Homeಕರ್ನಾಟಕಸಂಗೀತ ನಿರ್ದೇಶಕ ಹಂಸಲೇಖ ಅವರನ್ನು ಬೆಂಬಲಿಸಿ ವಿದ್ಯಾರ್ಥಿಗಳಿಂದ ಬೃಹತ್‌ ರ್‍ಯಾಲಿ

ಸಂಗೀತ ನಿರ್ದೇಶಕ ಹಂಸಲೇಖ ಅವರನ್ನು ಬೆಂಬಲಿಸಿ ವಿದ್ಯಾರ್ಥಿಗಳಿಂದ ಬೃಹತ್‌ ರ್‍ಯಾಲಿ

ಮೈಸೂರಿನಲ್ಲಿ ದಸಂಸ ಪ್ರತಿಭಟನೆ ನಡೆಸಿ ಚಿತ್ರ ಸಾಹಿತಿಯ ಹೇಳಿಕೆಯನ್ನು ಬೆಂಬಲಿಸಿದೆ

- Advertisement -
- Advertisement -

ಖ್ಯಾತ ಸಂಗೀತ ನಿರ್ದೇಶಕ, ಸಾಹಿತಿ ಹಂಸಲೇಖ ಅವರು ಇತ್ತೀಚೆಗೆ ಮೈಸೂರಿನಲ್ಲಿ ನೀಡಿದ್ದ ಹೇಳಿಕೆಯನ್ನು ಬೆಂಬಲಿಸಿ, ಬಲಪಂಥೀಯರು ಅವರ ಮೇಲೆ ದಾಳಿ ಮಾಡುತ್ತಿರುವುದನ್ನು ವಿರೋಧಿಸಿ ಹಾಗೂ ಅವರಿಗೆ ಸೂಕ್ತ ರೀತಿಯ ಭದ್ರತೆ ಒದಗಿಸುವಂತೆ ಕೋರಿ ಬೆಂಗಳೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟವು ಗುರುವಾರದಂದು ವಿಶ್ವವಿದ್ಯಾಲಯ ಆವರಣದಲ್ಲಿ ಪ್ರತಿಭಟನಾ ರ್‍ಯಾಲಿ ನಡೆಸಿದೆ. ಜೊತೆಗೆ ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಕೂಡಾ ದಲಿತ ಸಂಘರ್ಷ ಸಮಿತಿ ಹಾಗೂ ಸಂಶೋಧನಾ ವಿದ್ಯಾರ್ಥಿಗಳು ತಮ್ಮ ಪ್ರತಿಭಟನೆ ದಾಖಲಿಸಿ ಹಂಸಲೇಖ ಅವರಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ವಿಶ್ವವಿದ್ಯಾಲಯದಲ್ಲಿ ನಡೆದ ಪ್ರತಿಭಟನಾ ರ್‍ಯಾಲಿಯಲ್ಲಿ ಸುಮಾರು 1,500 ವಿದ್ಯಾರ್ಥಿಗಳು ಪಾಲ್ಗೊಂಡಿದ್ದಾರೆ ಎಂದು ಪ್ರತಿಭಟನೆಯ ಆಯೋಜಕರು ನಾನುಗೌರಿ.ಕಾಂಗೆ ತಿಳಿಸಿದ್ದಾರೆ.

“ವಿಶ್ವವಿದ್ಯಾಲಯದ ಎಲ್ಲಾ ವಿಭಾಗಗಳನ್ನು ಮುಚ್ಚುವ ಮೂಲಕ ಎಲ್ಲಾ ವಿದ್ಯಾರ್ಥಿಗಳು ಪ್ರತಿಭಟನಾ ರ್‍ಯಾಲಿಯಲ್ಲಿ ಪಾಲ್ಗೊಂಡಿದ್ದರು. ಮುಖ್ಯವಾಗಿ ವಿಶ್ವವಿದ್ಯಾಲಯದ ಹಾಸ್ಟೆಲ್‌ಗಳಿಂದ ಪ್ರಾರಂಭಗೊಂಡ ರ್‍ಯಾಲಿ, ಅಂಬೇಡ್ಕರ್ ಕೇಂದ್ರ ಗ್ರಂಥಾಲಯದ ಮೂಲಕ ಸಾಗಿ, ಎಲ್ಲಾ ವಿಭಾಗಗಳಿಗೆ ಭೇಟಿ ಕೊಟ್ಟು ಅಲ್ಲಿನ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ಅವರನ್ನೂ ಒಳಗೊಂಡು ಆಡಳಿತ ಕಚೇರಿಯ ಮುಂದೆ ಇರುವ ಅಂಬೇಡ್ಕರ್‌ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಸಾರ್ವಜನಿಕ ಜಾಗೃತಿ ನಡೆಸಲಾಯಿತು” ಎಂದು ಪ್ರತಿಭಟನೆಯ ಸಂಚಾಲಕರಲ್ಲೊಬ್ಬರಾದ ಲೋಕೇಶ್‌ ಹೇಳಿದ್ದಾರೆ.

ಇದನ್ನೂ ಓದಿ: ಜಾತಿಕೂಪದ ವಿರಾಟ್‌ರೂಪವನ್ನು ಬಿಚ್ಚಿಟ್ಟ ಹಂಸಲೇಖ ಘಟನೆ!

“ಪ್ರಜಾತ್ಪಾತ್ಕಕ ವ್ಯವಸ್ಥೆಯಲ್ಲಿ ಜನರ ಮೂಲಭೂತ ಹಕ್ಕುಗಳಾದ ವಾಕ್‌ ಸ್ವಾತಂತ್ರ್ಯ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಕುತ್ತು ಬರುತ್ತಿರುವುದು ಆತಂಕಕಾರಿ ಮತ್ತು ಅಪಾಯಕಾರಿ ಬೆಳವಣಿಗೆ. ಇತ್ತೀಚಿನ ದಿನಗಳಲ್ಲಿ ಬ್ರಾಹ್ಮಣ್ಯವನ್ನು ಕುರಿತು ಸತ್ಯವನ್ನು ಮಾತನಾಡುವುದು, ಬರೆಯುವುದು ಮಹಾ ಅಪರಾಧವಾಗಿ ಬಿಂಬಿತವಾಗುತ್ತಿದೆ. ಹಂಸಲೇಖರವರು ಅಸ್ಪಶ್ಯತೆಯ ನಿರ್ಮೂಲನೆಗೆ ಸಂಬಂಧಿಸಿದಂತೆ ದಲಿತರು ಮತ್ತು ಶೂದ್ರ ಸಮುದಾಯದ ಆಹಾರ ಸಂಸ್ಕೃತಿಯನ್ನು ಉಲ್ಲೇಖಿಸಿ ಮಾತನಾಡಿರುವುದು ಸಾ೦ದರ್ಭಿಕವಾದರೂ ಸಾರ್ವಕಾಲಿಕ ಮತ್ತು ಸಂವಿಧಾನಾತ್ಮಕವಾಗಿದೆ” ಎಂದು ಒಕ್ಕೂಟ ಹೇಳಿದೆ.

“ಈ ದೇಶದ ಮನುವಾದಿಗಳಿಗೆ ಅಪರೂಪಕ್ಕಾದರು ಸತ್ಯವನ್ನು ಸಹಿಸಿಕೊಳ್ಳುವ, ಸತ್ಯವನ್ನು ಒಪ್ಪಿಕೊಳ್ಳುವ, ತಾವು ಮಾಡಿರುವ ತಪ್ಪುಗಳನ್ನು ಸರಿಪಡಿಸಿಕೊಳ್ಳುವ, ತಪ್ಪುಗಳನ್ನು ತಿದ್ದಿದವರಿಗೆ ಕೃತಜ್ಞತೆ ಸಲ್ಲಿಸುವ ದೊಡ್ಡ ಗುಣ ಇಲ್ಲಿಯವರೆವಿಗೂ ಬಾರದೆ ಇರುವುದು ದುರದೃಷ್ಟಕರ” ಎಂದು ಒಕ್ಕೂಟವು ಆಕ್ರೋಶ ವ್ಯಕ್ತಪಡಿಸಿದೆ.

ಪ್ರತಿಭಟನಾ ರ್‍ಯಾಲಿಯಲ್ಲಿ ವಿದ್ಯಾರ್ಥಿ ಮುಖಂಡರಾದ ವೆಂಕಟೇಶ್‌ ವಿ.ಎಸ್., ಗೋಪಾಲ್ ಜಿ., ಲೋಕೇಶ್‌ ಎನ್‌.ಆರ್‌., ಸತೀಶ್‌‌ ಜಿ.ಕೆ., ಲೋಕೇಶ್‌ ಎನ್., ಚಂದ್ರು ಪೆರಿಯಾರ್‌, ಯಲ್ಲಪ್ಪ ಕೆ.ಜಿ., ಈಶ್ವರ್‌ ಸೇರಿದಂತೆ ಹಲವರು ಭಾಗವಹಿಸಿದ್ದರು.

ಮೈಸೂರಿನಲ್ಲಿ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ

ಮೈಸೂರಿನಲ್ಲೂ ಹಂಸಲೇಖ ಅವರ ಹೇಳಿಕೆಯನ್ನು ಬೆಂಬಲಿಸಿ ಹಾಗೂ ಅವರ ಮೇಲಿನ ದಾಳಿಯನ್ನು ವಿರೋಧಿಸಿ ದಲಿತ ಸಂಘರ್ಷ ಸಮಿತಿಯು ಪ್ರತಿಭಟನೆ ನಡೆಸಿತು.

“ಹಂಸಲೇಖರವರ ಸಮಾನತೆ ಪರ, ಭ್ರಾತೃತ್ವದ ಪರವಾದ ಮಾತುಗಳು ಬ್ರಾಹ್ಮಣಶಾಹಿ ಮನಸ್ಸುಗಳ ಎದೆಯನ್ನು ಇರಿದಂತಿದೆ. ಹಾಗಾಗಿ ಸಾಮಾಜಿಕ ಜಾಲತಾಣಗಳಲ್ಲಿ ಅವರನ್ನು ಕ್ಷಮೆಯಾಚಿಸುವಂತೆ ಒತ್ತಡ ಹೇರಿ, ಭಯದ ವಾತಾವರಣವನ್ನು ನಿರ್ಮಿಸಲಾಗಿದೆ” ಎಂದು ಸಂಘರ್ಷ ಸಮಿತಿಯು ಹೇಳಿದೆ.

ಇಷ್ಟೇ ಅಲ್ಲದೆ, ಇತ್ತೀಚೆಗೆ ರಾಜಕೀಯ ಚರ್ಚಾ ವಿಷಯ ಆಗಿರುವ ಬಿಟ್‌ ಕಾಯಿನ್‌ ವಿಚಾರದಲ್ಲಿ ಶಾಸಕ ಪ್ರಿಯಾಂಕ್‌ ಖರ್ಗೆ ಅವರು ಎತ್ತಿರುವ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ್ದ ಬಿಜೆಪಿ ಸಂಸದ ಪ್ರತಾಪ್‌ ಸಿಂಹ ಕೀಳು ಮಟ್ಟದಲ್ಲಿ ಪ್ರತಿಕ್ರಿಯಿಸಿ, ಕೋಮು ದ್ವೇಷವನ್ನು ಕಾರಿದ್ದರು. ಪ್ರತಾಪ್ ಸಿಂಹ ಅವರ ಹೇಳಿಕೆಯನ್ನು ವಿರೋಧಿಸಿಯು ಬೆಂಗಳೂರು ಮತ್ತು ಮೈಸೂರಿನ ಪ್ರತಿಭಟನೆಗಳಲ್ಲಿ ಆಕ್ರೋಶದ ಧ್ವನಿ ವ್ಯಕ್ತವಾಗಿತ್ತು.

“ಹಗರಣದ ಕುರಿತಂತೆ ಪ್ರಿಯಾಂಕ್‌ ಖರ್ಗೆಯವರು ಎತ್ತಿರುವ ಪ್ರಶ್ನೆಗಳಿಗೆ ಸರ್ಕಾರಕ್ಕೆ ಉತ್ತರಿಸಲಾಗುತ್ತಿಲ್ಲ. ಹೀಗಾಗಿ ಸರ್ಕಾರ ವ್ಯರ್ಥವಾಗಿ ತಮ್ಮ ಅಂಧಾಭಿಮಾನಿಗಳ ಮೂಲಕ ಜನರ ಮನಸ್ಸನ್ನು ಬೇರೆಡೆ ಸೆಳೆಯಲು ತಂತ್ರ ಹೂಡುತ್ತಿದೆ. ಹಾಗಾಗಿಯೆ ಹಂಸಲೇಖ ಅವರ ನ್ಯಾಯಯುತವಾದ ಹೇಳಿಕೆಯನ್ನು ನೆಪವಾಗಿಟ್ಟುಕೊಂಡು ಹಿಂದುಳಿದ ಶೋಷಿತ ಸಮುದಾಯಗಳ ಭಾವನೆಗಳ ವಿರುದ್ಧವಾಗಿ ಹೇಳಿಕೆಯನ್ನು ನೀಡುವುದು, ದೂರು ದಾಖಲಿಸುವುದು, ಹಲ್ಲೆ ನಡೆಸುವುದು, ಭಯ ಹುಟ್ಟಿಸುವುದು ಸೇರಿದಂತೆ ಸತ್ಯ ಹೇಳುವವರ ಬಾಯಿ ಮುಚ್ಚಿಸುವ ನಡೆಯನ್ನು ಅನುಸರಿಸುತ್ತಿದೆ” ಎಂದು ದಲಿತ ಸಂಘರ್ಷ ಸಮಿತಿಯು ಕಿಡಿಕಾರಿದೆ.

ಇದನ್ನೂ ಓದಿ: ‘ಬಾಡು ಸಪ್ತಾಹ’: ಸಾಮಾಜಿಕ ಜಾಲತಾಣದಲ್ಲಿ #ಬಾಡೇ_ನಮ್_ಗಾಡು ಅಭಿಯಾನ!

ಜೊತೆಗೆ ಪ್ರಚೋದನಕಾರಿ, ಸಂವಿಧಾನ ವಿರೋಧಿ ಕಾನೂನುಬಾಹಿರ ಹೇಳಿಕೆಗಳನ್ನು ನೀಡುತ್ತಾ ಕೋಮುದ್ವೇಷ ಹರಡುವ ಮತ್ತು ಸಮಾಜದಲ್ಲಿ ಶಾಂತಿ ಕದಡುತ್ತಿರುವ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಇತರರ ಹೇಳಿಕೆಗಳಿಗೆ ಕಡಿವಾಣ ಹಾಕಬೇಕು ಹಾಗೂ ಇಂತಹ ಹೇಳಿಕೆ ನೀಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ದಸಂಸ ಸರ್ಕಾರಕ್ಕೆ ಒತ್ತಾಯಿಸಿದೆ.

ಹಂಸಲೇಖ ಅವರು ಇತ್ತೀಚೆಗೆ ಮೈಸೂರಿನಲ್ಲಿ ದಲಿತರ ಮನೆಗೆ ಬಲಿತವರು ಹೋಗುವುದು ಬೂಟಾಟಿಕೆ ಎಂಬರ್ಥದಲ್ಲಿ ಮಾತನಾಡುತ್ತಾ, ಪೇಜಾವರ ಸ್ವಾಮಿಯ ಉದಾಹರಣೆಯನ್ನು ನೀಡಿದ್ದರು. ಈ ವೇಳೆ ಅವರು, “ಪೇಜಾವರ ಸ್ವಾಮಿ ದಲಿತರ ಮನೆಗೆ ಹೋಗಲು ಮಾತ್ರ ಆಗುವುದು. ಅವರು ಕೋಳಿ ಕೊಟ್ಟರೆ ತಿನ್ನಕ್ಕಾಗುತ್ತಾ? ಕುರಿಯ ರಕ್ತದ ಫ್ರೈ ಮಾಡಿ ಕೊಟ್ಟರೆ ಅವರು ತಿನ್ನುತ್ತಾರೆಯೆ? ಲಿವರ್‌ ಕೊಟ್ಟರೆ ತಿನ್ನುತ್ತಾರಾ? ದಲಿತರ ಮನೆಗೆ ಬಲಿತವರು ಹೋಗುವುದು ಏನು ದೊಡ್ಡ ವಿಷಯ?” ಎಂದು ಪ್ರಶ್ನಿಸಿದ್ದರು.

ಈ ಹೇಳಿಕೆ ವೈರಲ್‌ ಆಗುತ್ತಿದ್ದಂತೆ ಹಂಸಲೇಖ ಅವರ ತೇಜೋವಧೆ ಮಾಡಲಾಗಿತ್ತು. ಅವರ ಫೋನ್‌ ನಂಬರ್‌ಗಳನ್ನು ವಾಟ್ಸಪ್‌ ಗ್ರೂಪ್‌ಗಳಲ್ಲಿ ಹರಿಯ ಬಿಟ್ಟು ಅವರಿಗೆ ನಿರಂತರ ಕಿರುಕುಳ ಕೂಡಾ ನೀಡಲಾಗಿತ್ತು ಎಂದು ಆರೋಪಿಸಲಾಗಿದೆ. ಇದರ ನಂತರ ಹಂಸಲೇಖ ಅವರು, ತಾನು ಅಂತಹ ವೇದಿಕೆಗಳಲ್ಲಿ ಈ ಮಾತುಗಳನ್ನು ಹೇಳಬಾರದಿತ್ತು ಎಂದು ಹೇಳಿ ಕ್ಷಮೆ ಕೇಳಿದ್ದರು. ಕ್ಷಮೆ ಕೇಳಿದ ನಂತರವು ಅವರ ತೇಜೋವಧೆ ಮುಂದುವರೆದಿದ್ದು, ಅವರ ಮಾತಿನ ತಾತ್ಪರ್ಯವನ್ನು ಬದಲಾಯಿಸಿ ಬಲಪಂಥೀಯರು ಅವರನ್ನು ಅವಹೇಳನ ಮಾಡುತ್ತಿದೆ.

ಇದನ್ನೂ ಓದಿ: ಕುರಿ-ಆಡು ರಕ್ತದ ಫ್ರೈ ಲಾಕಿ ಮಾಡುವುದು ಹೇಗೆ?: ಇಲ್ಲಿದೆ ಬೊಂಬಾಟ್ ರೆಸಿಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...