Homeಅಂತರಾಷ್ಟ್ರೀಯಭಾರೀ ಬೆಲೆ ಕುಸಿತ: ತರಕಾರಿ ಬೆಳೆಗಳನ್ನು ಹೊಲದಲ್ಲಿ ನಾಶಮಾಡುತ್ತಿರುವ ಜಾರ್ಖಂಡ್ ರೈತರು

ಭಾರೀ ಬೆಲೆ ಕುಸಿತ: ತರಕಾರಿ ಬೆಳೆಗಳನ್ನು ಹೊಲದಲ್ಲಿ ನಾಶಮಾಡುತ್ತಿರುವ ಜಾರ್ಖಂಡ್ ರೈತರು

- Advertisement -
- Advertisement -

ರಾಂಚಿ: ಜಾರ್ಖಂಡ್‌ನಲ್ಲಿ ಕಳೆದ ವಾರದಿಂದ ರಾಜ್ಯಾದ್ಯಂತ ಮಾರುಕಟ್ಟೆಗಳಲ್ಲಿ ತರಕಾರಿ ಬೆಳೆಯ ಬೆಲೆಗಳು ಭಾರೀ ಕುಸಿದಿದ್ದು, ರೈತರು ಬೇಸಾಯದ ಮೂಲ ವೆಚ್ಚವನ್ನು ಸಹ ಮರುಪಡೆಯಲು ಸಾಧ್ಯವಾಗದ ಕಾರಣ ಬಂಪರ್ ಫಸಲು ಹೊರತಾಗಿಯೂ ತೀವ್ರ ಆರ್ಥಿಕ ಸಂಕಷ್ಟದಲ್ಲಿ ಸಿಲುಕಿದ್ದು, ಹತಾಶೆಗೊಂಡು ಹೊಲದಲ್ಲಿಯೇ ಅವುಗಳನ್ನು ನಾಶಪಡಿಸುತ್ತಿದ್ದಾರೆ.

ರಾಂಚಿಯ ನಗರದ ಮಾರುಕಟ್ಟೆಗಳಲ್ಲಿ ಪ್ರಮುಖ ತರಕಾರಿಗಳಾದ ಹೂಕೋಸು, ಎಲೆಕೋಸು, ಪಾಲಕ್ ಮತ್ತು ಟೊಮೆಟೊಗಳನ್ನು ಕೆಜಿಗೆ 5-10 ರೂ.ಗೆ ಮಾರಾಟ ಮಾಡಲಾಗುತ್ತಿದೆ. ಗ್ರಾಮೀಣ ಪ್ರದೇಶದಲ್ಲಿ ಈ ಬೆಲೆ ಇನ್ನೂ ಕಡಿಮೆ ಇದೆ. ಇದರಿಂದ ರೈತರು ಹತಾಶರಾಗಿ ತಮ್ಮ ತರಕಾರಿ ಬೆಳೆ ನಾಶ ಮಾಡುತ್ತಿದ್ದಾರೆ. ಮಧ್ಯವರ್ತಿಗಳು ರೈತರಿಗೆ ನ್ಯಾಯಯುತ ಬೆಲೆ ನೀಡಲು ಸಿದ್ಧರಿಲ್ಲ. ಈ ಕುರಿತು ಸರಕಾರವು ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವಂತೆ ರೈತರು ಒತ್ತಾಯಿಸುತ್ತಿದ್ದಾರೆ.

ಚಿತಾರ್‌ಪುರ ಬ್ಲಾಕ್‌ನ ಬಡ್ಕಿಪೋನಾ ಗ್ರಾಮದ ರೈತ ರಾಧೇಶ್ಯಾಮ್ ಮಹತೋ ಎಂಬುವರು ತಮ್ಮ ಒಂದು ಎಕರೆ ಜಮೀನಿನಲ್ಲಿದ್ದ ಎಲೆಕೋಸು ಬೆಳೆಯನ್ನು ಟ್ರ್ಯಾಕ್ಟರ್ ಓಡಿಸಿ ನೆಲಸಮಗೊಳಿಸಿದ್ದಾರೆ. ಇದೇ ರೀತಿಯ ಘಟನೆ ಗೋಳಾ ಬ್ಲಾಕ್‌ನಲ್ಲಿ ಸಂಭವಿಸಿದ್ದು, ನ್ಯಾಯಯುತ ಬೆಲೆ ಸಿಗದ ಕಾರಣ ಮತ್ತೊಬ್ಬ ರೈತ ತನ್ನ ಹೂಕೋಸು ಬೆಳೆಯನ್ನು ನಾಶಪಡಿಸಿದ್ದಾನೆ. ರಾಂಚಿ ಜಿಲ್ಲೆಯ ಒರ್ಮಾಂಜಿಯಲ್ಲಿ ರೈತರು ತಮ್ಮ ತರಕಾರಿ ಬೆಳೆಗಳನ್ನು ಕಿತ್ತು ಬಿಸಾಡುತ್ತಿದ್ದಾರೆ. ಐದಾರು ಎಕರೆಯಲ್ಲಿ ಹೂಕೋಸು ಹಾಗೂ ಎಲೆಕೋಸು ಕೃಷಿ ಮಾಡಿರುವುದಾಗಿ ಉಕ್ರೀಡ್ ಗ್ರಾಮದ ರೈತ ಕಾಮೇಶ್ವರ ಮಹತೋ ತಿಳಿಸಿದ್ದಾರೆ.

ಈ ತರಕಾರಿ ಬೆಳೆಗಳಿಗೆ ಕೆ.ಜಿ.ಗೆ ಕೇವಲ 2-3 ರೂ.ಗೆ ಸಿಗುತ್ತಿದ್ದು, ಮಾರುಕಟ್ಟೆಯ ಸಾಗಣೆ ವೆಚ್ಚವೂ ಗಳಿಕೆಗಿಂತ ಹೆಚ್ಚಾಗಿದೆ ಎಂದು ರೈತರು ತಮ್ಮ ಅಳಲು ತೋಡಿಕೊಳ್ಳುತ್ತಿದ್ದಾರೆ. ರಮೇಶ್ ವರ್ಮಾ, ರಾಮಚಂದ್ರ ಮಹತೋ, ಲಖನ್‌ಲಾಲ್ ಮಹತೋ ಮತ್ತು ನಿರಂಜನ್ ಮಹತೋ ಸೇರಿದಂತೆ ಬೊಕಾರೊ ಜಿಲ್ಲೆಯ ಕಸ್ಮಾರ್ ಬ್ಲಾಕ್‌ನ ಜಮ್ಹರ್ ಗ್ರಾಮದ ರೈತರು ಇದೇ ರೀತಿಯ ದುಃಖಗಳನ್ನು ಹಂಚಿಕೊಂಡಿದ್ದಾರೆ.

ಈ ಹಿಂದೆ ಅಕಾಲಿಕ ಮಳೆಯಿಂದಾಗಿ ಬೆಳೆ ಹಾನಿಯನ್ನು ಸಹಿಸಿಕೊಂಡಿದ್ದ ರೈತರು, ಹೆಚ್ಚಿನ ಭರವಸೆಯೊಂದಿಗೆ ತಮ್ಮ ಹೊಲಗಳಲ್ಲಿ ತರಕಾರಿ ಬೆಳೆಗಳನ್ನು ಮರುನಾಟಿ ಮಾಡಿದ್ದರು. ಈಗ ಈ ತರಕಾರಿ ಬೆಳೆಗಳ ಬೆಲೆಯು ಮಾರುಕಟ್ಟೆಯಲ್ಲಿ ಬೆಲೆ ಕುಸಿತವನ್ನು ಎದುರಿಸಬೇಕಾಗಿದೆ.

ಈ ಸಮಸ್ಯೆಯು ರಾಜ್ಯಾದ್ಯಂತ ವ್ಯಾಪಕವಾಗಿ ಹರಡಿದೆ. ಪ್ರಮುಖ ತರಕಾರಿ ಬೆಳೆಯುವ ಪ್ರದೇಶಗಳಾದ ಇಟ್ಕಿ, ಬೆಡೋ ಮತ್ತು ರಾಂಚಿ ಜಿಲ್ಲೆಯ ಮಂದರ್, ಬೊಕಾರೊ ಜಿಲ್ಲೆಯ ಪೆಟಾರ್ವಾರ್ ಮತ್ತು ಕಸ್ಮಾರ್, ರಾಮಗಢ ಜಿಲ್ಲೆಯ ಗೋಲಾ ಮತ್ತು ಚಿತಾರ್‌ಪುರ್ ಮತ್ತು ಕೊಡೆರ್ಮಾ ಜಿಲ್ಲೆಯ ಡೊಮ್‌ಚಾಂಚ್ ಮತ್ತು ದರ್ಗಾಂವ್ ಮುಂತಾದೆಡೆ ಈ ಬೆಲೆ ಕುಸಿತದ ಬಿಸಿ ತಟ್ಟಿದೆ.

ಹಜಾರಿಬಾಗ್ ಜಿಲ್ಲೆಯ ಚೌಪರಾನ್ ಬ್ಲಾಕ್‌ನ ದಾದ್‌ಪುರ ಗ್ರಾಮದ ರೈತ ಶಿಬು ಮಹತೋ ಮಾತನಾಡಿ, ಮೂಲಂಗಿ ಮತ್ತು ಎಲೆಕೋಸು ಕೆಜಿಗೆ ಕೇವಲ 4-5 ರೂ.ಗೆ ಮಾರಾಟವಾಗುತ್ತಿದೆ. ಖರೀದಿದಾರರು ಕಡಿಮೆ ದರಕ್ಕೆ ತರಕಾರಿ ಬೆಳೆಗಳನ್ನು ಖರೀದಿಸುತ್ತಿದ್ದಾರೆ. ಇದರಿಂದಾಗಿ ನಮ್ಮ ಹೊಲಗಳಿಂದ ಮಾರುಕಟ್ಟೆಗಳಿಗೆ ಬೆಳೆಗಳನ್ನು ಸಾಗಿಸಲು ಸಾಧ್ಯವಾಗುತ್ತಿಲ್ಲ ಎಂದು ತಮ್ಮ ಆಳಲನ್ನು ತೋಡಿಕೊಂಡಿದ್ದಾರೆ.

ಪ್ರತಿ ವರ್ಷ ಫೆಬ್ರವರಿಯಿಂದ ಏಪ್ರಿಲ್-ಮೇ ವರೆಗೆ ತರಕಾರಿಗಳ ಬೆಲೆ ಕುಸಿತವು ಪುನರಾವರ್ತಿತ ಸಮಸ್ಯೆಯಾಗಿದೆ. ತರಕಾರಿ ಸಂಸ್ಕರಣಾ ಘಟಕಗಳು ಮತ್ತು ಇವುಗಳಿಗೆ ನ್ಯಾಯಯುತ ಬೆಲೆಯನ್ನು ಖಚಿತಪಡಿಸಿಕೊಳ್ಳುವ ಕಾರ್ಯವಿಧಾನಗಳ ಮಾರ್ಪಾಡು ಅಗತ್ಯ. ಇಂತಹ ಕ್ರಮಗಳಿಲ್ಲದೆ, ರೈತರ ಪರಿಸ್ಥಿತಿ ಕತ್ತಲೆಕೂಪವಾಗುತ್ತದೆ ಎಂದು ಚತ್ರಾ ಜಿಲ್ಲೆಯ ಇತ್ಖೋರಿಯ ಸ್ಥಳೀಯ ಪತ್ರಕರ್ತ ರಾಮದೇವ್ ಕೇಸರಿ ಹೇಳಿದ್ದಾರೆ.

ಯುವ ಪತ್ರಕರ್ತನ ಕೊಲೆ ಪ್ರಕರಣ : ಪ್ರಮುಖ ಆರೋಪಿ ಹೈದರಾಬಾದ್‌ನಲ್ಲಿ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...