Homeಅಂತರಾಷ್ಟ್ರೀಯಈಜಿಪ್ಟ್‌ನ ಸುಯೆಜ್ ಕಾಲುವೆಯ ಮಧ್ಯೆ ಸಿಲುಕಿದ ಬೃಹತ್ ಹಡಗು - ಕೋಟ್ಯಂತರ ಡಾಲರ್ ನಷ್ಟ!

ಈಜಿಪ್ಟ್‌ನ ಸುಯೆಜ್ ಕಾಲುವೆಯ ಮಧ್ಯೆ ಸಿಲುಕಿದ ಬೃಹತ್ ಹಡಗು – ಕೋಟ್ಯಂತರ ಡಾಲರ್ ನಷ್ಟ!

- Advertisement -
- Advertisement -

ಈಜಿಪ್ಟ್‌ನ ಅತಿದೊಡ್ಡ ಸುಯೆಜ್ ಕಾಲುವೆಯ ಮಧ್ಯೆ 400 ಮೀಟರ್ ಉದ್ದದ ಬೃಹತ್ ಸರಕು ಹಡಗು ‘ಎವರ್‌ಗಿವೆನ್’ ಕಳೆದ ಮೂರು ದಿನಗಳಿಂದ ಸಿಲುಕಿಕೊಂಡಿದ್ದು, ಜಾಗತಿಕ ಹಡಗು ಸಂಚಾರಕ್ಕೆ ಸಾಕಷ್ಟು ಸಮಸ್ಯೆ ಉಂಟುಮಾಡಿದೆ.

ರೆಡ್ ಸೀ ಮುಖಾಂತರ ಕಡಿದಾದ ಕಾಲುವೆಯಲ್ಲಿ ಸಾಗುತ್ತಿದ್ದಾಗ ನಿಯಂತ್ರಣ ಕಳೆದುಕೊಂಡ ಜಪಾನ್ ದೇಶದ ಈ ದೈತ್ಯ ಹಡಗಿನಿಂದಾಗಿ ಜಾಗತಿಕ ಜಲಮಾರ್ಗ ವ್ಯಾಪಾರ ವಹಿವಾಟಿನ ಮೇಲೆ ತೀವ್ರ ಪರಿಣಾಮ ಬೀರಿದ್ದು, ಬಿಲಿಯನ್‌ಗಟ್ಟಲೆ ಡಾಲರ್ ನಷ್ಟ ಉಂಟಾಗುತ್ತಿದೆ. ಈ ಹಡಗನ್ನು ಆ ಸ್ಥಳದಿಂದ ಬಂದರಿಗೆ ಸಾಗಿಸುವುದು ಹರಸಾಹಸದ ಕೆಲಸ ಎಂದು ಹೇಳಲಾಗುತ್ತಿದೆ.

ಈ ಕೆಲಸ ಪೂರ್ಣಗೊಳಿಸಲು ಕೆಲವು ವಾರಗಳೇ ಬೇಕಾಗಬಹುದು ಎಂದು ಎವರ್ ಗಿವನ್ ಹಡಗನ್ನು ಅಲ್ಲಿಂದ ಸಾಗಿಸಲು ಜವಾಬ್ದಾರಿ ನೀಡಲಾಗಿರುವ ಎರಡು ಸಂಸ್ಥೆಗಳ ಪೈಕಿ ಒಂದಾಗಿರುವ ಡೆನ್ಮಾರ್ಕ್‍ನ ಬೊಸ್ಲಾಲಿಸ್ ಸಂಸ್ಥೆಯ ಸಿಒಇಒ ಪೀಟರ್ ಬೆರ್ಡೊವೊಸ್ಕಿ ಹೇಳಿದ್ದಾರೆ.

ಇದನ್ನೂ ಓದಿ: ಬಾಂಗ್ಲಾದ ಸ್ವಾತಂತ್ರ್ಯಕ್ಕಾಗಿ ನಾನೂ ಹೋರಾಡಿದ್ದೆ: ಪ್ರಧಾನಿ ಮೋದಿ ಹೇಳಿಕೆ

ನಂತರ ಸುಯೆಜ್ ಕಾಲುವೆ ಪ್ರಾಧಿಕಾರ ಈ ಅತ್ಯಂತ ಮಹತ್ವದ ಕಾಲುವೆ ಮುಖಾಂತರ ಎಲ್ಲಾ ಸಂಚಾರ ನಿಲ್ಲಿಸಿದೆ. ಪ್ರತಿ ದಿನ ಈ ಕಾಲುವೆ ಮೂಲಕ ಸುಮಾರು 50 ಸರಕು ಹಡಗುಗಳು ಹಾದು ಹೋಗುತ್ತವೆ ಹಾಗೂ ಸರಾಸರಿ ಜಾಗತಿಕ ಹಡಗು ಸಂಚಾರದ ಶೇ 30ರಷ್ಟು ಹಡಗುಗಳು ವಾರ್ಷಿಕವಾಗಿ ಈ ಕಾಲುವೆ ಮೂಲಕ ಸಾಗುತ್ತವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಈ ದೈತ್ಯ ಹಡಗು ಕಾಲುವೆಯಲ್ಲಿ ಸಿಲುಕಿಗೊಂಡಿರುವುದರಿಂದ ಈಗಾಗಲೇ ಕೋವಿಡ್ ಸಾಂಕ್ರಾಮಿಕದಿಂದ ಕಂಗೆಟ್ಟಿರುವ ದೇಶಗಳು ಇನ್ನಷ್ಟು ಸಮಸ್ಯೆ ಎದುರಿಸುವ ಸಾಧ್ಯತೆಯಿದ್ದು, ಸದ್ಯ ಹಡಗುಗಳು ಸುತ್ತಿ ಬಳಸಿ ಸಾಗಬೇಕಾಗಿರುವುದಿಂದ ಕಚ್ಛಾ ತೈಲ ಹಾಗೂ ಆಹಾರಧಾನ್ಯಗಳ ಬೆಲೆಗಳಲ್ಲೂ ಏರಿಕೆಯಾಗುವ ಸಾಧ್ಯತೆಯದೆ.

ಈಗಾಗಲೇ ಸುಯೆಜ್ ಕಾಲುವೆ ಬಂದ್ ಆಗಿರುವುದರಿಂದ ಗಂಟೆಗೆ ಸುಮಾರು 400 ಮಿಲಿಯನ್ ಡಾಲರ್ ನಷ್ಟ ಉಂಟಾಗುತ್ತಿದೆ. ಈ ದೈತ್ಯ ಹಡಗು 2.20 ಲಕ್ಷ ಟನ್ ಭಾರವಿದ್ದು, 193.3 ಕಿಮೀ ಉದ್ದವಿರುವ ಕಿರಿದಾದ ಸುಯೆಜ್ ಕಾಲುವೆಯನ್ನು ವಸ್ತುಶಃ ಬ್ಲಾಕ್ ಮಾಡಿದೆ. ಈ ಹಾದಿಯಲ್ಲಿ ಸಾಮಾನ್ಯವಾಗಿ ಸಾಗುವ ಸರಕು ನೌಕೆಗಳು ಹೆಚ್ಚಾಗಿ ತೈಲ, ಸಂಸ್ಕರಿತ ತೈಲ, ಆಹಾರ ಧಾನ್ಯ ಸಾಗಿಸುತ್ತವೆಯಲ್ಲದೆ ಪೂರ್ವ ಮತ್ತು ಪಾಶ್ಚಿಮಾತ್ಯ ದೇಶಗಳ ನಡುವೆ ವ್ಯಾಪಾರ ವಹಿವಾಟಿಗೆ ಮಹತ್ವದ ಕೊಂಡಿಯಾಗಿದೆ.


ಇದನ್ನೂ ಓದಿ: ಪ್ರಧಾನಿ ಮೋದಿ ಬಾಂಗ್ಲಾ ಭೇಟಿ: ಬಾಂಗ್ಲಾದಲ್ಲಿ ತೀವ್ರಗೊಂಡ ’ಮೋದಿ ನಾಟ್ ವೆಲ್ಕಮ್’ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...