Homeಕರ್ನಾಟಕCAA, NRC ಯಿಂದ ಅಜಾದಿ, ಮೋದಿ-ಶಾರಿಂದ ಅಜಾದಿ: ತುಮಕೂರಿನಲ್ಲಿ ಬೃಹತ್‌ ಪ್ರತಿಭಟನೆ

CAA, NRC ಯಿಂದ ಅಜಾದಿ, ಮೋದಿ-ಶಾರಿಂದ ಅಜಾದಿ: ತುಮಕೂರಿನಲ್ಲಿ ಬೃಹತ್‌ ಪ್ರತಿಭಟನೆ

- Advertisement -
- Advertisement -

ಜನಸಾಗರದ ನುಡವೆ ಅಜಾದಿ ಘೋಷಣೆಗಳು ಮೊಳಗಿದವು. ಎಲ್ಲಿ ನೋಡಿದರೂ ಜನರೇ ಗಿಜಿಗುಡುತ್ತಿದ್ದರು. ತುಮಕೂರಿನ ಜಿಲ್ಲಾಧಿಕಾರಿ ಕಚೇರಿಯ ಮುಂದಿನ ವಿಸ್ತಾರವಾದ ಬಯಲು ಜನರಿಂದ ತುಂಬಿ ಹೋಗಿತ್ತು. ಪ್ರಗತಿಪರ ಸಂಘಟನೆಗಳು, ದಲಿತಪರ ಸಂಘಟನೆಗಳು, ಕನ್ನಡ ಪರ ಸಂಘಟನೆಗಳ ನೇತೃತ್ವದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಎನ್‌ಆರ್‌ಸಿ ವಿರುದ್ಧ ನಡೆದ ಪ್ರತಿಭಟನಾ ಧರಣಿಯಲ್ಲಿ ಸಿಸಿಎ ಯಿಂದ ಅಜಾದಿ, ಎನ್.ಆರ್.ಸಿ ಯಿಂದ ಅಜಾದಿ, ಮೋದಿಯಿಂದ ಅಜಾದಿ, ಅಮಿತ್ ಶಾರಿಮದ ಅಜಾದಿ ಬೇಕು ಎಂದು ಪ್ರತಿಭಟನಾಕಾರರ ದೊಡ್ಡ ದನಿಯಲ್ಲಿ ಕೂಗಿ ಹೇಳಿದರು.

ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಸೇರಿದ್ದವರಲ್ಲಿ ವಿದ್ಯಾರ್ಥಿಗಳು, ಯುವಜನರು, ವಕೀಲರು, ಪ್ರಗತಿಪರ ಚಿಂತಕರು, ಮುಸ್ಲಿಂ ಮೌಲ್ವಿಗಳು, ಜಾತ್ಯತೀತ ಮನೋಭಾವವುಳ್ಳವರು ಇದ್ದರು. ಡಿಸೆಂಬರ್ 19ರಂದು ಧರಣಿ ನಡೆಸಲು ಪೊಲೀಸರು ನಿಷೇಧಾಜ್ಞೆಯ ನೆಪದಲ್ಲಿ ನಿರಾಕರಿಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ಪ್ರತಿಭಟನೆ ನಡೆಸಲಾಯಿತು. ಬಿಜೆಪಿ, ಮೋದಿ, ಅಮಿತ್ ಶಾ ವಿರುದ್ಧ ಘೋಷಣೆಗಳು ಮೊಳಗಿದವು. ಜನರನ್ನು ಒಡೆಯುವುದನ್ನು ನಿಲ್ಲಿಸಬೇಕು ಎಂದು ಸಾರಿ ಸಾರಿ ಹೇಳಿದರು.

ವಿಡಿಯೋ ನೋಡಿ

ವಾಹನದಲ್ಲಿದ್ದ ವೇದಿಕೆಯ ಮೇಲೆ ನಿಂತಿದ್ದ ಮುಖಂಡರು ಭಾಷಣ ಮಾಡುವುದಕ್ಕೂ ಮೊದಲು ಜನಗಣ ಮನ ರಾಷ್ಟ್ರಗೀತೆಯನ್ನು ಹಾಡಲಾಯಿತು. ಎಲ್ಲರೂ ರಾಷ್ಟ್ರಗೀತೆಯನ್ನು ಶಿಸ್ತಿನಿಂದ ಹಾಡಿದರು. ನೂರಾರು ಪೊಲೀಸರು ಕೂಡ ರಾಷ್ಟ್ರಗೀತೆಗೆ ಗೌರವ ಸಲ್ಲಿಸಿದರು. ಭಾರತಕ್ಕೆ ಜಯವಾಗಲಿ, ಸಂವಿಧಾನ ಉಳಿಯಲಿ ಎಂದು ಕೂಗಿದರು. ಪ್ರತಿಭನಾಕಾರರು ಸಿಎಎ ಮತ್ತು ಎನ್ಆರ್‌ಸಿ ಯಿಂದಾಗುವ ಸಂಕಷ್ಟಗಳ ಕುರಿತು ಚರ್ಚೆ ನಡೆಸಿದರು. ಮಾತುಮಾತಿಗೂ ಅಜಾದಿ ಬೇಕೆಂದು ಒತ್ತಾಯಿಸಿದರು.

ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರೀಯ ಪೌರತ್ವ ನೋಮದಣಿ ಕಾಯ್ದೆ ಜಾರಿಗೊಳಿಸಬಾರದು. ಇದರಿಂದ ಎಲ್ಲರೂ ಮತ್ತೊಮ್ಮೆ ಕ್ಯೂ ನಿಲ್ಲಬೇಕಾದಂತಹ ಪರಿಸ್ಥಿತಿ ಬರುತ್ತದೆ. ಅಷ್ಟೇ ಅಲ್ಲ, ಸಿಎಎ ಮತ್ತು ಎನ್ಆರ್‌ಸಿ ಸಂವಿಧಾನದ ಆರ್ಟಿಕಲ್ 14, 21 ಮತ್ತು 15ನೇ ಪರಿಚ್ಛೇದದ ಸ್ಪಷ್ಟ ಉಲ್ಲಂಘನೆಯಾಗಿದೆ. ಧರ್ಮದ ಆಧಾರದ ಮೇಲೆ ಪೌರತ್ವ ನೀಡುವ ಪದ್ದತಿ ನಿಲ್ಲಬೇಕು. ಕೇಂದ್ರ ಸರ್ಕಾರ ಜಾರಿಗೊಳಿಸುತ್ತಿರುವ ಸಿಎಎ ಮತ್ತು ಎನ್ಆರ್‌ಸಿ ದೇಶದ ಜನರನ್ನು ಧರ್ಮಧ ಆಧಾರದಲ್ಲಿ ಒಡೆಯುತ್ತವೆ. ಇಂತಹ ಸಂವಿಧಾನಬಾಹಿರ ಮತ್ತು ಜನವಿರೋಧಿ ಕಾಯ್ದೆಗಳನ್ನು ಜಾರಿಗೊಳಿಸಬಾರದು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ನಾವು ಈ ದೇಶದಲ್ಲಿ ಹುಟ್ಟಿದ್ದೇವೆ. ಈ ದೇಶದಲ್ಲಿ ಬೆಳೆದು ಬದುಕಿದ್ದೇವೆ. ಇಲ್ಲಿಯೇ ಸಾಯುತ್ತೇವೆ. ನಾವು ಭಾರತೀಯರು, ಭಾರತದ ಪೌರತ್ವವನ್ನು ಹುಟ್ಟಿನಿಂದಲೇ ಪಡೆದಿದ್ದೇವೆ. ಕೇಂದ್ರ ಸರ್ಕಾರ ಮತರಾಜಕಾರಣ ಮಾಡುತ್ತಿದೆ. ಜನರನ್ನು ಒಡೆಯುವ ಕೆಲಸ ಮಾಡುತ್ತಿದೆ. ಆದಿವಾಸಿಗಳು, ನಿರಾಶ್ರಿತರು, ಬಡವರು, ಭೂಮಿ ಇಲ್ಲದವರು, ಮನೆ ಇಲ್ಲದವರು, ಅಲೆಮಾರಿಗಳು, ಹಟ್ಟಿ, ಹಾಡಿ, ದೊಡ್ಡಿಗಳಲ್ಲಿ ವಾಸ ಮಾಡುತ್ತಿರುವವರಿಗೆ ಯಾವುದೇ ದಾಖಲೆಗಳಿಲ್ಲ. ಇಂತವರನ್ನು ಏನು ಮಾಡುತ್ತೀರಿ ಎಂದು ಪ್ರಶ್ನಿಸಿದರು.

ಸಿಎಎ-2019 ಕಾಯ್ದೆಯಂತೆ ಆಫ್ಘಾನಿಸ್ತಾನ, ಪಾಕಿಸ್ಥಾನ ಮತ್ತು ಬಾಂಗ್ಲಾದೇಶ ದಿಂದ ಬಂದಿರುವ ಅಲ್ಪಸಂಖ್ಯಾತರಾದ ಹಿಂದೂ, ಸಿಖ್, ಬೌದ್ಧ, ಜೈನ, ಪಾರ್ಸಿ ಮತ್ತು ಕ್ರಿಶ್ಚಿಯನ್ ಸಮುದಾಯದವರು ಡಿಸೆಂಬರ್ 31, 2014ರ ಮೊದಲು ಭಾರತಕ್ಕೆ ಬಂದು ಕೇವಲ ಐದು ವರ್ಷ ನೆಲೆಸಿದ್ದರೆ ಅವರನ್ನು ಅಕ್ರಮ ವಲಸಿಗರೆಂದು ಪರಿಗಣಿಸದೆ ಪೌರತ್ವ ನೀಡಲು ಅವಕಾಶ ಕಲ್ಪಿಸಲಾಗಿದೆ.

ಇದರಲ್ಲಿ ದೊಡ್ಡ ಯೋಜನೆಗಳಿಂದ ಸ್ಥಳಾಂತರಗೊಂಡವರು, ವಲಸೆ ಕಾರ್ಮಿಕರು, ಬುಡಕಟ್ಟು ಸಮುದಾಯಗಳು, ಕಳ್ಳಸಾಗಾಣಿಕೆಯಾದವರು, ಮದುವೆ ನಂತರ ಗಂಡನ ಮನೆಗೆ ಹೋದ ಮಹಿಳೆಯರು ಸೇರಿದಂತೆ ಇವರೆಲ್ಲರೂ ಎನ್.ಆರ್.ಸಿ. ಪೌರತ್ವದ ಆಧಾರಕ್ಕಾಗಿ ಬೇಕಾಗುವ 50 ವರ್ಷಗಳ ದಾಖಲೆಗಳನ್ನು ಪಡೆಯುವುದು ಕಷ್ಟಸಾಧ್ಯವೇ ಸರಿ ಎಂದು ಮುಖಂಡರು ಆರೋಪಿಸಿದರು.

ಶ್ರೀಲಂಕಾ ತಮಿಳರು, ಮ್ಯಾನ್ಮಾರಿನ ರೊಹಿಂಗ್ಯಾ ಸಮುದಾಯ, ಚೀನದಿಂದ ಬಂದಿರುವ ಬೌದ್ಧರು, ಬಾಂಗ್ಲಾದೇಶದ ಜಾತ್ಯತೀತ ವಿಚಾರವಾದಿಗಳು, ಪಾಕಿಸ್ತಾನದ ಆಹ್ಮದಿಯಾ ಸಮುದಾಯ ಮತ್ತು ಎಲ್ಲಾ ದೇಶಗಳ ಜಾತ್ಯತೀತರನ್ನು ಈ ಕಾಯ್ದೆಯಿಂದ ಹೊರಗಿಡಲಾಗಿದೆ. ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಎನ್‍ಆರ್‍ಸಿ ಕಾಯ್ದೆ ಮೂಲಭೂತ ಹಕ್ಕುಗಳು, ನೈಸರ್ಗಿಕ ಹಕ್ಕುಗಳು ಮತ್ತು ಮಾನವ ಹಕ್ಕುಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಹೇಳಿದರು.

ಭಾರತದಲ್ಲಿ ವಸುದೈವಂ ಕುಟುಂಬಕಂ’ ಮತ್ತು ‘ಸರ್ವೇಜನೋ ಸುಖಿನೋಭವಂತು’ ‘ಮಾನವ ಕುಲಂ ತಾನೊಂದೇ ವಲಂ’ ‘ಸರ್ವಜನಾಂಗದ ಶಾಂತಿಯ ತೋಟ’ ‘ಧಾರ್ಮಿಕ ಸಹಿಷ್ಣತೆ’, ‘ಭ್ರಾತೃತ್ವ’ ‘ಸೋದರತೆ ತತ್ವಗಳು ಮಾನವೀಯತೆಯನ್ನೇ ಸಾರುತ್ತವೆ. ಹಿಂದೂ, ಮುಸ್ಲಿಂ, ಕ್ರಿಶ್ಛಿಯನ್, ಬೌದ್ದ ಸಿಖ್, ಪಾರ್ಸಿ, ಜೈನ ಸೇರಿದಂತೆ ಹಲವು ಧರ್ಮಗಳ ಜನರು ಪರಸ್ಪರ ಯಾರಿಗೂ ತೊಂದರೆಯಾಗದಂತೆ ಸೋದರರಂತೆ ಜೀವಿಸುತ್ತಾ ಬಂದಿದ್ದಾರೆ. ಇಂತಹ ವೈವಿಧ್ಯಮಯ ಭಾಷೆ, ಧರ್ಮ, ಆಚಾರ-ವಿಚಾರಗಳ ಪರಂಪರೆಯನ್ನು ಹೊಂದಿರುವ ಭಾರತ ದೇಶದಲ್ಲಿ ಸಿಎಎ ಮತ್ತು ಎನ್‍ಆರ್‍ಸಿ ಜಾರಿಯಿಂದ ಜನತೆ ಘಾಸಿಗೊಂಡಿದೆ ಎಂದು ತಿಳಿಸಿದರು.

ಪ್ರತಿಭಟನೆಯಲ್ಲಿ ಜನಪರ ಚಿಂತಕ ಪ್ರೊ.ಕೆ.ದೊರೈರಾಜ್, ಸ್ಲಂ ಜನಾಂದೋಲನ ಕರ್ನಾಟಕ ರಾಜ್ಯ ಸಂಚಾಲಕ ಎ.ನರಸಿಂಹಮೂರ್ತಿ, ಡಿಎಸ್ಎಸ್ ಜಿಲ್ಲಾಧ್ಯಕ್ಷ ಪಿ.ಎನ್.ರಾಮಯ್ಯ, ಮಾಜಿ ಶಾಸಕರಾದ ಎಸ್.ಷಪಿ ಅಹಮದ್, ರಫೀಕ್ ಅಹಮದ್, ಮುಖಂಡರಾದ ಅಸ್ಲಾಂ ಪಾಷಾ, ನಯಾಜ್ ಅಹಮದ್, ಪರಿಸರವಾದಿ  ಸಿ.ಯತಿರಾಜು, ಕರ್ನಾಟಕ ಪ್ರಾಂತ ರೈತ ಸಂಘದ ಬಿ.ಉಮೇಶ್, ಸಾಮಾಜಿಕ ಕಾರ್ಯಕರ್ತರಾದ ತಾಜುದ್ದೀನ್, ಅತೀಕ್ ಅಹಮದ್, ಸಿಐಟಿಯು ಮುಖಂಡ ಸೈಯದ್ ಮುಜೀಬ್, ಸಿಪಿಐ ಗಿರೀಶ್, ಸಿಪಿಎಂ ಎನ್.ಕೆ.ಸುಬ್ರಮಣ್ಯ, ಅಫ್ತಾಬ್, ಕುಮಾರ್, ಉಬೇದ್ ಅಹಮದ್, ನಿಸಾರ್ ಅಹಮದ್, ರಫೀಕ್, ಕೆಜಿಎನ್ ಮೊದಲಾದವರು ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...