Homeಅಂತರಾಷ್ಟ್ರೀಯಈಜಿಪ್ಟ್‌ನ ಸುಯೆಜ್ ಕಾಲುವೆಯ ಮಧ್ಯೆ ಸಿಲುಕಿದ ಬೃಹತ್ ಹಡಗು - ಕೋಟ್ಯಂತರ ಡಾಲರ್ ನಷ್ಟ!

ಈಜಿಪ್ಟ್‌ನ ಸುಯೆಜ್ ಕಾಲುವೆಯ ಮಧ್ಯೆ ಸಿಲುಕಿದ ಬೃಹತ್ ಹಡಗು – ಕೋಟ್ಯಂತರ ಡಾಲರ್ ನಷ್ಟ!

- Advertisement -
- Advertisement -

ಈಜಿಪ್ಟ್‌ನ ಅತಿದೊಡ್ಡ ಸುಯೆಜ್ ಕಾಲುವೆಯ ಮಧ್ಯೆ 400 ಮೀಟರ್ ಉದ್ದದ ಬೃಹತ್ ಸರಕು ಹಡಗು ‘ಎವರ್‌ಗಿವೆನ್’ ಕಳೆದ ಮೂರು ದಿನಗಳಿಂದ ಸಿಲುಕಿಕೊಂಡಿದ್ದು, ಜಾಗತಿಕ ಹಡಗು ಸಂಚಾರಕ್ಕೆ ಸಾಕಷ್ಟು ಸಮಸ್ಯೆ ಉಂಟುಮಾಡಿದೆ.

ರೆಡ್ ಸೀ ಮುಖಾಂತರ ಕಡಿದಾದ ಕಾಲುವೆಯಲ್ಲಿ ಸಾಗುತ್ತಿದ್ದಾಗ ನಿಯಂತ್ರಣ ಕಳೆದುಕೊಂಡ ಜಪಾನ್ ದೇಶದ ಈ ದೈತ್ಯ ಹಡಗಿನಿಂದಾಗಿ ಜಾಗತಿಕ ಜಲಮಾರ್ಗ ವ್ಯಾಪಾರ ವಹಿವಾಟಿನ ಮೇಲೆ ತೀವ್ರ ಪರಿಣಾಮ ಬೀರಿದ್ದು, ಬಿಲಿಯನ್‌ಗಟ್ಟಲೆ ಡಾಲರ್ ನಷ್ಟ ಉಂಟಾಗುತ್ತಿದೆ. ಈ ಹಡಗನ್ನು ಆ ಸ್ಥಳದಿಂದ ಬಂದರಿಗೆ ಸಾಗಿಸುವುದು ಹರಸಾಹಸದ ಕೆಲಸ ಎಂದು ಹೇಳಲಾಗುತ್ತಿದೆ.

ಈ ಕೆಲಸ ಪೂರ್ಣಗೊಳಿಸಲು ಕೆಲವು ವಾರಗಳೇ ಬೇಕಾಗಬಹುದು ಎಂದು ಎವರ್ ಗಿವನ್ ಹಡಗನ್ನು ಅಲ್ಲಿಂದ ಸಾಗಿಸಲು ಜವಾಬ್ದಾರಿ ನೀಡಲಾಗಿರುವ ಎರಡು ಸಂಸ್ಥೆಗಳ ಪೈಕಿ ಒಂದಾಗಿರುವ ಡೆನ್ಮಾರ್ಕ್‍ನ ಬೊಸ್ಲಾಲಿಸ್ ಸಂಸ್ಥೆಯ ಸಿಒಇಒ ಪೀಟರ್ ಬೆರ್ಡೊವೊಸ್ಕಿ ಹೇಳಿದ್ದಾರೆ.

ಇದನ್ನೂ ಓದಿ: ಬಾಂಗ್ಲಾದ ಸ್ವಾತಂತ್ರ್ಯಕ್ಕಾಗಿ ನಾನೂ ಹೋರಾಡಿದ್ದೆ: ಪ್ರಧಾನಿ ಮೋದಿ ಹೇಳಿಕೆ

ನಂತರ ಸುಯೆಜ್ ಕಾಲುವೆ ಪ್ರಾಧಿಕಾರ ಈ ಅತ್ಯಂತ ಮಹತ್ವದ ಕಾಲುವೆ ಮುಖಾಂತರ ಎಲ್ಲಾ ಸಂಚಾರ ನಿಲ್ಲಿಸಿದೆ. ಪ್ರತಿ ದಿನ ಈ ಕಾಲುವೆ ಮೂಲಕ ಸುಮಾರು 50 ಸರಕು ಹಡಗುಗಳು ಹಾದು ಹೋಗುತ್ತವೆ ಹಾಗೂ ಸರಾಸರಿ ಜಾಗತಿಕ ಹಡಗು ಸಂಚಾರದ ಶೇ 30ರಷ್ಟು ಹಡಗುಗಳು ವಾರ್ಷಿಕವಾಗಿ ಈ ಕಾಲುವೆ ಮೂಲಕ ಸಾಗುತ್ತವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಈ ದೈತ್ಯ ಹಡಗು ಕಾಲುವೆಯಲ್ಲಿ ಸಿಲುಕಿಗೊಂಡಿರುವುದರಿಂದ ಈಗಾಗಲೇ ಕೋವಿಡ್ ಸಾಂಕ್ರಾಮಿಕದಿಂದ ಕಂಗೆಟ್ಟಿರುವ ದೇಶಗಳು ಇನ್ನಷ್ಟು ಸಮಸ್ಯೆ ಎದುರಿಸುವ ಸಾಧ್ಯತೆಯಿದ್ದು, ಸದ್ಯ ಹಡಗುಗಳು ಸುತ್ತಿ ಬಳಸಿ ಸಾಗಬೇಕಾಗಿರುವುದಿಂದ ಕಚ್ಛಾ ತೈಲ ಹಾಗೂ ಆಹಾರಧಾನ್ಯಗಳ ಬೆಲೆಗಳಲ್ಲೂ ಏರಿಕೆಯಾಗುವ ಸಾಧ್ಯತೆಯದೆ.

ಈಗಾಗಲೇ ಸುಯೆಜ್ ಕಾಲುವೆ ಬಂದ್ ಆಗಿರುವುದರಿಂದ ಗಂಟೆಗೆ ಸುಮಾರು 400 ಮಿಲಿಯನ್ ಡಾಲರ್ ನಷ್ಟ ಉಂಟಾಗುತ್ತಿದೆ. ಈ ದೈತ್ಯ ಹಡಗು 2.20 ಲಕ್ಷ ಟನ್ ಭಾರವಿದ್ದು, 193.3 ಕಿಮೀ ಉದ್ದವಿರುವ ಕಿರಿದಾದ ಸುಯೆಜ್ ಕಾಲುವೆಯನ್ನು ವಸ್ತುಶಃ ಬ್ಲಾಕ್ ಮಾಡಿದೆ. ಈ ಹಾದಿಯಲ್ಲಿ ಸಾಮಾನ್ಯವಾಗಿ ಸಾಗುವ ಸರಕು ನೌಕೆಗಳು ಹೆಚ್ಚಾಗಿ ತೈಲ, ಸಂಸ್ಕರಿತ ತೈಲ, ಆಹಾರ ಧಾನ್ಯ ಸಾಗಿಸುತ್ತವೆಯಲ್ಲದೆ ಪೂರ್ವ ಮತ್ತು ಪಾಶ್ಚಿಮಾತ್ಯ ದೇಶಗಳ ನಡುವೆ ವ್ಯಾಪಾರ ವಹಿವಾಟಿಗೆ ಮಹತ್ವದ ಕೊಂಡಿಯಾಗಿದೆ.


ಇದನ್ನೂ ಓದಿ: ಪ್ರಧಾನಿ ಮೋದಿ ಬಾಂಗ್ಲಾ ಭೇಟಿ: ಬಾಂಗ್ಲಾದಲ್ಲಿ ತೀವ್ರಗೊಂಡ ’ಮೋದಿ ನಾಟ್ ವೆಲ್ಕಮ್’ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...