Homeಚಳವಳಿಬೆಂಗಳೂರಿನಲ್ಲಿ ಭಾರತ್ ಬಂದ್‌ಗೆ ಭಾರಿ ಬೆಂಬಲ: ಹೋರಾಟ ಯಶಸ್ವಿ

ಬೆಂಗಳೂರಿನಲ್ಲಿ ಭಾರತ್ ಬಂದ್‌ಗೆ ಭಾರಿ ಬೆಂಬಲ: ಹೋರಾಟ ಯಶಸ್ವಿ

ರೈತರನ್ನು ಕೂಲಿ ಕೆಲಸಕಾರರನ್ನಾಗಿ  ಮಾಡುವ ಹುನ್ನಾರ ಕಾನೂನುಗಳ ಹಿಂದಿದೆ. ಈ ನಿಟ್ಟಿನಲ್ಲಿ ಕಾಯ್ದೆಯನ್ನು ವಾಪಸ್ ತೆಗೆದುಕೊಳ್ಳಬೇಕು, ವಿರೋಧ ಪಕ್ಷಗಳು ಸದನ ಬಹಿಷ್ಕಾರ ಮಾಡಬೇಕು.

- Advertisement -
- Advertisement -

ವಿವಾದಾತ್ಮಕ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ಕರೆ ನೀಡಿದ್ದ ಭಾರತ್ ಬಂದ್‌ಗೆ ದೇಶಾದ್ಯಂತ ಭಾರಿ ಬೆಂಬಲ ವ್ಯಕ್ತವಾಗಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಪ್ರತಿಭಟನೆಗೆ ರೈತ ಸಂಘಗಳು, ರಾಜಕೀಯ ಪಕ್ಷಗಳು, ಕಾರ್ಮಿಕ ಸಂಘಟನೆಗಳು ಯಾವುದೇ ಭೇದವಿಲ್ಲದೇ ರೈತರಿಗಾಗಿ ಬೀದಿಗಿಳಿದು ಬೆಂಬಲ ವ್ಯಕ್ತಪಡಿಸಿದ್ದಾರೆ.

ಕರಾಳ ಕಾನೂನುಗಳ ವಿರುದ್ದ ಹೋರಾಟ ನಡೆಸುತ್ತಿರುವ ರೈತರ ಮೇಲೆ ಕೇಂದ್ರ ಸರ್ಕಾರ ನಡೆಸಿರುವ ದೌರ್ಜನ್ಯ ವಿರೋಧಿಸಿ ’ಐಕ್ಯ ಹೋರಾಟ’ ವೇದಿಕೆಯ ರಾಜ್ಯವ್ಯಾಪಿ ಜನಾಂದೋಲನ ಹಾಗೂ ಬೆಂಗಳೂರಿನ ಮೌರ್ಯ ವೃತ್ತದ ಗಾಂಧಿ ಪ್ರತಿಮೆಯ ಬಳಿ ನಿನ್ನೆಯಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುತ್ತಿದೆ. ಇಂದು ಕೂಡ ನೂರಾರು ಮಂದಿ ಭಾಗವಹಿಸಿ, ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಾರೆ.

ಇತ್ತ ಮೌರ್ಯ ಸರ್ಕಲ್ ಬಳಿಯೇ ಒಂದೆಡೆ ಕಾಂಗ್ರೆಸ್ ಕಾರ್ಯಕರ್ತರು, ಮತ್ತೊಂದೆಡೆ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ರಸ್ತೆ ಮಧ್ಯೆ ಟ್ರ್ಯಾಕ್ಟರ್ ನಿಲ್ಲಿಸಿ, ಕೇಂದ್ರ ಸರ್ಕಾರದ ವಿರುದ್ಧ ಮತ್ತು ನರೇಂದ್ರ ಮೋದಿ‌ ತೊಲಗಲಿ ಎಂದು ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ರೈತ ಇದ್ರೇನೆ ದೇಶ: ರೈತ ಹೋರಾಟಕ್ಕೆ ನಟ ಶಿವರಾಜ್‌ಕುಮಾರ್ ಬೆಂಬಲ

ರೈತರು ಕರೆಕೊಟ್ಟ ಭಾರತ್ ಬಂದ್‌ಗೆ ಆಮ್ ಆದ್ಮಿ ಪಕ್ಷ ಕೂಡ ಬೆಂಬಲ ವ್ಯಕ್ತಪಡಿಸಿ, ಮೋಹನ್ ದಾಸರಿ, ವಿಜಯ್ ಶರ್ಮಾ ಮುಂತಾದ ರಾಜ್ಯ ಆಪ್ ನಾಯಕರು ಮೌರ್ಯ ಸರ್ಕಲ್ ಬಳಿ ಪ್ರತಿಭಟನೆ ನಡೆಸಿದರು.

ಇನ್ನೂ ಟೌನ್ ಹಾಲ್ ಸರ್ಕಲ್‌ನಲ್ಲಿ ಹಲವಾರು ಸಂಘ ಸಂಸ್ಥೆಗಳು ಭಾರಿ ಪ್ರತಿಭಟನೆ ನಡೆಸಿದವು. ಸಿಐಟಿಯು, ಕಾಂಗ್ರೆಸ್, ರೈತ ಸಂಘಟನೆಗಳು, ಡಿಎಸ್‌ಪಿ, ಯೂತ್ ಕಾಂಗ್ರೆಸ್, ಆಮ್ ಆದ್ಮಿ ಪಾರ್ಟಿ, ಕವಿಸೇ, ದಲಿತ್ ಟೈಗರ್ಸ್ ಸಮಿತಿ ಸೇರಿ ಕೇಂದ್ರ ಸರ್ಕಾರದ ವಿರುದ್ಧ ಕೃಷಿ ಮಸೂದೆಗಳನ್ನು ವಾಪಸ್ ಪಡೆಯಲು ಒತ್ತಾಯಿಸಿದವು.

ಬೆಂಗಳೂರಿನ ಟೌನ್ ಹಾಲ್ ಮುಂದೆ ಪ್ರತಿಭಟನೆ

ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಹಿರಿಯ ಕಲಾವಿದ ಮುಖ್ಯಮಂತ್ರಿ ಚಂದ್ರು ಮಾತನಾಡಿ, “ರೈತರು ಸರ್ಕಾರ ನೀಡಿದ ಆಹಾರವನ್ನು ತೆಗೆದುಕೊಳ್ಳಲಿಲ್ಲ ಇಂತಹ ಸಂದರ್ಭದಲ್ಲಿ ರೈತರ ಸ್ವಾಭಿಮಾನ ಎಷ್ಟು ಎಂದು ಯೋಚಿಸಿ, ಕೃಷಿ ಕಾಯ್ದೆಗಳನ್ನು ಹಿಂದಕ್ಕೆ ತೆಗೆದುಕೊಳ್ಳಿ, ಅದರ ಸಾಧಕ ಬಾಧಕಗಳ ಕುರಿತು ಚರ್ಚೆಯಾಗಲಿ. ದೇಶದಲ್ಲಿ ರೈತರು, ಸಣ್ಣ ಹಿಡುವಳಿದಾರರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ರೈತರನ್ನು ಕೂಲಿ ಕೆಲಸಕಾರರನ್ನಾಗಿ  ಮಾಡುವ ಹುನ್ನಾರ ಕಾನೂನುಗಳ ಹಿಂದಿದೆ. ಈ ನಿಟ್ಟಿನಲ್ಲಿ ಕಾಯ್ದೆಯನ್ನು ವಾಪಸ್ ತೆಗೆದುಕೊಳ್ಳಬೇಕು, ವಿರೋಧ ಪಕ್ಷಗಳು ಸದನ ಬಹಿಷ್ಕಾರ ಮಾಡಬೇಕು “ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ವಿರೋಧ ಪಕ್ಷಗಳು ಸಹ ಇದೇ ಕೃಷಿ ಕಾನೂನು ತರಬಯಸಿದ್ದವು, ಈಗ ವಿರೋಧಿಸುವುದು ಅವರ ಇಬ್ಬಂದಿತನ

ಸಿಐಟಿಯು ರಾಜ್ಯಾಧ್ಯಕ್ಷೆ ವರಲಕ್ಷಿ ಮಾತನಾಡಿ, ’ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಕೃಷಿ ಕಾಯ್ದೆಗಳು ಅಪಾಯಕಾರಿ.   ರೈತರ ಹೋರಾಟಕ್ಕೆ ಸಂಪೂರ್ಣ ಬೆಂಬಲವಿದೆ ನಾವು ಹಿಂಸಾ ಮಾರ್ಗವನ್ನು ತುಳಿದರೆ ಬಂದ್ ಮಾಡುವುದು ಕಷ್ಟವಲ್ಲ’ ಎಂದು ಎಚ್ಚರಿಕೆ ನೀಡಿದ್ದಾರೆ.

ಮೌರ್ಯ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಐಕ್ಯ ಹೋರಾಟ ಸಮಿತಿಯ ಕುರುಬೂರು ಶಾಂತಕುಮಾರ್ ಹಾಗೂ ಬಡಗಲಪುರ ನಾಗೇಂದ್ರ ಮತ್ತು ಬೆಂಬಲಿಗರು ಟೌನ್ ಹಾಲ್‌ ಕಡೆ ಮೆರವಣಿಗೆ ಹೊರಟಿದ್ದರು. ಅಲ್ಲಿಗೆ ಹೋಗದಂತೆ ಪೊಲೀಸರು ತಡೆಹಿಡಿದ ನಂತರ ಮೈಸೂರು ಬ್ಯಾಂಕ್ ಸರ್ಕಲ್‌ ಕಡೆಗೆ ಮೆರವಣಿಗೆ ಹೊರಟಿತು.

ಬ್ಯಾರಿಕೇಡ್ ಹಾರಿ ಟೌನ್ ಹಾಲ್ ಕಡೆಗೆ ಹೋಗಲು ಪ್ರಯತ್ನಿಸಿದ ರೈತರನ್ನು ತಡೆದ ಪೊಲೀಸರು. ಪೊಲೀಸರು ಹಾಗೂ ರೈತರ ನಟುವೆ ಮಾತಿನ ಜಟಾಪಟಿ ನಡೆದು, ರಸ್ತೆ ಮೇಲೆ ಉರುಳಿ ಆಕ್ರೋಶ ಹೊರ ಹಾಕಿದ ಪ್ರತಿಭಟನಾಕಾರರು. ಪ್ರತಿಭಟನಾಕಾರರನ್ನು ನಿಯಂತ್ರಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.

ಇದನ್ನೂ ಓದಿ: ಕರ್ನಾಟಕದ ಹೋರಾಟನಿರತ ರೈತರಿಂದ ಪ್ರಧಾನಿಗೆ ಪತ್ರ; ಅಷ್ಟಕ್ಕೂ ಅವರ ಹಕ್ಕೊತ್ತಾಯಗಳೇನು?

ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷದ ಮುಖಂಡರು,ಶಾಸಕರು ವಿಧಾನಸೌಧದ ಆವರಣದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಮುಂಭಾಗ ಮಂಗಳವಾರ ಪ್ರತಿಭಟನೆ ನಡೆಸಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಹಿರಿಯ ಮುಖಂಡರಾದ ಡಾ. ಜಿ. ಪರಮೇಶ್ವರ, ಎಸ್.ಆರ್. ಪಾಟೀಲ್, ಬಿ.ಕೆ. ಹರಿಪ್ರಸಾದ್, ಕೆ.ಜೆ. ಜಾರ್ಜ್, ರಾಮಲಿಂಗಾರೆಡ್ಡಿ ಮತ್ತಿತರರು ಭಾಗವಹಿಸಿದ್ದರು.

Image

ಕೈಗೆ ಕಪ್ಪುಪಟ್ಟಿ ಧರಿಸಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು.


ಇದನ್ನೂ ಓದಿ: ದೆಹಲಿ-ಮೀರತ್ ರಾಷ್ಟ್ರೀಯ ಹೆದ್ದಾರಿ ತಡೆದ ರೈತರು: ಭಾರತ್ ಬಂದ್‌ನ ಪ್ರಮುಖ ಅಂಶಗಳು ಇಲ್ಲಿವೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...