Homeಕರ್ನಾಟಕಸಂಗೀತ ನಿರ್ದೇಶಕ ಹಂಸಲೇಖ ಅವರನ್ನು ಬೆಂಬಲಿಸಿ ವಿದ್ಯಾರ್ಥಿಗಳಿಂದ ಬೃಹತ್‌ ರ್‍ಯಾಲಿ

ಸಂಗೀತ ನಿರ್ದೇಶಕ ಹಂಸಲೇಖ ಅವರನ್ನು ಬೆಂಬಲಿಸಿ ವಿದ್ಯಾರ್ಥಿಗಳಿಂದ ಬೃಹತ್‌ ರ್‍ಯಾಲಿ

ಮೈಸೂರಿನಲ್ಲಿ ದಸಂಸ ಪ್ರತಿಭಟನೆ ನಡೆಸಿ ಚಿತ್ರ ಸಾಹಿತಿಯ ಹೇಳಿಕೆಯನ್ನು ಬೆಂಬಲಿಸಿದೆ

- Advertisement -
- Advertisement -

ಖ್ಯಾತ ಸಂಗೀತ ನಿರ್ದೇಶಕ, ಸಾಹಿತಿ ಹಂಸಲೇಖ ಅವರು ಇತ್ತೀಚೆಗೆ ಮೈಸೂರಿನಲ್ಲಿ ನೀಡಿದ್ದ ಹೇಳಿಕೆಯನ್ನು ಬೆಂಬಲಿಸಿ, ಬಲಪಂಥೀಯರು ಅವರ ಮೇಲೆ ದಾಳಿ ಮಾಡುತ್ತಿರುವುದನ್ನು ವಿರೋಧಿಸಿ ಹಾಗೂ ಅವರಿಗೆ ಸೂಕ್ತ ರೀತಿಯ ಭದ್ರತೆ ಒದಗಿಸುವಂತೆ ಕೋರಿ ಬೆಂಗಳೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟವು ಗುರುವಾರದಂದು ವಿಶ್ವವಿದ್ಯಾಲಯ ಆವರಣದಲ್ಲಿ ಪ್ರತಿಭಟನಾ ರ್‍ಯಾಲಿ ನಡೆಸಿದೆ. ಜೊತೆಗೆ ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಕೂಡಾ ದಲಿತ ಸಂಘರ್ಷ ಸಮಿತಿ ಹಾಗೂ ಸಂಶೋಧನಾ ವಿದ್ಯಾರ್ಥಿಗಳು ತಮ್ಮ ಪ್ರತಿಭಟನೆ ದಾಖಲಿಸಿ ಹಂಸಲೇಖ ಅವರಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ವಿಶ್ವವಿದ್ಯಾಲಯದಲ್ಲಿ ನಡೆದ ಪ್ರತಿಭಟನಾ ರ್‍ಯಾಲಿಯಲ್ಲಿ ಸುಮಾರು 1,500 ವಿದ್ಯಾರ್ಥಿಗಳು ಪಾಲ್ಗೊಂಡಿದ್ದಾರೆ ಎಂದು ಪ್ರತಿಭಟನೆಯ ಆಯೋಜಕರು ನಾನುಗೌರಿ.ಕಾಂಗೆ ತಿಳಿಸಿದ್ದಾರೆ.

“ವಿಶ್ವವಿದ್ಯಾಲಯದ ಎಲ್ಲಾ ವಿಭಾಗಗಳನ್ನು ಮುಚ್ಚುವ ಮೂಲಕ ಎಲ್ಲಾ ವಿದ್ಯಾರ್ಥಿಗಳು ಪ್ರತಿಭಟನಾ ರ್‍ಯಾಲಿಯಲ್ಲಿ ಪಾಲ್ಗೊಂಡಿದ್ದರು. ಮುಖ್ಯವಾಗಿ ವಿಶ್ವವಿದ್ಯಾಲಯದ ಹಾಸ್ಟೆಲ್‌ಗಳಿಂದ ಪ್ರಾರಂಭಗೊಂಡ ರ್‍ಯಾಲಿ, ಅಂಬೇಡ್ಕರ್ ಕೇಂದ್ರ ಗ್ರಂಥಾಲಯದ ಮೂಲಕ ಸಾಗಿ, ಎಲ್ಲಾ ವಿಭಾಗಗಳಿಗೆ ಭೇಟಿ ಕೊಟ್ಟು ಅಲ್ಲಿನ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ಅವರನ್ನೂ ಒಳಗೊಂಡು ಆಡಳಿತ ಕಚೇರಿಯ ಮುಂದೆ ಇರುವ ಅಂಬೇಡ್ಕರ್‌ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಸಾರ್ವಜನಿಕ ಜಾಗೃತಿ ನಡೆಸಲಾಯಿತು” ಎಂದು ಪ್ರತಿಭಟನೆಯ ಸಂಚಾಲಕರಲ್ಲೊಬ್ಬರಾದ ಲೋಕೇಶ್‌ ಹೇಳಿದ್ದಾರೆ.

ಇದನ್ನೂ ಓದಿ: ಜಾತಿಕೂಪದ ವಿರಾಟ್‌ರೂಪವನ್ನು ಬಿಚ್ಚಿಟ್ಟ ಹಂಸಲೇಖ ಘಟನೆ!

“ಪ್ರಜಾತ್ಪಾತ್ಕಕ ವ್ಯವಸ್ಥೆಯಲ್ಲಿ ಜನರ ಮೂಲಭೂತ ಹಕ್ಕುಗಳಾದ ವಾಕ್‌ ಸ್ವಾತಂತ್ರ್ಯ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಕುತ್ತು ಬರುತ್ತಿರುವುದು ಆತಂಕಕಾರಿ ಮತ್ತು ಅಪಾಯಕಾರಿ ಬೆಳವಣಿಗೆ. ಇತ್ತೀಚಿನ ದಿನಗಳಲ್ಲಿ ಬ್ರಾಹ್ಮಣ್ಯವನ್ನು ಕುರಿತು ಸತ್ಯವನ್ನು ಮಾತನಾಡುವುದು, ಬರೆಯುವುದು ಮಹಾ ಅಪರಾಧವಾಗಿ ಬಿಂಬಿತವಾಗುತ್ತಿದೆ. ಹಂಸಲೇಖರವರು ಅಸ್ಪಶ್ಯತೆಯ ನಿರ್ಮೂಲನೆಗೆ ಸಂಬಂಧಿಸಿದಂತೆ ದಲಿತರು ಮತ್ತು ಶೂದ್ರ ಸಮುದಾಯದ ಆಹಾರ ಸಂಸ್ಕೃತಿಯನ್ನು ಉಲ್ಲೇಖಿಸಿ ಮಾತನಾಡಿರುವುದು ಸಾ೦ದರ್ಭಿಕವಾದರೂ ಸಾರ್ವಕಾಲಿಕ ಮತ್ತು ಸಂವಿಧಾನಾತ್ಮಕವಾಗಿದೆ” ಎಂದು ಒಕ್ಕೂಟ ಹೇಳಿದೆ.

“ಈ ದೇಶದ ಮನುವಾದಿಗಳಿಗೆ ಅಪರೂಪಕ್ಕಾದರು ಸತ್ಯವನ್ನು ಸಹಿಸಿಕೊಳ್ಳುವ, ಸತ್ಯವನ್ನು ಒಪ್ಪಿಕೊಳ್ಳುವ, ತಾವು ಮಾಡಿರುವ ತಪ್ಪುಗಳನ್ನು ಸರಿಪಡಿಸಿಕೊಳ್ಳುವ, ತಪ್ಪುಗಳನ್ನು ತಿದ್ದಿದವರಿಗೆ ಕೃತಜ್ಞತೆ ಸಲ್ಲಿಸುವ ದೊಡ್ಡ ಗುಣ ಇಲ್ಲಿಯವರೆವಿಗೂ ಬಾರದೆ ಇರುವುದು ದುರದೃಷ್ಟಕರ” ಎಂದು ಒಕ್ಕೂಟವು ಆಕ್ರೋಶ ವ್ಯಕ್ತಪಡಿಸಿದೆ.

ಪ್ರತಿಭಟನಾ ರ್‍ಯಾಲಿಯಲ್ಲಿ ವಿದ್ಯಾರ್ಥಿ ಮುಖಂಡರಾದ ವೆಂಕಟೇಶ್‌ ವಿ.ಎಸ್., ಗೋಪಾಲ್ ಜಿ., ಲೋಕೇಶ್‌ ಎನ್‌.ಆರ್‌., ಸತೀಶ್‌‌ ಜಿ.ಕೆ., ಲೋಕೇಶ್‌ ಎನ್., ಚಂದ್ರು ಪೆರಿಯಾರ್‌, ಯಲ್ಲಪ್ಪ ಕೆ.ಜಿ., ಈಶ್ವರ್‌ ಸೇರಿದಂತೆ ಹಲವರು ಭಾಗವಹಿಸಿದ್ದರು.

ಮೈಸೂರಿನಲ್ಲಿ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ

ಮೈಸೂರಿನಲ್ಲೂ ಹಂಸಲೇಖ ಅವರ ಹೇಳಿಕೆಯನ್ನು ಬೆಂಬಲಿಸಿ ಹಾಗೂ ಅವರ ಮೇಲಿನ ದಾಳಿಯನ್ನು ವಿರೋಧಿಸಿ ದಲಿತ ಸಂಘರ್ಷ ಸಮಿತಿಯು ಪ್ರತಿಭಟನೆ ನಡೆಸಿತು.

“ಹಂಸಲೇಖರವರ ಸಮಾನತೆ ಪರ, ಭ್ರಾತೃತ್ವದ ಪರವಾದ ಮಾತುಗಳು ಬ್ರಾಹ್ಮಣಶಾಹಿ ಮನಸ್ಸುಗಳ ಎದೆಯನ್ನು ಇರಿದಂತಿದೆ. ಹಾಗಾಗಿ ಸಾಮಾಜಿಕ ಜಾಲತಾಣಗಳಲ್ಲಿ ಅವರನ್ನು ಕ್ಷಮೆಯಾಚಿಸುವಂತೆ ಒತ್ತಡ ಹೇರಿ, ಭಯದ ವಾತಾವರಣವನ್ನು ನಿರ್ಮಿಸಲಾಗಿದೆ” ಎಂದು ಸಂಘರ್ಷ ಸಮಿತಿಯು ಹೇಳಿದೆ.

ಇಷ್ಟೇ ಅಲ್ಲದೆ, ಇತ್ತೀಚೆಗೆ ರಾಜಕೀಯ ಚರ್ಚಾ ವಿಷಯ ಆಗಿರುವ ಬಿಟ್‌ ಕಾಯಿನ್‌ ವಿಚಾರದಲ್ಲಿ ಶಾಸಕ ಪ್ರಿಯಾಂಕ್‌ ಖರ್ಗೆ ಅವರು ಎತ್ತಿರುವ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ್ದ ಬಿಜೆಪಿ ಸಂಸದ ಪ್ರತಾಪ್‌ ಸಿಂಹ ಕೀಳು ಮಟ್ಟದಲ್ಲಿ ಪ್ರತಿಕ್ರಿಯಿಸಿ, ಕೋಮು ದ್ವೇಷವನ್ನು ಕಾರಿದ್ದರು. ಪ್ರತಾಪ್ ಸಿಂಹ ಅವರ ಹೇಳಿಕೆಯನ್ನು ವಿರೋಧಿಸಿಯು ಬೆಂಗಳೂರು ಮತ್ತು ಮೈಸೂರಿನ ಪ್ರತಿಭಟನೆಗಳಲ್ಲಿ ಆಕ್ರೋಶದ ಧ್ವನಿ ವ್ಯಕ್ತವಾಗಿತ್ತು.

“ಹಗರಣದ ಕುರಿತಂತೆ ಪ್ರಿಯಾಂಕ್‌ ಖರ್ಗೆಯವರು ಎತ್ತಿರುವ ಪ್ರಶ್ನೆಗಳಿಗೆ ಸರ್ಕಾರಕ್ಕೆ ಉತ್ತರಿಸಲಾಗುತ್ತಿಲ್ಲ. ಹೀಗಾಗಿ ಸರ್ಕಾರ ವ್ಯರ್ಥವಾಗಿ ತಮ್ಮ ಅಂಧಾಭಿಮಾನಿಗಳ ಮೂಲಕ ಜನರ ಮನಸ್ಸನ್ನು ಬೇರೆಡೆ ಸೆಳೆಯಲು ತಂತ್ರ ಹೂಡುತ್ತಿದೆ. ಹಾಗಾಗಿಯೆ ಹಂಸಲೇಖ ಅವರ ನ್ಯಾಯಯುತವಾದ ಹೇಳಿಕೆಯನ್ನು ನೆಪವಾಗಿಟ್ಟುಕೊಂಡು ಹಿಂದುಳಿದ ಶೋಷಿತ ಸಮುದಾಯಗಳ ಭಾವನೆಗಳ ವಿರುದ್ಧವಾಗಿ ಹೇಳಿಕೆಯನ್ನು ನೀಡುವುದು, ದೂರು ದಾಖಲಿಸುವುದು, ಹಲ್ಲೆ ನಡೆಸುವುದು, ಭಯ ಹುಟ್ಟಿಸುವುದು ಸೇರಿದಂತೆ ಸತ್ಯ ಹೇಳುವವರ ಬಾಯಿ ಮುಚ್ಚಿಸುವ ನಡೆಯನ್ನು ಅನುಸರಿಸುತ್ತಿದೆ” ಎಂದು ದಲಿತ ಸಂಘರ್ಷ ಸಮಿತಿಯು ಕಿಡಿಕಾರಿದೆ.

ಇದನ್ನೂ ಓದಿ: ‘ಬಾಡು ಸಪ್ತಾಹ’: ಸಾಮಾಜಿಕ ಜಾಲತಾಣದಲ್ಲಿ #ಬಾಡೇ_ನಮ್_ಗಾಡು ಅಭಿಯಾನ!

ಜೊತೆಗೆ ಪ್ರಚೋದನಕಾರಿ, ಸಂವಿಧಾನ ವಿರೋಧಿ ಕಾನೂನುಬಾಹಿರ ಹೇಳಿಕೆಗಳನ್ನು ನೀಡುತ್ತಾ ಕೋಮುದ್ವೇಷ ಹರಡುವ ಮತ್ತು ಸಮಾಜದಲ್ಲಿ ಶಾಂತಿ ಕದಡುತ್ತಿರುವ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಇತರರ ಹೇಳಿಕೆಗಳಿಗೆ ಕಡಿವಾಣ ಹಾಕಬೇಕು ಹಾಗೂ ಇಂತಹ ಹೇಳಿಕೆ ನೀಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ದಸಂಸ ಸರ್ಕಾರಕ್ಕೆ ಒತ್ತಾಯಿಸಿದೆ.

ಹಂಸಲೇಖ ಅವರು ಇತ್ತೀಚೆಗೆ ಮೈಸೂರಿನಲ್ಲಿ ದಲಿತರ ಮನೆಗೆ ಬಲಿತವರು ಹೋಗುವುದು ಬೂಟಾಟಿಕೆ ಎಂಬರ್ಥದಲ್ಲಿ ಮಾತನಾಡುತ್ತಾ, ಪೇಜಾವರ ಸ್ವಾಮಿಯ ಉದಾಹರಣೆಯನ್ನು ನೀಡಿದ್ದರು. ಈ ವೇಳೆ ಅವರು, “ಪೇಜಾವರ ಸ್ವಾಮಿ ದಲಿತರ ಮನೆಗೆ ಹೋಗಲು ಮಾತ್ರ ಆಗುವುದು. ಅವರು ಕೋಳಿ ಕೊಟ್ಟರೆ ತಿನ್ನಕ್ಕಾಗುತ್ತಾ? ಕುರಿಯ ರಕ್ತದ ಫ್ರೈ ಮಾಡಿ ಕೊಟ್ಟರೆ ಅವರು ತಿನ್ನುತ್ತಾರೆಯೆ? ಲಿವರ್‌ ಕೊಟ್ಟರೆ ತಿನ್ನುತ್ತಾರಾ? ದಲಿತರ ಮನೆಗೆ ಬಲಿತವರು ಹೋಗುವುದು ಏನು ದೊಡ್ಡ ವಿಷಯ?” ಎಂದು ಪ್ರಶ್ನಿಸಿದ್ದರು.

ಈ ಹೇಳಿಕೆ ವೈರಲ್‌ ಆಗುತ್ತಿದ್ದಂತೆ ಹಂಸಲೇಖ ಅವರ ತೇಜೋವಧೆ ಮಾಡಲಾಗಿತ್ತು. ಅವರ ಫೋನ್‌ ನಂಬರ್‌ಗಳನ್ನು ವಾಟ್ಸಪ್‌ ಗ್ರೂಪ್‌ಗಳಲ್ಲಿ ಹರಿಯ ಬಿಟ್ಟು ಅವರಿಗೆ ನಿರಂತರ ಕಿರುಕುಳ ಕೂಡಾ ನೀಡಲಾಗಿತ್ತು ಎಂದು ಆರೋಪಿಸಲಾಗಿದೆ. ಇದರ ನಂತರ ಹಂಸಲೇಖ ಅವರು, ತಾನು ಅಂತಹ ವೇದಿಕೆಗಳಲ್ಲಿ ಈ ಮಾತುಗಳನ್ನು ಹೇಳಬಾರದಿತ್ತು ಎಂದು ಹೇಳಿ ಕ್ಷಮೆ ಕೇಳಿದ್ದರು. ಕ್ಷಮೆ ಕೇಳಿದ ನಂತರವು ಅವರ ತೇಜೋವಧೆ ಮುಂದುವರೆದಿದ್ದು, ಅವರ ಮಾತಿನ ತಾತ್ಪರ್ಯವನ್ನು ಬದಲಾಯಿಸಿ ಬಲಪಂಥೀಯರು ಅವರನ್ನು ಅವಹೇಳನ ಮಾಡುತ್ತಿದೆ.

ಇದನ್ನೂ ಓದಿ: ಕುರಿ-ಆಡು ರಕ್ತದ ಫ್ರೈ ಲಾಕಿ ಮಾಡುವುದು ಹೇಗೆ?: ಇಲ್ಲಿದೆ ಬೊಂಬಾಟ್ ರೆಸಿಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾವಿನ ವಿಷ ಪ್ರಕರಣ : ಎಲ್ವಿಶ್ ಯಾದವ್ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧದ ಹಾವಿನ ವಿಷ ಪ್ರಕರಣಕ್ಕೆ ಸಂಬಂಧಿಸಿದ ಎಫ್‌ಐಆರ್ ಮತ್ತು ಕ್ರಿಮಿನಲ್ ಪ್ರಕ್ರಿಯೆಗಳನ್ನು ಸುಪ್ರೀಂ ಕೋರ್ಟ್ ಗುರುವಾರ (ಮಾ.19) ರದ್ದುಗೊಳಿಸಿದೆ.  ವನ್ಯಜೀವಿ (ರಕ್ಷಣೆ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲು ಅಧಿಕೃತ ವ್ಯಕ್ತಿಯಿಂದ ದೂರು...

ದೆಹಲಿಯ ಉತ್ತಮ್ ನಗರದಲ್ಲಿ ಮುಸ್ಲಿಮರಿಗೆ ಬೆದರಿಕೆ; ಅಮಿತ್ ಶಾಗೆ ಪತ್ರ ಬರೆದ ವಿಪಕ್ಷ ಸಂಸದರು

ರಾಷ್ಟ್ರ ರಾಜಧಾನಿಯ ಉತ್ತಮ್ ನಗರದಲ್ಲಿ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಹಿಂದುತ್ವ ಗುಂಪುಗಳು ಮಾಡುತ್ತಿರುವ ಬೆದರಿಕೆಗಳ ಬಗ್ಗೆ ತುರ್ತು ಹಸ್ತಕ್ಷೇಪವನ್ನು ಕೋರಿ ಹಲವಾರು ವಿರೋಧ ಪಕ್ಷದ ಸದಸ್ಯರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ...

‘ಇರಾನ್ ಕತಾರ್ ಮೇಲೆ ಮತ್ತೊಮ್ಮೆ ದಾಳಿ ಮಾಡಿದರೆ, ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಸ್ಪೋಟಿಸುತ್ತೇವೆ’; ಟ್ರಂಪ್ ಬೆದರಿಕೆ

ಇರಾನ್ ಕತಾರ್‌ನ ಇಂಧನ ಸೌಲಭ್ಯಗಳನ್ನು ಗುರಿಯಾಗಿಸಿಕೊಂಡರೆ, ಅಮೆರಿಕ ”ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಬೃಹತ್ ಪ್ರಮಾಣದಲ್ಲಿ ಸ್ಫೋಟಿಸುತ್ತದೆ” ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ರಾಜ್ಯಸಭೆಯಲ್ಲಿ ಎಚ್ಚರಿಸಿದ್ದಾರೆ. ಇರಾನ್‌ನ ಸೌತ್ ಪಾರ್ಸ್ ಗ್ಯಾಸ್...

ಮುಸ್ಲಿಂ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ್ದಾಗಿ ಹೇಳಿಕೊಂಡ ಓಲಾ ಚಾಲಕ; ‘ಇಸ್ಲಾಮೋಫೋಬಿಕ್’ ಕುರಿತು ಆತಂಕ ವ್ಯಕ್ತಪಡಿಸಿದ ವಕೀಲ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿನ ಓಲಾ ಕ್ಯಾಬ್ ಪ್ರಯಾಣದ ಸಂದರ್ಭದಲ್ಲಿ ಚಾಲಕನಿಂದ ನನಗೆ ಬೆದರಿಕೆ ಮತ್ತು ಇಸ್ಲಾಮೋಫೋಬಿಕ್ ಹೇಳಿಕೆಗಳು ಬಂದಿವೆ ಎಂದು ಸುಪ್ರೀಂ ಕೋರ್ಟ್ ವಕೀಲರೊಬ್ಬರು ಆರೋಪಿಸಿದ್ದಾರೆ. ಈ ಘಟನೆಯು, ಪ್ರಯಾಣಿಕರ ಸುರಕ್ಷತೆ ಮತ್ತು...

ಬೆಳ್ತಂಗಡಿ | ಮುಸ್ಲಿಂ ಬಾಲಕನ ಮೇಲೆ ಗುಂಪು ಹಲ್ಲೆ ಆರೋಪ; ಬಜರಂಗದಳದ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಸ್ನೇಹಿತರೊಂದಿಗೆ ತೆರಳಿದ್ದ ಮುಸ್ಲಿಂ ಬಾಲಕನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ, ಅಪಹರಿಸಿ, ಬೆದರಿಕೆ ಹಾಕಿ ಆತ್ಮಹತ್ಯೆಗೆ ಪ್ರೇರೇಪಿಸಿದ ಆರೋಪದಡಿ...

ಉಮರ್ ಖಾಲಿದ್ ಬಂಧನ ನಿರಂಕುಶ; ಕಾನೂನು ಆಧಾರವಿಲ್ಲ: ವಿಶ್ವಸಂಸ್ಥೆ ಕಾರ್ಯಪಡೆ

"ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಕಾರ್ಯಕರ್ತ ಮತ್ತು ಸಂಶೊಧನಾ ವಿದ್ಯಾರ್ಥಿ ಉಮರ್ ಖಾಲಿದ್ ಅವರ ಬಂಧನವು ನಿರಂಕುಶವಾಗಿದೆ, ಅದಕ್ಕೆ ಯಾವುದೇ ಕಾನೂನು ಆಧಾರವಿಲ್ಲ" ಎಂದು ವಿಶ್ವಸಂಸ್ಥೆಯ ಸಮಿತಿ ಹೇಳಿದೆ. ಸಾಮಾಜಿಕ ಕಾರ್ಯಕರ್ತರ...

ಮಹಾರಾಷ್ಟ್ರ | ಲೈಂಗಿಕ ದೌರ್ಜನ್ಯ ಆರೋಪ : ಸ್ವಯಂ ಘೋಷಿತ ದೇವಮಾನವನ ಬಂಧನ

ಮಹಿಳೆಯರನ್ನು ಅಸಭ್ಯವಾಗಿ ಚಿತ್ರೀಕರಿಸಿ, ಆ ವಿಡಿಯೋಗಳನ್ನು ಇಟ್ಟುಕೊಂಡು ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದ ಆರೋಪದ ಮೇಲೆ ಸ್ವಯಂಘೋಷಿತ ದೇವಮಾನವ ಮತ್ತು ಜ್ಯೋತಿಷಿ ಕ್ಯಾಪ್ಟನ್ ಅಶೋಕ್ ಖಾರಟ್‌ನನ್ನು ಮಹಾರಾಷ್ಟ್ರದ ನಾಸಿಕ್ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ....

‘ಕಾಂಗ್ರೆಸ್ ಜೊತೆ ಬಲವಂತದ ಮದುವೆ ಆಗಿತ್ತು’: ಖರ್ಗೆ ಅವರ ‘ಮೋದಿ ಜೊತೆ ಮದುವೆ’ ಟೀಕೆಗೆ ದೇವೇಗೌಡ ತಿರುಗೇಟು

ಸಂಸತ್ತಿನಲ್ಲಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ 'ಮದುವೆ' ಮತ್ತು 'ಪ್ರೀತಿ' ಹೇಳಿಕೆಗೆ ಮಾಜಿ ಪ್ರಧಾನಿ ಮತ್ತು ರಾಜ್ಯಸಭಾ ಸಂಸದ ಎಚ್‌ಡಿ ದೇವೇಗೌಡ ಪ್ರತಿಕ್ರಿಯಿಸಿದ್ದಾರೆ. ದೇವೇಗೌಡರು ಕಾಂಗ್ರೆಸ್ ಅನ್ನು "ಪ್ರೀತಿಸಿದರು" ಆದರೆ ಮೋದಿ (ಬಿಜೆಪಿ)...

ರಾಹುಲ್ ಗಾಂಧಿಯನ್ನು ‘ಟಪೋರಿ’ ಎಂದು ಕರೆದ ಬಿಜೆಪಿ ಸಂಸದೆ ಕಂಗನಾ ರಣಾವತ್

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಸಂಸದೆ - ನಟಿ ಕಂಗನಾ ರನೌತ್, ಅವರನ್ನು ಟಪೋರಿ ಎಂದು ಕರೆದಿದ್ದಾರೆ. ಅವರ ನಡವಳಿಕೆಯು ಮಹಿಳೆಯರಿಗೆ ಅನಾನುಕೂಲವನ್ನುಂಟು ಮಾಡುತ್ತದೆ ಎಂದು...

ಎಸ್‌ಬಿಐಗೆ ವಂಚನೆ ಪ್ರಕರಣ : ಅನಿಲ್ ಅಂಬಾನಿ ವಿಚಾರಣೆ ನಡೆಸಿದ ಸಿಬಿಐ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ದೂರಿನ ಮೇರೆಗೆ ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ ವಿರುದ್ಧ ದಾಖಲಾಗಿರುವ 2,929 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ (ಮಾ.19) ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಅವರನ್ನು ಕೇಂದ್ರ...