Homeಅಂತರಾಷ್ಟ್ರೀಯಭಾರೀ ಬೆಲೆ ಕುಸಿತ: ತರಕಾರಿ ಬೆಳೆಗಳನ್ನು ಹೊಲದಲ್ಲಿ ನಾಶಮಾಡುತ್ತಿರುವ ಜಾರ್ಖಂಡ್ ರೈತರು

ಭಾರೀ ಬೆಲೆ ಕುಸಿತ: ತರಕಾರಿ ಬೆಳೆಗಳನ್ನು ಹೊಲದಲ್ಲಿ ನಾಶಮಾಡುತ್ತಿರುವ ಜಾರ್ಖಂಡ್ ರೈತರು

- Advertisement -
- Advertisement -

ರಾಂಚಿ: ಜಾರ್ಖಂಡ್‌ನಲ್ಲಿ ಕಳೆದ ವಾರದಿಂದ ರಾಜ್ಯಾದ್ಯಂತ ಮಾರುಕಟ್ಟೆಗಳಲ್ಲಿ ತರಕಾರಿ ಬೆಳೆಯ ಬೆಲೆಗಳು ಭಾರೀ ಕುಸಿದಿದ್ದು, ರೈತರು ಬೇಸಾಯದ ಮೂಲ ವೆಚ್ಚವನ್ನು ಸಹ ಮರುಪಡೆಯಲು ಸಾಧ್ಯವಾಗದ ಕಾರಣ ಬಂಪರ್ ಫಸಲು ಹೊರತಾಗಿಯೂ ತೀವ್ರ ಆರ್ಥಿಕ ಸಂಕಷ್ಟದಲ್ಲಿ ಸಿಲುಕಿದ್ದು, ಹತಾಶೆಗೊಂಡು ಹೊಲದಲ್ಲಿಯೇ ಅವುಗಳನ್ನು ನಾಶಪಡಿಸುತ್ತಿದ್ದಾರೆ.

ರಾಂಚಿಯ ನಗರದ ಮಾರುಕಟ್ಟೆಗಳಲ್ಲಿ ಪ್ರಮುಖ ತರಕಾರಿಗಳಾದ ಹೂಕೋಸು, ಎಲೆಕೋಸು, ಪಾಲಕ್ ಮತ್ತು ಟೊಮೆಟೊಗಳನ್ನು ಕೆಜಿಗೆ 5-10 ರೂ.ಗೆ ಮಾರಾಟ ಮಾಡಲಾಗುತ್ತಿದೆ. ಗ್ರಾಮೀಣ ಪ್ರದೇಶದಲ್ಲಿ ಈ ಬೆಲೆ ಇನ್ನೂ ಕಡಿಮೆ ಇದೆ. ಇದರಿಂದ ರೈತರು ಹತಾಶರಾಗಿ ತಮ್ಮ ತರಕಾರಿ ಬೆಳೆ ನಾಶ ಮಾಡುತ್ತಿದ್ದಾರೆ. ಮಧ್ಯವರ್ತಿಗಳು ರೈತರಿಗೆ ನ್ಯಾಯಯುತ ಬೆಲೆ ನೀಡಲು ಸಿದ್ಧರಿಲ್ಲ. ಈ ಕುರಿತು ಸರಕಾರವು ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವಂತೆ ರೈತರು ಒತ್ತಾಯಿಸುತ್ತಿದ್ದಾರೆ.

ಚಿತಾರ್‌ಪುರ ಬ್ಲಾಕ್‌ನ ಬಡ್ಕಿಪೋನಾ ಗ್ರಾಮದ ರೈತ ರಾಧೇಶ್ಯಾಮ್ ಮಹತೋ ಎಂಬುವರು ತಮ್ಮ ಒಂದು ಎಕರೆ ಜಮೀನಿನಲ್ಲಿದ್ದ ಎಲೆಕೋಸು ಬೆಳೆಯನ್ನು ಟ್ರ್ಯಾಕ್ಟರ್ ಓಡಿಸಿ ನೆಲಸಮಗೊಳಿಸಿದ್ದಾರೆ. ಇದೇ ರೀತಿಯ ಘಟನೆ ಗೋಳಾ ಬ್ಲಾಕ್‌ನಲ್ಲಿ ಸಂಭವಿಸಿದ್ದು, ನ್ಯಾಯಯುತ ಬೆಲೆ ಸಿಗದ ಕಾರಣ ಮತ್ತೊಬ್ಬ ರೈತ ತನ್ನ ಹೂಕೋಸು ಬೆಳೆಯನ್ನು ನಾಶಪಡಿಸಿದ್ದಾನೆ. ರಾಂಚಿ ಜಿಲ್ಲೆಯ ಒರ್ಮಾಂಜಿಯಲ್ಲಿ ರೈತರು ತಮ್ಮ ತರಕಾರಿ ಬೆಳೆಗಳನ್ನು ಕಿತ್ತು ಬಿಸಾಡುತ್ತಿದ್ದಾರೆ. ಐದಾರು ಎಕರೆಯಲ್ಲಿ ಹೂಕೋಸು ಹಾಗೂ ಎಲೆಕೋಸು ಕೃಷಿ ಮಾಡಿರುವುದಾಗಿ ಉಕ್ರೀಡ್ ಗ್ರಾಮದ ರೈತ ಕಾಮೇಶ್ವರ ಮಹತೋ ತಿಳಿಸಿದ್ದಾರೆ.

ಈ ತರಕಾರಿ ಬೆಳೆಗಳಿಗೆ ಕೆ.ಜಿ.ಗೆ ಕೇವಲ 2-3 ರೂ.ಗೆ ಸಿಗುತ್ತಿದ್ದು, ಮಾರುಕಟ್ಟೆಯ ಸಾಗಣೆ ವೆಚ್ಚವೂ ಗಳಿಕೆಗಿಂತ ಹೆಚ್ಚಾಗಿದೆ ಎಂದು ರೈತರು ತಮ್ಮ ಅಳಲು ತೋಡಿಕೊಳ್ಳುತ್ತಿದ್ದಾರೆ. ರಮೇಶ್ ವರ್ಮಾ, ರಾಮಚಂದ್ರ ಮಹತೋ, ಲಖನ್‌ಲಾಲ್ ಮಹತೋ ಮತ್ತು ನಿರಂಜನ್ ಮಹತೋ ಸೇರಿದಂತೆ ಬೊಕಾರೊ ಜಿಲ್ಲೆಯ ಕಸ್ಮಾರ್ ಬ್ಲಾಕ್‌ನ ಜಮ್ಹರ್ ಗ್ರಾಮದ ರೈತರು ಇದೇ ರೀತಿಯ ದುಃಖಗಳನ್ನು ಹಂಚಿಕೊಂಡಿದ್ದಾರೆ.

ಈ ಹಿಂದೆ ಅಕಾಲಿಕ ಮಳೆಯಿಂದಾಗಿ ಬೆಳೆ ಹಾನಿಯನ್ನು ಸಹಿಸಿಕೊಂಡಿದ್ದ ರೈತರು, ಹೆಚ್ಚಿನ ಭರವಸೆಯೊಂದಿಗೆ ತಮ್ಮ ಹೊಲಗಳಲ್ಲಿ ತರಕಾರಿ ಬೆಳೆಗಳನ್ನು ಮರುನಾಟಿ ಮಾಡಿದ್ದರು. ಈಗ ಈ ತರಕಾರಿ ಬೆಳೆಗಳ ಬೆಲೆಯು ಮಾರುಕಟ್ಟೆಯಲ್ಲಿ ಬೆಲೆ ಕುಸಿತವನ್ನು ಎದುರಿಸಬೇಕಾಗಿದೆ.

ಈ ಸಮಸ್ಯೆಯು ರಾಜ್ಯಾದ್ಯಂತ ವ್ಯಾಪಕವಾಗಿ ಹರಡಿದೆ. ಪ್ರಮುಖ ತರಕಾರಿ ಬೆಳೆಯುವ ಪ್ರದೇಶಗಳಾದ ಇಟ್ಕಿ, ಬೆಡೋ ಮತ್ತು ರಾಂಚಿ ಜಿಲ್ಲೆಯ ಮಂದರ್, ಬೊಕಾರೊ ಜಿಲ್ಲೆಯ ಪೆಟಾರ್ವಾರ್ ಮತ್ತು ಕಸ್ಮಾರ್, ರಾಮಗಢ ಜಿಲ್ಲೆಯ ಗೋಲಾ ಮತ್ತು ಚಿತಾರ್‌ಪುರ್ ಮತ್ತು ಕೊಡೆರ್ಮಾ ಜಿಲ್ಲೆಯ ಡೊಮ್‌ಚಾಂಚ್ ಮತ್ತು ದರ್ಗಾಂವ್ ಮುಂತಾದೆಡೆ ಈ ಬೆಲೆ ಕುಸಿತದ ಬಿಸಿ ತಟ್ಟಿದೆ.

ಹಜಾರಿಬಾಗ್ ಜಿಲ್ಲೆಯ ಚೌಪರಾನ್ ಬ್ಲಾಕ್‌ನ ದಾದ್‌ಪುರ ಗ್ರಾಮದ ರೈತ ಶಿಬು ಮಹತೋ ಮಾತನಾಡಿ, ಮೂಲಂಗಿ ಮತ್ತು ಎಲೆಕೋಸು ಕೆಜಿಗೆ ಕೇವಲ 4-5 ರೂ.ಗೆ ಮಾರಾಟವಾಗುತ್ತಿದೆ. ಖರೀದಿದಾರರು ಕಡಿಮೆ ದರಕ್ಕೆ ತರಕಾರಿ ಬೆಳೆಗಳನ್ನು ಖರೀದಿಸುತ್ತಿದ್ದಾರೆ. ಇದರಿಂದಾಗಿ ನಮ್ಮ ಹೊಲಗಳಿಂದ ಮಾರುಕಟ್ಟೆಗಳಿಗೆ ಬೆಳೆಗಳನ್ನು ಸಾಗಿಸಲು ಸಾಧ್ಯವಾಗುತ್ತಿಲ್ಲ ಎಂದು ತಮ್ಮ ಆಳಲನ್ನು ತೋಡಿಕೊಂಡಿದ್ದಾರೆ.

ಪ್ರತಿ ವರ್ಷ ಫೆಬ್ರವರಿಯಿಂದ ಏಪ್ರಿಲ್-ಮೇ ವರೆಗೆ ತರಕಾರಿಗಳ ಬೆಲೆ ಕುಸಿತವು ಪುನರಾವರ್ತಿತ ಸಮಸ್ಯೆಯಾಗಿದೆ. ತರಕಾರಿ ಸಂಸ್ಕರಣಾ ಘಟಕಗಳು ಮತ್ತು ಇವುಗಳಿಗೆ ನ್ಯಾಯಯುತ ಬೆಲೆಯನ್ನು ಖಚಿತಪಡಿಸಿಕೊಳ್ಳುವ ಕಾರ್ಯವಿಧಾನಗಳ ಮಾರ್ಪಾಡು ಅಗತ್ಯ. ಇಂತಹ ಕ್ರಮಗಳಿಲ್ಲದೆ, ರೈತರ ಪರಿಸ್ಥಿತಿ ಕತ್ತಲೆಕೂಪವಾಗುತ್ತದೆ ಎಂದು ಚತ್ರಾ ಜಿಲ್ಲೆಯ ಇತ್ಖೋರಿಯ ಸ್ಥಳೀಯ ಪತ್ರಕರ್ತ ರಾಮದೇವ್ ಕೇಸರಿ ಹೇಳಿದ್ದಾರೆ.

ಯುವ ಪತ್ರಕರ್ತನ ಕೊಲೆ ಪ್ರಕರಣ : ಪ್ರಮುಖ ಆರೋಪಿ ಹೈದರಾಬಾದ್‌ನಲ್ಲಿ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂ ಸಿಎಂ ಪತ್ನಿ ವಿರುದ್ಧ ಬಹು ಪಾಸ್‌ಪೋರ್ಟ್ ಆರೋಪ : ಪವನ್ ಖೇರಾ ನಿರೀಕ್ಷಣಾ ಜಾಮೀನಿಗೆ ಸುಪ್ರೀಂ ಕೋರ್ಟ್ ತಡೆ

ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ನೀಡಿದ್ದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನಿಗೆ ಸುಪ್ರೀಂ ಕೋರ್ಟ್ ಬುಧವಾರ (ಏ.15) ತಡೆ ನೀಡಿದೆ. ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ...

ಒಡಿಶಾ ಬುಡಕಟ್ಟು ಶಾಲೆಯಲ್ಲಿ ಊಟ ಸೇವಿಸಿ 5ನೇ ತರಗತಿ ವಿದ್ಯಾರ್ಥಿನಿ ಸಾವು, 100 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಒಡಿಶಾದ ಮಯೂರ್‌ಭಂಜ್ ಜಿಲ್ಲೆಯ ಸರ್ಕಾರಿ ಬುಡಕಟ್ಟು ವಸತಿ ಶಾಲೆಯಲ್ಲಿ ಊಟ ಸೇವಿಸಿದ ನಂತರ 5 ನೇ ತರಗತಿಯ ವಿದ್ಯಾರ್ಥಿನಿ ಸಾವನ್ನಪ್ಪಿದ್ದು, 100 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿದ್ದಾರೆ. ಕಾಕಬಂಧ ​​ಆಶ್ರಮ ಶಾಲೆಯಲ್ಲಿ ಭಾನುವಾರ ಬೆಳಿಗ್ಗೆ...

ಡೆಹ್ರಾಡೂನ್‌| ಮುಸ್ಲಿಂ ಯುವಕನ ಮೇಲೆ ಕಾಳಿ ಸೇನಾ ನಾಯಕನಿಂದ ಹಲ್ಲೆ; ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟ ಆರೋಪಿ

ಉತ್ತರಾಖಂಡದ ಡೆಹ್ರಾಡೂನ್‌ನಲ್ಲಿ ಮುಸ್ಲಿಂ ಯುವಕನ ಮೇಲೆ ಹಿಂದುತ್ವ ನಾಯಕನೊಬ್ಬ ಹಲ್ಲೆ ನಡೆಸಿದ್ದಾನೆ ಎಂಬ ಆತಂಕಕಾರಿ ಘಟನೆ ವರದಿಯಾಗಿದೆ. ಕಾನೂನು ಮತ್ತು ಸುವ್ಯವಸ್ಥೆ, ಅಲ್ಪಸಂಖ್ಯಾತರ ಸುರಕ್ಷತೆಯ ಬಗ್ಗೆ ಗಂಭೀರ ಕಳವಳ ವ್ಯಕ್ತವಾಗಿದೆ. ಮಾಹಿತಿಯ ಪ್ರಕಾರ, ಕಾಳಿ...

ಎಎಪಿ ಸಂಸದ ಅಶೋಕ್ ಮಿತ್ತಲ್‌ಗೆ ಸೇರಿದ ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿ, ಲವ್ಲಿ ಸಮೂಹ ಸಂಸ್ಥೆಗಳ ಮೇಲೆ ಇಡಿ ದಾಳಿ

ಜಾರಿ ನಿರ್ದೇಶನಾಲಯ (ಇಡಿ) ಆಮ್ ಆದ್ಮಿ ಪಕ್ಷದ (ಎಎಪಿ) ರಾಜ್ಯಸಭಾ ಸಂಸದ ಮತ್ತು ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿ (ಎಲ್‌ಪಿಯು) ಸಂಸ್ಥಾಪಕ-ಚಾನ್ಸಲರ್ ಅಶೋಕ್ ಮಿತ್ತಲ್ ಅವರಿಗೆ ಸೇರಿದ ವಿವಿಧ ಆಸ್ತಿಗಳ ಮೇಲೆ ಬುಧವಾರ (ಏ.15) ದಾಳಿ ನಡೆಸಿದೆ ಎಂದು ವರದಿಯಾಗಿದೆ. ವಿದೇಶಿ...

ಅಂಡಮಾನ್ ಸಮುದ್ರದಲ್ಲಿ ದೋಣಿ ಮುಳುಗಡೆ : 200ಕ್ಕೂ ಹೆಚ್ಚು ರೋಹಿಂಗ್ಯಾ ನಿರಾಶ್ರಿತರು ಕಣ್ಮರೆ

ಬಾಂಗ್ಲಾದೇಶದಿಂದ ಮಲೇಷ್ಯಾಗೆ ಹೊರಟಿದ್ದ ರೋಹಿಂಗ್ಯಾ ನಿರಾಶ್ರಿತರು ಮತ್ತು ಬಾಂಗ್ಲಾದೇಶದ ಪ್ರಜೆಗಳನ್ನು ಹೊತ್ತಿದ್ದ ದೋಣಿಯೊಂದು ಅಂಡಮಾನ್ ಸಮುದ್ರದಲ್ಲಿ ಮುಳುಗಡೆಯಾಗಿದೆ ಎಂದು ವರದಿಯಾಗಿದೆ. ದೋಣಿಯಲ್ಲಿ ಸುಮಾರು 250ಕ್ಕೂ ಹೆಚ್ಚು ಜನರು ಇದ್ದರು ಎಂದು ವಿಶ್ವಸಂಸ್ಥೆಯ ನಿರಾಶ್ರಿತರ ಸಂಸ್ಥೆ (ಯುಎನ್‌ಹೆಚ್‌ಸಿಆರ್‌)...

ಬಿಹಾರ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಪ್ರಮಾಣ ವಚನ ಸ್ವೀಕಾರ: ರಾಜಕೀಯ ವೃತ್ತಿಜೀವನದ ಕಾಲಾನುಕ್ರಮ

ಪಾಟ್ನಾ: ಭಾರತೀಯ ಜನತಾ ಪಕ್ಷದ ನಾಯಕ ಸಾಮ್ರಾಟ್ ಚೌಧರಿ ಬುಧವಾರ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ಕೇಸರಿ ಪಕ್ಷದಿಂದ ರಾಜ್ಯದಲ್ಲಿ ಅತ್ಯುನ್ನತ ಹುದ್ದೆಯನ್ನು ಅಲಂಕರಿಸಿದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.  ರಾಜಭವನದಲ್ಲಿ...

ಛತ್ತೀಸ್‌ಗಢ | ವೇದಾಂತ ವಿದ್ಯುತ್ ಸ್ಥಾವರದಲ್ಲಿ ಬಾಯ್ಲರ್ ಸ್ಫೋಟ: ಮೃತರ ಸಂಖ್ಯೆ 14ಕ್ಕೆ ಏರಿಕೆ

ಛತ್ತೀಸ್‌ಗಢದ ವೇದಾಂತ ವಿದ್ಯುತ್ ಸ್ಥಾವರದಲ್ಲಿ ಸಂಭವಿಸಿದ ಬಾಯ್ಲರ್ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ ಮತ್ತು 40ಕ್ಕೂ ಹೆಚ್ಚು ಕಾರ್ಮಿಕರು ಗಾಯಗೊಂಡಿದ್ದಾರೆ. ಮಂಗಳವಾರ (ಏ.14) ಮಧ್ಯಾಹ್ನ ಸುಮಾರು 2:30ರ ವೇಳೆ ಕಾರ್ಮಿಕರು ಊಟ ಮಾಡುತ್ತಿದ್ದ ಸಮಯದಲ್ಲಿ ಈ...

ಕ್ಷೇತ್ರ ಮರುವಿಂಗಡಣೆ ವಿವಾದ : ಡಿಎಂಕೆ ಸಂಸದರ ತುರ್ತು ಸಭೆ ಕರೆದ ಸಿಎಂ ಸ್ಟಾಲಿನ್

ಕೇಂದ್ರದ ಪ್ರಸ್ತಾವಿತ ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆಯಿಂದ ರಾಜ್ಯದ ಮೇಲೆ ಉಂಟಾಗುವ ಸಂಭಾವ್ಯ ಪರಿಣಾಮಗಳ ಕುರಿತು ಚರ್ಚಿಸಲು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಬುಧವಾರ (ಏ.15) ಡಿಎಂಕೆ ಸಂಸದರ ತುರ್ತು ಸಭೆ ಕರೆದಿದ್ದಾರೆ. ಸ್ಟಾಲಿನ್ ಚುನಾವಣೆ...

ತಮಿಳುನಾಡು: ಕ್ಷೇತ್ರ ಪುನರ್ವಿಂಗಡೆ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ: ಕೇಂದ್ರ ಸರ್ಕಾರಕ್ಕೆ ಎಂ.ಕೆ. ಸ್ಟಾಲಿನ್ ಎಚ್ಚರಿಕೆ

ಚೆನ್ನೈ: ಏಪ್ರಿಲ್ 16 ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆಯಲಾಗಿರುವ ಪ್ರಸ್ತಾವಿತ ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಯ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗಳ ಬಗ್ಗೆ ತಮಿಳುನಾಡು ಮುಖ್ಯಮಂತ್ರಿ ಮತ್ತು ಡಿಎಂಕೆ ಅಧ್ಯಕ್ಷರು ಮಂಗಳವಾರ ಬಿಜೆಪಿ...

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನಕ್ಕೆ ತಳ್ಳುವ ಅಪಾಯವಿದೆ : ವಿಶ್ವಸಂಸ್ಥೆ ವರದಿ

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನದ ಕೂಪಕ್ಕೆ ತಳ್ಳಬಹುದು ಮತ್ತು ದೇಶದ ಮಾನವ ಅಭಿವೃದ್ಧಿ ಪ್ರಗತಿಯಲ್ಲಿ ಸ್ವಲ್ಪ ಮಟ್ಟಿನ ಹಿನ್ನಡೆಯನ್ನುಂಟು ಮಾಡಬಹುದು ಎಂದು ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮದ (ಯುಎನ್‌ಡಿಪಿ) ಹೊಸ...