Homeಕರ್ನಾಟಕಮೊಳಗಿದ ಕನ್ನಡ ಕಹಳೆ: ಪಠ್ಯ ಪುಸ್ತಕ ಕೇಸರೀಕರಣ ವಿರುದ್ಧ ಬೃಹತ್ ಪ್ರತಿಭಟನೆ

ಮೊಳಗಿದ ಕನ್ನಡ ಕಹಳೆ: ಪಠ್ಯ ಪುಸ್ತಕ ಕೇಸರೀಕರಣ ವಿರುದ್ಧ ಬೃಹತ್ ಪ್ರತಿಭಟನೆ

ವಿಶ್ವಮಾನವ, ಕ್ರಾಂತಿಕಾರಿ, ಮಹಾಕವಿ ಕುವೆಂಪು ಹೋರಾಟ ಸಮಿತಿ ಆಯೋಜಿಸಿರುವ ಪ್ರತಿಭಟನೆಗೆ ಭಾರೀ ಜನಸ್ಪಂದನೆ

- Advertisement -
- Advertisement -

ಬಲಪಂಥೀಯ ಬರಹಗಾರ ರೋಹಿತ್‌ ಚಕ್ರತೀರ್ಥ ಅಧ್ಯಕ್ಷತೆಯಲ್ಲಿ ನಡೆದ ಪಠ್ಯಪುಸ್ತಕದಲ್ಲಿ ಆಗಿರುವ ಸರಣಿ ತಪ್ಪುಗಳನ್ನು ವಿರೋಧಿಸಿ ಜನಾಕ್ರೋಶ ಭುಗಿಲೆದ್ದಿದೆ. ಬೆಂಗಳೂರಿನಲ್ಲಿ ಸೇರಿದ ಸಾವಿರಾರು ಜನರು ಸರ್ಕಾರದ ವಿರುದ್ಧ ರಣಕಹಳೆ ಮೊಳಗಿಸಿದ್ದಾರೆ.

ವಿಶ್ವಮಾನವ, ಕ್ರಾಂತಿಕಾರಿ, ಮಹಾಕವಿ ಕುವೆಂಪು ಹೋರಾಟ ಸಮಿತಿ ಆಯೋಜಿಸಿರುವ ಬೃಹತ್‌ ಪ್ರತಿಭಟನೆಗೆ ರಾಜ್ಯದ ಮೂಲೆಮೂಲೆಯಿಂದ ಸಾವಿರಾರು ಜನರು ಆಗಮಿಸಿದ್ದು, ಬೆಂಗಳೂರಿನ ಕೇಂದ್ರೀಯ ರೈಲು ನಿಲ್ದಾಣದಿಂದ ಪ್ರೀಂಡಂ ಪಾರ್ಕ್‌ವರೆಗೆ ಮೆರವಣಿಗೆ ನಡೆದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಾಷ್ಟ್ರಕವಿ ಕುವೆಂಪು ಅವರು ಬರೆದ ನಾಡಗೀತೆಯನ್ನು ತಿರುಚಿದ ರೋಹಿತ್ ಚಕ್ರತೀರ್ಥ ಎಂಬ ವ್ಯಕ್ತಿಯ ನೇತೃತ್ವದಲ್ಲಿ ಪರಿಷ್ಕರಣೆಯಾದ ಪಠ್ಯಪುಸ್ತಕಗಳನ್ನು ಮಕ್ಕಳಿಗೆ ವಿತರಿಸಬಾರದು ಎಂದು ಕನ್ನಡಿಗರು ಆಗ್ರಹಿಸಿದ್ದಾರೆ.

ಮೆರವಣಿಗೆಯುದ್ದಕ್ಕೂ ಕನ್ನಡ ಬಾವುಟಗಳು ಹಾರಾಡಿದವು. ಪಠ್ಯಪುಸ್ತಕದಲ್ಲಿ ಕೈಬಿಡಲಾಗಿರುವ ಮಹನೀಯರ ಭಾವಚಿತ್ರಗಳನ್ನು ಹಿಡಿದು ಹೋರಾಟಗಾರರು ಸಾಗಿದರು. “ನಾಡದ್ರೋಹಿ ಚಕ್ರತೀರ್ಥನಿಗೆ ಧಿಕ್ಕಾರ, ಶಿಕ್ಷಣ ಸಚಿವರಿಗೆ ಧಿಕ್ಕಾರ, ತಪ್ಪಾಗಿರುವ ಪಠ್ಯಪುಸ್ತಕಗಳನ್ನು ಮಕ್ಕಳಿಗೆ ವಿಸ್ತರಿಸುತ್ತಿರುವ ಸರ್ಕಾರಕ್ಕೆ ಧಿಕ್ಕಾರ” ಎಂದು ಕೂಗಿದರು.

“ನಾಡಿಗೆ ಪ್ರಥಮ ಜ್ಞಾನಪೀಠ ಪ್ರಶಸ್ತಿ ತಂದುಕೊಟ್ಟ ಮಹಾನ್‌ ಶೂದ್ರಕವಿ ಕುವೆಂಪು ಅವರನ್ನು ಅವಮಾನಿಸಿದವರಿಗೆ, ನಾಡಗೀತೆಯನ್ನು ತಿರುಚಿ ಬರೆದವರಿಗೆ ಧಿಕ್ಕಾರ” ಎಂದು ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದರು.

ಕನ್ನಡ ಭಾವುಟ ಹಾಗೂ ವಿವಿಧ ಪ್ಲೆಕ್ಸ್‌ಗಳನ್ನು ಹಿಡಿದ ವಿದ್ಯಾರ್ಥಿಗಳು, ಹೋರಾಟಗಾರರು, ನಾಗರಿಕರು ತಮ್ಮ ಅಸ್ಮಿತೆಯನ್ನು ಪ್ರದರ್ಶಿಸಿದರು.

ಮೆರವಣಿಗೆಯಲ್ಲಿ ಸಾಗುತ್ತಾ ‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಉರಿಲಿಂಗ ಪೆದ್ದಿಮಠದ ಜ್ಞಾನಪ್ರಕಾಶ ಸ್ವಾಮೀಜಿ, “ಚಕ್ರತೀರ್ಥನನ್ನು ಬಂಧಿಸಲು ಇಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಯಾಗಿಲ್ಲ. ಪ್ರಜಾಪ್ರಭುತ್ವ ಉಳ್ಳವರ ಕೈಗೆ ಸಿಕ್ಕಿಹಾಕಿಕೊಂಡಿದೆ” ಎಂದು ವಿವಾದಿಸಿದರು.

“ಶಾಸಕಾಂಗ, ಕಾರ್ಯಾಂಗ ಹಾಗೂ ನ್ಯಾಯಾಂಗ ನಿಷ್ಕ್ರಿಯವಾಗಿವೆ. ಸಂಸ್ಕೃತಿ ಬಗ್ಗೆ ಅವರ ಬಳಿ ಪಾಠ ಕೇಳುವ ಅವಶ್ಯಕತೆ ಇಲ್ಲ. ಸಂಸ್ಕೃತಿಯನ್ನು ಕೊಟ್ಟವರು ನಾವು. ಈ ದೇಶದ ಸಂಸ್ಕೃತಿಗೆ ಮೂಲಪುರುಷರು ನಾವು. ಅವರು ಹೊರಗಡೆಯಿಂದ ಬಂದವವರು. ಹೀಗಾಗಿ ಹೊರಗಡೆ ಮಾತನ್ನೇ ಆಡುತ್ತಾರೆ. ರೋಹಿತ್ ಚಕ್ರತೀರ್ಥನ ಬಂಧನವನ್ನು ಮಾಡಿಸದೆ ಬಿಡುವುದಿಲ್ಲ” ಎಂದರು.

ಕರ್ನಾಟಕ ರಾಜ್ಯ ಸಂಶೋಧಕರ ಸಂಘದ ರಾಜ್ಯಾಧ್ಯಕ್ಷರಾದ ಎಸ್.ಮರಿದೇವಯ್ಯ ಮಾತನಾಡಿ, “ರಾಜ್ಯದ ವಿವಿಧ ಭಾಗಗಳಿಂದ ಬಂದ ಜನರು ಇಲ್ಲಿ ಸೇರಿದ್ದೇವೆ. ರೋಹಿತ್ ಚಕ್ರತೀರ್ಥ ಎನ್ನುವ ವ್ಯಕ್ತಿ ಮಾಡಿರುವ ಪಠ್ಯ ಪರಿಷ್ಕರಣೆಯನ್ನು ಸರ್ಕಾರ ಕೂಡಲೇ ರದ್ದುಪಡಿಸಬೇಕು. ಇಲ್ಲವಾದರೆ ಮುಂದೆ ನಡೆಯುವ ಜಿಪಂ, ತಾಪಂ, ಎಂಎಲ್‌ಎ, ಎಂಪಿ ಚುನಾವಣೆಗಳಲ್ಲಿ ತಕ್ಕ ಪಾಠ ಕಲಿಸುತ್ತೇವೆ. ಕೂಡಲೇ ಚಕ್ರತೀರ್ಥನನ್ನು ಬಂಧಿಸಬೇಕು. ಮುಂದಿನ ದಿನಗಳಲ್ಲಿ ವಿಧಾನಸೌಧ ಮುತ್ತಿಗೆ ಹಾಕುತ್ತೇವೆ” ಎಂದು ಎಚ್ಚರಿಸಿದರು.

ಇದನ್ನೂ ಓದಿರಿ: ಮಾಜಿ ಸಚಿವ ಎಂ.ರಘುಪತಿ ನಿಧನ; ವರ್ಣ ರಂಜಿತ ಬದುಕಿಗೆ ತೆರೆ

ಅಲೆಮಾರಿ ಬುಡಕಟ್ಟು ಮಹಾಸಭಾದ ಹೋರಾಟಗಾರ ಮಂಜುನಾಥ್ ಮಾತನಾಡಿ, “ಜಗದ ಕವಿ, ರಾಷ್ಟ್ರಕವಿ ಕುವೆಂಪು ಅವರಿಗೆ ಆಗಿರುವ ಅನ್ಯಾಯವನ್ನು ಸರಿದೂಗಿಸಬೇಕು. ಹೊಸ ಪಠ್ಯಪುಸ್ತಕವು ಇಷ್ಟೊಂದು ಸಮಸ್ಯೆಗಳಿಂದ ಕೂಡಿರುವುದರಿಂದ ಪಠ್ಯ ಪರಿಷ್ಕರಣೆ ಅಗತ್ಯವಿಲ್ಲ. ಹಳೆಯ ಪಠ್ಯಪರಿಷ್ಕರಣೆಯನ್ನೇ ಮುಂದುವರಿಸಿ, ಮಕ್ಕಳಿಗೆ ಸತ್ಯವಾದ ಪಾಠಗಳನ್ನು ಕಲಿಸಬೇಕಾಗಿ ಕಳಕಳಿಯ ಮನವಿ” ಎಂದರು.

ಕರ್ನಾಟಕ ಭೀಮ ಸೇನೆ, ರಾಜ್ಯ ಒಕ್ಕಗಲಿಗರ ಸಂಘ, ಸಿಐಟಿಯು, ದಲಿತ ಹಕ್ಕುಗಳ ಸಮಿತಿ, ಅಲೆಮಾರಿ ಬುಡಕಟ್ಟು ಮಹಾಸಭಾ, ಕೆಆರ್‌ಎಸ್‌ ಪಕ್ಷ, ದಲಿತ ಸಂಘರ್ಷ ಸಮಿತಿ, ಭೀಮ್‌ ಆರ್ಮಿ, ಕಾಂಗ್ರೆಸ್ ಪಕ್ಷ, ಕರ್ನಾಟಕ ರಕ್ಷಣಾ ವೇದಿಕೆ ಸೇರಿದಂತೆ ಮೊದಲಾದ ಸಂಘಟನೆಗಳು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದವು.

ರಾಜಕೀಯ ನಾಯಕರಾದ ರಾಮಲಿಂಗ ರೆಡ್ಡಿ, ಡಿ.ಕೆ.ಶಿವಕುಮಾರ್‌, ಸಿ.ಎಂ. ಇಬ್ರಾಹಿಂ, ಮಖ್ಯಮಂತ್ರಿ ಚಂದ್ರು, ಅಕ್ಕೈ ಪದ್ಮಶಾಲಿ, ಶಾಸಕ ಕೃಷ್ಣಪ್ಪ, ಸಾಹಿತಿ ಬರಗೂರು ರಾಮಚಂದ್ರಪ್ಪ,  ಶಿವರಾಮೇಗೌಡ, ಪ್ರವೀಣ್‌ ಶೆಟ್ಟಿ, ಸಾ.ರಾ. ಗೋವಿಂದ್‌, ಸಂಗೀತ ನಿರ್ದೇಶಕ ಹಂಸಲೇಖ, ಜಸ್ಟೀಸ್ ನಾಗಮೋಹನ ದಾಸ್‌ ನಾಗಮೋಹನ್‌ ದಾಸ್‌, ಚಿಂತಕ ಎಸ್‌.ಜಿ.ಸಿದ್ದರಾಮಯ್ಯ ಸೇರಿದಂತೆ ಹಲವಾರು ಮುಖಂಡರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...