Homeಕರ್ನಾಟಕಮೊಳಗಿದ ಕನ್ನಡ ಕಹಳೆ: ಪಠ್ಯ ಪುಸ್ತಕ ಕೇಸರೀಕರಣ ವಿರುದ್ಧ ಬೃಹತ್ ಪ್ರತಿಭಟನೆ

ಮೊಳಗಿದ ಕನ್ನಡ ಕಹಳೆ: ಪಠ್ಯ ಪುಸ್ತಕ ಕೇಸರೀಕರಣ ವಿರುದ್ಧ ಬೃಹತ್ ಪ್ರತಿಭಟನೆ

ವಿಶ್ವಮಾನವ, ಕ್ರಾಂತಿಕಾರಿ, ಮಹಾಕವಿ ಕುವೆಂಪು ಹೋರಾಟ ಸಮಿತಿ ಆಯೋಜಿಸಿರುವ ಪ್ರತಿಭಟನೆಗೆ ಭಾರೀ ಜನಸ್ಪಂದನೆ

- Advertisement -
- Advertisement -

ಬಲಪಂಥೀಯ ಬರಹಗಾರ ರೋಹಿತ್‌ ಚಕ್ರತೀರ್ಥ ಅಧ್ಯಕ್ಷತೆಯಲ್ಲಿ ನಡೆದ ಪಠ್ಯಪುಸ್ತಕದಲ್ಲಿ ಆಗಿರುವ ಸರಣಿ ತಪ್ಪುಗಳನ್ನು ವಿರೋಧಿಸಿ ಜನಾಕ್ರೋಶ ಭುಗಿಲೆದ್ದಿದೆ. ಬೆಂಗಳೂರಿನಲ್ಲಿ ಸೇರಿದ ಸಾವಿರಾರು ಜನರು ಸರ್ಕಾರದ ವಿರುದ್ಧ ರಣಕಹಳೆ ಮೊಳಗಿಸಿದ್ದಾರೆ.

ವಿಶ್ವಮಾನವ, ಕ್ರಾಂತಿಕಾರಿ, ಮಹಾಕವಿ ಕುವೆಂಪು ಹೋರಾಟ ಸಮಿತಿ ಆಯೋಜಿಸಿರುವ ಬೃಹತ್‌ ಪ್ರತಿಭಟನೆಗೆ ರಾಜ್ಯದ ಮೂಲೆಮೂಲೆಯಿಂದ ಸಾವಿರಾರು ಜನರು ಆಗಮಿಸಿದ್ದು, ಬೆಂಗಳೂರಿನ ಕೇಂದ್ರೀಯ ರೈಲು ನಿಲ್ದಾಣದಿಂದ ಪ್ರೀಂಡಂ ಪಾರ್ಕ್‌ವರೆಗೆ ಮೆರವಣಿಗೆ ನಡೆದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಾಷ್ಟ್ರಕವಿ ಕುವೆಂಪು ಅವರು ಬರೆದ ನಾಡಗೀತೆಯನ್ನು ತಿರುಚಿದ ರೋಹಿತ್ ಚಕ್ರತೀರ್ಥ ಎಂಬ ವ್ಯಕ್ತಿಯ ನೇತೃತ್ವದಲ್ಲಿ ಪರಿಷ್ಕರಣೆಯಾದ ಪಠ್ಯಪುಸ್ತಕಗಳನ್ನು ಮಕ್ಕಳಿಗೆ ವಿತರಿಸಬಾರದು ಎಂದು ಕನ್ನಡಿಗರು ಆಗ್ರಹಿಸಿದ್ದಾರೆ.

ಮೆರವಣಿಗೆಯುದ್ದಕ್ಕೂ ಕನ್ನಡ ಬಾವುಟಗಳು ಹಾರಾಡಿದವು. ಪಠ್ಯಪುಸ್ತಕದಲ್ಲಿ ಕೈಬಿಡಲಾಗಿರುವ ಮಹನೀಯರ ಭಾವಚಿತ್ರಗಳನ್ನು ಹಿಡಿದು ಹೋರಾಟಗಾರರು ಸಾಗಿದರು. “ನಾಡದ್ರೋಹಿ ಚಕ್ರತೀರ್ಥನಿಗೆ ಧಿಕ್ಕಾರ, ಶಿಕ್ಷಣ ಸಚಿವರಿಗೆ ಧಿಕ್ಕಾರ, ತಪ್ಪಾಗಿರುವ ಪಠ್ಯಪುಸ್ತಕಗಳನ್ನು ಮಕ್ಕಳಿಗೆ ವಿಸ್ತರಿಸುತ್ತಿರುವ ಸರ್ಕಾರಕ್ಕೆ ಧಿಕ್ಕಾರ” ಎಂದು ಕೂಗಿದರು.

“ನಾಡಿಗೆ ಪ್ರಥಮ ಜ್ಞಾನಪೀಠ ಪ್ರಶಸ್ತಿ ತಂದುಕೊಟ್ಟ ಮಹಾನ್‌ ಶೂದ್ರಕವಿ ಕುವೆಂಪು ಅವರನ್ನು ಅವಮಾನಿಸಿದವರಿಗೆ, ನಾಡಗೀತೆಯನ್ನು ತಿರುಚಿ ಬರೆದವರಿಗೆ ಧಿಕ್ಕಾರ” ಎಂದು ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದರು.

ಕನ್ನಡ ಭಾವುಟ ಹಾಗೂ ವಿವಿಧ ಪ್ಲೆಕ್ಸ್‌ಗಳನ್ನು ಹಿಡಿದ ವಿದ್ಯಾರ್ಥಿಗಳು, ಹೋರಾಟಗಾರರು, ನಾಗರಿಕರು ತಮ್ಮ ಅಸ್ಮಿತೆಯನ್ನು ಪ್ರದರ್ಶಿಸಿದರು.

ಮೆರವಣಿಗೆಯಲ್ಲಿ ಸಾಗುತ್ತಾ ‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಉರಿಲಿಂಗ ಪೆದ್ದಿಮಠದ ಜ್ಞಾನಪ್ರಕಾಶ ಸ್ವಾಮೀಜಿ, “ಚಕ್ರತೀರ್ಥನನ್ನು ಬಂಧಿಸಲು ಇಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಯಾಗಿಲ್ಲ. ಪ್ರಜಾಪ್ರಭುತ್ವ ಉಳ್ಳವರ ಕೈಗೆ ಸಿಕ್ಕಿಹಾಕಿಕೊಂಡಿದೆ” ಎಂದು ವಿವಾದಿಸಿದರು.

“ಶಾಸಕಾಂಗ, ಕಾರ್ಯಾಂಗ ಹಾಗೂ ನ್ಯಾಯಾಂಗ ನಿಷ್ಕ್ರಿಯವಾಗಿವೆ. ಸಂಸ್ಕೃತಿ ಬಗ್ಗೆ ಅವರ ಬಳಿ ಪಾಠ ಕೇಳುವ ಅವಶ್ಯಕತೆ ಇಲ್ಲ. ಸಂಸ್ಕೃತಿಯನ್ನು ಕೊಟ್ಟವರು ನಾವು. ಈ ದೇಶದ ಸಂಸ್ಕೃತಿಗೆ ಮೂಲಪುರುಷರು ನಾವು. ಅವರು ಹೊರಗಡೆಯಿಂದ ಬಂದವವರು. ಹೀಗಾಗಿ ಹೊರಗಡೆ ಮಾತನ್ನೇ ಆಡುತ್ತಾರೆ. ರೋಹಿತ್ ಚಕ್ರತೀರ್ಥನ ಬಂಧನವನ್ನು ಮಾಡಿಸದೆ ಬಿಡುವುದಿಲ್ಲ” ಎಂದರು.

ಕರ್ನಾಟಕ ರಾಜ್ಯ ಸಂಶೋಧಕರ ಸಂಘದ ರಾಜ್ಯಾಧ್ಯಕ್ಷರಾದ ಎಸ್.ಮರಿದೇವಯ್ಯ ಮಾತನಾಡಿ, “ರಾಜ್ಯದ ವಿವಿಧ ಭಾಗಗಳಿಂದ ಬಂದ ಜನರು ಇಲ್ಲಿ ಸೇರಿದ್ದೇವೆ. ರೋಹಿತ್ ಚಕ್ರತೀರ್ಥ ಎನ್ನುವ ವ್ಯಕ್ತಿ ಮಾಡಿರುವ ಪಠ್ಯ ಪರಿಷ್ಕರಣೆಯನ್ನು ಸರ್ಕಾರ ಕೂಡಲೇ ರದ್ದುಪಡಿಸಬೇಕು. ಇಲ್ಲವಾದರೆ ಮುಂದೆ ನಡೆಯುವ ಜಿಪಂ, ತಾಪಂ, ಎಂಎಲ್‌ಎ, ಎಂಪಿ ಚುನಾವಣೆಗಳಲ್ಲಿ ತಕ್ಕ ಪಾಠ ಕಲಿಸುತ್ತೇವೆ. ಕೂಡಲೇ ಚಕ್ರತೀರ್ಥನನ್ನು ಬಂಧಿಸಬೇಕು. ಮುಂದಿನ ದಿನಗಳಲ್ಲಿ ವಿಧಾನಸೌಧ ಮುತ್ತಿಗೆ ಹಾಕುತ್ತೇವೆ” ಎಂದು ಎಚ್ಚರಿಸಿದರು.

ಇದನ್ನೂ ಓದಿರಿ: ಮಾಜಿ ಸಚಿವ ಎಂ.ರಘುಪತಿ ನಿಧನ; ವರ್ಣ ರಂಜಿತ ಬದುಕಿಗೆ ತೆರೆ

ಅಲೆಮಾರಿ ಬುಡಕಟ್ಟು ಮಹಾಸಭಾದ ಹೋರಾಟಗಾರ ಮಂಜುನಾಥ್ ಮಾತನಾಡಿ, “ಜಗದ ಕವಿ, ರಾಷ್ಟ್ರಕವಿ ಕುವೆಂಪು ಅವರಿಗೆ ಆಗಿರುವ ಅನ್ಯಾಯವನ್ನು ಸರಿದೂಗಿಸಬೇಕು. ಹೊಸ ಪಠ್ಯಪುಸ್ತಕವು ಇಷ್ಟೊಂದು ಸಮಸ್ಯೆಗಳಿಂದ ಕೂಡಿರುವುದರಿಂದ ಪಠ್ಯ ಪರಿಷ್ಕರಣೆ ಅಗತ್ಯವಿಲ್ಲ. ಹಳೆಯ ಪಠ್ಯಪರಿಷ್ಕರಣೆಯನ್ನೇ ಮುಂದುವರಿಸಿ, ಮಕ್ಕಳಿಗೆ ಸತ್ಯವಾದ ಪಾಠಗಳನ್ನು ಕಲಿಸಬೇಕಾಗಿ ಕಳಕಳಿಯ ಮನವಿ” ಎಂದರು.

ಕರ್ನಾಟಕ ಭೀಮ ಸೇನೆ, ರಾಜ್ಯ ಒಕ್ಕಗಲಿಗರ ಸಂಘ, ಸಿಐಟಿಯು, ದಲಿತ ಹಕ್ಕುಗಳ ಸಮಿತಿ, ಅಲೆಮಾರಿ ಬುಡಕಟ್ಟು ಮಹಾಸಭಾ, ಕೆಆರ್‌ಎಸ್‌ ಪಕ್ಷ, ದಲಿತ ಸಂಘರ್ಷ ಸಮಿತಿ, ಭೀಮ್‌ ಆರ್ಮಿ, ಕಾಂಗ್ರೆಸ್ ಪಕ್ಷ, ಕರ್ನಾಟಕ ರಕ್ಷಣಾ ವೇದಿಕೆ ಸೇರಿದಂತೆ ಮೊದಲಾದ ಸಂಘಟನೆಗಳು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದವು.

ರಾಜಕೀಯ ನಾಯಕರಾದ ರಾಮಲಿಂಗ ರೆಡ್ಡಿ, ಡಿ.ಕೆ.ಶಿವಕುಮಾರ್‌, ಸಿ.ಎಂ. ಇಬ್ರಾಹಿಂ, ಮಖ್ಯಮಂತ್ರಿ ಚಂದ್ರು, ಅಕ್ಕೈ ಪದ್ಮಶಾಲಿ, ಶಾಸಕ ಕೃಷ್ಣಪ್ಪ, ಸಾಹಿತಿ ಬರಗೂರು ರಾಮಚಂದ್ರಪ್ಪ,  ಶಿವರಾಮೇಗೌಡ, ಪ್ರವೀಣ್‌ ಶೆಟ್ಟಿ, ಸಾ.ರಾ. ಗೋವಿಂದ್‌, ಸಂಗೀತ ನಿರ್ದೇಶಕ ಹಂಸಲೇಖ, ಜಸ್ಟೀಸ್ ನಾಗಮೋಹನ ದಾಸ್‌ ನಾಗಮೋಹನ್‌ ದಾಸ್‌, ಚಿಂತಕ ಎಸ್‌.ಜಿ.ಸಿದ್ದರಾಮಯ್ಯ ಸೇರಿದಂತೆ ಹಲವಾರು ಮುಖಂಡರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...