Homeಕರ್ನಾಟಕಮೊಳಗಿದ ಕನ್ನಡ ಕಹಳೆ: ಪಠ್ಯ ಪುಸ್ತಕ ಕೇಸರೀಕರಣ ವಿರುದ್ಧ ಬೃಹತ್ ಪ್ರತಿಭಟನೆ

ಮೊಳಗಿದ ಕನ್ನಡ ಕಹಳೆ: ಪಠ್ಯ ಪುಸ್ತಕ ಕೇಸರೀಕರಣ ವಿರುದ್ಧ ಬೃಹತ್ ಪ್ರತಿಭಟನೆ

ವಿಶ್ವಮಾನವ, ಕ್ರಾಂತಿಕಾರಿ, ಮಹಾಕವಿ ಕುವೆಂಪು ಹೋರಾಟ ಸಮಿತಿ ಆಯೋಜಿಸಿರುವ ಪ್ರತಿಭಟನೆಗೆ ಭಾರೀ ಜನಸ್ಪಂದನೆ

- Advertisement -
- Advertisement -

ಬಲಪಂಥೀಯ ಬರಹಗಾರ ರೋಹಿತ್‌ ಚಕ್ರತೀರ್ಥ ಅಧ್ಯಕ್ಷತೆಯಲ್ಲಿ ನಡೆದ ಪಠ್ಯಪುಸ್ತಕದಲ್ಲಿ ಆಗಿರುವ ಸರಣಿ ತಪ್ಪುಗಳನ್ನು ವಿರೋಧಿಸಿ ಜನಾಕ್ರೋಶ ಭುಗಿಲೆದ್ದಿದೆ. ಬೆಂಗಳೂರಿನಲ್ಲಿ ಸೇರಿದ ಸಾವಿರಾರು ಜನರು ಸರ್ಕಾರದ ವಿರುದ್ಧ ರಣಕಹಳೆ ಮೊಳಗಿಸಿದ್ದಾರೆ.

ವಿಶ್ವಮಾನವ, ಕ್ರಾಂತಿಕಾರಿ, ಮಹಾಕವಿ ಕುವೆಂಪು ಹೋರಾಟ ಸಮಿತಿ ಆಯೋಜಿಸಿರುವ ಬೃಹತ್‌ ಪ್ರತಿಭಟನೆಗೆ ರಾಜ್ಯದ ಮೂಲೆಮೂಲೆಯಿಂದ ಸಾವಿರಾರು ಜನರು ಆಗಮಿಸಿದ್ದು, ಬೆಂಗಳೂರಿನ ಕೇಂದ್ರೀಯ ರೈಲು ನಿಲ್ದಾಣದಿಂದ ಪ್ರೀಂಡಂ ಪಾರ್ಕ್‌ವರೆಗೆ ಮೆರವಣಿಗೆ ನಡೆದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಾಷ್ಟ್ರಕವಿ ಕುವೆಂಪು ಅವರು ಬರೆದ ನಾಡಗೀತೆಯನ್ನು ತಿರುಚಿದ ರೋಹಿತ್ ಚಕ್ರತೀರ್ಥ ಎಂಬ ವ್ಯಕ್ತಿಯ ನೇತೃತ್ವದಲ್ಲಿ ಪರಿಷ್ಕರಣೆಯಾದ ಪಠ್ಯಪುಸ್ತಕಗಳನ್ನು ಮಕ್ಕಳಿಗೆ ವಿತರಿಸಬಾರದು ಎಂದು ಕನ್ನಡಿಗರು ಆಗ್ರಹಿಸಿದ್ದಾರೆ.

ಮೆರವಣಿಗೆಯುದ್ದಕ್ಕೂ ಕನ್ನಡ ಬಾವುಟಗಳು ಹಾರಾಡಿದವು. ಪಠ್ಯಪುಸ್ತಕದಲ್ಲಿ ಕೈಬಿಡಲಾಗಿರುವ ಮಹನೀಯರ ಭಾವಚಿತ್ರಗಳನ್ನು ಹಿಡಿದು ಹೋರಾಟಗಾರರು ಸಾಗಿದರು. “ನಾಡದ್ರೋಹಿ ಚಕ್ರತೀರ್ಥನಿಗೆ ಧಿಕ್ಕಾರ, ಶಿಕ್ಷಣ ಸಚಿವರಿಗೆ ಧಿಕ್ಕಾರ, ತಪ್ಪಾಗಿರುವ ಪಠ್ಯಪುಸ್ತಕಗಳನ್ನು ಮಕ್ಕಳಿಗೆ ವಿಸ್ತರಿಸುತ್ತಿರುವ ಸರ್ಕಾರಕ್ಕೆ ಧಿಕ್ಕಾರ” ಎಂದು ಕೂಗಿದರು.

“ನಾಡಿಗೆ ಪ್ರಥಮ ಜ್ಞಾನಪೀಠ ಪ್ರಶಸ್ತಿ ತಂದುಕೊಟ್ಟ ಮಹಾನ್‌ ಶೂದ್ರಕವಿ ಕುವೆಂಪು ಅವರನ್ನು ಅವಮಾನಿಸಿದವರಿಗೆ, ನಾಡಗೀತೆಯನ್ನು ತಿರುಚಿ ಬರೆದವರಿಗೆ ಧಿಕ್ಕಾರ” ಎಂದು ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದರು.

ಕನ್ನಡ ಭಾವುಟ ಹಾಗೂ ವಿವಿಧ ಪ್ಲೆಕ್ಸ್‌ಗಳನ್ನು ಹಿಡಿದ ವಿದ್ಯಾರ್ಥಿಗಳು, ಹೋರಾಟಗಾರರು, ನಾಗರಿಕರು ತಮ್ಮ ಅಸ್ಮಿತೆಯನ್ನು ಪ್ರದರ್ಶಿಸಿದರು.

ಮೆರವಣಿಗೆಯಲ್ಲಿ ಸಾಗುತ್ತಾ ‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಉರಿಲಿಂಗ ಪೆದ್ದಿಮಠದ ಜ್ಞಾನಪ್ರಕಾಶ ಸ್ವಾಮೀಜಿ, “ಚಕ್ರತೀರ್ಥನನ್ನು ಬಂಧಿಸಲು ಇಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಯಾಗಿಲ್ಲ. ಪ್ರಜಾಪ್ರಭುತ್ವ ಉಳ್ಳವರ ಕೈಗೆ ಸಿಕ್ಕಿಹಾಕಿಕೊಂಡಿದೆ” ಎಂದು ವಿವಾದಿಸಿದರು.

“ಶಾಸಕಾಂಗ, ಕಾರ್ಯಾಂಗ ಹಾಗೂ ನ್ಯಾಯಾಂಗ ನಿಷ್ಕ್ರಿಯವಾಗಿವೆ. ಸಂಸ್ಕೃತಿ ಬಗ್ಗೆ ಅವರ ಬಳಿ ಪಾಠ ಕೇಳುವ ಅವಶ್ಯಕತೆ ಇಲ್ಲ. ಸಂಸ್ಕೃತಿಯನ್ನು ಕೊಟ್ಟವರು ನಾವು. ಈ ದೇಶದ ಸಂಸ್ಕೃತಿಗೆ ಮೂಲಪುರುಷರು ನಾವು. ಅವರು ಹೊರಗಡೆಯಿಂದ ಬಂದವವರು. ಹೀಗಾಗಿ ಹೊರಗಡೆ ಮಾತನ್ನೇ ಆಡುತ್ತಾರೆ. ರೋಹಿತ್ ಚಕ್ರತೀರ್ಥನ ಬಂಧನವನ್ನು ಮಾಡಿಸದೆ ಬಿಡುವುದಿಲ್ಲ” ಎಂದರು.

ಕರ್ನಾಟಕ ರಾಜ್ಯ ಸಂಶೋಧಕರ ಸಂಘದ ರಾಜ್ಯಾಧ್ಯಕ್ಷರಾದ ಎಸ್.ಮರಿದೇವಯ್ಯ ಮಾತನಾಡಿ, “ರಾಜ್ಯದ ವಿವಿಧ ಭಾಗಗಳಿಂದ ಬಂದ ಜನರು ಇಲ್ಲಿ ಸೇರಿದ್ದೇವೆ. ರೋಹಿತ್ ಚಕ್ರತೀರ್ಥ ಎನ್ನುವ ವ್ಯಕ್ತಿ ಮಾಡಿರುವ ಪಠ್ಯ ಪರಿಷ್ಕರಣೆಯನ್ನು ಸರ್ಕಾರ ಕೂಡಲೇ ರದ್ದುಪಡಿಸಬೇಕು. ಇಲ್ಲವಾದರೆ ಮುಂದೆ ನಡೆಯುವ ಜಿಪಂ, ತಾಪಂ, ಎಂಎಲ್‌ಎ, ಎಂಪಿ ಚುನಾವಣೆಗಳಲ್ಲಿ ತಕ್ಕ ಪಾಠ ಕಲಿಸುತ್ತೇವೆ. ಕೂಡಲೇ ಚಕ್ರತೀರ್ಥನನ್ನು ಬಂಧಿಸಬೇಕು. ಮುಂದಿನ ದಿನಗಳಲ್ಲಿ ವಿಧಾನಸೌಧ ಮುತ್ತಿಗೆ ಹಾಕುತ್ತೇವೆ” ಎಂದು ಎಚ್ಚರಿಸಿದರು.

ಇದನ್ನೂ ಓದಿರಿ: ಮಾಜಿ ಸಚಿವ ಎಂ.ರಘುಪತಿ ನಿಧನ; ವರ್ಣ ರಂಜಿತ ಬದುಕಿಗೆ ತೆರೆ

ಅಲೆಮಾರಿ ಬುಡಕಟ್ಟು ಮಹಾಸಭಾದ ಹೋರಾಟಗಾರ ಮಂಜುನಾಥ್ ಮಾತನಾಡಿ, “ಜಗದ ಕವಿ, ರಾಷ್ಟ್ರಕವಿ ಕುವೆಂಪು ಅವರಿಗೆ ಆಗಿರುವ ಅನ್ಯಾಯವನ್ನು ಸರಿದೂಗಿಸಬೇಕು. ಹೊಸ ಪಠ್ಯಪುಸ್ತಕವು ಇಷ್ಟೊಂದು ಸಮಸ್ಯೆಗಳಿಂದ ಕೂಡಿರುವುದರಿಂದ ಪಠ್ಯ ಪರಿಷ್ಕರಣೆ ಅಗತ್ಯವಿಲ್ಲ. ಹಳೆಯ ಪಠ್ಯಪರಿಷ್ಕರಣೆಯನ್ನೇ ಮುಂದುವರಿಸಿ, ಮಕ್ಕಳಿಗೆ ಸತ್ಯವಾದ ಪಾಠಗಳನ್ನು ಕಲಿಸಬೇಕಾಗಿ ಕಳಕಳಿಯ ಮನವಿ” ಎಂದರು.

ಕರ್ನಾಟಕ ಭೀಮ ಸೇನೆ, ರಾಜ್ಯ ಒಕ್ಕಗಲಿಗರ ಸಂಘ, ಸಿಐಟಿಯು, ದಲಿತ ಹಕ್ಕುಗಳ ಸಮಿತಿ, ಅಲೆಮಾರಿ ಬುಡಕಟ್ಟು ಮಹಾಸಭಾ, ಕೆಆರ್‌ಎಸ್‌ ಪಕ್ಷ, ದಲಿತ ಸಂಘರ್ಷ ಸಮಿತಿ, ಭೀಮ್‌ ಆರ್ಮಿ, ಕಾಂಗ್ರೆಸ್ ಪಕ್ಷ, ಕರ್ನಾಟಕ ರಕ್ಷಣಾ ವೇದಿಕೆ ಸೇರಿದಂತೆ ಮೊದಲಾದ ಸಂಘಟನೆಗಳು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದವು.

ರಾಜಕೀಯ ನಾಯಕರಾದ ರಾಮಲಿಂಗ ರೆಡ್ಡಿ, ಡಿ.ಕೆ.ಶಿವಕುಮಾರ್‌, ಸಿ.ಎಂ. ಇಬ್ರಾಹಿಂ, ಮಖ್ಯಮಂತ್ರಿ ಚಂದ್ರು, ಅಕ್ಕೈ ಪದ್ಮಶಾಲಿ, ಶಾಸಕ ಕೃಷ್ಣಪ್ಪ, ಸಾಹಿತಿ ಬರಗೂರು ರಾಮಚಂದ್ರಪ್ಪ,  ಶಿವರಾಮೇಗೌಡ, ಪ್ರವೀಣ್‌ ಶೆಟ್ಟಿ, ಸಾ.ರಾ. ಗೋವಿಂದ್‌, ಸಂಗೀತ ನಿರ್ದೇಶಕ ಹಂಸಲೇಖ, ಜಸ್ಟೀಸ್ ನಾಗಮೋಹನ ದಾಸ್‌ ನಾಗಮೋಹನ್‌ ದಾಸ್‌, ಚಿಂತಕ ಎಸ್‌.ಜಿ.ಸಿದ್ದರಾಮಯ್ಯ ಸೇರಿದಂತೆ ಹಲವಾರು ಮುಖಂಡರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...