Homeಕರ್ನಾಟಕಮೊಳಗಿದ ಕನ್ನಡ ಕಹಳೆ: ಪಠ್ಯ ಪುಸ್ತಕ ಕೇಸರೀಕರಣ ವಿರುದ್ಧ ಬೃಹತ್ ಪ್ರತಿಭಟನೆ

ಮೊಳಗಿದ ಕನ್ನಡ ಕಹಳೆ: ಪಠ್ಯ ಪುಸ್ತಕ ಕೇಸರೀಕರಣ ವಿರುದ್ಧ ಬೃಹತ್ ಪ್ರತಿಭಟನೆ

ವಿಶ್ವಮಾನವ, ಕ್ರಾಂತಿಕಾರಿ, ಮಹಾಕವಿ ಕುವೆಂಪು ಹೋರಾಟ ಸಮಿತಿ ಆಯೋಜಿಸಿರುವ ಪ್ರತಿಭಟನೆಗೆ ಭಾರೀ ಜನಸ್ಪಂದನೆ

- Advertisement -
- Advertisement -

ಬಲಪಂಥೀಯ ಬರಹಗಾರ ರೋಹಿತ್‌ ಚಕ್ರತೀರ್ಥ ಅಧ್ಯಕ್ಷತೆಯಲ್ಲಿ ನಡೆದ ಪಠ್ಯಪುಸ್ತಕದಲ್ಲಿ ಆಗಿರುವ ಸರಣಿ ತಪ್ಪುಗಳನ್ನು ವಿರೋಧಿಸಿ ಜನಾಕ್ರೋಶ ಭುಗಿಲೆದ್ದಿದೆ. ಬೆಂಗಳೂರಿನಲ್ಲಿ ಸೇರಿದ ಸಾವಿರಾರು ಜನರು ಸರ್ಕಾರದ ವಿರುದ್ಧ ರಣಕಹಳೆ ಮೊಳಗಿಸಿದ್ದಾರೆ.

ವಿಶ್ವಮಾನವ, ಕ್ರಾಂತಿಕಾರಿ, ಮಹಾಕವಿ ಕುವೆಂಪು ಹೋರಾಟ ಸಮಿತಿ ಆಯೋಜಿಸಿರುವ ಬೃಹತ್‌ ಪ್ರತಿಭಟನೆಗೆ ರಾಜ್ಯದ ಮೂಲೆಮೂಲೆಯಿಂದ ಸಾವಿರಾರು ಜನರು ಆಗಮಿಸಿದ್ದು, ಬೆಂಗಳೂರಿನ ಕೇಂದ್ರೀಯ ರೈಲು ನಿಲ್ದಾಣದಿಂದ ಪ್ರೀಂಡಂ ಪಾರ್ಕ್‌ವರೆಗೆ ಮೆರವಣಿಗೆ ನಡೆದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಾಷ್ಟ್ರಕವಿ ಕುವೆಂಪು ಅವರು ಬರೆದ ನಾಡಗೀತೆಯನ್ನು ತಿರುಚಿದ ರೋಹಿತ್ ಚಕ್ರತೀರ್ಥ ಎಂಬ ವ್ಯಕ್ತಿಯ ನೇತೃತ್ವದಲ್ಲಿ ಪರಿಷ್ಕರಣೆಯಾದ ಪಠ್ಯಪುಸ್ತಕಗಳನ್ನು ಮಕ್ಕಳಿಗೆ ವಿತರಿಸಬಾರದು ಎಂದು ಕನ್ನಡಿಗರು ಆಗ್ರಹಿಸಿದ್ದಾರೆ.

ಮೆರವಣಿಗೆಯುದ್ದಕ್ಕೂ ಕನ್ನಡ ಬಾವುಟಗಳು ಹಾರಾಡಿದವು. ಪಠ್ಯಪುಸ್ತಕದಲ್ಲಿ ಕೈಬಿಡಲಾಗಿರುವ ಮಹನೀಯರ ಭಾವಚಿತ್ರಗಳನ್ನು ಹಿಡಿದು ಹೋರಾಟಗಾರರು ಸಾಗಿದರು. “ನಾಡದ್ರೋಹಿ ಚಕ್ರತೀರ್ಥನಿಗೆ ಧಿಕ್ಕಾರ, ಶಿಕ್ಷಣ ಸಚಿವರಿಗೆ ಧಿಕ್ಕಾರ, ತಪ್ಪಾಗಿರುವ ಪಠ್ಯಪುಸ್ತಕಗಳನ್ನು ಮಕ್ಕಳಿಗೆ ವಿಸ್ತರಿಸುತ್ತಿರುವ ಸರ್ಕಾರಕ್ಕೆ ಧಿಕ್ಕಾರ” ಎಂದು ಕೂಗಿದರು.

“ನಾಡಿಗೆ ಪ್ರಥಮ ಜ್ಞಾನಪೀಠ ಪ್ರಶಸ್ತಿ ತಂದುಕೊಟ್ಟ ಮಹಾನ್‌ ಶೂದ್ರಕವಿ ಕುವೆಂಪು ಅವರನ್ನು ಅವಮಾನಿಸಿದವರಿಗೆ, ನಾಡಗೀತೆಯನ್ನು ತಿರುಚಿ ಬರೆದವರಿಗೆ ಧಿಕ್ಕಾರ” ಎಂದು ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದರು.

ಕನ್ನಡ ಭಾವುಟ ಹಾಗೂ ವಿವಿಧ ಪ್ಲೆಕ್ಸ್‌ಗಳನ್ನು ಹಿಡಿದ ವಿದ್ಯಾರ್ಥಿಗಳು, ಹೋರಾಟಗಾರರು, ನಾಗರಿಕರು ತಮ್ಮ ಅಸ್ಮಿತೆಯನ್ನು ಪ್ರದರ್ಶಿಸಿದರು.

ಮೆರವಣಿಗೆಯಲ್ಲಿ ಸಾಗುತ್ತಾ ‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಉರಿಲಿಂಗ ಪೆದ್ದಿಮಠದ ಜ್ಞಾನಪ್ರಕಾಶ ಸ್ವಾಮೀಜಿ, “ಚಕ್ರತೀರ್ಥನನ್ನು ಬಂಧಿಸಲು ಇಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಯಾಗಿಲ್ಲ. ಪ್ರಜಾಪ್ರಭುತ್ವ ಉಳ್ಳವರ ಕೈಗೆ ಸಿಕ್ಕಿಹಾಕಿಕೊಂಡಿದೆ” ಎಂದು ವಿವಾದಿಸಿದರು.

“ಶಾಸಕಾಂಗ, ಕಾರ್ಯಾಂಗ ಹಾಗೂ ನ್ಯಾಯಾಂಗ ನಿಷ್ಕ್ರಿಯವಾಗಿವೆ. ಸಂಸ್ಕೃತಿ ಬಗ್ಗೆ ಅವರ ಬಳಿ ಪಾಠ ಕೇಳುವ ಅವಶ್ಯಕತೆ ಇಲ್ಲ. ಸಂಸ್ಕೃತಿಯನ್ನು ಕೊಟ್ಟವರು ನಾವು. ಈ ದೇಶದ ಸಂಸ್ಕೃತಿಗೆ ಮೂಲಪುರುಷರು ನಾವು. ಅವರು ಹೊರಗಡೆಯಿಂದ ಬಂದವವರು. ಹೀಗಾಗಿ ಹೊರಗಡೆ ಮಾತನ್ನೇ ಆಡುತ್ತಾರೆ. ರೋಹಿತ್ ಚಕ್ರತೀರ್ಥನ ಬಂಧನವನ್ನು ಮಾಡಿಸದೆ ಬಿಡುವುದಿಲ್ಲ” ಎಂದರು.

ಕರ್ನಾಟಕ ರಾಜ್ಯ ಸಂಶೋಧಕರ ಸಂಘದ ರಾಜ್ಯಾಧ್ಯಕ್ಷರಾದ ಎಸ್.ಮರಿದೇವಯ್ಯ ಮಾತನಾಡಿ, “ರಾಜ್ಯದ ವಿವಿಧ ಭಾಗಗಳಿಂದ ಬಂದ ಜನರು ಇಲ್ಲಿ ಸೇರಿದ್ದೇವೆ. ರೋಹಿತ್ ಚಕ್ರತೀರ್ಥ ಎನ್ನುವ ವ್ಯಕ್ತಿ ಮಾಡಿರುವ ಪಠ್ಯ ಪರಿಷ್ಕರಣೆಯನ್ನು ಸರ್ಕಾರ ಕೂಡಲೇ ರದ್ದುಪಡಿಸಬೇಕು. ಇಲ್ಲವಾದರೆ ಮುಂದೆ ನಡೆಯುವ ಜಿಪಂ, ತಾಪಂ, ಎಂಎಲ್‌ಎ, ಎಂಪಿ ಚುನಾವಣೆಗಳಲ್ಲಿ ತಕ್ಕ ಪಾಠ ಕಲಿಸುತ್ತೇವೆ. ಕೂಡಲೇ ಚಕ್ರತೀರ್ಥನನ್ನು ಬಂಧಿಸಬೇಕು. ಮುಂದಿನ ದಿನಗಳಲ್ಲಿ ವಿಧಾನಸೌಧ ಮುತ್ತಿಗೆ ಹಾಕುತ್ತೇವೆ” ಎಂದು ಎಚ್ಚರಿಸಿದರು.

ಇದನ್ನೂ ಓದಿರಿ: ಮಾಜಿ ಸಚಿವ ಎಂ.ರಘುಪತಿ ನಿಧನ; ವರ್ಣ ರಂಜಿತ ಬದುಕಿಗೆ ತೆರೆ

ಅಲೆಮಾರಿ ಬುಡಕಟ್ಟು ಮಹಾಸಭಾದ ಹೋರಾಟಗಾರ ಮಂಜುನಾಥ್ ಮಾತನಾಡಿ, “ಜಗದ ಕವಿ, ರಾಷ್ಟ್ರಕವಿ ಕುವೆಂಪು ಅವರಿಗೆ ಆಗಿರುವ ಅನ್ಯಾಯವನ್ನು ಸರಿದೂಗಿಸಬೇಕು. ಹೊಸ ಪಠ್ಯಪುಸ್ತಕವು ಇಷ್ಟೊಂದು ಸಮಸ್ಯೆಗಳಿಂದ ಕೂಡಿರುವುದರಿಂದ ಪಠ್ಯ ಪರಿಷ್ಕರಣೆ ಅಗತ್ಯವಿಲ್ಲ. ಹಳೆಯ ಪಠ್ಯಪರಿಷ್ಕರಣೆಯನ್ನೇ ಮುಂದುವರಿಸಿ, ಮಕ್ಕಳಿಗೆ ಸತ್ಯವಾದ ಪಾಠಗಳನ್ನು ಕಲಿಸಬೇಕಾಗಿ ಕಳಕಳಿಯ ಮನವಿ” ಎಂದರು.

ಕರ್ನಾಟಕ ಭೀಮ ಸೇನೆ, ರಾಜ್ಯ ಒಕ್ಕಗಲಿಗರ ಸಂಘ, ಸಿಐಟಿಯು, ದಲಿತ ಹಕ್ಕುಗಳ ಸಮಿತಿ, ಅಲೆಮಾರಿ ಬುಡಕಟ್ಟು ಮಹಾಸಭಾ, ಕೆಆರ್‌ಎಸ್‌ ಪಕ್ಷ, ದಲಿತ ಸಂಘರ್ಷ ಸಮಿತಿ, ಭೀಮ್‌ ಆರ್ಮಿ, ಕಾಂಗ್ರೆಸ್ ಪಕ್ಷ, ಕರ್ನಾಟಕ ರಕ್ಷಣಾ ವೇದಿಕೆ ಸೇರಿದಂತೆ ಮೊದಲಾದ ಸಂಘಟನೆಗಳು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದವು.

ರಾಜಕೀಯ ನಾಯಕರಾದ ರಾಮಲಿಂಗ ರೆಡ್ಡಿ, ಡಿ.ಕೆ.ಶಿವಕುಮಾರ್‌, ಸಿ.ಎಂ. ಇಬ್ರಾಹಿಂ, ಮಖ್ಯಮಂತ್ರಿ ಚಂದ್ರು, ಅಕ್ಕೈ ಪದ್ಮಶಾಲಿ, ಶಾಸಕ ಕೃಷ್ಣಪ್ಪ, ಸಾಹಿತಿ ಬರಗೂರು ರಾಮಚಂದ್ರಪ್ಪ,  ಶಿವರಾಮೇಗೌಡ, ಪ್ರವೀಣ್‌ ಶೆಟ್ಟಿ, ಸಾ.ರಾ. ಗೋವಿಂದ್‌, ಸಂಗೀತ ನಿರ್ದೇಶಕ ಹಂಸಲೇಖ, ಜಸ್ಟೀಸ್ ನಾಗಮೋಹನ ದಾಸ್‌ ನಾಗಮೋಹನ್‌ ದಾಸ್‌, ಚಿಂತಕ ಎಸ್‌.ಜಿ.ಸಿದ್ದರಾಮಯ್ಯ ಸೇರಿದಂತೆ ಹಲವಾರು ಮುಖಂಡರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...