Homeಅಂತರಾಷ್ಟ್ರೀಯಈಜಿಪ್ಟ್‌ನ ಸುಯೆಜ್ ಕಾಲುವೆಯ ಮಧ್ಯೆ ಸಿಲುಕಿದ ಬೃಹತ್ ಹಡಗು - ಕೋಟ್ಯಂತರ ಡಾಲರ್ ನಷ್ಟ!

ಈಜಿಪ್ಟ್‌ನ ಸುಯೆಜ್ ಕಾಲುವೆಯ ಮಧ್ಯೆ ಸಿಲುಕಿದ ಬೃಹತ್ ಹಡಗು – ಕೋಟ್ಯಂತರ ಡಾಲರ್ ನಷ್ಟ!

- Advertisement -
- Advertisement -

ಈಜಿಪ್ಟ್‌ನ ಅತಿದೊಡ್ಡ ಸುಯೆಜ್ ಕಾಲುವೆಯ ಮಧ್ಯೆ 400 ಮೀಟರ್ ಉದ್ದದ ಬೃಹತ್ ಸರಕು ಹಡಗು ‘ಎವರ್‌ಗಿವೆನ್’ ಕಳೆದ ಮೂರು ದಿನಗಳಿಂದ ಸಿಲುಕಿಕೊಂಡಿದ್ದು, ಜಾಗತಿಕ ಹಡಗು ಸಂಚಾರಕ್ಕೆ ಸಾಕಷ್ಟು ಸಮಸ್ಯೆ ಉಂಟುಮಾಡಿದೆ.

ರೆಡ್ ಸೀ ಮುಖಾಂತರ ಕಡಿದಾದ ಕಾಲುವೆಯಲ್ಲಿ ಸಾಗುತ್ತಿದ್ದಾಗ ನಿಯಂತ್ರಣ ಕಳೆದುಕೊಂಡ ಜಪಾನ್ ದೇಶದ ಈ ದೈತ್ಯ ಹಡಗಿನಿಂದಾಗಿ ಜಾಗತಿಕ ಜಲಮಾರ್ಗ ವ್ಯಾಪಾರ ವಹಿವಾಟಿನ ಮೇಲೆ ತೀವ್ರ ಪರಿಣಾಮ ಬೀರಿದ್ದು, ಬಿಲಿಯನ್‌ಗಟ್ಟಲೆ ಡಾಲರ್ ನಷ್ಟ ಉಂಟಾಗುತ್ತಿದೆ. ಈ ಹಡಗನ್ನು ಆ ಸ್ಥಳದಿಂದ ಬಂದರಿಗೆ ಸಾಗಿಸುವುದು ಹರಸಾಹಸದ ಕೆಲಸ ಎಂದು ಹೇಳಲಾಗುತ್ತಿದೆ.

ಈ ಕೆಲಸ ಪೂರ್ಣಗೊಳಿಸಲು ಕೆಲವು ವಾರಗಳೇ ಬೇಕಾಗಬಹುದು ಎಂದು ಎವರ್ ಗಿವನ್ ಹಡಗನ್ನು ಅಲ್ಲಿಂದ ಸಾಗಿಸಲು ಜವಾಬ್ದಾರಿ ನೀಡಲಾಗಿರುವ ಎರಡು ಸಂಸ್ಥೆಗಳ ಪೈಕಿ ಒಂದಾಗಿರುವ ಡೆನ್ಮಾರ್ಕ್‍ನ ಬೊಸ್ಲಾಲಿಸ್ ಸಂಸ್ಥೆಯ ಸಿಒಇಒ ಪೀಟರ್ ಬೆರ್ಡೊವೊಸ್ಕಿ ಹೇಳಿದ್ದಾರೆ.

ಇದನ್ನೂ ಓದಿ: ಬಾಂಗ್ಲಾದ ಸ್ವಾತಂತ್ರ್ಯಕ್ಕಾಗಿ ನಾನೂ ಹೋರಾಡಿದ್ದೆ: ಪ್ರಧಾನಿ ಮೋದಿ ಹೇಳಿಕೆ

ನಂತರ ಸುಯೆಜ್ ಕಾಲುವೆ ಪ್ರಾಧಿಕಾರ ಈ ಅತ್ಯಂತ ಮಹತ್ವದ ಕಾಲುವೆ ಮುಖಾಂತರ ಎಲ್ಲಾ ಸಂಚಾರ ನಿಲ್ಲಿಸಿದೆ. ಪ್ರತಿ ದಿನ ಈ ಕಾಲುವೆ ಮೂಲಕ ಸುಮಾರು 50 ಸರಕು ಹಡಗುಗಳು ಹಾದು ಹೋಗುತ್ತವೆ ಹಾಗೂ ಸರಾಸರಿ ಜಾಗತಿಕ ಹಡಗು ಸಂಚಾರದ ಶೇ 30ರಷ್ಟು ಹಡಗುಗಳು ವಾರ್ಷಿಕವಾಗಿ ಈ ಕಾಲುವೆ ಮೂಲಕ ಸಾಗುತ್ತವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಈ ದೈತ್ಯ ಹಡಗು ಕಾಲುವೆಯಲ್ಲಿ ಸಿಲುಕಿಗೊಂಡಿರುವುದರಿಂದ ಈಗಾಗಲೇ ಕೋವಿಡ್ ಸಾಂಕ್ರಾಮಿಕದಿಂದ ಕಂಗೆಟ್ಟಿರುವ ದೇಶಗಳು ಇನ್ನಷ್ಟು ಸಮಸ್ಯೆ ಎದುರಿಸುವ ಸಾಧ್ಯತೆಯಿದ್ದು, ಸದ್ಯ ಹಡಗುಗಳು ಸುತ್ತಿ ಬಳಸಿ ಸಾಗಬೇಕಾಗಿರುವುದಿಂದ ಕಚ್ಛಾ ತೈಲ ಹಾಗೂ ಆಹಾರಧಾನ್ಯಗಳ ಬೆಲೆಗಳಲ್ಲೂ ಏರಿಕೆಯಾಗುವ ಸಾಧ್ಯತೆಯದೆ.

ಈಗಾಗಲೇ ಸುಯೆಜ್ ಕಾಲುವೆ ಬಂದ್ ಆಗಿರುವುದರಿಂದ ಗಂಟೆಗೆ ಸುಮಾರು 400 ಮಿಲಿಯನ್ ಡಾಲರ್ ನಷ್ಟ ಉಂಟಾಗುತ್ತಿದೆ. ಈ ದೈತ್ಯ ಹಡಗು 2.20 ಲಕ್ಷ ಟನ್ ಭಾರವಿದ್ದು, 193.3 ಕಿಮೀ ಉದ್ದವಿರುವ ಕಿರಿದಾದ ಸುಯೆಜ್ ಕಾಲುವೆಯನ್ನು ವಸ್ತುಶಃ ಬ್ಲಾಕ್ ಮಾಡಿದೆ. ಈ ಹಾದಿಯಲ್ಲಿ ಸಾಮಾನ್ಯವಾಗಿ ಸಾಗುವ ಸರಕು ನೌಕೆಗಳು ಹೆಚ್ಚಾಗಿ ತೈಲ, ಸಂಸ್ಕರಿತ ತೈಲ, ಆಹಾರ ಧಾನ್ಯ ಸಾಗಿಸುತ್ತವೆಯಲ್ಲದೆ ಪೂರ್ವ ಮತ್ತು ಪಾಶ್ಚಿಮಾತ್ಯ ದೇಶಗಳ ನಡುವೆ ವ್ಯಾಪಾರ ವಹಿವಾಟಿಗೆ ಮಹತ್ವದ ಕೊಂಡಿಯಾಗಿದೆ.


ಇದನ್ನೂ ಓದಿ: ಪ್ರಧಾನಿ ಮೋದಿ ಬಾಂಗ್ಲಾ ಭೇಟಿ: ಬಾಂಗ್ಲಾದಲ್ಲಿ ತೀವ್ರಗೊಂಡ ’ಮೋದಿ ನಾಟ್ ವೆಲ್ಕಮ್’ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...