Homeಕರ್ನಾಟಕಮೊಳಗಿದ ಕನ್ನಡ ಕಹಳೆ: ಪಠ್ಯ ಪುಸ್ತಕ ಕೇಸರೀಕರಣ ವಿರುದ್ಧ ಬೃಹತ್ ಪ್ರತಿಭಟನೆ

ಮೊಳಗಿದ ಕನ್ನಡ ಕಹಳೆ: ಪಠ್ಯ ಪುಸ್ತಕ ಕೇಸರೀಕರಣ ವಿರುದ್ಧ ಬೃಹತ್ ಪ್ರತಿಭಟನೆ

ವಿಶ್ವಮಾನವ, ಕ್ರಾಂತಿಕಾರಿ, ಮಹಾಕವಿ ಕುವೆಂಪು ಹೋರಾಟ ಸಮಿತಿ ಆಯೋಜಿಸಿರುವ ಪ್ರತಿಭಟನೆಗೆ ಭಾರೀ ಜನಸ್ಪಂದನೆ

- Advertisement -
- Advertisement -

ಬಲಪಂಥೀಯ ಬರಹಗಾರ ರೋಹಿತ್‌ ಚಕ್ರತೀರ್ಥ ಅಧ್ಯಕ್ಷತೆಯಲ್ಲಿ ನಡೆದ ಪಠ್ಯಪುಸ್ತಕದಲ್ಲಿ ಆಗಿರುವ ಸರಣಿ ತಪ್ಪುಗಳನ್ನು ವಿರೋಧಿಸಿ ಜನಾಕ್ರೋಶ ಭುಗಿಲೆದ್ದಿದೆ. ಬೆಂಗಳೂರಿನಲ್ಲಿ ಸೇರಿದ ಸಾವಿರಾರು ಜನರು ಸರ್ಕಾರದ ವಿರುದ್ಧ ರಣಕಹಳೆ ಮೊಳಗಿಸಿದ್ದಾರೆ.

ವಿಶ್ವಮಾನವ, ಕ್ರಾಂತಿಕಾರಿ, ಮಹಾಕವಿ ಕುವೆಂಪು ಹೋರಾಟ ಸಮಿತಿ ಆಯೋಜಿಸಿರುವ ಬೃಹತ್‌ ಪ್ರತಿಭಟನೆಗೆ ರಾಜ್ಯದ ಮೂಲೆಮೂಲೆಯಿಂದ ಸಾವಿರಾರು ಜನರು ಆಗಮಿಸಿದ್ದು, ಬೆಂಗಳೂರಿನ ಕೇಂದ್ರೀಯ ರೈಲು ನಿಲ್ದಾಣದಿಂದ ಪ್ರೀಂಡಂ ಪಾರ್ಕ್‌ವರೆಗೆ ಮೆರವಣಿಗೆ ನಡೆದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಾಷ್ಟ್ರಕವಿ ಕುವೆಂಪು ಅವರು ಬರೆದ ನಾಡಗೀತೆಯನ್ನು ತಿರುಚಿದ ರೋಹಿತ್ ಚಕ್ರತೀರ್ಥ ಎಂಬ ವ್ಯಕ್ತಿಯ ನೇತೃತ್ವದಲ್ಲಿ ಪರಿಷ್ಕರಣೆಯಾದ ಪಠ್ಯಪುಸ್ತಕಗಳನ್ನು ಮಕ್ಕಳಿಗೆ ವಿತರಿಸಬಾರದು ಎಂದು ಕನ್ನಡಿಗರು ಆಗ್ರಹಿಸಿದ್ದಾರೆ.

ಮೆರವಣಿಗೆಯುದ್ದಕ್ಕೂ ಕನ್ನಡ ಬಾವುಟಗಳು ಹಾರಾಡಿದವು. ಪಠ್ಯಪುಸ್ತಕದಲ್ಲಿ ಕೈಬಿಡಲಾಗಿರುವ ಮಹನೀಯರ ಭಾವಚಿತ್ರಗಳನ್ನು ಹಿಡಿದು ಹೋರಾಟಗಾರರು ಸಾಗಿದರು. “ನಾಡದ್ರೋಹಿ ಚಕ್ರತೀರ್ಥನಿಗೆ ಧಿಕ್ಕಾರ, ಶಿಕ್ಷಣ ಸಚಿವರಿಗೆ ಧಿಕ್ಕಾರ, ತಪ್ಪಾಗಿರುವ ಪಠ್ಯಪುಸ್ತಕಗಳನ್ನು ಮಕ್ಕಳಿಗೆ ವಿಸ್ತರಿಸುತ್ತಿರುವ ಸರ್ಕಾರಕ್ಕೆ ಧಿಕ್ಕಾರ” ಎಂದು ಕೂಗಿದರು.

“ನಾಡಿಗೆ ಪ್ರಥಮ ಜ್ಞಾನಪೀಠ ಪ್ರಶಸ್ತಿ ತಂದುಕೊಟ್ಟ ಮಹಾನ್‌ ಶೂದ್ರಕವಿ ಕುವೆಂಪು ಅವರನ್ನು ಅವಮಾನಿಸಿದವರಿಗೆ, ನಾಡಗೀತೆಯನ್ನು ತಿರುಚಿ ಬರೆದವರಿಗೆ ಧಿಕ್ಕಾರ” ಎಂದು ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದರು.

ಕನ್ನಡ ಭಾವುಟ ಹಾಗೂ ವಿವಿಧ ಪ್ಲೆಕ್ಸ್‌ಗಳನ್ನು ಹಿಡಿದ ವಿದ್ಯಾರ್ಥಿಗಳು, ಹೋರಾಟಗಾರರು, ನಾಗರಿಕರು ತಮ್ಮ ಅಸ್ಮಿತೆಯನ್ನು ಪ್ರದರ್ಶಿಸಿದರು.

ಮೆರವಣಿಗೆಯಲ್ಲಿ ಸಾಗುತ್ತಾ ‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಉರಿಲಿಂಗ ಪೆದ್ದಿಮಠದ ಜ್ಞಾನಪ್ರಕಾಶ ಸ್ವಾಮೀಜಿ, “ಚಕ್ರತೀರ್ಥನನ್ನು ಬಂಧಿಸಲು ಇಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಯಾಗಿಲ್ಲ. ಪ್ರಜಾಪ್ರಭುತ್ವ ಉಳ್ಳವರ ಕೈಗೆ ಸಿಕ್ಕಿಹಾಕಿಕೊಂಡಿದೆ” ಎಂದು ವಿವಾದಿಸಿದರು.

“ಶಾಸಕಾಂಗ, ಕಾರ್ಯಾಂಗ ಹಾಗೂ ನ್ಯಾಯಾಂಗ ನಿಷ್ಕ್ರಿಯವಾಗಿವೆ. ಸಂಸ್ಕೃತಿ ಬಗ್ಗೆ ಅವರ ಬಳಿ ಪಾಠ ಕೇಳುವ ಅವಶ್ಯಕತೆ ಇಲ್ಲ. ಸಂಸ್ಕೃತಿಯನ್ನು ಕೊಟ್ಟವರು ನಾವು. ಈ ದೇಶದ ಸಂಸ್ಕೃತಿಗೆ ಮೂಲಪುರುಷರು ನಾವು. ಅವರು ಹೊರಗಡೆಯಿಂದ ಬಂದವವರು. ಹೀಗಾಗಿ ಹೊರಗಡೆ ಮಾತನ್ನೇ ಆಡುತ್ತಾರೆ. ರೋಹಿತ್ ಚಕ್ರತೀರ್ಥನ ಬಂಧನವನ್ನು ಮಾಡಿಸದೆ ಬಿಡುವುದಿಲ್ಲ” ಎಂದರು.

ಕರ್ನಾಟಕ ರಾಜ್ಯ ಸಂಶೋಧಕರ ಸಂಘದ ರಾಜ್ಯಾಧ್ಯಕ್ಷರಾದ ಎಸ್.ಮರಿದೇವಯ್ಯ ಮಾತನಾಡಿ, “ರಾಜ್ಯದ ವಿವಿಧ ಭಾಗಗಳಿಂದ ಬಂದ ಜನರು ಇಲ್ಲಿ ಸೇರಿದ್ದೇವೆ. ರೋಹಿತ್ ಚಕ್ರತೀರ್ಥ ಎನ್ನುವ ವ್ಯಕ್ತಿ ಮಾಡಿರುವ ಪಠ್ಯ ಪರಿಷ್ಕರಣೆಯನ್ನು ಸರ್ಕಾರ ಕೂಡಲೇ ರದ್ದುಪಡಿಸಬೇಕು. ಇಲ್ಲವಾದರೆ ಮುಂದೆ ನಡೆಯುವ ಜಿಪಂ, ತಾಪಂ, ಎಂಎಲ್‌ಎ, ಎಂಪಿ ಚುನಾವಣೆಗಳಲ್ಲಿ ತಕ್ಕ ಪಾಠ ಕಲಿಸುತ್ತೇವೆ. ಕೂಡಲೇ ಚಕ್ರತೀರ್ಥನನ್ನು ಬಂಧಿಸಬೇಕು. ಮುಂದಿನ ದಿನಗಳಲ್ಲಿ ವಿಧಾನಸೌಧ ಮುತ್ತಿಗೆ ಹಾಕುತ್ತೇವೆ” ಎಂದು ಎಚ್ಚರಿಸಿದರು.

ಇದನ್ನೂ ಓದಿರಿ: ಮಾಜಿ ಸಚಿವ ಎಂ.ರಘುಪತಿ ನಿಧನ; ವರ್ಣ ರಂಜಿತ ಬದುಕಿಗೆ ತೆರೆ

ಅಲೆಮಾರಿ ಬುಡಕಟ್ಟು ಮಹಾಸಭಾದ ಹೋರಾಟಗಾರ ಮಂಜುನಾಥ್ ಮಾತನಾಡಿ, “ಜಗದ ಕವಿ, ರಾಷ್ಟ್ರಕವಿ ಕುವೆಂಪು ಅವರಿಗೆ ಆಗಿರುವ ಅನ್ಯಾಯವನ್ನು ಸರಿದೂಗಿಸಬೇಕು. ಹೊಸ ಪಠ್ಯಪುಸ್ತಕವು ಇಷ್ಟೊಂದು ಸಮಸ್ಯೆಗಳಿಂದ ಕೂಡಿರುವುದರಿಂದ ಪಠ್ಯ ಪರಿಷ್ಕರಣೆ ಅಗತ್ಯವಿಲ್ಲ. ಹಳೆಯ ಪಠ್ಯಪರಿಷ್ಕರಣೆಯನ್ನೇ ಮುಂದುವರಿಸಿ, ಮಕ್ಕಳಿಗೆ ಸತ್ಯವಾದ ಪಾಠಗಳನ್ನು ಕಲಿಸಬೇಕಾಗಿ ಕಳಕಳಿಯ ಮನವಿ” ಎಂದರು.

ಕರ್ನಾಟಕ ಭೀಮ ಸೇನೆ, ರಾಜ್ಯ ಒಕ್ಕಗಲಿಗರ ಸಂಘ, ಸಿಐಟಿಯು, ದಲಿತ ಹಕ್ಕುಗಳ ಸಮಿತಿ, ಅಲೆಮಾರಿ ಬುಡಕಟ್ಟು ಮಹಾಸಭಾ, ಕೆಆರ್‌ಎಸ್‌ ಪಕ್ಷ, ದಲಿತ ಸಂಘರ್ಷ ಸಮಿತಿ, ಭೀಮ್‌ ಆರ್ಮಿ, ಕಾಂಗ್ರೆಸ್ ಪಕ್ಷ, ಕರ್ನಾಟಕ ರಕ್ಷಣಾ ವೇದಿಕೆ ಸೇರಿದಂತೆ ಮೊದಲಾದ ಸಂಘಟನೆಗಳು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದವು.

ರಾಜಕೀಯ ನಾಯಕರಾದ ರಾಮಲಿಂಗ ರೆಡ್ಡಿ, ಡಿ.ಕೆ.ಶಿವಕುಮಾರ್‌, ಸಿ.ಎಂ. ಇಬ್ರಾಹಿಂ, ಮಖ್ಯಮಂತ್ರಿ ಚಂದ್ರು, ಅಕ್ಕೈ ಪದ್ಮಶಾಲಿ, ಶಾಸಕ ಕೃಷ್ಣಪ್ಪ, ಸಾಹಿತಿ ಬರಗೂರು ರಾಮಚಂದ್ರಪ್ಪ,  ಶಿವರಾಮೇಗೌಡ, ಪ್ರವೀಣ್‌ ಶೆಟ್ಟಿ, ಸಾ.ರಾ. ಗೋವಿಂದ್‌, ಸಂಗೀತ ನಿರ್ದೇಶಕ ಹಂಸಲೇಖ, ಜಸ್ಟೀಸ್ ನಾಗಮೋಹನ ದಾಸ್‌ ನಾಗಮೋಹನ್‌ ದಾಸ್‌, ಚಿಂತಕ ಎಸ್‌.ಜಿ.ಸಿದ್ದರಾಮಯ್ಯ ಸೇರಿದಂತೆ ಹಲವಾರು ಮುಖಂಡರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...