Homeಅಂತರಾಷ್ಟ್ರೀಯಭಾರೀ ಬೆಲೆ ಕುಸಿತ: ತರಕಾರಿ ಬೆಳೆಗಳನ್ನು ಹೊಲದಲ್ಲಿ ನಾಶಮಾಡುತ್ತಿರುವ ಜಾರ್ಖಂಡ್ ರೈತರು

ಭಾರೀ ಬೆಲೆ ಕುಸಿತ: ತರಕಾರಿ ಬೆಳೆಗಳನ್ನು ಹೊಲದಲ್ಲಿ ನಾಶಮಾಡುತ್ತಿರುವ ಜಾರ್ಖಂಡ್ ರೈತರು

- Advertisement -
- Advertisement -

ರಾಂಚಿ: ಜಾರ್ಖಂಡ್‌ನಲ್ಲಿ ಕಳೆದ ವಾರದಿಂದ ರಾಜ್ಯಾದ್ಯಂತ ಮಾರುಕಟ್ಟೆಗಳಲ್ಲಿ ತರಕಾರಿ ಬೆಳೆಯ ಬೆಲೆಗಳು ಭಾರೀ ಕುಸಿದಿದ್ದು, ರೈತರು ಬೇಸಾಯದ ಮೂಲ ವೆಚ್ಚವನ್ನು ಸಹ ಮರುಪಡೆಯಲು ಸಾಧ್ಯವಾಗದ ಕಾರಣ ಬಂಪರ್ ಫಸಲು ಹೊರತಾಗಿಯೂ ತೀವ್ರ ಆರ್ಥಿಕ ಸಂಕಷ್ಟದಲ್ಲಿ ಸಿಲುಕಿದ್ದು, ಹತಾಶೆಗೊಂಡು ಹೊಲದಲ್ಲಿಯೇ ಅವುಗಳನ್ನು ನಾಶಪಡಿಸುತ್ತಿದ್ದಾರೆ.

ರಾಂಚಿಯ ನಗರದ ಮಾರುಕಟ್ಟೆಗಳಲ್ಲಿ ಪ್ರಮುಖ ತರಕಾರಿಗಳಾದ ಹೂಕೋಸು, ಎಲೆಕೋಸು, ಪಾಲಕ್ ಮತ್ತು ಟೊಮೆಟೊಗಳನ್ನು ಕೆಜಿಗೆ 5-10 ರೂ.ಗೆ ಮಾರಾಟ ಮಾಡಲಾಗುತ್ತಿದೆ. ಗ್ರಾಮೀಣ ಪ್ರದೇಶದಲ್ಲಿ ಈ ಬೆಲೆ ಇನ್ನೂ ಕಡಿಮೆ ಇದೆ. ಇದರಿಂದ ರೈತರು ಹತಾಶರಾಗಿ ತಮ್ಮ ತರಕಾರಿ ಬೆಳೆ ನಾಶ ಮಾಡುತ್ತಿದ್ದಾರೆ. ಮಧ್ಯವರ್ತಿಗಳು ರೈತರಿಗೆ ನ್ಯಾಯಯುತ ಬೆಲೆ ನೀಡಲು ಸಿದ್ಧರಿಲ್ಲ. ಈ ಕುರಿತು ಸರಕಾರವು ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವಂತೆ ರೈತರು ಒತ್ತಾಯಿಸುತ್ತಿದ್ದಾರೆ.

ಚಿತಾರ್‌ಪುರ ಬ್ಲಾಕ್‌ನ ಬಡ್ಕಿಪೋನಾ ಗ್ರಾಮದ ರೈತ ರಾಧೇಶ್ಯಾಮ್ ಮಹತೋ ಎಂಬುವರು ತಮ್ಮ ಒಂದು ಎಕರೆ ಜಮೀನಿನಲ್ಲಿದ್ದ ಎಲೆಕೋಸು ಬೆಳೆಯನ್ನು ಟ್ರ್ಯಾಕ್ಟರ್ ಓಡಿಸಿ ನೆಲಸಮಗೊಳಿಸಿದ್ದಾರೆ. ಇದೇ ರೀತಿಯ ಘಟನೆ ಗೋಳಾ ಬ್ಲಾಕ್‌ನಲ್ಲಿ ಸಂಭವಿಸಿದ್ದು, ನ್ಯಾಯಯುತ ಬೆಲೆ ಸಿಗದ ಕಾರಣ ಮತ್ತೊಬ್ಬ ರೈತ ತನ್ನ ಹೂಕೋಸು ಬೆಳೆಯನ್ನು ನಾಶಪಡಿಸಿದ್ದಾನೆ. ರಾಂಚಿ ಜಿಲ್ಲೆಯ ಒರ್ಮಾಂಜಿಯಲ್ಲಿ ರೈತರು ತಮ್ಮ ತರಕಾರಿ ಬೆಳೆಗಳನ್ನು ಕಿತ್ತು ಬಿಸಾಡುತ್ತಿದ್ದಾರೆ. ಐದಾರು ಎಕರೆಯಲ್ಲಿ ಹೂಕೋಸು ಹಾಗೂ ಎಲೆಕೋಸು ಕೃಷಿ ಮಾಡಿರುವುದಾಗಿ ಉಕ್ರೀಡ್ ಗ್ರಾಮದ ರೈತ ಕಾಮೇಶ್ವರ ಮಹತೋ ತಿಳಿಸಿದ್ದಾರೆ.

ಈ ತರಕಾರಿ ಬೆಳೆಗಳಿಗೆ ಕೆ.ಜಿ.ಗೆ ಕೇವಲ 2-3 ರೂ.ಗೆ ಸಿಗುತ್ತಿದ್ದು, ಮಾರುಕಟ್ಟೆಯ ಸಾಗಣೆ ವೆಚ್ಚವೂ ಗಳಿಕೆಗಿಂತ ಹೆಚ್ಚಾಗಿದೆ ಎಂದು ರೈತರು ತಮ್ಮ ಅಳಲು ತೋಡಿಕೊಳ್ಳುತ್ತಿದ್ದಾರೆ. ರಮೇಶ್ ವರ್ಮಾ, ರಾಮಚಂದ್ರ ಮಹತೋ, ಲಖನ್‌ಲಾಲ್ ಮಹತೋ ಮತ್ತು ನಿರಂಜನ್ ಮಹತೋ ಸೇರಿದಂತೆ ಬೊಕಾರೊ ಜಿಲ್ಲೆಯ ಕಸ್ಮಾರ್ ಬ್ಲಾಕ್‌ನ ಜಮ್ಹರ್ ಗ್ರಾಮದ ರೈತರು ಇದೇ ರೀತಿಯ ದುಃಖಗಳನ್ನು ಹಂಚಿಕೊಂಡಿದ್ದಾರೆ.

ಈ ಹಿಂದೆ ಅಕಾಲಿಕ ಮಳೆಯಿಂದಾಗಿ ಬೆಳೆ ಹಾನಿಯನ್ನು ಸಹಿಸಿಕೊಂಡಿದ್ದ ರೈತರು, ಹೆಚ್ಚಿನ ಭರವಸೆಯೊಂದಿಗೆ ತಮ್ಮ ಹೊಲಗಳಲ್ಲಿ ತರಕಾರಿ ಬೆಳೆಗಳನ್ನು ಮರುನಾಟಿ ಮಾಡಿದ್ದರು. ಈಗ ಈ ತರಕಾರಿ ಬೆಳೆಗಳ ಬೆಲೆಯು ಮಾರುಕಟ್ಟೆಯಲ್ಲಿ ಬೆಲೆ ಕುಸಿತವನ್ನು ಎದುರಿಸಬೇಕಾಗಿದೆ.

ಈ ಸಮಸ್ಯೆಯು ರಾಜ್ಯಾದ್ಯಂತ ವ್ಯಾಪಕವಾಗಿ ಹರಡಿದೆ. ಪ್ರಮುಖ ತರಕಾರಿ ಬೆಳೆಯುವ ಪ್ರದೇಶಗಳಾದ ಇಟ್ಕಿ, ಬೆಡೋ ಮತ್ತು ರಾಂಚಿ ಜಿಲ್ಲೆಯ ಮಂದರ್, ಬೊಕಾರೊ ಜಿಲ್ಲೆಯ ಪೆಟಾರ್ವಾರ್ ಮತ್ತು ಕಸ್ಮಾರ್, ರಾಮಗಢ ಜಿಲ್ಲೆಯ ಗೋಲಾ ಮತ್ತು ಚಿತಾರ್‌ಪುರ್ ಮತ್ತು ಕೊಡೆರ್ಮಾ ಜಿಲ್ಲೆಯ ಡೊಮ್‌ಚಾಂಚ್ ಮತ್ತು ದರ್ಗಾಂವ್ ಮುಂತಾದೆಡೆ ಈ ಬೆಲೆ ಕುಸಿತದ ಬಿಸಿ ತಟ್ಟಿದೆ.

ಹಜಾರಿಬಾಗ್ ಜಿಲ್ಲೆಯ ಚೌಪರಾನ್ ಬ್ಲಾಕ್‌ನ ದಾದ್‌ಪುರ ಗ್ರಾಮದ ರೈತ ಶಿಬು ಮಹತೋ ಮಾತನಾಡಿ, ಮೂಲಂಗಿ ಮತ್ತು ಎಲೆಕೋಸು ಕೆಜಿಗೆ ಕೇವಲ 4-5 ರೂ.ಗೆ ಮಾರಾಟವಾಗುತ್ತಿದೆ. ಖರೀದಿದಾರರು ಕಡಿಮೆ ದರಕ್ಕೆ ತರಕಾರಿ ಬೆಳೆಗಳನ್ನು ಖರೀದಿಸುತ್ತಿದ್ದಾರೆ. ಇದರಿಂದಾಗಿ ನಮ್ಮ ಹೊಲಗಳಿಂದ ಮಾರುಕಟ್ಟೆಗಳಿಗೆ ಬೆಳೆಗಳನ್ನು ಸಾಗಿಸಲು ಸಾಧ್ಯವಾಗುತ್ತಿಲ್ಲ ಎಂದು ತಮ್ಮ ಆಳಲನ್ನು ತೋಡಿಕೊಂಡಿದ್ದಾರೆ.

ಪ್ರತಿ ವರ್ಷ ಫೆಬ್ರವರಿಯಿಂದ ಏಪ್ರಿಲ್-ಮೇ ವರೆಗೆ ತರಕಾರಿಗಳ ಬೆಲೆ ಕುಸಿತವು ಪುನರಾವರ್ತಿತ ಸಮಸ್ಯೆಯಾಗಿದೆ. ತರಕಾರಿ ಸಂಸ್ಕರಣಾ ಘಟಕಗಳು ಮತ್ತು ಇವುಗಳಿಗೆ ನ್ಯಾಯಯುತ ಬೆಲೆಯನ್ನು ಖಚಿತಪಡಿಸಿಕೊಳ್ಳುವ ಕಾರ್ಯವಿಧಾನಗಳ ಮಾರ್ಪಾಡು ಅಗತ್ಯ. ಇಂತಹ ಕ್ರಮಗಳಿಲ್ಲದೆ, ರೈತರ ಪರಿಸ್ಥಿತಿ ಕತ್ತಲೆಕೂಪವಾಗುತ್ತದೆ ಎಂದು ಚತ್ರಾ ಜಿಲ್ಲೆಯ ಇತ್ಖೋರಿಯ ಸ್ಥಳೀಯ ಪತ್ರಕರ್ತ ರಾಮದೇವ್ ಕೇಸರಿ ಹೇಳಿದ್ದಾರೆ.

ಯುವ ಪತ್ರಕರ್ತನ ಕೊಲೆ ಪ್ರಕರಣ : ಪ್ರಮುಖ ಆರೋಪಿ ಹೈದರಾಬಾದ್‌ನಲ್ಲಿ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...