತ ಹೆಚ್ಚಾಗಿದೆ ಎಂದು ರೈತರು ತಮ್ಮ ಅಳಲು ತೋಡಿಕೊಳ್ಳುತ್ತಿದ್ದಾರೆ. ರಮೇಶ್ ವರ್ಮಾ, ರಾಮಚಂದ್ರ ಮಹತೋ, ಲಖನ್‌ಲಾಲ್ ಮಹತೋ ಮತ್ತು ನಿರಂಜನ್ ಮಹತೋ ಸೇರಿದಂತೆ ಬೊಕಾರೊ ಜಿಲ್ಲೆಯ ಕಸ್ಮಾರ್ ಬ್ಲಾಕ್‌ನ ಜಮ್ಹರ್ ಗ್ರಾಮದ ರೈತರು ಇದೇ ರೀತಿಯ ದುಃಖಗಳನ್ನು ಹಂಚಿಕೊಂಡಿದ್ದಾರೆ.

ಈ ಹಿಂದೆ ಅಕಾಲಿಕ ಮಳೆಯಿಂದಾಗಿ ಬೆಳೆ ಹಾನಿಯನ್ನು ಸಹಿಸಿಕೊಂಡಿದ್ದ ರೈತರು, ಹೆಚ್ಚಿನ ಭರವಸೆಯೊಂದಿಗೆ ತಮ್ಮ ಹೊಲಗಳಲ್ಲಿ ತರಕಾರಿ ಬೆಳೆಗಳನ್ನು ಮರುನಾಟಿ ಮಾಡಿದ್ದರು. ಈಗ ಈ ತರಕಾರಿ ಬೆಳೆಗಳ ಬೆಲೆಯು ಮಾರುಕಟ್ಟೆಯಲ್ಲಿ ಬೆಲೆ ಕುಸಿತವನ್ನು ಎದುರಿಸಬೇಕಾಗಿದೆ.

ಈ ಸಮಸ್ಯೆಯು ರಾಜ್ಯಾದ್ಯಂತ ವ್ಯಾಪಕವಾಗಿ ಹರಡಿದೆ. ಪ್ರಮುಖ ತರಕಾರಿ ಬೆಳೆಯುವ ಪ್ರದೇಶಗಳಾದ ಇಟ್ಕಿ, ಬೆಡೋ ಮತ್ತು ರಾಂಚಿ ಜಿಲ್ಲೆಯ ಮಂದರ್, ಬೊಕಾರೊ ಜಿಲ್ಲೆಯ ಪೆಟಾರ್ವಾರ್ ಮತ್ತು ಕಸ್ಮಾರ್, ರಾಮಗಢ ಜಿಲ್ಲೆಯ ಗೋಲಾ ಮತ್ತು ಚಿತಾರ್‌ಪುರ್ ಮತ್ತು ಕೊಡೆರ್ಮಾ ಜಿಲ್ಲೆಯ ಡೊಮ್‌ಚಾಂಚ್ ಮತ್ತು ದರ್ಗಾಂವ್ ಮುಂತಾದೆಡೆ ಈ ಬೆಲೆ ಕುಸಿತದ ಬಿಸಿ ತಟ್ಟಿದೆ.

ಹಜಾರಿಬಾಗ್ ಜಿಲ್ಲೆಯ ಚೌಪರಾನ್ ಬ್ಲಾಕ್‌ನ ದಾದ್‌ಪುರ ಗ್ರಾಮದ ರೈತ ಶಿಬು ಮಹತೋ ಮಾತನಾಡಿ, ಮೂಲಂಗಿ ಮತ್ತು ಎಲೆಕೋಸು ಕೆಜಿಗೆ ಕೇವಲ 4-5 ರೂ.ಗೆ ಮಾರಾಟವಾಗುತ್ತಿದೆ. ಖರೀದಿದಾರರು ಕಡಿಮೆ ದರಕ್ಕೆ ತರಕಾರಿ ಬೆಳೆಗಳನ್ನು ಖರೀದಿಸುತ್ತಿದ್ದಾರೆ. ಇದರಿಂದಾಗಿ ನಮ್ಮ ಹೊಲಗಳಿಂದ ಮಾರುಕಟ್ಟೆಗಳಿಗೆ ಬೆಳೆಗಳನ್ನು ಸಾಗಿಸಲು ಸಾಧ್ಯವಾಗುತ್ತಿಲ್ಲ ಎಂದು ತಮ್ಮ ಆಳಲನ್ನು ತೋಡಿಕೊಂಡಿದ್ದಾರೆ.

ಪ್ರತಿ ವರ್ಷ ಫೆಬ್ರವರಿಯಿಂದ ಏಪ್ರಿಲ್-ಮೇ ವರೆಗೆ ತರಕಾರಿಗಳ ಬೆಲೆ ಕುಸಿತವು ಪುನರಾವರ್ತಿತ ಸಮಸ್ಯೆಯಾಗಿದೆ. ತರಕಾರಿ ಸಂಸ್ಕರಣಾ ಘಟಕಗಳು ಮತ್ತು ಇವುಗಳಿಗೆ ನ್ಯಾಯಯುತ ಬೆಲೆಯನ್ನು ಖಚಿತಪಡಿಸಿಕೊಳ್ಳುವ ಕಾರ್ಯವಿಧಾನಗಳ ಮಾರ್ಪಾಡು ಅಗತ್ಯ. ಇಂತಹ ಕ್ರಮಗಳಿಲ್ಲದೆ, ರೈತರ ಪರಿಸ್ಥಿತಿ ಕತ್ತಲೆಕೂಪವಾಗುತ್ತದೆ ಎಂದು ಚತ್ರಾ ಜಿಲ್ಲೆಯ ಇತ್ಖೋರಿಯ ಸ್ಥಳೀಯ ಪತ್ರಕರ್ತ ರಾಮದೇವ್ ಕೇಸರಿ ಹೇಳಿದ್ದಾರೆ.

ಯುವ ಪತ್ರಕರ್ತನ ಕೊಲೆ ಪ್ರಕರಣ : ಪ್ರಮುಖ ಆರೋಪಿ ಹೈದರಾಬಾದ್‌ನಲ್ಲಿ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....