Homeಕರ್ನಾಟಕಮೊಳಗಿದ ಕನ್ನಡ ಕಹಳೆ: ಪಠ್ಯ ಪುಸ್ತಕ ಕೇಸರೀಕರಣ ವಿರುದ್ಧ ಬೃಹತ್ ಪ್ರತಿಭಟನೆ

ಮೊಳಗಿದ ಕನ್ನಡ ಕಹಳೆ: ಪಠ್ಯ ಪುಸ್ತಕ ಕೇಸರೀಕರಣ ವಿರುದ್ಧ ಬೃಹತ್ ಪ್ರತಿಭಟನೆ

ವಿಶ್ವಮಾನವ, ಕ್ರಾಂತಿಕಾರಿ, ಮಹಾಕವಿ ಕುವೆಂಪು ಹೋರಾಟ ಸಮಿತಿ ಆಯೋಜಿಸಿರುವ ಪ್ರತಿಭಟನೆಗೆ ಭಾರೀ ಜನಸ್ಪಂದನೆ

- Advertisement -
- Advertisement -

ಬಲಪಂಥೀಯ ಬರಹಗಾರ ರೋಹಿತ್‌ ಚಕ್ರತೀರ್ಥ ಅಧ್ಯಕ್ಷತೆಯಲ್ಲಿ ನಡೆದ ಪಠ್ಯಪುಸ್ತಕದಲ್ಲಿ ಆಗಿರುವ ಸರಣಿ ತಪ್ಪುಗಳನ್ನು ವಿರೋಧಿಸಿ ಜನಾಕ್ರೋಶ ಭುಗಿಲೆದ್ದಿದೆ. ಬೆಂಗಳೂರಿನಲ್ಲಿ ಸೇರಿದ ಸಾವಿರಾರು ಜನರು ಸರ್ಕಾರದ ವಿರುದ್ಧ ರಣಕಹಳೆ ಮೊಳಗಿಸಿದ್ದಾರೆ.

ವಿಶ್ವಮಾನವ, ಕ್ರಾಂತಿಕಾರಿ, ಮಹಾಕವಿ ಕುವೆಂಪು ಹೋರಾಟ ಸಮಿತಿ ಆಯೋಜಿಸಿರುವ ಬೃಹತ್‌ ಪ್ರತಿಭಟನೆಗೆ ರಾಜ್ಯದ ಮೂಲೆಮೂಲೆಯಿಂದ ಸಾವಿರಾರು ಜನರು ಆಗಮಿಸಿದ್ದು, ಬೆಂಗಳೂರಿನ ಕೇಂದ್ರೀಯ ರೈಲು ನಿಲ್ದಾಣದಿಂದ ಪ್ರೀಂಡಂ ಪಾರ್ಕ್‌ವರೆಗೆ ಮೆರವಣಿಗೆ ನಡೆದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಾಷ್ಟ್ರಕವಿ ಕುವೆಂಪು ಅವರು ಬರೆದ ನಾಡಗೀತೆಯನ್ನು ತಿರುಚಿದ ರೋಹಿತ್ ಚಕ್ರತೀರ್ಥ ಎಂಬ ವ್ಯಕ್ತಿಯ ನೇತೃತ್ವದಲ್ಲಿ ಪರಿಷ್ಕರಣೆಯಾದ ಪಠ್ಯಪುಸ್ತಕಗಳನ್ನು ಮಕ್ಕಳಿಗೆ ವಿತರಿಸಬಾರದು ಎಂದು ಕನ್ನಡಿಗರು ಆಗ್ರಹಿಸಿದ್ದಾರೆ.

ಮೆರವಣಿಗೆಯುದ್ದಕ್ಕೂ ಕನ್ನಡ ಬಾವುಟಗಳು ಹಾರಾಡಿದವು. ಪಠ್ಯಪುಸ್ತಕದಲ್ಲಿ ಕೈಬಿಡಲಾಗಿರುವ ಮಹನೀಯರ ಭಾವಚಿತ್ರಗಳನ್ನು ಹಿಡಿದು ಹೋರಾಟಗಾರರು ಸಾಗಿದರು. “ನಾಡದ್ರೋಹಿ ಚಕ್ರತೀರ್ಥನಿಗೆ ಧಿಕ್ಕಾರ, ಶಿಕ್ಷಣ ಸಚಿವರಿಗೆ ಧಿಕ್ಕಾರ, ತಪ್ಪಾಗಿರುವ ಪಠ್ಯಪುಸ್ತಕಗಳನ್ನು ಮಕ್ಕಳಿಗೆ ವಿಸ್ತರಿಸುತ್ತಿರುವ ಸರ್ಕಾರಕ್ಕೆ ಧಿಕ್ಕಾರ” ಎಂದು ಕೂಗಿದರು.

“ನಾಡಿಗೆ ಪ್ರಥಮ ಜ್ಞಾನಪೀಠ ಪ್ರಶಸ್ತಿ ತಂದುಕೊಟ್ಟ ಮಹಾನ್‌ ಶೂದ್ರಕವಿ ಕುವೆಂಪು ಅವರನ್ನು ಅವಮಾನಿಸಿದವರಿಗೆ, ನಾಡಗೀತೆಯನ್ನು ತಿರುಚಿ ಬರೆದವರಿಗೆ ಧಿಕ್ಕಾರ” ಎಂದು ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದರು.

ಕನ್ನಡ ಭಾವುಟ ಹಾಗೂ ವಿವಿಧ ಪ್ಲೆಕ್ಸ್‌ಗಳನ್ನು ಹಿಡಿದ ವಿದ್ಯಾರ್ಥಿಗಳು, ಹೋರಾಟಗಾರರು, ನಾಗರಿಕರು ತಮ್ಮ ಅಸ್ಮಿತೆಯನ್ನು ಪ್ರದರ್ಶಿಸಿದರು.

ಮೆರವಣಿಗೆಯಲ್ಲಿ ಸಾಗುತ್ತಾ ‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಉರಿಲಿಂಗ ಪೆದ್ದಿಮಠದ ಜ್ಞಾನಪ್ರಕಾಶ ಸ್ವಾಮೀಜಿ, “ಚಕ್ರತೀರ್ಥನನ್ನು ಬಂಧಿಸಲು ಇಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಯಾಗಿಲ್ಲ. ಪ್ರಜಾಪ್ರಭುತ್ವ ಉಳ್ಳವರ ಕೈಗೆ ಸಿಕ್ಕಿಹಾಕಿಕೊಂಡಿದೆ” ಎಂದು ವಿವಾದಿಸಿದರು.

“ಶಾಸಕಾಂಗ, ಕಾರ್ಯಾಂಗ ಹಾಗೂ ನ್ಯಾಯಾಂಗ ನಿಷ್ಕ್ರಿಯವಾಗಿವೆ. ಸಂಸ್ಕೃತಿ ಬಗ್ಗೆ ಅವರ ಬಳಿ ಪಾಠ ಕೇಳುವ ಅವಶ್ಯಕತೆ ಇಲ್ಲ. ಸಂಸ್ಕೃತಿಯನ್ನು ಕೊಟ್ಟವರು ನಾವು. ಈ ದೇಶದ ಸಂಸ್ಕೃತಿಗೆ ಮೂಲಪುರುಷರು ನಾವು. ಅವರು ಹೊರಗಡೆಯಿಂದ ಬಂದವವರು. ಹೀಗಾಗಿ ಹೊರಗಡೆ ಮಾತನ್ನೇ ಆಡುತ್ತಾರೆ. ರೋಹಿತ್ ಚಕ್ರತೀರ್ಥನ ಬಂಧನವನ್ನು ಮಾಡಿಸದೆ ಬಿಡುವುದಿಲ್ಲ” ಎಂದರು.

ಕರ್ನಾಟಕ ರಾಜ್ಯ ಸಂಶೋಧಕರ ಸಂಘದ ರಾಜ್ಯಾಧ್ಯಕ್ಷರಾದ ಎಸ್.ಮರಿದೇವಯ್ಯ ಮಾತನಾಡಿ, “ರಾಜ್ಯದ ವಿವಿಧ ಭಾಗಗಳಿಂದ ಬಂದ ಜನರು ಇಲ್ಲಿ ಸೇರಿದ್ದೇವೆ. ರೋಹಿತ್ ಚಕ್ರತೀರ್ಥ ಎನ್ನುವ ವ್ಯಕ್ತಿ ಮಾಡಿರುವ ಪಠ್ಯ ಪರಿಷ್ಕರಣೆಯನ್ನು ಸರ್ಕಾರ ಕೂಡಲೇ ರದ್ದುಪಡಿಸಬೇಕು. ಇಲ್ಲವಾದರೆ ಮುಂದೆ ನಡೆಯುವ ಜಿಪಂ, ತಾಪಂ, ಎಂಎಲ್‌ಎ, ಎಂಪಿ ಚುನಾವಣೆಗಳಲ್ಲಿ ತಕ್ಕ ಪಾಠ ಕಲಿಸುತ್ತೇವೆ. ಕೂಡಲೇ ಚಕ್ರತೀರ್ಥನನ್ನು ಬಂಧಿಸಬೇಕು. ಮುಂದಿನ ದಿನಗಳಲ್ಲಿ ವಿಧಾನಸೌಧ ಮುತ್ತಿಗೆ ಹಾಕುತ್ತೇವೆ” ಎಂದು ಎಚ್ಚರಿಸಿದರು.

ಇದನ್ನೂ ಓದಿರಿ: ಮಾಜಿ ಸಚಿವ ಎಂ.ರಘುಪತಿ ನಿಧನ; ವರ್ಣ ರಂಜಿತ ಬದುಕಿಗೆ ತೆರೆ

ಅಲೆಮಾರಿ ಬುಡಕಟ್ಟು ಮಹಾಸಭಾದ ಹೋರಾಟಗಾರ ಮಂಜುನಾಥ್ ಮಾತನಾಡಿ, “ಜಗದ ಕವಿ, ರಾಷ್ಟ್ರಕವಿ ಕುವೆಂಪು ಅವರಿಗೆ ಆಗಿರುವ ಅನ್ಯಾಯವನ್ನು ಸರಿದೂಗಿಸಬೇಕು. ಹೊಸ ಪಠ್ಯಪುಸ್ತಕವು ಇಷ್ಟೊಂದು ಸಮಸ್ಯೆಗಳಿಂದ ಕೂಡಿರುವುದರಿಂದ ಪಠ್ಯ ಪರಿಷ್ಕರಣೆ ಅಗತ್ಯವಿಲ್ಲ. ಹಳೆಯ ಪಠ್ಯಪರಿಷ್ಕರಣೆಯನ್ನೇ ಮುಂದುವರಿಸಿ, ಮಕ್ಕಳಿಗೆ ಸತ್ಯವಾದ ಪಾಠಗಳನ್ನು ಕಲಿಸಬೇಕಾಗಿ ಕಳಕಳಿಯ ಮನವಿ” ಎಂದರು.

ಕರ್ನಾಟಕ ಭೀಮ ಸೇನೆ, ರಾಜ್ಯ ಒಕ್ಕಗಲಿಗರ ಸಂಘ, ಸಿಐಟಿಯು, ದಲಿತ ಹಕ್ಕುಗಳ ಸಮಿತಿ, ಅಲೆಮಾರಿ ಬುಡಕಟ್ಟು ಮಹಾಸಭಾ, ಕೆಆರ್‌ಎಸ್‌ ಪಕ್ಷ, ದಲಿತ ಸಂಘರ್ಷ ಸಮಿತಿ, ಭೀಮ್‌ ಆರ್ಮಿ, ಕಾಂಗ್ರೆಸ್ ಪಕ್ಷ, ಕರ್ನಾಟಕ ರಕ್ಷಣಾ ವೇದಿಕೆ ಸೇರಿದಂತೆ ಮೊದಲಾದ ಸಂಘಟನೆಗಳು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದವು.

ರಾಜಕೀಯ ನಾಯಕರಾದ ರಾಮಲಿಂಗ ರೆಡ್ಡಿ, ಡಿ.ಕೆ.ಶಿವಕುಮಾರ್‌, ಸಿ.ಎಂ. ಇಬ್ರಾಹಿಂ, ಮಖ್ಯಮಂತ್ರಿ ಚಂದ್ರು, ಅಕ್ಕೈ ಪದ್ಮಶಾಲಿ, ಶಾಸಕ ಕೃಷ್ಣಪ್ಪ, ಸಾಹಿತಿ ಬರಗೂರು ರಾಮಚಂದ್ರಪ್ಪ,  ಶಿವರಾಮೇಗೌಡ, ಪ್ರವೀಣ್‌ ಶೆಟ್ಟಿ, ಸಾ.ರಾ. ಗೋವಿಂದ್‌, ಸಂಗೀತ ನಿರ್ದೇಶಕ ಹಂಸಲೇಖ, ಜಸ್ಟೀಸ್ ನಾಗಮೋಹನ ದಾಸ್‌ ನಾಗಮೋಹನ್‌ ದಾಸ್‌, ಚಿಂತಕ ಎಸ್‌.ಜಿ.ಸಿದ್ದರಾಮಯ್ಯ ಸೇರಿದಂತೆ ಹಲವಾರು ಮುಖಂಡರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...