Homeಕರ್ನಾಟಕಸಂಗೀತ ನಿರ್ದೇಶಕ ಹಂಸಲೇಖ ಅವರನ್ನು ಬೆಂಬಲಿಸಿ ವಿದ್ಯಾರ್ಥಿಗಳಿಂದ ಬೃಹತ್‌ ರ್‍ಯಾಲಿ

ಸಂಗೀತ ನಿರ್ದೇಶಕ ಹಂಸಲೇಖ ಅವರನ್ನು ಬೆಂಬಲಿಸಿ ವಿದ್ಯಾರ್ಥಿಗಳಿಂದ ಬೃಹತ್‌ ರ್‍ಯಾಲಿ

ಮೈಸೂರಿನಲ್ಲಿ ದಸಂಸ ಪ್ರತಿಭಟನೆ ನಡೆಸಿ ಚಿತ್ರ ಸಾಹಿತಿಯ ಹೇಳಿಕೆಯನ್ನು ಬೆಂಬಲಿಸಿದೆ

- Advertisement -
- Advertisement -

ಖ್ಯಾತ ಸಂಗೀತ ನಿರ್ದೇಶಕ, ಸಾಹಿತಿ ಹಂಸಲೇಖ ಅವರು ಇತ್ತೀಚೆಗೆ ಮೈಸೂರಿನಲ್ಲಿ ನೀಡಿದ್ದ ಹೇಳಿಕೆಯನ್ನು ಬೆಂಬಲಿಸಿ, ಬಲಪಂಥೀಯರು ಅವರ ಮೇಲೆ ದಾಳಿ ಮಾಡುತ್ತಿರುವುದನ್ನು ವಿರೋಧಿಸಿ ಹಾಗೂ ಅವರಿಗೆ ಸೂಕ್ತ ರೀತಿಯ ಭದ್ರತೆ ಒದಗಿಸುವಂತೆ ಕೋರಿ ಬೆಂಗಳೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟವು ಗುರುವಾರದಂದು ವಿಶ್ವವಿದ್ಯಾಲಯ ಆವರಣದಲ್ಲಿ ಪ್ರತಿಭಟನಾ ರ್‍ಯಾಲಿ ನಡೆಸಿದೆ. ಜೊತೆಗೆ ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಕೂಡಾ ದಲಿತ ಸಂಘರ್ಷ ಸಮಿತಿ ಹಾಗೂ ಸಂಶೋಧನಾ ವಿದ್ಯಾರ್ಥಿಗಳು ತಮ್ಮ ಪ್ರತಿಭಟನೆ ದಾಖಲಿಸಿ ಹಂಸಲೇಖ ಅವರಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ವಿಶ್ವವಿದ್ಯಾಲಯದಲ್ಲಿ ನಡೆದ ಪ್ರತಿಭಟನಾ ರ್‍ಯಾಲಿಯಲ್ಲಿ ಸುಮಾರು 1,500 ವಿದ್ಯಾರ್ಥಿಗಳು ಪಾಲ್ಗೊಂಡಿದ್ದಾರೆ ಎಂದು ಪ್ರತಿಭಟನೆಯ ಆಯೋಜಕರು ನಾನುಗೌರಿ.ಕಾಂಗೆ ತಿಳಿಸಿದ್ದಾರೆ.

“ವಿಶ್ವವಿದ್ಯಾಲಯದ ಎಲ್ಲಾ ವಿಭಾಗಗಳನ್ನು ಮುಚ್ಚುವ ಮೂಲಕ ಎಲ್ಲಾ ವಿದ್ಯಾರ್ಥಿಗಳು ಪ್ರತಿಭಟನಾ ರ್‍ಯಾಲಿಯಲ್ಲಿ ಪಾಲ್ಗೊಂಡಿದ್ದರು. ಮುಖ್ಯವಾಗಿ ವಿಶ್ವವಿದ್ಯಾಲಯದ ಹಾಸ್ಟೆಲ್‌ಗಳಿಂದ ಪ್ರಾರಂಭಗೊಂಡ ರ್‍ಯಾಲಿ, ಅಂಬೇಡ್ಕರ್ ಕೇಂದ್ರ ಗ್ರಂಥಾಲಯದ ಮೂಲಕ ಸಾಗಿ, ಎಲ್ಲಾ ವಿಭಾಗಗಳಿಗೆ ಭೇಟಿ ಕೊಟ್ಟು ಅಲ್ಲಿನ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ಅವರನ್ನೂ ಒಳಗೊಂಡು ಆಡಳಿತ ಕಚೇರಿಯ ಮುಂದೆ ಇರುವ ಅಂಬೇಡ್ಕರ್‌ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಸಾರ್ವಜನಿಕ ಜಾಗೃತಿ ನಡೆಸಲಾಯಿತು” ಎಂದು ಪ್ರತಿಭಟನೆಯ ಸಂಚಾಲಕರಲ್ಲೊಬ್ಬರಾದ ಲೋಕೇಶ್‌ ಹೇಳಿದ್ದಾರೆ.

ಇದನ್ನೂ ಓದಿ: ಜಾತಿಕೂಪದ ವಿರಾಟ್‌ರೂಪವನ್ನು ಬಿಚ್ಚಿಟ್ಟ ಹಂಸಲೇಖ ಘಟನೆ!

“ಪ್ರಜಾತ್ಪಾತ್ಕಕ ವ್ಯವಸ್ಥೆಯಲ್ಲಿ ಜನರ ಮೂಲಭೂತ ಹಕ್ಕುಗಳಾದ ವಾಕ್‌ ಸ್ವಾತಂತ್ರ್ಯ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಕುತ್ತು ಬರುತ್ತಿರುವುದು ಆತಂಕಕಾರಿ ಮತ್ತು ಅಪಾಯಕಾರಿ ಬೆಳವಣಿಗೆ. ಇತ್ತೀಚಿನ ದಿನಗಳಲ್ಲಿ ಬ್ರಾಹ್ಮಣ್ಯವನ್ನು ಕುರಿತು ಸತ್ಯವನ್ನು ಮಾತನಾಡುವುದು, ಬರೆಯುವುದು ಮಹಾ ಅಪರಾಧವಾಗಿ ಬಿಂಬಿತವಾಗುತ್ತಿದೆ. ಹಂಸಲೇಖರವರು ಅಸ್ಪಶ್ಯತೆಯ ನಿರ್ಮೂಲನೆಗೆ ಸಂಬಂಧಿಸಿದಂತೆ ದಲಿತರು ಮತ್ತು ಶೂದ್ರ ಸಮುದಾಯದ ಆಹಾರ ಸಂಸ್ಕೃತಿಯನ್ನು ಉಲ್ಲೇಖಿಸಿ ಮಾತನಾಡಿರುವುದು ಸಾ೦ದರ್ಭಿಕವಾದರೂ ಸಾರ್ವಕಾಲಿಕ ಮತ್ತು ಸಂವಿಧಾನಾತ್ಮಕವಾಗಿದೆ” ಎಂದು ಒಕ್ಕೂಟ ಹೇಳಿದೆ.

“ಈ ದೇಶದ ಮನುವಾದಿಗಳಿಗೆ ಅಪರೂಪಕ್ಕಾದರು ಸತ್ಯವನ್ನು ಸಹಿಸಿಕೊಳ್ಳುವ, ಸತ್ಯವನ್ನು ಒಪ್ಪಿಕೊಳ್ಳುವ, ತಾವು ಮಾಡಿರುವ ತಪ್ಪುಗಳನ್ನು ಸರಿಪಡಿಸಿಕೊಳ್ಳುವ, ತಪ್ಪುಗಳನ್ನು ತಿದ್ದಿದವರಿಗೆ ಕೃತಜ್ಞತೆ ಸಲ್ಲಿಸುವ ದೊಡ್ಡ ಗುಣ ಇಲ್ಲಿಯವರೆವಿಗೂ ಬಾರದೆ ಇರುವುದು ದುರದೃಷ್ಟಕರ” ಎಂದು ಒಕ್ಕೂಟವು ಆಕ್ರೋಶ ವ್ಯಕ್ತಪಡಿಸಿದೆ.

ಪ್ರತಿಭಟನಾ ರ್‍ಯಾಲಿಯಲ್ಲಿ ವಿದ್ಯಾರ್ಥಿ ಮುಖಂಡರಾದ ವೆಂಕಟೇಶ್‌ ವಿ.ಎಸ್., ಗೋಪಾಲ್ ಜಿ., ಲೋಕೇಶ್‌ ಎನ್‌.ಆರ್‌., ಸತೀಶ್‌‌ ಜಿ.ಕೆ., ಲೋಕೇಶ್‌ ಎನ್., ಚಂದ್ರು ಪೆರಿಯಾರ್‌, ಯಲ್ಲಪ್ಪ ಕೆ.ಜಿ., ಈಶ್ವರ್‌ ಸೇರಿದಂತೆ ಹಲವರು ಭಾಗವಹಿಸಿದ್ದರು.

ಮೈಸೂರಿನಲ್ಲಿ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ

ಮೈಸೂರಿನಲ್ಲೂ ಹಂಸಲೇಖ ಅವರ ಹೇಳಿಕೆಯನ್ನು ಬೆಂಬಲಿಸಿ ಹಾಗೂ ಅವರ ಮೇಲಿನ ದಾಳಿಯನ್ನು ವಿರೋಧಿಸಿ ದಲಿತ ಸಂಘರ್ಷ ಸಮಿತಿಯು ಪ್ರತಿಭಟನೆ ನಡೆಸಿತು.

“ಹಂಸಲೇಖರವರ ಸಮಾನತೆ ಪರ, ಭ್ರಾತೃತ್ವದ ಪರವಾದ ಮಾತುಗಳು ಬ್ರಾಹ್ಮಣಶಾಹಿ ಮನಸ್ಸುಗಳ ಎದೆಯನ್ನು ಇರಿದಂತಿದೆ. ಹಾಗಾಗಿ ಸಾಮಾಜಿಕ ಜಾಲತಾಣಗಳಲ್ಲಿ ಅವರನ್ನು ಕ್ಷಮೆಯಾಚಿಸುವಂತೆ ಒತ್ತಡ ಹೇರಿ, ಭಯದ ವಾತಾವರಣವನ್ನು ನಿರ್ಮಿಸಲಾಗಿದೆ” ಎಂದು ಸಂಘರ್ಷ ಸಮಿತಿಯು ಹೇಳಿದೆ.

ಇಷ್ಟೇ ಅಲ್ಲದೆ, ಇತ್ತೀಚೆಗೆ ರಾಜಕೀಯ ಚರ್ಚಾ ವಿಷಯ ಆಗಿರುವ ಬಿಟ್‌ ಕಾಯಿನ್‌ ವಿಚಾರದಲ್ಲಿ ಶಾಸಕ ಪ್ರಿಯಾಂಕ್‌ ಖರ್ಗೆ ಅವರು ಎತ್ತಿರುವ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ್ದ ಬಿಜೆಪಿ ಸಂಸದ ಪ್ರತಾಪ್‌ ಸಿಂಹ ಕೀಳು ಮಟ್ಟದಲ್ಲಿ ಪ್ರತಿಕ್ರಿಯಿಸಿ, ಕೋಮು ದ್ವೇಷವನ್ನು ಕಾರಿದ್ದರು. ಪ್ರತಾಪ್ ಸಿಂಹ ಅವರ ಹೇಳಿಕೆಯನ್ನು ವಿರೋಧಿಸಿಯು ಬೆಂಗಳೂರು ಮತ್ತು ಮೈಸೂರಿನ ಪ್ರತಿಭಟನೆಗಳಲ್ಲಿ ಆಕ್ರೋಶದ ಧ್ವನಿ ವ್ಯಕ್ತವಾಗಿತ್ತು.

“ಹಗರಣದ ಕುರಿತಂತೆ ಪ್ರಿಯಾಂಕ್‌ ಖರ್ಗೆಯವರು ಎತ್ತಿರುವ ಪ್ರಶ್ನೆಗಳಿಗೆ ಸರ್ಕಾರಕ್ಕೆ ಉತ್ತರಿಸಲಾಗುತ್ತಿಲ್ಲ. ಹೀಗಾಗಿ ಸರ್ಕಾರ ವ್ಯರ್ಥವಾಗಿ ತಮ್ಮ ಅಂಧಾಭಿಮಾನಿಗಳ ಮೂಲಕ ಜನರ ಮನಸ್ಸನ್ನು ಬೇರೆಡೆ ಸೆಳೆಯಲು ತಂತ್ರ ಹೂಡುತ್ತಿದೆ. ಹಾಗಾಗಿಯೆ ಹಂಸಲೇಖ ಅವರ ನ್ಯಾಯಯುತವಾದ ಹೇಳಿಕೆಯನ್ನು ನೆಪವಾಗಿಟ್ಟುಕೊಂಡು ಹಿಂದುಳಿದ ಶೋಷಿತ ಸಮುದಾಯಗಳ ಭಾವನೆಗಳ ವಿರುದ್ಧವಾಗಿ ಹೇಳಿಕೆಯನ್ನು ನೀಡುವುದು, ದೂರು ದಾಖಲಿಸುವುದು, ಹಲ್ಲೆ ನಡೆಸುವುದು, ಭಯ ಹುಟ್ಟಿಸುವುದು ಸೇರಿದಂತೆ ಸತ್ಯ ಹೇಳುವವರ ಬಾಯಿ ಮುಚ್ಚಿಸುವ ನಡೆಯನ್ನು ಅನುಸರಿಸುತ್ತಿದೆ” ಎಂದು ದಲಿತ ಸಂಘರ್ಷ ಸಮಿತಿಯು ಕಿಡಿಕಾರಿದೆ.

ಇದನ್ನೂ ಓದಿ: ‘ಬಾಡು ಸಪ್ತಾಹ’: ಸಾಮಾಜಿಕ ಜಾಲತಾಣದಲ್ಲಿ #ಬಾಡೇ_ನಮ್_ಗಾಡು ಅಭಿಯಾನ!

ಜೊತೆಗೆ ಪ್ರಚೋದನಕಾರಿ, ಸಂವಿಧಾನ ವಿರೋಧಿ ಕಾನೂನುಬಾಹಿರ ಹೇಳಿಕೆಗಳನ್ನು ನೀಡುತ್ತಾ ಕೋಮುದ್ವೇಷ ಹರಡುವ ಮತ್ತು ಸಮಾಜದಲ್ಲಿ ಶಾಂತಿ ಕದಡುತ್ತಿರುವ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಇತರರ ಹೇಳಿಕೆಗಳಿಗೆ ಕಡಿವಾಣ ಹಾಕಬೇಕು ಹಾಗೂ ಇಂತಹ ಹೇಳಿಕೆ ನೀಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ದಸಂಸ ಸರ್ಕಾರಕ್ಕೆ ಒತ್ತಾಯಿಸಿದೆ.

ಹಂಸಲೇಖ ಅವರು ಇತ್ತೀಚೆಗೆ ಮೈಸೂರಿನಲ್ಲಿ ದಲಿತರ ಮನೆಗೆ ಬಲಿತವರು ಹೋಗುವುದು ಬೂಟಾಟಿಕೆ ಎಂಬರ್ಥದಲ್ಲಿ ಮಾತನಾಡುತ್ತಾ, ಪೇಜಾವರ ಸ್ವಾಮಿಯ ಉದಾಹರಣೆಯನ್ನು ನೀಡಿದ್ದರು. ಈ ವೇಳೆ ಅವರು, “ಪೇಜಾವರ ಸ್ವಾಮಿ ದಲಿತರ ಮನೆಗೆ ಹೋಗಲು ಮಾತ್ರ ಆಗುವುದು. ಅವರು ಕೋಳಿ ಕೊಟ್ಟರೆ ತಿನ್ನಕ್ಕಾಗುತ್ತಾ? ಕುರಿಯ ರಕ್ತದ ಫ್ರೈ ಮಾಡಿ ಕೊಟ್ಟರೆ ಅವರು ತಿನ್ನುತ್ತಾರೆಯೆ? ಲಿವರ್‌ ಕೊಟ್ಟರೆ ತಿನ್ನುತ್ತಾರಾ? ದಲಿತರ ಮನೆಗೆ ಬಲಿತವರು ಹೋಗುವುದು ಏನು ದೊಡ್ಡ ವಿಷಯ?” ಎಂದು ಪ್ರಶ್ನಿಸಿದ್ದರು.

ಈ ಹೇಳಿಕೆ ವೈರಲ್‌ ಆಗುತ್ತಿದ್ದಂತೆ ಹಂಸಲೇಖ ಅವರ ತೇಜೋವಧೆ ಮಾಡಲಾಗಿತ್ತು. ಅವರ ಫೋನ್‌ ನಂಬರ್‌ಗಳನ್ನು ವಾಟ್ಸಪ್‌ ಗ್ರೂಪ್‌ಗಳಲ್ಲಿ ಹರಿಯ ಬಿಟ್ಟು ಅವರಿಗೆ ನಿರಂತರ ಕಿರುಕುಳ ಕೂಡಾ ನೀಡಲಾಗಿತ್ತು ಎಂದು ಆರೋಪಿಸಲಾಗಿದೆ. ಇದರ ನಂತರ ಹಂಸಲೇಖ ಅವರು, ತಾನು ಅಂತಹ ವೇದಿಕೆಗಳಲ್ಲಿ ಈ ಮಾತುಗಳನ್ನು ಹೇಳಬಾರದಿತ್ತು ಎಂದು ಹೇಳಿ ಕ್ಷಮೆ ಕೇಳಿದ್ದರು. ಕ್ಷಮೆ ಕೇಳಿದ ನಂತರವು ಅವರ ತೇಜೋವಧೆ ಮುಂದುವರೆದಿದ್ದು, ಅವರ ಮಾತಿನ ತಾತ್ಪರ್ಯವನ್ನು ಬದಲಾಯಿಸಿ ಬಲಪಂಥೀಯರು ಅವರನ್ನು ಅವಹೇಳನ ಮಾಡುತ್ತಿದೆ.

ಇದನ್ನೂ ಓದಿ: ಕುರಿ-ಆಡು ರಕ್ತದ ಫ್ರೈ ಲಾಕಿ ಮಾಡುವುದು ಹೇಗೆ?: ಇಲ್ಲಿದೆ ಬೊಂಬಾಟ್ ರೆಸಿಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...