Homeಕರ್ನಾಟಕಮೊಳಗಿದ ಕನ್ನಡ ಕಹಳೆ: ಪಠ್ಯ ಪುಸ್ತಕ ಕೇಸರೀಕರಣ ವಿರುದ್ಧ ಬೃಹತ್ ಪ್ರತಿಭಟನೆ

ಮೊಳಗಿದ ಕನ್ನಡ ಕಹಳೆ: ಪಠ್ಯ ಪುಸ್ತಕ ಕೇಸರೀಕರಣ ವಿರುದ್ಧ ಬೃಹತ್ ಪ್ರತಿಭಟನೆ

ವಿಶ್ವಮಾನವ, ಕ್ರಾಂತಿಕಾರಿ, ಮಹಾಕವಿ ಕುವೆಂಪು ಹೋರಾಟ ಸಮಿತಿ ಆಯೋಜಿಸಿರುವ ಪ್ರತಿಭಟನೆಗೆ ಭಾರೀ ಜನಸ್ಪಂದನೆ

- Advertisement -
- Advertisement -

ಬಲಪಂಥೀಯ ಬರಹಗಾರ ರೋಹಿತ್‌ ಚಕ್ರತೀರ್ಥ ಅಧ್ಯಕ್ಷತೆಯಲ್ಲಿ ನಡೆದ ಪಠ್ಯಪುಸ್ತಕದಲ್ಲಿ ಆಗಿರುವ ಸರಣಿ ತಪ್ಪುಗಳನ್ನು ವಿರೋಧಿಸಿ ಜನಾಕ್ರೋಶ ಭುಗಿಲೆದ್ದಿದೆ. ಬೆಂಗಳೂರಿನಲ್ಲಿ ಸೇರಿದ ಸಾವಿರಾರು ಜನರು ಸರ್ಕಾರದ ವಿರುದ್ಧ ರಣಕಹಳೆ ಮೊಳಗಿಸಿದ್ದಾರೆ.

ವಿಶ್ವಮಾನವ, ಕ್ರಾಂತಿಕಾರಿ, ಮಹಾಕವಿ ಕುವೆಂಪು ಹೋರಾಟ ಸಮಿತಿ ಆಯೋಜಿಸಿರುವ ಬೃಹತ್‌ ಪ್ರತಿಭಟನೆಗೆ ರಾಜ್ಯದ ಮೂಲೆಮೂಲೆಯಿಂದ ಸಾವಿರಾರು ಜನರು ಆಗಮಿಸಿದ್ದು, ಬೆಂಗಳೂರಿನ ಕೇಂದ್ರೀಯ ರೈಲು ನಿಲ್ದಾಣದಿಂದ ಪ್ರೀಂಡಂ ಪಾರ್ಕ್‌ವರೆಗೆ ಮೆರವಣಿಗೆ ನಡೆದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಾಷ್ಟ್ರಕವಿ ಕುವೆಂಪು ಅವರು ಬರೆದ ನಾಡಗೀತೆಯನ್ನು ತಿರುಚಿದ ರೋಹಿತ್ ಚಕ್ರತೀರ್ಥ ಎಂಬ ವ್ಯಕ್ತಿಯ ನೇತೃತ್ವದಲ್ಲಿ ಪರಿಷ್ಕರಣೆಯಾದ ಪಠ್ಯಪುಸ್ತಕಗಳನ್ನು ಮಕ್ಕಳಿಗೆ ವಿತರಿಸಬಾರದು ಎಂದು ಕನ್ನಡಿಗರು ಆಗ್ರಹಿಸಿದ್ದಾರೆ.

ಮೆರವಣಿಗೆಯುದ್ದಕ್ಕೂ ಕನ್ನಡ ಬಾವುಟಗಳು ಹಾರಾಡಿದವು. ಪಠ್ಯಪುಸ್ತಕದಲ್ಲಿ ಕೈಬಿಡಲಾಗಿರುವ ಮಹನೀಯರ ಭಾವಚಿತ್ರಗಳನ್ನು ಹಿಡಿದು ಹೋರಾಟಗಾರರು ಸಾಗಿದರು. “ನಾಡದ್ರೋಹಿ ಚಕ್ರತೀರ್ಥನಿಗೆ ಧಿಕ್ಕಾರ, ಶಿಕ್ಷಣ ಸಚಿವರಿಗೆ ಧಿಕ್ಕಾರ, ತಪ್ಪಾಗಿರುವ ಪಠ್ಯಪುಸ್ತಕಗಳನ್ನು ಮಕ್ಕಳಿಗೆ ವಿಸ್ತರಿಸುತ್ತಿರುವ ಸರ್ಕಾರಕ್ಕೆ ಧಿಕ್ಕಾರ” ಎಂದು ಕೂಗಿದರು.

“ನಾಡಿಗೆ ಪ್ರಥಮ ಜ್ಞಾನಪೀಠ ಪ್ರಶಸ್ತಿ ತಂದುಕೊಟ್ಟ ಮಹಾನ್‌ ಶೂದ್ರಕವಿ ಕುವೆಂಪು ಅವರನ್ನು ಅವಮಾನಿಸಿದವರಿಗೆ, ನಾಡಗೀತೆಯನ್ನು ತಿರುಚಿ ಬರೆದವರಿಗೆ ಧಿಕ್ಕಾರ” ಎಂದು ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದರು.

ಕನ್ನಡ ಭಾವುಟ ಹಾಗೂ ವಿವಿಧ ಪ್ಲೆಕ್ಸ್‌ಗಳನ್ನು ಹಿಡಿದ ವಿದ್ಯಾರ್ಥಿಗಳು, ಹೋರಾಟಗಾರರು, ನಾಗರಿಕರು ತಮ್ಮ ಅಸ್ಮಿತೆಯನ್ನು ಪ್ರದರ್ಶಿಸಿದರು.

ಮೆರವಣಿಗೆಯಲ್ಲಿ ಸಾಗುತ್ತಾ ‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಉರಿಲಿಂಗ ಪೆದ್ದಿಮಠದ ಜ್ಞಾನಪ್ರಕಾಶ ಸ್ವಾಮೀಜಿ, “ಚಕ್ರತೀರ್ಥನನ್ನು ಬಂಧಿಸಲು ಇಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಯಾಗಿಲ್ಲ. ಪ್ರಜಾಪ್ರಭುತ್ವ ಉಳ್ಳವರ ಕೈಗೆ ಸಿಕ್ಕಿಹಾಕಿಕೊಂಡಿದೆ” ಎಂದು ವಿವಾದಿಸಿದರು.

“ಶಾಸಕಾಂಗ, ಕಾರ್ಯಾಂಗ ಹಾಗೂ ನ್ಯಾಯಾಂಗ ನಿಷ್ಕ್ರಿಯವಾಗಿವೆ. ಸಂಸ್ಕೃತಿ ಬಗ್ಗೆ ಅವರ ಬಳಿ ಪಾಠ ಕೇಳುವ ಅವಶ್ಯಕತೆ ಇಲ್ಲ. ಸಂಸ್ಕೃತಿಯನ್ನು ಕೊಟ್ಟವರು ನಾವು. ಈ ದೇಶದ ಸಂಸ್ಕೃತಿಗೆ ಮೂಲಪುರುಷರು ನಾವು. ಅವರು ಹೊರಗಡೆಯಿಂದ ಬಂದವವರು. ಹೀಗಾಗಿ ಹೊರಗಡೆ ಮಾತನ್ನೇ ಆಡುತ್ತಾರೆ. ರೋಹಿತ್ ಚಕ್ರತೀರ್ಥನ ಬಂಧನವನ್ನು ಮಾಡಿಸದೆ ಬಿಡುವುದಿಲ್ಲ” ಎಂದರು.

ಕರ್ನಾಟಕ ರಾಜ್ಯ ಸಂಶೋಧಕರ ಸಂಘದ ರಾಜ್ಯಾಧ್ಯಕ್ಷರಾದ ಎಸ್.ಮರಿದೇವಯ್ಯ ಮಾತನಾಡಿ, “ರಾಜ್ಯದ ವಿವಿಧ ಭಾಗಗಳಿಂದ ಬಂದ ಜನರು ಇಲ್ಲಿ ಸೇರಿದ್ದೇವೆ. ರೋಹಿತ್ ಚಕ್ರತೀರ್ಥ ಎನ್ನುವ ವ್ಯಕ್ತಿ ಮಾಡಿರುವ ಪಠ್ಯ ಪರಿಷ್ಕರಣೆಯನ್ನು ಸರ್ಕಾರ ಕೂಡಲೇ ರದ್ದುಪಡಿಸಬೇಕು. ಇಲ್ಲವಾದರೆ ಮುಂದೆ ನಡೆಯುವ ಜಿಪಂ, ತಾಪಂ, ಎಂಎಲ್‌ಎ, ಎಂಪಿ ಚುನಾವಣೆಗಳಲ್ಲಿ ತಕ್ಕ ಪಾಠ ಕಲಿಸುತ್ತೇವೆ. ಕೂಡಲೇ ಚಕ್ರತೀರ್ಥನನ್ನು ಬಂಧಿಸಬೇಕು. ಮುಂದಿನ ದಿನಗಳಲ್ಲಿ ವಿಧಾನಸೌಧ ಮುತ್ತಿಗೆ ಹಾಕುತ್ತೇವೆ” ಎಂದು ಎಚ್ಚರಿಸಿದರು.

ಇದನ್ನೂ ಓದಿರಿ: ಮಾಜಿ ಸಚಿವ ಎಂ.ರಘುಪತಿ ನಿಧನ; ವರ್ಣ ರಂಜಿತ ಬದುಕಿಗೆ ತೆರೆ

ಅಲೆಮಾರಿ ಬುಡಕಟ್ಟು ಮಹಾಸಭಾದ ಹೋರಾಟಗಾರ ಮಂಜುನಾಥ್ ಮಾತನಾಡಿ, “ಜಗದ ಕವಿ, ರಾಷ್ಟ್ರಕವಿ ಕುವೆಂಪು ಅವರಿಗೆ ಆಗಿರುವ ಅನ್ಯಾಯವನ್ನು ಸರಿದೂಗಿಸಬೇಕು. ಹೊಸ ಪಠ್ಯಪುಸ್ತಕವು ಇಷ್ಟೊಂದು ಸಮಸ್ಯೆಗಳಿಂದ ಕೂಡಿರುವುದರಿಂದ ಪಠ್ಯ ಪರಿಷ್ಕರಣೆ ಅಗತ್ಯವಿಲ್ಲ. ಹಳೆಯ ಪಠ್ಯಪರಿಷ್ಕರಣೆಯನ್ನೇ ಮುಂದುವರಿಸಿ, ಮಕ್ಕಳಿಗೆ ಸತ್ಯವಾದ ಪಾಠಗಳನ್ನು ಕಲಿಸಬೇಕಾಗಿ ಕಳಕಳಿಯ ಮನವಿ” ಎಂದರು.

ಕರ್ನಾಟಕ ಭೀಮ ಸೇನೆ, ರಾಜ್ಯ ಒಕ್ಕಗಲಿಗರ ಸಂಘ, ಸಿಐಟಿಯು, ದಲಿತ ಹಕ್ಕುಗಳ ಸಮಿತಿ, ಅಲೆಮಾರಿ ಬುಡಕಟ್ಟು ಮಹಾಸಭಾ, ಕೆಆರ್‌ಎಸ್‌ ಪಕ್ಷ, ದಲಿತ ಸಂಘರ್ಷ ಸಮಿತಿ, ಭೀಮ್‌ ಆರ್ಮಿ, ಕಾಂಗ್ರೆಸ್ ಪಕ್ಷ, ಕರ್ನಾಟಕ ರಕ್ಷಣಾ ವೇದಿಕೆ ಸೇರಿದಂತೆ ಮೊದಲಾದ ಸಂಘಟನೆಗಳು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದವು.

ರಾಜಕೀಯ ನಾಯಕರಾದ ರಾಮಲಿಂಗ ರೆಡ್ಡಿ, ಡಿ.ಕೆ.ಶಿವಕುಮಾರ್‌, ಸಿ.ಎಂ. ಇಬ್ರಾಹಿಂ, ಮಖ್ಯಮಂತ್ರಿ ಚಂದ್ರು, ಅಕ್ಕೈ ಪದ್ಮಶಾಲಿ, ಶಾಸಕ ಕೃಷ್ಣಪ್ಪ, ಸಾಹಿತಿ ಬರಗೂರು ರಾಮಚಂದ್ರಪ್ಪ,  ಶಿವರಾಮೇಗೌಡ, ಪ್ರವೀಣ್‌ ಶೆಟ್ಟಿ, ಸಾ.ರಾ. ಗೋವಿಂದ್‌, ಸಂಗೀತ ನಿರ್ದೇಶಕ ಹಂಸಲೇಖ, ಜಸ್ಟೀಸ್ ನಾಗಮೋಹನ ದಾಸ್‌ ನಾಗಮೋಹನ್‌ ದಾಸ್‌, ಚಿಂತಕ ಎಸ್‌.ಜಿ.ಸಿದ್ದರಾಮಯ್ಯ ಸೇರಿದಂತೆ ಹಲವಾರು ಮುಖಂಡರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...