Homeಕರ್ನಾಟಕಮೊಳಗಿದ ಕನ್ನಡ ಕಹಳೆ: ಪಠ್ಯ ಪುಸ್ತಕ ಕೇಸರೀಕರಣ ವಿರುದ್ಧ ಬೃಹತ್ ಪ್ರತಿಭಟನೆ

ಮೊಳಗಿದ ಕನ್ನಡ ಕಹಳೆ: ಪಠ್ಯ ಪುಸ್ತಕ ಕೇಸರೀಕರಣ ವಿರುದ್ಧ ಬೃಹತ್ ಪ್ರತಿಭಟನೆ

ವಿಶ್ವಮಾನವ, ಕ್ರಾಂತಿಕಾರಿ, ಮಹಾಕವಿ ಕುವೆಂಪು ಹೋರಾಟ ಸಮಿತಿ ಆಯೋಜಿಸಿರುವ ಪ್ರತಿಭಟನೆಗೆ ಭಾರೀ ಜನಸ್ಪಂದನೆ

- Advertisement -
- Advertisement -

ಬಲಪಂಥೀಯ ಬರಹಗಾರ ರೋಹಿತ್‌ ಚಕ್ರತೀರ್ಥ ಅಧ್ಯಕ್ಷತೆಯಲ್ಲಿ ನಡೆದ ಪಠ್ಯಪುಸ್ತಕದಲ್ಲಿ ಆಗಿರುವ ಸರಣಿ ತಪ್ಪುಗಳನ್ನು ವಿರೋಧಿಸಿ ಜನಾಕ್ರೋಶ ಭುಗಿಲೆದ್ದಿದೆ. ಬೆಂಗಳೂರಿನಲ್ಲಿ ಸೇರಿದ ಸಾವಿರಾರು ಜನರು ಸರ್ಕಾರದ ವಿರುದ್ಧ ರಣಕಹಳೆ ಮೊಳಗಿಸಿದ್ದಾರೆ.

ವಿಶ್ವಮಾನವ, ಕ್ರಾಂತಿಕಾರಿ, ಮಹಾಕವಿ ಕುವೆಂಪು ಹೋರಾಟ ಸಮಿತಿ ಆಯೋಜಿಸಿರುವ ಬೃಹತ್‌ ಪ್ರತಿಭಟನೆಗೆ ರಾಜ್ಯದ ಮೂಲೆಮೂಲೆಯಿಂದ ಸಾವಿರಾರು ಜನರು ಆಗಮಿಸಿದ್ದು, ಬೆಂಗಳೂರಿನ ಕೇಂದ್ರೀಯ ರೈಲು ನಿಲ್ದಾಣದಿಂದ ಪ್ರೀಂಡಂ ಪಾರ್ಕ್‌ವರೆಗೆ ಮೆರವಣಿಗೆ ನಡೆದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಾಷ್ಟ್ರಕವಿ ಕುವೆಂಪು ಅವರು ಬರೆದ ನಾಡಗೀತೆಯನ್ನು ತಿರುಚಿದ ರೋಹಿತ್ ಚಕ್ರತೀರ್ಥ ಎಂಬ ವ್ಯಕ್ತಿಯ ನೇತೃತ್ವದಲ್ಲಿ ಪರಿಷ್ಕರಣೆಯಾದ ಪಠ್ಯಪುಸ್ತಕಗಳನ್ನು ಮಕ್ಕಳಿಗೆ ವಿತರಿಸಬಾರದು ಎಂದು ಕನ್ನಡಿಗರು ಆಗ್ರಹಿಸಿದ್ದಾರೆ.

ಮೆರವಣಿಗೆಯುದ್ದಕ್ಕೂ ಕನ್ನಡ ಬಾವುಟಗಳು ಹಾರಾಡಿದವು. ಪಠ್ಯಪುಸ್ತಕದಲ್ಲಿ ಕೈಬಿಡಲಾಗಿರುವ ಮಹನೀಯರ ಭಾವಚಿತ್ರಗಳನ್ನು ಹಿಡಿದು ಹೋರಾಟಗಾರರು ಸಾಗಿದರು. “ನಾಡದ್ರೋಹಿ ಚಕ್ರತೀರ್ಥನಿಗೆ ಧಿಕ್ಕಾರ, ಶಿಕ್ಷಣ ಸಚಿವರಿಗೆ ಧಿಕ್ಕಾರ, ತಪ್ಪಾಗಿರುವ ಪಠ್ಯಪುಸ್ತಕಗಳನ್ನು ಮಕ್ಕಳಿಗೆ ವಿಸ್ತರಿಸುತ್ತಿರುವ ಸರ್ಕಾರಕ್ಕೆ ಧಿಕ್ಕಾರ” ಎಂದು ಕೂಗಿದರು.

“ನಾಡಿಗೆ ಪ್ರಥಮ ಜ್ಞಾನಪೀಠ ಪ್ರಶಸ್ತಿ ತಂದುಕೊಟ್ಟ ಮಹಾನ್‌ ಶೂದ್ರಕವಿ ಕುವೆಂಪು ಅವರನ್ನು ಅವಮಾನಿಸಿದವರಿಗೆ, ನಾಡಗೀತೆಯನ್ನು ತಿರುಚಿ ಬರೆದವರಿಗೆ ಧಿಕ್ಕಾರ” ಎಂದು ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದರು.

ಕನ್ನಡ ಭಾವುಟ ಹಾಗೂ ವಿವಿಧ ಪ್ಲೆಕ್ಸ್‌ಗಳನ್ನು ಹಿಡಿದ ವಿದ್ಯಾರ್ಥಿಗಳು, ಹೋರಾಟಗಾರರು, ನಾಗರಿಕರು ತಮ್ಮ ಅಸ್ಮಿತೆಯನ್ನು ಪ್ರದರ್ಶಿಸಿದರು.

ಮೆರವಣಿಗೆಯಲ್ಲಿ ಸಾಗುತ್ತಾ ‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಉರಿಲಿಂಗ ಪೆದ್ದಿಮಠದ ಜ್ಞಾನಪ್ರಕಾಶ ಸ್ವಾಮೀಜಿ, “ಚಕ್ರತೀರ್ಥನನ್ನು ಬಂಧಿಸಲು ಇಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಯಾಗಿಲ್ಲ. ಪ್ರಜಾಪ್ರಭುತ್ವ ಉಳ್ಳವರ ಕೈಗೆ ಸಿಕ್ಕಿಹಾಕಿಕೊಂಡಿದೆ” ಎಂದು ವಿವಾದಿಸಿದರು.

“ಶಾಸಕಾಂಗ, ಕಾರ್ಯಾಂಗ ಹಾಗೂ ನ್ಯಾಯಾಂಗ ನಿಷ್ಕ್ರಿಯವಾಗಿವೆ. ಸಂಸ್ಕೃತಿ ಬಗ್ಗೆ ಅವರ ಬಳಿ ಪಾಠ ಕೇಳುವ ಅವಶ್ಯಕತೆ ಇಲ್ಲ. ಸಂಸ್ಕೃತಿಯನ್ನು ಕೊಟ್ಟವರು ನಾವು. ಈ ದೇಶದ ಸಂಸ್ಕೃತಿಗೆ ಮೂಲಪುರುಷರು ನಾವು. ಅವರು ಹೊರಗಡೆಯಿಂದ ಬಂದವವರು. ಹೀಗಾಗಿ ಹೊರಗಡೆ ಮಾತನ್ನೇ ಆಡುತ್ತಾರೆ. ರೋಹಿತ್ ಚಕ್ರತೀರ್ಥನ ಬಂಧನವನ್ನು ಮಾಡಿಸದೆ ಬಿಡುವುದಿಲ್ಲ” ಎಂದರು.

ಕರ್ನಾಟಕ ರಾಜ್ಯ ಸಂಶೋಧಕರ ಸಂಘದ ರಾಜ್ಯಾಧ್ಯಕ್ಷರಾದ ಎಸ್.ಮರಿದೇವಯ್ಯ ಮಾತನಾಡಿ, “ರಾಜ್ಯದ ವಿವಿಧ ಭಾಗಗಳಿಂದ ಬಂದ ಜನರು ಇಲ್ಲಿ ಸೇರಿದ್ದೇವೆ. ರೋಹಿತ್ ಚಕ್ರತೀರ್ಥ ಎನ್ನುವ ವ್ಯಕ್ತಿ ಮಾಡಿರುವ ಪಠ್ಯ ಪರಿಷ್ಕರಣೆಯನ್ನು ಸರ್ಕಾರ ಕೂಡಲೇ ರದ್ದುಪಡಿಸಬೇಕು. ಇಲ್ಲವಾದರೆ ಮುಂದೆ ನಡೆಯುವ ಜಿಪಂ, ತಾಪಂ, ಎಂಎಲ್‌ಎ, ಎಂಪಿ ಚುನಾವಣೆಗಳಲ್ಲಿ ತಕ್ಕ ಪಾಠ ಕಲಿಸುತ್ತೇವೆ. ಕೂಡಲೇ ಚಕ್ರತೀರ್ಥನನ್ನು ಬಂಧಿಸಬೇಕು. ಮುಂದಿನ ದಿನಗಳಲ್ಲಿ ವಿಧಾನಸೌಧ ಮುತ್ತಿಗೆ ಹಾಕುತ್ತೇವೆ” ಎಂದು ಎಚ್ಚರಿಸಿದರು.

ಇದನ್ನೂ ಓದಿರಿ: ಮಾಜಿ ಸಚಿವ ಎಂ.ರಘುಪತಿ ನಿಧನ; ವರ್ಣ ರಂಜಿತ ಬದುಕಿಗೆ ತೆರೆ

ಅಲೆಮಾರಿ ಬುಡಕಟ್ಟು ಮಹಾಸಭಾದ ಹೋರಾಟಗಾರ ಮಂಜುನಾಥ್ ಮಾತನಾಡಿ, “ಜಗದ ಕವಿ, ರಾಷ್ಟ್ರಕವಿ ಕುವೆಂಪು ಅವರಿಗೆ ಆಗಿರುವ ಅನ್ಯಾಯವನ್ನು ಸರಿದೂಗಿಸಬೇಕು. ಹೊಸ ಪಠ್ಯಪುಸ್ತಕವು ಇಷ್ಟೊಂದು ಸಮಸ್ಯೆಗಳಿಂದ ಕೂಡಿರುವುದರಿಂದ ಪಠ್ಯ ಪರಿಷ್ಕರಣೆ ಅಗತ್ಯವಿಲ್ಲ. ಹಳೆಯ ಪಠ್ಯಪರಿಷ್ಕರಣೆಯನ್ನೇ ಮುಂದುವರಿಸಿ, ಮಕ್ಕಳಿಗೆ ಸತ್ಯವಾದ ಪಾಠಗಳನ್ನು ಕಲಿಸಬೇಕಾಗಿ ಕಳಕಳಿಯ ಮನವಿ” ಎಂದರು.

ಕರ್ನಾಟಕ ಭೀಮ ಸೇನೆ, ರಾಜ್ಯ ಒಕ್ಕಗಲಿಗರ ಸಂಘ, ಸಿಐಟಿಯು, ದಲಿತ ಹಕ್ಕುಗಳ ಸಮಿತಿ, ಅಲೆಮಾರಿ ಬುಡಕಟ್ಟು ಮಹಾಸಭಾ, ಕೆಆರ್‌ಎಸ್‌ ಪಕ್ಷ, ದಲಿತ ಸಂಘರ್ಷ ಸಮಿತಿ, ಭೀಮ್‌ ಆರ್ಮಿ, ಕಾಂಗ್ರೆಸ್ ಪಕ್ಷ, ಕರ್ನಾಟಕ ರಕ್ಷಣಾ ವೇದಿಕೆ ಸೇರಿದಂತೆ ಮೊದಲಾದ ಸಂಘಟನೆಗಳು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದವು.

ರಾಜಕೀಯ ನಾಯಕರಾದ ರಾಮಲಿಂಗ ರೆಡ್ಡಿ, ಡಿ.ಕೆ.ಶಿವಕುಮಾರ್‌, ಸಿ.ಎಂ. ಇಬ್ರಾಹಿಂ, ಮಖ್ಯಮಂತ್ರಿ ಚಂದ್ರು, ಅಕ್ಕೈ ಪದ್ಮಶಾಲಿ, ಶಾಸಕ ಕೃಷ್ಣಪ್ಪ, ಸಾಹಿತಿ ಬರಗೂರು ರಾಮಚಂದ್ರಪ್ಪ,  ಶಿವರಾಮೇಗೌಡ, ಪ್ರವೀಣ್‌ ಶೆಟ್ಟಿ, ಸಾ.ರಾ. ಗೋವಿಂದ್‌, ಸಂಗೀತ ನಿರ್ದೇಶಕ ಹಂಸಲೇಖ, ಜಸ್ಟೀಸ್ ನಾಗಮೋಹನ ದಾಸ್‌ ನಾಗಮೋಹನ್‌ ದಾಸ್‌, ಚಿಂತಕ ಎಸ್‌.ಜಿ.ಸಿದ್ದರಾಮಯ್ಯ ಸೇರಿದಂತೆ ಹಲವಾರು ಮುಖಂಡರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಅಮೇಥಿಯಲ್ಲಿ ‘ಅಬ್ ಕಿ ಬಾರ್ ರಾಬರ್ಟ್ ವಾದ್ರಾ’ ಪೋಸ್ಟರ್; ಪ್ರಿಯಾಂಕಾ ಪತಿ ಸ್ಪರ್ಧೆಗೆ ಹೆಚ್ಚಿದ...

0
2019ರ ಲೋಕಸಭಾ ಚುನಾವಣೆ ಸೋಲಿನ ನಂತರ ರಾಹುಲ್ ಗಾಂಧಿ ತಮ್ಮ ಕ್ಷೇತ್ರವನ್ನು ಅಮೇಥಿಯಿಂದ ಕೇರಳದ ವಯನಾಡಿಗೆ ಸ್ಥಳಾಂತರಿಸಿದ್ದಾರೆ. ಆದರೆ, ಬಿಜೆಪಿ ಹಾಲಿ ಸಂಸದೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುವ ಕಾಂಗ್ರೆಸ್ ಅಭ್ಯರ್ಥಿ ಯಾರು...