Homeಕರ್ನಾಟಕCAA, NRC ಯಿಂದ ಅಜಾದಿ, ಮೋದಿ-ಶಾರಿಂದ ಅಜಾದಿ: ತುಮಕೂರಿನಲ್ಲಿ ಬೃಹತ್‌ ಪ್ರತಿಭಟನೆ

CAA, NRC ಯಿಂದ ಅಜಾದಿ, ಮೋದಿ-ಶಾರಿಂದ ಅಜಾದಿ: ತುಮಕೂರಿನಲ್ಲಿ ಬೃಹತ್‌ ಪ್ರತಿಭಟನೆ

- Advertisement -
- Advertisement -

ಜನಸಾಗರದ ನುಡವೆ ಅಜಾದಿ ಘೋಷಣೆಗಳು ಮೊಳಗಿದವು. ಎಲ್ಲಿ ನೋಡಿದರೂ ಜನರೇ ಗಿಜಿಗುಡುತ್ತಿದ್ದರು. ತುಮಕೂರಿನ ಜಿಲ್ಲಾಧಿಕಾರಿ ಕಚೇರಿಯ ಮುಂದಿನ ವಿಸ್ತಾರವಾದ ಬಯಲು ಜನರಿಂದ ತುಂಬಿ ಹೋಗಿತ್ತು. ಪ್ರಗತಿಪರ ಸಂಘಟನೆಗಳು, ದಲಿತಪರ ಸಂಘಟನೆಗಳು, ಕನ್ನಡ ಪರ ಸಂಘಟನೆಗಳ ನೇತೃತ್ವದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಎನ್‌ಆರ್‌ಸಿ ವಿರುದ್ಧ ನಡೆದ ಪ್ರತಿಭಟನಾ ಧರಣಿಯಲ್ಲಿ ಸಿಸಿಎ ಯಿಂದ ಅಜಾದಿ, ಎನ್.ಆರ್.ಸಿ ಯಿಂದ ಅಜಾದಿ, ಮೋದಿಯಿಂದ ಅಜಾದಿ, ಅಮಿತ್ ಶಾರಿಮದ ಅಜಾದಿ ಬೇಕು ಎಂದು ಪ್ರತಿಭಟನಾಕಾರರ ದೊಡ್ಡ ದನಿಯಲ್ಲಿ ಕೂಗಿ ಹೇಳಿದರು.

ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಸೇರಿದ್ದವರಲ್ಲಿ ವಿದ್ಯಾರ್ಥಿಗಳು, ಯುವಜನರು, ವಕೀಲರು, ಪ್ರಗತಿಪರ ಚಿಂತಕರು, ಮುಸ್ಲಿಂ ಮೌಲ್ವಿಗಳು, ಜಾತ್ಯತೀತ ಮನೋಭಾವವುಳ್ಳವರು ಇದ್ದರು. ಡಿಸೆಂಬರ್ 19ರಂದು ಧರಣಿ ನಡೆಸಲು ಪೊಲೀಸರು ನಿಷೇಧಾಜ್ಞೆಯ ನೆಪದಲ್ಲಿ ನಿರಾಕರಿಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ಪ್ರತಿಭಟನೆ ನಡೆಸಲಾಯಿತು. ಬಿಜೆಪಿ, ಮೋದಿ, ಅಮಿತ್ ಶಾ ವಿರುದ್ಧ ಘೋಷಣೆಗಳು ಮೊಳಗಿದವು. ಜನರನ್ನು ಒಡೆಯುವುದನ್ನು ನಿಲ್ಲಿಸಬೇಕು ಎಂದು ಸಾರಿ ಸಾರಿ ಹೇಳಿದರು.

ವಿಡಿಯೋ ನೋಡಿ

ವಾಹನದಲ್ಲಿದ್ದ ವೇದಿಕೆಯ ಮೇಲೆ ನಿಂತಿದ್ದ ಮುಖಂಡರು ಭಾಷಣ ಮಾಡುವುದಕ್ಕೂ ಮೊದಲು ಜನಗಣ ಮನ ರಾಷ್ಟ್ರಗೀತೆಯನ್ನು ಹಾಡಲಾಯಿತು. ಎಲ್ಲರೂ ರಾಷ್ಟ್ರಗೀತೆಯನ್ನು ಶಿಸ್ತಿನಿಂದ ಹಾಡಿದರು. ನೂರಾರು ಪೊಲೀಸರು ಕೂಡ ರಾಷ್ಟ್ರಗೀತೆಗೆ ಗೌರವ ಸಲ್ಲಿಸಿದರು. ಭಾರತಕ್ಕೆ ಜಯವಾಗಲಿ, ಸಂವಿಧಾನ ಉಳಿಯಲಿ ಎಂದು ಕೂಗಿದರು. ಪ್ರತಿಭನಾಕಾರರು ಸಿಎಎ ಮತ್ತು ಎನ್ಆರ್‌ಸಿ ಯಿಂದಾಗುವ ಸಂಕಷ್ಟಗಳ ಕುರಿತು ಚರ್ಚೆ ನಡೆಸಿದರು. ಮಾತುಮಾತಿಗೂ ಅಜಾದಿ ಬೇಕೆಂದು ಒತ್ತಾಯಿಸಿದರು.

ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರೀಯ ಪೌರತ್ವ ನೋಮದಣಿ ಕಾಯ್ದೆ ಜಾರಿಗೊಳಿಸಬಾರದು. ಇದರಿಂದ ಎಲ್ಲರೂ ಮತ್ತೊಮ್ಮೆ ಕ್ಯೂ ನಿಲ್ಲಬೇಕಾದಂತಹ ಪರಿಸ್ಥಿತಿ ಬರುತ್ತದೆ. ಅಷ್ಟೇ ಅಲ್ಲ, ಸಿಎಎ ಮತ್ತು ಎನ್ಆರ್‌ಸಿ ಸಂವಿಧಾನದ ಆರ್ಟಿಕಲ್ 14, 21 ಮತ್ತು 15ನೇ ಪರಿಚ್ಛೇದದ ಸ್ಪಷ್ಟ ಉಲ್ಲಂಘನೆಯಾಗಿದೆ. ಧರ್ಮದ ಆಧಾರದ ಮೇಲೆ ಪೌರತ್ವ ನೀಡುವ ಪದ್ದತಿ ನಿಲ್ಲಬೇಕು. ಕೇಂದ್ರ ಸರ್ಕಾರ ಜಾರಿಗೊಳಿಸುತ್ತಿರುವ ಸಿಎಎ ಮತ್ತು ಎನ್ಆರ್‌ಸಿ ದೇಶದ ಜನರನ್ನು ಧರ್ಮಧ ಆಧಾರದಲ್ಲಿ ಒಡೆಯುತ್ತವೆ. ಇಂತಹ ಸಂವಿಧಾನಬಾಹಿರ ಮತ್ತು ಜನವಿರೋಧಿ ಕಾಯ್ದೆಗಳನ್ನು ಜಾರಿಗೊಳಿಸಬಾರದು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ನಾವು ಈ ದೇಶದಲ್ಲಿ ಹುಟ್ಟಿದ್ದೇವೆ. ಈ ದೇಶದಲ್ಲಿ ಬೆಳೆದು ಬದುಕಿದ್ದೇವೆ. ಇಲ್ಲಿಯೇ ಸಾಯುತ್ತೇವೆ. ನಾವು ಭಾರತೀಯರು, ಭಾರತದ ಪೌರತ್ವವನ್ನು ಹುಟ್ಟಿನಿಂದಲೇ ಪಡೆದಿದ್ದೇವೆ. ಕೇಂದ್ರ ಸರ್ಕಾರ ಮತರಾಜಕಾರಣ ಮಾಡುತ್ತಿದೆ. ಜನರನ್ನು ಒಡೆಯುವ ಕೆಲಸ ಮಾಡುತ್ತಿದೆ. ಆದಿವಾಸಿಗಳು, ನಿರಾಶ್ರಿತರು, ಬಡವರು, ಭೂಮಿ ಇಲ್ಲದವರು, ಮನೆ ಇಲ್ಲದವರು, ಅಲೆಮಾರಿಗಳು, ಹಟ್ಟಿ, ಹಾಡಿ, ದೊಡ್ಡಿಗಳಲ್ಲಿ ವಾಸ ಮಾಡುತ್ತಿರುವವರಿಗೆ ಯಾವುದೇ ದಾಖಲೆಗಳಿಲ್ಲ. ಇಂತವರನ್ನು ಏನು ಮಾಡುತ್ತೀರಿ ಎಂದು ಪ್ರಶ್ನಿಸಿದರು.

ಸಿಎಎ-2019 ಕಾಯ್ದೆಯಂತೆ ಆಫ್ಘಾನಿಸ್ತಾನ, ಪಾಕಿಸ್ಥಾನ ಮತ್ತು ಬಾಂಗ್ಲಾದೇಶ ದಿಂದ ಬಂದಿರುವ ಅಲ್ಪಸಂಖ್ಯಾತರಾದ ಹಿಂದೂ, ಸಿಖ್, ಬೌದ್ಧ, ಜೈನ, ಪಾರ್ಸಿ ಮತ್ತು ಕ್ರಿಶ್ಚಿಯನ್ ಸಮುದಾಯದವರು ಡಿಸೆಂಬರ್ 31, 2014ರ ಮೊದಲು ಭಾರತಕ್ಕೆ ಬಂದು ಕೇವಲ ಐದು ವರ್ಷ ನೆಲೆಸಿದ್ದರೆ ಅವರನ್ನು ಅಕ್ರಮ ವಲಸಿಗರೆಂದು ಪರಿಗಣಿಸದೆ ಪೌರತ್ವ ನೀಡಲು ಅವಕಾಶ ಕಲ್ಪಿಸಲಾಗಿದೆ.

ಇದರಲ್ಲಿ ದೊಡ್ಡ ಯೋಜನೆಗಳಿಂದ ಸ್ಥಳಾಂತರಗೊಂಡವರು, ವಲಸೆ ಕಾರ್ಮಿಕರು, ಬುಡಕಟ್ಟು ಸಮುದಾಯಗಳು, ಕಳ್ಳಸಾಗಾಣಿಕೆಯಾದವರು, ಮದುವೆ ನಂತರ ಗಂಡನ ಮನೆಗೆ ಹೋದ ಮಹಿಳೆಯರು ಸೇರಿದಂತೆ ಇವರೆಲ್ಲರೂ ಎನ್.ಆರ್.ಸಿ. ಪೌರತ್ವದ ಆಧಾರಕ್ಕಾಗಿ ಬೇಕಾಗುವ 50 ವರ್ಷಗಳ ದಾಖಲೆಗಳನ್ನು ಪಡೆಯುವುದು ಕಷ್ಟಸಾಧ್ಯವೇ ಸರಿ ಎಂದು ಮುಖಂಡರು ಆರೋಪಿಸಿದರು.

ಶ್ರೀಲಂಕಾ ತಮಿಳರು, ಮ್ಯಾನ್ಮಾರಿನ ರೊಹಿಂಗ್ಯಾ ಸಮುದಾಯ, ಚೀನದಿಂದ ಬಂದಿರುವ ಬೌದ್ಧರು, ಬಾಂಗ್ಲಾದೇಶದ ಜಾತ್ಯತೀತ ವಿಚಾರವಾದಿಗಳು, ಪಾಕಿಸ್ತಾನದ ಆಹ್ಮದಿಯಾ ಸಮುದಾಯ ಮತ್ತು ಎಲ್ಲಾ ದೇಶಗಳ ಜಾತ್ಯತೀತರನ್ನು ಈ ಕಾಯ್ದೆಯಿಂದ ಹೊರಗಿಡಲಾಗಿದೆ. ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಎನ್‍ಆರ್‍ಸಿ ಕಾಯ್ದೆ ಮೂಲಭೂತ ಹಕ್ಕುಗಳು, ನೈಸರ್ಗಿಕ ಹಕ್ಕುಗಳು ಮತ್ತು ಮಾನವ ಹಕ್ಕುಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಹೇಳಿದರು.

ಭಾರತದಲ್ಲಿ ವಸುದೈವಂ ಕುಟುಂಬಕಂ’ ಮತ್ತು ‘ಸರ್ವೇಜನೋ ಸುಖಿನೋಭವಂತು’ ‘ಮಾನವ ಕುಲಂ ತಾನೊಂದೇ ವಲಂ’ ‘ಸರ್ವಜನಾಂಗದ ಶಾಂತಿಯ ತೋಟ’ ‘ಧಾರ್ಮಿಕ ಸಹಿಷ್ಣತೆ’, ‘ಭ್ರಾತೃತ್ವ’ ‘ಸೋದರತೆ ತತ್ವಗಳು ಮಾನವೀಯತೆಯನ್ನೇ ಸಾರುತ್ತವೆ. ಹಿಂದೂ, ಮುಸ್ಲಿಂ, ಕ್ರಿಶ್ಛಿಯನ್, ಬೌದ್ದ ಸಿಖ್, ಪಾರ್ಸಿ, ಜೈನ ಸೇರಿದಂತೆ ಹಲವು ಧರ್ಮಗಳ ಜನರು ಪರಸ್ಪರ ಯಾರಿಗೂ ತೊಂದರೆಯಾಗದಂತೆ ಸೋದರರಂತೆ ಜೀವಿಸುತ್ತಾ ಬಂದಿದ್ದಾರೆ. ಇಂತಹ ವೈವಿಧ್ಯಮಯ ಭಾಷೆ, ಧರ್ಮ, ಆಚಾರ-ವಿಚಾರಗಳ ಪರಂಪರೆಯನ್ನು ಹೊಂದಿರುವ ಭಾರತ ದೇಶದಲ್ಲಿ ಸಿಎಎ ಮತ್ತು ಎನ್‍ಆರ್‍ಸಿ ಜಾರಿಯಿಂದ ಜನತೆ ಘಾಸಿಗೊಂಡಿದೆ ಎಂದು ತಿಳಿಸಿದರು.

ಪ್ರತಿಭಟನೆಯಲ್ಲಿ ಜನಪರ ಚಿಂತಕ ಪ್ರೊ.ಕೆ.ದೊರೈರಾಜ್, ಸ್ಲಂ ಜನಾಂದೋಲನ ಕರ್ನಾಟಕ ರಾಜ್ಯ ಸಂಚಾಲಕ ಎ.ನರಸಿಂಹಮೂರ್ತಿ, ಡಿಎಸ್ಎಸ್ ಜಿಲ್ಲಾಧ್ಯಕ್ಷ ಪಿ.ಎನ್.ರಾಮಯ್ಯ, ಮಾಜಿ ಶಾಸಕರಾದ ಎಸ್.ಷಪಿ ಅಹಮದ್, ರಫೀಕ್ ಅಹಮದ್, ಮುಖಂಡರಾದ ಅಸ್ಲಾಂ ಪಾಷಾ, ನಯಾಜ್ ಅಹಮದ್, ಪರಿಸರವಾದಿ  ಸಿ.ಯತಿರಾಜು, ಕರ್ನಾಟಕ ಪ್ರಾಂತ ರೈತ ಸಂಘದ ಬಿ.ಉಮೇಶ್, ಸಾಮಾಜಿಕ ಕಾರ್ಯಕರ್ತರಾದ ತಾಜುದ್ದೀನ್, ಅತೀಕ್ ಅಹಮದ್, ಸಿಐಟಿಯು ಮುಖಂಡ ಸೈಯದ್ ಮುಜೀಬ್, ಸಿಪಿಐ ಗಿರೀಶ್, ಸಿಪಿಎಂ ಎನ್.ಕೆ.ಸುಬ್ರಮಣ್ಯ, ಅಫ್ತಾಬ್, ಕುಮಾರ್, ಉಬೇದ್ ಅಹಮದ್, ನಿಸಾರ್ ಅಹಮದ್, ರಫೀಕ್, ಕೆಜಿಎನ್ ಮೊದಲಾದವರು ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...