Homeಕರ್ನಾಟಕCAA, NRC ಯಿಂದ ಅಜಾದಿ, ಮೋದಿ-ಶಾರಿಂದ ಅಜಾದಿ: ತುಮಕೂರಿನಲ್ಲಿ ಬೃಹತ್‌ ಪ್ರತಿಭಟನೆ

CAA, NRC ಯಿಂದ ಅಜಾದಿ, ಮೋದಿ-ಶಾರಿಂದ ಅಜಾದಿ: ತುಮಕೂರಿನಲ್ಲಿ ಬೃಹತ್‌ ಪ್ರತಿಭಟನೆ

- Advertisement -
- Advertisement -

ಜನಸಾಗರದ ನುಡವೆ ಅಜಾದಿ ಘೋಷಣೆಗಳು ಮೊಳಗಿದವು. ಎಲ್ಲಿ ನೋಡಿದರೂ ಜನರೇ ಗಿಜಿಗುಡುತ್ತಿದ್ದರು. ತುಮಕೂರಿನ ಜಿಲ್ಲಾಧಿಕಾರಿ ಕಚೇರಿಯ ಮುಂದಿನ ವಿಸ್ತಾರವಾದ ಬಯಲು ಜನರಿಂದ ತುಂಬಿ ಹೋಗಿತ್ತು. ಪ್ರಗತಿಪರ ಸಂಘಟನೆಗಳು, ದಲಿತಪರ ಸಂಘಟನೆಗಳು, ಕನ್ನಡ ಪರ ಸಂಘಟನೆಗಳ ನೇತೃತ್ವದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಎನ್‌ಆರ್‌ಸಿ ವಿರುದ್ಧ ನಡೆದ ಪ್ರತಿಭಟನಾ ಧರಣಿಯಲ್ಲಿ ಸಿಸಿಎ ಯಿಂದ ಅಜಾದಿ, ಎನ್.ಆರ್.ಸಿ ಯಿಂದ ಅಜಾದಿ, ಮೋದಿಯಿಂದ ಅಜಾದಿ, ಅಮಿತ್ ಶಾರಿಮದ ಅಜಾದಿ ಬೇಕು ಎಂದು ಪ್ರತಿಭಟನಾಕಾರರ ದೊಡ್ಡ ದನಿಯಲ್ಲಿ ಕೂಗಿ ಹೇಳಿದರು.

ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಸೇರಿದ್ದವರಲ್ಲಿ ವಿದ್ಯಾರ್ಥಿಗಳು, ಯುವಜನರು, ವಕೀಲರು, ಪ್ರಗತಿಪರ ಚಿಂತಕರು, ಮುಸ್ಲಿಂ ಮೌಲ್ವಿಗಳು, ಜಾತ್ಯತೀತ ಮನೋಭಾವವುಳ್ಳವರು ಇದ್ದರು. ಡಿಸೆಂಬರ್ 19ರಂದು ಧರಣಿ ನಡೆಸಲು ಪೊಲೀಸರು ನಿಷೇಧಾಜ್ಞೆಯ ನೆಪದಲ್ಲಿ ನಿರಾಕರಿಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ಪ್ರತಿಭಟನೆ ನಡೆಸಲಾಯಿತು. ಬಿಜೆಪಿ, ಮೋದಿ, ಅಮಿತ್ ಶಾ ವಿರುದ್ಧ ಘೋಷಣೆಗಳು ಮೊಳಗಿದವು. ಜನರನ್ನು ಒಡೆಯುವುದನ್ನು ನಿಲ್ಲಿಸಬೇಕು ಎಂದು ಸಾರಿ ಸಾರಿ ಹೇಳಿದರು.

ವಿಡಿಯೋ ನೋಡಿ

ವಾಹನದಲ್ಲಿದ್ದ ವೇದಿಕೆಯ ಮೇಲೆ ನಿಂತಿದ್ದ ಮುಖಂಡರು ಭಾಷಣ ಮಾಡುವುದಕ್ಕೂ ಮೊದಲು ಜನಗಣ ಮನ ರಾಷ್ಟ್ರಗೀತೆಯನ್ನು ಹಾಡಲಾಯಿತು. ಎಲ್ಲರೂ ರಾಷ್ಟ್ರಗೀತೆಯನ್ನು ಶಿಸ್ತಿನಿಂದ ಹಾಡಿದರು. ನೂರಾರು ಪೊಲೀಸರು ಕೂಡ ರಾಷ್ಟ್ರಗೀತೆಗೆ ಗೌರವ ಸಲ್ಲಿಸಿದರು. ಭಾರತಕ್ಕೆ ಜಯವಾಗಲಿ, ಸಂವಿಧಾನ ಉಳಿಯಲಿ ಎಂದು ಕೂಗಿದರು. ಪ್ರತಿಭನಾಕಾರರು ಸಿಎಎ ಮತ್ತು ಎನ್ಆರ್‌ಸಿ ಯಿಂದಾಗುವ ಸಂಕಷ್ಟಗಳ ಕುರಿತು ಚರ್ಚೆ ನಡೆಸಿದರು. ಮಾತುಮಾತಿಗೂ ಅಜಾದಿ ಬೇಕೆಂದು ಒತ್ತಾಯಿಸಿದರು.

ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರೀಯ ಪೌರತ್ವ ನೋಮದಣಿ ಕಾಯ್ದೆ ಜಾರಿಗೊಳಿಸಬಾರದು. ಇದರಿಂದ ಎಲ್ಲರೂ ಮತ್ತೊಮ್ಮೆ ಕ್ಯೂ ನಿಲ್ಲಬೇಕಾದಂತಹ ಪರಿಸ್ಥಿತಿ ಬರುತ್ತದೆ. ಅಷ್ಟೇ ಅಲ್ಲ, ಸಿಎಎ ಮತ್ತು ಎನ್ಆರ್‌ಸಿ ಸಂವಿಧಾನದ ಆರ್ಟಿಕಲ್ 14, 21 ಮತ್ತು 15ನೇ ಪರಿಚ್ಛೇದದ ಸ್ಪಷ್ಟ ಉಲ್ಲಂಘನೆಯಾಗಿದೆ. ಧರ್ಮದ ಆಧಾರದ ಮೇಲೆ ಪೌರತ್ವ ನೀಡುವ ಪದ್ದತಿ ನಿಲ್ಲಬೇಕು. ಕೇಂದ್ರ ಸರ್ಕಾರ ಜಾರಿಗೊಳಿಸುತ್ತಿರುವ ಸಿಎಎ ಮತ್ತು ಎನ್ಆರ್‌ಸಿ ದೇಶದ ಜನರನ್ನು ಧರ್ಮಧ ಆಧಾರದಲ್ಲಿ ಒಡೆಯುತ್ತವೆ. ಇಂತಹ ಸಂವಿಧಾನಬಾಹಿರ ಮತ್ತು ಜನವಿರೋಧಿ ಕಾಯ್ದೆಗಳನ್ನು ಜಾರಿಗೊಳಿಸಬಾರದು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ನಾವು ಈ ದೇಶದಲ್ಲಿ ಹುಟ್ಟಿದ್ದೇವೆ. ಈ ದೇಶದಲ್ಲಿ ಬೆಳೆದು ಬದುಕಿದ್ದೇವೆ. ಇಲ್ಲಿಯೇ ಸಾಯುತ್ತೇವೆ. ನಾವು ಭಾರತೀಯರು, ಭಾರತದ ಪೌರತ್ವವನ್ನು ಹುಟ್ಟಿನಿಂದಲೇ ಪಡೆದಿದ್ದೇವೆ. ಕೇಂದ್ರ ಸರ್ಕಾರ ಮತರಾಜಕಾರಣ ಮಾಡುತ್ತಿದೆ. ಜನರನ್ನು ಒಡೆಯುವ ಕೆಲಸ ಮಾಡುತ್ತಿದೆ. ಆದಿವಾಸಿಗಳು, ನಿರಾಶ್ರಿತರು, ಬಡವರು, ಭೂಮಿ ಇಲ್ಲದವರು, ಮನೆ ಇಲ್ಲದವರು, ಅಲೆಮಾರಿಗಳು, ಹಟ್ಟಿ, ಹಾಡಿ, ದೊಡ್ಡಿಗಳಲ್ಲಿ ವಾಸ ಮಾಡುತ್ತಿರುವವರಿಗೆ ಯಾವುದೇ ದಾಖಲೆಗಳಿಲ್ಲ. ಇಂತವರನ್ನು ಏನು ಮಾಡುತ್ತೀರಿ ಎಂದು ಪ್ರಶ್ನಿಸಿದರು.

ಸಿಎಎ-2019 ಕಾಯ್ದೆಯಂತೆ ಆಫ್ಘಾನಿಸ್ತಾನ, ಪಾಕಿಸ್ಥಾನ ಮತ್ತು ಬಾಂಗ್ಲಾದೇಶ ದಿಂದ ಬಂದಿರುವ ಅಲ್ಪಸಂಖ್ಯಾತರಾದ ಹಿಂದೂ, ಸಿಖ್, ಬೌದ್ಧ, ಜೈನ, ಪಾರ್ಸಿ ಮತ್ತು ಕ್ರಿಶ್ಚಿಯನ್ ಸಮುದಾಯದವರು ಡಿಸೆಂಬರ್ 31, 2014ರ ಮೊದಲು ಭಾರತಕ್ಕೆ ಬಂದು ಕೇವಲ ಐದು ವರ್ಷ ನೆಲೆಸಿದ್ದರೆ ಅವರನ್ನು ಅಕ್ರಮ ವಲಸಿಗರೆಂದು ಪರಿಗಣಿಸದೆ ಪೌರತ್ವ ನೀಡಲು ಅವಕಾಶ ಕಲ್ಪಿಸಲಾಗಿದೆ.

ಇದರಲ್ಲಿ ದೊಡ್ಡ ಯೋಜನೆಗಳಿಂದ ಸ್ಥಳಾಂತರಗೊಂಡವರು, ವಲಸೆ ಕಾರ್ಮಿಕರು, ಬುಡಕಟ್ಟು ಸಮುದಾಯಗಳು, ಕಳ್ಳಸಾಗಾಣಿಕೆಯಾದವರು, ಮದುವೆ ನಂತರ ಗಂಡನ ಮನೆಗೆ ಹೋದ ಮಹಿಳೆಯರು ಸೇರಿದಂತೆ ಇವರೆಲ್ಲರೂ ಎನ್.ಆರ್.ಸಿ. ಪೌರತ್ವದ ಆಧಾರಕ್ಕಾಗಿ ಬೇಕಾಗುವ 50 ವರ್ಷಗಳ ದಾಖಲೆಗಳನ್ನು ಪಡೆಯುವುದು ಕಷ್ಟಸಾಧ್ಯವೇ ಸರಿ ಎಂದು ಮುಖಂಡರು ಆರೋಪಿಸಿದರು.

ಶ್ರೀಲಂಕಾ ತಮಿಳರು, ಮ್ಯಾನ್ಮಾರಿನ ರೊಹಿಂಗ್ಯಾ ಸಮುದಾಯ, ಚೀನದಿಂದ ಬಂದಿರುವ ಬೌದ್ಧರು, ಬಾಂಗ್ಲಾದೇಶದ ಜಾತ್ಯತೀತ ವಿಚಾರವಾದಿಗಳು, ಪಾಕಿಸ್ತಾನದ ಆಹ್ಮದಿಯಾ ಸಮುದಾಯ ಮತ್ತು ಎಲ್ಲಾ ದೇಶಗಳ ಜಾತ್ಯತೀತರನ್ನು ಈ ಕಾಯ್ದೆಯಿಂದ ಹೊರಗಿಡಲಾಗಿದೆ. ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಎನ್‍ಆರ್‍ಸಿ ಕಾಯ್ದೆ ಮೂಲಭೂತ ಹಕ್ಕುಗಳು, ನೈಸರ್ಗಿಕ ಹಕ್ಕುಗಳು ಮತ್ತು ಮಾನವ ಹಕ್ಕುಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಹೇಳಿದರು.

ಭಾರತದಲ್ಲಿ ವಸುದೈವಂ ಕುಟುಂಬಕಂ’ ಮತ್ತು ‘ಸರ್ವೇಜನೋ ಸುಖಿನೋಭವಂತು’ ‘ಮಾನವ ಕುಲಂ ತಾನೊಂದೇ ವಲಂ’ ‘ಸರ್ವಜನಾಂಗದ ಶಾಂತಿಯ ತೋಟ’ ‘ಧಾರ್ಮಿಕ ಸಹಿಷ್ಣತೆ’, ‘ಭ್ರಾತೃತ್ವ’ ‘ಸೋದರತೆ ತತ್ವಗಳು ಮಾನವೀಯತೆಯನ್ನೇ ಸಾರುತ್ತವೆ. ಹಿಂದೂ, ಮುಸ್ಲಿಂ, ಕ್ರಿಶ್ಛಿಯನ್, ಬೌದ್ದ ಸಿಖ್, ಪಾರ್ಸಿ, ಜೈನ ಸೇರಿದಂತೆ ಹಲವು ಧರ್ಮಗಳ ಜನರು ಪರಸ್ಪರ ಯಾರಿಗೂ ತೊಂದರೆಯಾಗದಂತೆ ಸೋದರರಂತೆ ಜೀವಿಸುತ್ತಾ ಬಂದಿದ್ದಾರೆ. ಇಂತಹ ವೈವಿಧ್ಯಮಯ ಭಾಷೆ, ಧರ್ಮ, ಆಚಾರ-ವಿಚಾರಗಳ ಪರಂಪರೆಯನ್ನು ಹೊಂದಿರುವ ಭಾರತ ದೇಶದಲ್ಲಿ ಸಿಎಎ ಮತ್ತು ಎನ್‍ಆರ್‍ಸಿ ಜಾರಿಯಿಂದ ಜನತೆ ಘಾಸಿಗೊಂಡಿದೆ ಎಂದು ತಿಳಿಸಿದರು.

ಪ್ರತಿಭಟನೆಯಲ್ಲಿ ಜನಪರ ಚಿಂತಕ ಪ್ರೊ.ಕೆ.ದೊರೈರಾಜ್, ಸ್ಲಂ ಜನಾಂದೋಲನ ಕರ್ನಾಟಕ ರಾಜ್ಯ ಸಂಚಾಲಕ ಎ.ನರಸಿಂಹಮೂರ್ತಿ, ಡಿಎಸ್ಎಸ್ ಜಿಲ್ಲಾಧ್ಯಕ್ಷ ಪಿ.ಎನ್.ರಾಮಯ್ಯ, ಮಾಜಿ ಶಾಸಕರಾದ ಎಸ್.ಷಪಿ ಅಹಮದ್, ರಫೀಕ್ ಅಹಮದ್, ಮುಖಂಡರಾದ ಅಸ್ಲಾಂ ಪಾಷಾ, ನಯಾಜ್ ಅಹಮದ್, ಪರಿಸರವಾದಿ  ಸಿ.ಯತಿರಾಜು, ಕರ್ನಾಟಕ ಪ್ರಾಂತ ರೈತ ಸಂಘದ ಬಿ.ಉಮೇಶ್, ಸಾಮಾಜಿಕ ಕಾರ್ಯಕರ್ತರಾದ ತಾಜುದ್ದೀನ್, ಅತೀಕ್ ಅಹಮದ್, ಸಿಐಟಿಯು ಮುಖಂಡ ಸೈಯದ್ ಮುಜೀಬ್, ಸಿಪಿಐ ಗಿರೀಶ್, ಸಿಪಿಎಂ ಎನ್.ಕೆ.ಸುಬ್ರಮಣ್ಯ, ಅಫ್ತಾಬ್, ಕುಮಾರ್, ಉಬೇದ್ ಅಹಮದ್, ನಿಸಾರ್ ಅಹಮದ್, ರಫೀಕ್, ಕೆಜಿಎನ್ ಮೊದಲಾದವರು ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....