Homeಮುಖಪುಟತನಿಷ್ಕ್ ಜಾಹೀರಾತಿಗೆ ಟ್ವಿಟ್ಟರ್‌ನಲ್ಲಿ ಭಾರಿ ಬೆಂಬಲ: ಅಂತರ್‌ಧರ್ಮೀಯ ವಿವಾಹಿತರ ಮನದಾಳದ ಮಾತು

ತನಿಷ್ಕ್ ಜಾಹೀರಾತಿಗೆ ಟ್ವಿಟ್ಟರ್‌ನಲ್ಲಿ ಭಾರಿ ಬೆಂಬಲ: ಅಂತರ್‌ಧರ್ಮೀಯ ವಿವಾಹಿತರ ಮನದಾಳದ ಮಾತು

ಅಂತರ್-ಧರ್ಮೀಯ ಕುಟುಂಬಗಳಲ್ಲಿ ಮದುವೆಯಾದ ಕಲಾವಿದರು, ಸಾಮಾಜಿಕ ಮಾಧ್ಯಮ ಬಳಕೆದಾರರು ತಮ್ಮ ಖಾತೆಗಳಲ್ಲಿ ಫೋಟೋಗಳನ್ನು ಶೇರ್ ಮಾಡಿ ತನಿಷ್ಕ್ ಜಾಹೀರಾತನ್ನು ಬೆಂಬಲಿಸುತ್ತಿದ್ದಾರೆ.

- Advertisement -
- Advertisement -

ಕೆಟ್ಟ ಟ್ರೋಲಿಂಗ್ ನಂತರ ಹಿಂದೂ-ಮುಸ್ಲಿಂ ದಂಪತಿಗಳು ಮತ್ತು ಅವರ ಕುಟುಂಬಗಳನ್ನು ಒಳಗೊಂಡ ಜಾಹೀರಾತನ್ನು ಹಿಂತೆಗೆದುಕೊಂಡಿರುವ ಟೈಟಾನ್‌ ಆಭರಣ ಬ್ರಾಂಡ್ ತನಿಷ್ಕ್‌ನ ಏಕತ್ವಂ ಜಾಹೀರಾತಿಗೆ ಸಾಮಾಜಿಕ ಮಾಧ್ಯಮದಲ್ಲಿ ಭಾರಿ ಬೆಂಬಲ ವ್ಯಕ್ತವಾಗುತ್ತಿದೆ.

ಅಂತರ್-ಧರ್ಮೀಯ ಕುಟುಂಬಗಳಲ್ಲಿ ಮದುವೆಯಾದ ಕಲಾವಿದರು, ಸಾಮಾಜಿಕ ಮಾಧ್ಯಮ ಬಳಕೆದಾರರು ತಮ್ಮ ಖಾತೆಗಳಲ್ಲಿ ಫೋಟೋಗಳನ್ನು ಶೇರ್ ಮಾಡಿ ತಮ್ಮ ಅನುಭವಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಈ ಮೂಲಕ ತನಿಷ್ಕ್ ಏಕತ್ವಂ ಜಾಹೀರಾತನ್ನು ಬೆಂಬಲಿಸುತ್ತಿದ್ದಾರೆ.

ನಟ ಮೊಹಮ್ಮದ್ ಜೀಶನ್ ಅಯೂಬ್ ಅವರನ್ನು ಮದುವೆಯಾದ ನಟಿ, ನಿರ್ದೇಶಕಿ ರಸಿಕಾ ಅಗಾಶೆ ತಮ್ಮ 6 ವರ್ಷಗಳ ಹಿಂದಿನ ಬೇಬಿ ಶವರ್(ಸೀಮಂತ) ಚಿತ್ರವನ್ನು ಹಂಚಿಕೊಂಡಿದ್ದಾರೆ.

“ಲವ್ ಜಿಹಾದ್ ಎಂದು ಕೂಗುವ ಮೊದಲು, ವಿಶೇಷ ಮದುವೆ ಕಾಯ್ದೆಯ ಬಗ್ಗೆ ತಿಳಿದುಕೊಳ್ಳೋಣ” ಎಂದು ರಸಿಕಾ ಅಗಾಶೆ ಹೇಳಿದ್ದಾರೆ. ಫೋಟೋದಲ್ಲಿ ಜೀಶನ್ ಅಯ್ಯೂಬ್ ಕೂಡ ಅವರ ಪಕ್ಕದಲ್ಲಿ ಕುಳಿತಿರುವುದನ್ನು ನೋಡಬಹುದು.

ಇದನ್ನೂ ಓದಿ: ಸೌಹಾರ್ದತೆ ಸಾರುವ ’ಏಕತ್ವಂ’ ಜಾಹೀರಾತು ನಿಲ್ಲಿಸಿದ ತನಿಷ್ಕ್ ಆಭರಣ ಕಂಪನಿ: ಅಂತದ್ದೇನಿದೆ ಅದರಲ್ಲಿ?

ಗ್ರಿಹಾ ಅತುಲ್, “ತನೀಶ್ಕ್ ಜಾಹೀರಾತು ಅವಳಂತಹ ಅನೇಕರ ನೈಜತೆಗಳನ್ನು ಆಧರಿಸಿದೆ. ನಾನು ಮುಸ್ಲಿಂ ಮನೆಯೊಂದರಲ್ಲಿ ಮದುವೆಯಾಗಿದ್ದೇನೆ. ಅದು ನನ್ನ ಧಾರ್ಮಿಕ ಗುರುತನ್ನು ಗೌರವಿಸುತ್ತದೆ ಮತ್ತು ಸ್ವೀಕರಿಸುತ್ತದೆ. ಆದ್ದರಿಂದ ತನೀಷ್ಕ್ ಜಾಹೀರಾತು ಕಲ್ಪನೆಯಲ್ಲ. ಇದು ಫ್ಯಾಸಿಸ್ಟ್ ಶಕ್ತಿಗಳಿಂದ ಉದ್ದೇಶಪೂರ್ವಕವಾಗಿ ನಿರಾಕರಿಸಲ್ಪಟ್ಟ ನಮ್ಮ ಕಾಲದ ವಾಸ್ತವವಾಗಿದೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.

 

ಇದನ್ನೂ ಓದಿ: ತನಿಷ್ಕ್ ಜಾಹೀರಾತು: ಗುಜರಾತ್‌ನ ಅಂಗಡಿ ಮಳಿಗೆಗಳಿಗೆ ಬೆದರಿಕೆ!

ಮದುವೆಯಾಗಿ 44 ವರ್ಷಗಳಾದ ಇನ್ನೊಂದು ದಂಪತಿ ತಮ್ಮ ಕಥೆಯನ್ನೂ ಹಂಚಿಕೊಂಡಿದ್ದಾರೆ. ಹಲವು ವರ್ಷಗಳ ಹೋರಾಟದ ನಂತರ ಈ ದಂಪತಿ ಈಗ ಶಾಂತಿಯನ್ನು ಕಂಡುಕೊಂಡಿದ್ದಾರೆ. ಗೋವಾದಲ್ಲಿ ತಮ್ಮ ಮನೆಗೆ ಹಿಂದಿಯಲ್ಲಿ “ಹಮ್” ಎಂದು ಹೆಸರಿಸಿದ್ದಾರೆ. ಅಲ್ಲಿ “ಎಚ್” ಎಂದರೆ ಹಿಂದೂ ಮತ್ತು”ಎಂ” ಮುಸ್ಲಿಂ.

“I saw her for the first time before Dussehra– we were neighbours and family friends. But because I was away at boarding…

Posted by Humans of Bombay on Wednesday, October 14, 2020

 

ತನಿಷ್ಕ್ ಜಾಹೀರಾತು ಲವ್ ಜಿಹಾದ್ ಎಂಬ ಕಾಮೆಂಟುಗಳಳ ಹಿನ್ನೆಲೆ ಈ ಸುಂದರ ಕಥೆಯನ್ನು ಅಕ್ಟೋಬರ್ 14, 2020 ರಂದು ಹ್ಯೂಮನ್ಸ್ ಆಫ್ ಬಾಂಬೆ ಪೋಸ್ಟ್ ಮಾಡಿದೆ.

ಇವುಗಳ ಜೊತೆಗೆ ಅನೇಕ ಮಂದಿ ತನಿಷ್ಕ್‌ನಲ್ಲಿ ಆಭರಣಗಳನ್ನು ಕೊಳ್ಳುವ ಮೂಲಕ, ಅಲ್ಲೇ ಆಭರಣ ಕೊಳ್ಳುವ ಯೋಜನೆಗಳ ಮೂಲಕ ತನಿಷ್ಕ್‌ಗೆ ಬೆಂಬಲ ಸೂಚಿಸುತ್ತಿದ್ದಾರೆ.

ಇನ್ನು ಕೆಲವರು ತಾವು ತನಿಷ್ಕ್‌ನಲ್ಲಿ ಆಭರಣ ಕೊಂಡುಕೊಂಡಿರುವುದಕ್ಕೆ ಹೆಮ್ಮೆಯಿದೆ ಎಂದು ಪೋಸ್ಟ್ ಮಾಡಿದ್ದಾರೆ.

ಏಕತ್ವಂ ಅಭಿಯಾನದ ಜಾಹೀರಾತಿನ ಮೂಲಕ ತನಿಷ್ಕ್ ‘ಲವ್ ಜಿಹಾದ್’ ಹಾಗೂ ‘ನಕಲಿ ಜಾತ್ಯತೀತತೆ’ಯನ್ನು ಪ್ರೋತ್ಸಾಹಿಸುತ್ತಿದೆ ಎಂದು ಹಲವು ಟ್ವಿಟ್ಟಿರಿಗರು ಆರೋಪಿಸಿದ್ದರು. ಇದನ್ನು ಕಾಂಗ್ರೆಸ್ ಮುಖಂಡ ಶಶಿ ತರೂರ್, ಲೇಖಕ ಚೇತನ್ ಭಗತ್, ಖ್ಯಾತ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ಸೇರಿದಂತೆ ಹಲವು ಮಂದಿ ಖಂಡಿಸಿದ್ದಾರೆ.

’ತನಿಷ್ಕ್ ತಮ್ಮ ಉದ್ಯೋಗಿಗಳು ಮತ್ತು ಮಳಿಗೆಗಳ ಸುರಕ್ಷತೆಗಾಗಿ ಜಾಹೀರಾತನ್ನು ವಾಪಸ್ ಪಡೆಯುವ ನಿರ್ಧಾರ ತೆಗೆದುಕೊಂಡರು. ನಾವು ಆರ್ಥಿಕ ಬಿಕ್ಕಟ್ಟಿನಲ್ಲಿದ್ದೇವೆ ಮತ್ತು ತನಿಷ್ಕ್ ಹಲವು ಆಭರಣ ಮಳಿಗೆಗಳನ್ನು ಹೊಂದಿದೆ. ಇವುಗಳ ಸುರಕ್ಷತೆ ಮುಖ್ಯ ಹಾಗಾಗಿ ಜಾಹೀರಾತು ವಾಪಸ್ ಪಡೆದಿದ್ದಾರೆ’ ಎಂದು ಜಾಹೀರಾತು ನಿರ್ದೇಶಕಿ ಜೊಯೀತಾ ಹೇಳಿದ್ದಾರೆ.


ಇದನ್ನೂ ಓದಿ: ನಾವು ಜಾತ್ಯಾತೀತರು, ಜಾತ್ಯಾತೀತರಾಗೇ ಇರುತ್ತೇವೆ- ತನಿಷ್ಕ್ ಜಾಹೀರಾತು ನಿರ್ದೇಶಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...