Homeಅಂತರಾಷ್ಟ್ರೀಯಭಾರೀ ಬೆಲೆ ಕುಸಿತ: ತರಕಾರಿ ಬೆಳೆಗಳನ್ನು ಹೊಲದಲ್ಲಿ ನಾಶಮಾಡುತ್ತಿರುವ ಜಾರ್ಖಂಡ್ ರೈತರು

ಭಾರೀ ಬೆಲೆ ಕುಸಿತ: ತರಕಾರಿ ಬೆಳೆಗಳನ್ನು ಹೊಲದಲ್ಲಿ ನಾಶಮಾಡುತ್ತಿರುವ ಜಾರ್ಖಂಡ್ ರೈತರು

- Advertisement -
- Advertisement -

ರಾಂಚಿ: ಜಾರ್ಖಂಡ್‌ನಲ್ಲಿ ಕಳೆದ ವಾರದಿಂದ ರಾಜ್ಯಾದ್ಯಂತ ಮಾರುಕಟ್ಟೆಗಳಲ್ಲಿ ತರಕಾರಿ ಬೆಳೆಯ ಬೆಲೆಗಳು ಭಾರೀ ಕುಸಿದಿದ್ದು, ರೈತರು ಬೇಸಾಯದ ಮೂಲ ವೆಚ್ಚವನ್ನು ಸಹ ಮರುಪಡೆಯಲು ಸಾಧ್ಯವಾಗದ ಕಾರಣ ಬಂಪರ್ ಫಸಲು ಹೊರತಾಗಿಯೂ ತೀವ್ರ ಆರ್ಥಿಕ ಸಂಕಷ್ಟದಲ್ಲಿ ಸಿಲುಕಿದ್ದು, ಹತಾಶೆಗೊಂಡು ಹೊಲದಲ್ಲಿಯೇ ಅವುಗಳನ್ನು ನಾಶಪಡಿಸುತ್ತಿದ್ದಾರೆ.

ರಾಂಚಿಯ ನಗರದ ಮಾರುಕಟ್ಟೆಗಳಲ್ಲಿ ಪ್ರಮುಖ ತರಕಾರಿಗಳಾದ ಹೂಕೋಸು, ಎಲೆಕೋಸು, ಪಾಲಕ್ ಮತ್ತು ಟೊಮೆಟೊಗಳನ್ನು ಕೆಜಿಗೆ 5-10 ರೂ.ಗೆ ಮಾರಾಟ ಮಾಡಲಾಗುತ್ತಿದೆ. ಗ್ರಾಮೀಣ ಪ್ರದೇಶದಲ್ಲಿ ಈ ಬೆಲೆ ಇನ್ನೂ ಕಡಿಮೆ ಇದೆ. ಇದರಿಂದ ರೈತರು ಹತಾಶರಾಗಿ ತಮ್ಮ ತರಕಾರಿ ಬೆಳೆ ನಾಶ ಮಾಡುತ್ತಿದ್ದಾರೆ. ಮಧ್ಯವರ್ತಿಗಳು ರೈತರಿಗೆ ನ್ಯಾಯಯುತ ಬೆಲೆ ನೀಡಲು ಸಿದ್ಧರಿಲ್ಲ. ಈ ಕುರಿತು ಸರಕಾರವು ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವಂತೆ ರೈತರು ಒತ್ತಾಯಿಸುತ್ತಿದ್ದಾರೆ.

ಚಿತಾರ್‌ಪುರ ಬ್ಲಾಕ್‌ನ ಬಡ್ಕಿಪೋನಾ ಗ್ರಾಮದ ರೈತ ರಾಧೇಶ್ಯಾಮ್ ಮಹತೋ ಎಂಬುವರು ತಮ್ಮ ಒಂದು ಎಕರೆ ಜಮೀನಿನಲ್ಲಿದ್ದ ಎಲೆಕೋಸು ಬೆಳೆಯನ್ನು ಟ್ರ್ಯಾಕ್ಟರ್ ಓಡಿಸಿ ನೆಲಸಮಗೊಳಿಸಿದ್ದಾರೆ. ಇದೇ ರೀತಿಯ ಘಟನೆ ಗೋಳಾ ಬ್ಲಾಕ್‌ನಲ್ಲಿ ಸಂಭವಿಸಿದ್ದು, ನ್ಯಾಯಯುತ ಬೆಲೆ ಸಿಗದ ಕಾರಣ ಮತ್ತೊಬ್ಬ ರೈತ ತನ್ನ ಹೂಕೋಸು ಬೆಳೆಯನ್ನು ನಾಶಪಡಿಸಿದ್ದಾನೆ. ರಾಂಚಿ ಜಿಲ್ಲೆಯ ಒರ್ಮಾಂಜಿಯಲ್ಲಿ ರೈತರು ತಮ್ಮ ತರಕಾರಿ ಬೆಳೆಗಳನ್ನು ಕಿತ್ತು ಬಿಸಾಡುತ್ತಿದ್ದಾರೆ. ಐದಾರು ಎಕರೆಯಲ್ಲಿ ಹೂಕೋಸು ಹಾಗೂ ಎಲೆಕೋಸು ಕೃಷಿ ಮಾಡಿರುವುದಾಗಿ ಉಕ್ರೀಡ್ ಗ್ರಾಮದ ರೈತ ಕಾಮೇಶ್ವರ ಮಹತೋ ತಿಳಿಸಿದ್ದಾರೆ.

ಈ ತರಕಾರಿ ಬೆಳೆಗಳಿಗೆ ಕೆ.ಜಿ.ಗೆ ಕೇವಲ 2-3 ರೂ.ಗೆ ಸಿಗುತ್ತಿದ್ದು, ಮಾರುಕಟ್ಟೆಯ ಸಾಗಣೆ ವೆಚ್ಚವೂ ಗಳಿಕೆಗಿಂತ ಹೆಚ್ಚಾಗಿದೆ ಎಂದು ರೈತರು ತಮ್ಮ ಅಳಲು ತೋಡಿಕೊಳ್ಳುತ್ತಿದ್ದಾರೆ. ರಮೇಶ್ ವರ್ಮಾ, ರಾಮಚಂದ್ರ ಮಹತೋ, ಲಖನ್‌ಲಾಲ್ ಮಹತೋ ಮತ್ತು ನಿರಂಜನ್ ಮಹತೋ ಸೇರಿದಂತೆ ಬೊಕಾರೊ ಜಿಲ್ಲೆಯ ಕಸ್ಮಾರ್ ಬ್ಲಾಕ್‌ನ ಜಮ್ಹರ್ ಗ್ರಾಮದ ರೈತರು ಇದೇ ರೀತಿಯ ದುಃಖಗಳನ್ನು ಹಂಚಿಕೊಂಡಿದ್ದಾರೆ.

ಈ ಹಿಂದೆ ಅಕಾಲಿಕ ಮಳೆಯಿಂದಾಗಿ ಬೆಳೆ ಹಾನಿಯನ್ನು ಸಹಿಸಿಕೊಂಡಿದ್ದ ರೈತರು, ಹೆಚ್ಚಿನ ಭರವಸೆಯೊಂದಿಗೆ ತಮ್ಮ ಹೊಲಗಳಲ್ಲಿ ತರಕಾರಿ ಬೆಳೆಗಳನ್ನು ಮರುನಾಟಿ ಮಾಡಿದ್ದರು. ಈಗ ಈ ತರಕಾರಿ ಬೆಳೆಗಳ ಬೆಲೆಯು ಮಾರುಕಟ್ಟೆಯಲ್ಲಿ ಬೆಲೆ ಕುಸಿತವನ್ನು ಎದುರಿಸಬೇಕಾಗಿದೆ.

ಈ ಸಮಸ್ಯೆಯು ರಾಜ್ಯಾದ್ಯಂತ ವ್ಯಾಪಕವಾಗಿ ಹರಡಿದೆ. ಪ್ರಮುಖ ತರಕಾರಿ ಬೆಳೆಯುವ ಪ್ರದೇಶಗಳಾದ ಇಟ್ಕಿ, ಬೆಡೋ ಮತ್ತು ರಾಂಚಿ ಜಿಲ್ಲೆಯ ಮಂದರ್, ಬೊಕಾರೊ ಜಿಲ್ಲೆಯ ಪೆಟಾರ್ವಾರ್ ಮತ್ತು ಕಸ್ಮಾರ್, ರಾಮಗಢ ಜಿಲ್ಲೆಯ ಗೋಲಾ ಮತ್ತು ಚಿತಾರ್‌ಪುರ್ ಮತ್ತು ಕೊಡೆರ್ಮಾ ಜಿಲ್ಲೆಯ ಡೊಮ್‌ಚಾಂಚ್ ಮತ್ತು ದರ್ಗಾಂವ್ ಮುಂತಾದೆಡೆ ಈ ಬೆಲೆ ಕುಸಿತದ ಬಿಸಿ ತಟ್ಟಿದೆ.

ಹಜಾರಿಬಾಗ್ ಜಿಲ್ಲೆಯ ಚೌಪರಾನ್ ಬ್ಲಾಕ್‌ನ ದಾದ್‌ಪುರ ಗ್ರಾಮದ ರೈತ ಶಿಬು ಮಹತೋ ಮಾತನಾಡಿ, ಮೂಲಂಗಿ ಮತ್ತು ಎಲೆಕೋಸು ಕೆಜಿಗೆ ಕೇವಲ 4-5 ರೂ.ಗೆ ಮಾರಾಟವಾಗುತ್ತಿದೆ. ಖರೀದಿದಾರರು ಕಡಿಮೆ ದರಕ್ಕೆ ತರಕಾರಿ ಬೆಳೆಗಳನ್ನು ಖರೀದಿಸುತ್ತಿದ್ದಾರೆ. ಇದರಿಂದಾಗಿ ನಮ್ಮ ಹೊಲಗಳಿಂದ ಮಾರುಕಟ್ಟೆಗಳಿಗೆ ಬೆಳೆಗಳನ್ನು ಸಾಗಿಸಲು ಸಾಧ್ಯವಾಗುತ್ತಿಲ್ಲ ಎಂದು ತಮ್ಮ ಆಳಲನ್ನು ತೋಡಿಕೊಂಡಿದ್ದಾರೆ.

ಪ್ರತಿ ವರ್ಷ ಫೆಬ್ರವರಿಯಿಂದ ಏಪ್ರಿಲ್-ಮೇ ವರೆಗೆ ತರಕಾರಿಗಳ ಬೆಲೆ ಕುಸಿತವು ಪುನರಾವರ್ತಿತ ಸಮಸ್ಯೆಯಾಗಿದೆ. ತರಕಾರಿ ಸಂಸ್ಕರಣಾ ಘಟಕಗಳು ಮತ್ತು ಇವುಗಳಿಗೆ ನ್ಯಾಯಯುತ ಬೆಲೆಯನ್ನು ಖಚಿತಪಡಿಸಿಕೊಳ್ಳುವ ಕಾರ್ಯವಿಧಾನಗಳ ಮಾರ್ಪಾಡು ಅಗತ್ಯ. ಇಂತಹ ಕ್ರಮಗಳಿಲ್ಲದೆ, ರೈತರ ಪರಿಸ್ಥಿತಿ ಕತ್ತಲೆಕೂಪವಾಗುತ್ತದೆ ಎಂದು ಚತ್ರಾ ಜಿಲ್ಲೆಯ ಇತ್ಖೋರಿಯ ಸ್ಥಳೀಯ ಪತ್ರಕರ್ತ ರಾಮದೇವ್ ಕೇಸರಿ ಹೇಳಿದ್ದಾರೆ.

ಯುವ ಪತ್ರಕರ್ತನ ಕೊಲೆ ಪ್ರಕರಣ : ಪ್ರಮುಖ ಆರೋಪಿ ಹೈದರಾಬಾದ್‌ನಲ್ಲಿ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...