Homeಮುಖಪುಟತನಿಷ್ಕ್ ಜಾಹೀರಾತಿಗೆ ಟ್ವಿಟ್ಟರ್‌ನಲ್ಲಿ ಭಾರಿ ಬೆಂಬಲ: ಅಂತರ್‌ಧರ್ಮೀಯ ವಿವಾಹಿತರ ಮನದಾಳದ ಮಾತು

ತನಿಷ್ಕ್ ಜಾಹೀರಾತಿಗೆ ಟ್ವಿಟ್ಟರ್‌ನಲ್ಲಿ ಭಾರಿ ಬೆಂಬಲ: ಅಂತರ್‌ಧರ್ಮೀಯ ವಿವಾಹಿತರ ಮನದಾಳದ ಮಾತು

ಅಂತರ್-ಧರ್ಮೀಯ ಕುಟುಂಬಗಳಲ್ಲಿ ಮದುವೆಯಾದ ಕಲಾವಿದರು, ಸಾಮಾಜಿಕ ಮಾಧ್ಯಮ ಬಳಕೆದಾರರು ತಮ್ಮ ಖಾತೆಗಳಲ್ಲಿ ಫೋಟೋಗಳನ್ನು ಶೇರ್ ಮಾಡಿ ತನಿಷ್ಕ್ ಜಾಹೀರಾತನ್ನು ಬೆಂಬಲಿಸುತ್ತಿದ್ದಾರೆ.

- Advertisement -
- Advertisement -

ಕೆಟ್ಟ ಟ್ರೋಲಿಂಗ್ ನಂತರ ಹಿಂದೂ-ಮುಸ್ಲಿಂ ದಂಪತಿಗಳು ಮತ್ತು ಅವರ ಕುಟುಂಬಗಳನ್ನು ಒಳಗೊಂಡ ಜಾಹೀರಾತನ್ನು ಹಿಂತೆಗೆದುಕೊಂಡಿರುವ ಟೈಟಾನ್‌ ಆಭರಣ ಬ್ರಾಂಡ್ ತನಿಷ್ಕ್‌ನ ಏಕತ್ವಂ ಜಾಹೀರಾತಿಗೆ ಸಾಮಾಜಿಕ ಮಾಧ್ಯಮದಲ್ಲಿ ಭಾರಿ ಬೆಂಬಲ ವ್ಯಕ್ತವಾಗುತ್ತಿದೆ.

ಅಂತರ್-ಧರ್ಮೀಯ ಕುಟುಂಬಗಳಲ್ಲಿ ಮದುವೆಯಾದ ಕಲಾವಿದರು, ಸಾಮಾಜಿಕ ಮಾಧ್ಯಮ ಬಳಕೆದಾರರು ತಮ್ಮ ಖಾತೆಗಳಲ್ಲಿ ಫೋಟೋಗಳನ್ನು ಶೇರ್ ಮಾಡಿ ತಮ್ಮ ಅನುಭವಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಈ ಮೂಲಕ ತನಿಷ್ಕ್ ಏಕತ್ವಂ ಜಾಹೀರಾತನ್ನು ಬೆಂಬಲಿಸುತ್ತಿದ್ದಾರೆ.

ನಟ ಮೊಹಮ್ಮದ್ ಜೀಶನ್ ಅಯೂಬ್ ಅವರನ್ನು ಮದುವೆಯಾದ ನಟಿ, ನಿರ್ದೇಶಕಿ ರಸಿಕಾ ಅಗಾಶೆ ತಮ್ಮ 6 ವರ್ಷಗಳ ಹಿಂದಿನ ಬೇಬಿ ಶವರ್(ಸೀಮಂತ) ಚಿತ್ರವನ್ನು ಹಂಚಿಕೊಂಡಿದ್ದಾರೆ.

“ಲವ್ ಜಿಹಾದ್ ಎಂದು ಕೂಗುವ ಮೊದಲು, ವಿಶೇಷ ಮದುವೆ ಕಾಯ್ದೆಯ ಬಗ್ಗೆ ತಿಳಿದುಕೊಳ್ಳೋಣ” ಎಂದು ರಸಿಕಾ ಅಗಾಶೆ ಹೇಳಿದ್ದಾರೆ. ಫೋಟೋದಲ್ಲಿ ಜೀಶನ್ ಅಯ್ಯೂಬ್ ಕೂಡ ಅವರ ಪಕ್ಕದಲ್ಲಿ ಕುಳಿತಿರುವುದನ್ನು ನೋಡಬಹುದು.

ಇದನ್ನೂ ಓದಿ: ಸೌಹಾರ್ದತೆ ಸಾರುವ ’ಏಕತ್ವಂ’ ಜಾಹೀರಾತು ನಿಲ್ಲಿಸಿದ ತನಿಷ್ಕ್ ಆಭರಣ ಕಂಪನಿ: ಅಂತದ್ದೇನಿದೆ ಅದರಲ್ಲಿ?

ಗ್ರಿಹಾ ಅತುಲ್, “ತನೀಶ್ಕ್ ಜಾಹೀರಾತು ಅವಳಂತಹ ಅನೇಕರ ನೈಜತೆಗಳನ್ನು ಆಧರಿಸಿದೆ. ನಾನು ಮುಸ್ಲಿಂ ಮನೆಯೊಂದರಲ್ಲಿ ಮದುವೆಯಾಗಿದ್ದೇನೆ. ಅದು ನನ್ನ ಧಾರ್ಮಿಕ ಗುರುತನ್ನು ಗೌರವಿಸುತ್ತದೆ ಮತ್ತು ಸ್ವೀಕರಿಸುತ್ತದೆ. ಆದ್ದರಿಂದ ತನೀಷ್ಕ್ ಜಾಹೀರಾತು ಕಲ್ಪನೆಯಲ್ಲ. ಇದು ಫ್ಯಾಸಿಸ್ಟ್ ಶಕ್ತಿಗಳಿಂದ ಉದ್ದೇಶಪೂರ್ವಕವಾಗಿ ನಿರಾಕರಿಸಲ್ಪಟ್ಟ ನಮ್ಮ ಕಾಲದ ವಾಸ್ತವವಾಗಿದೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.

 

ಇದನ್ನೂ ಓದಿ: ತನಿಷ್ಕ್ ಜಾಹೀರಾತು: ಗುಜರಾತ್‌ನ ಅಂಗಡಿ ಮಳಿಗೆಗಳಿಗೆ ಬೆದರಿಕೆ!

ಮದುವೆಯಾಗಿ 44 ವರ್ಷಗಳಾದ ಇನ್ನೊಂದು ದಂಪತಿ ತಮ್ಮ ಕಥೆಯನ್ನೂ ಹಂಚಿಕೊಂಡಿದ್ದಾರೆ. ಹಲವು ವರ್ಷಗಳ ಹೋರಾಟದ ನಂತರ ಈ ದಂಪತಿ ಈಗ ಶಾಂತಿಯನ್ನು ಕಂಡುಕೊಂಡಿದ್ದಾರೆ. ಗೋವಾದಲ್ಲಿ ತಮ್ಮ ಮನೆಗೆ ಹಿಂದಿಯಲ್ಲಿ “ಹಮ್” ಎಂದು ಹೆಸರಿಸಿದ್ದಾರೆ. ಅಲ್ಲಿ “ಎಚ್” ಎಂದರೆ ಹಿಂದೂ ಮತ್ತು”ಎಂ” ಮುಸ್ಲಿಂ.

“I saw her for the first time before Dussehra– we were neighbours and family friends. But because I was away at boarding…

Posted by Humans of Bombay on Wednesday, October 14, 2020

 

ತನಿಷ್ಕ್ ಜಾಹೀರಾತು ಲವ್ ಜಿಹಾದ್ ಎಂಬ ಕಾಮೆಂಟುಗಳಳ ಹಿನ್ನೆಲೆ ಈ ಸುಂದರ ಕಥೆಯನ್ನು ಅಕ್ಟೋಬರ್ 14, 2020 ರಂದು ಹ್ಯೂಮನ್ಸ್ ಆಫ್ ಬಾಂಬೆ ಪೋಸ್ಟ್ ಮಾಡಿದೆ.

ಇವುಗಳ ಜೊತೆಗೆ ಅನೇಕ ಮಂದಿ ತನಿಷ್ಕ್‌ನಲ್ಲಿ ಆಭರಣಗಳನ್ನು ಕೊಳ್ಳುವ ಮೂಲಕ, ಅಲ್ಲೇ ಆಭರಣ ಕೊಳ್ಳುವ ಯೋಜನೆಗಳ ಮೂಲಕ ತನಿಷ್ಕ್‌ಗೆ ಬೆಂಬಲ ಸೂಚಿಸುತ್ತಿದ್ದಾರೆ.

ಇನ್ನು ಕೆಲವರು ತಾವು ತನಿಷ್ಕ್‌ನಲ್ಲಿ ಆಭರಣ ಕೊಂಡುಕೊಂಡಿರುವುದಕ್ಕೆ ಹೆಮ್ಮೆಯಿದೆ ಎಂದು ಪೋಸ್ಟ್ ಮಾಡಿದ್ದಾರೆ.

ಏಕತ್ವಂ ಅಭಿಯಾನದ ಜಾಹೀರಾತಿನ ಮೂಲಕ ತನಿಷ್ಕ್ ‘ಲವ್ ಜಿಹಾದ್’ ಹಾಗೂ ‘ನಕಲಿ ಜಾತ್ಯತೀತತೆ’ಯನ್ನು ಪ್ರೋತ್ಸಾಹಿಸುತ್ತಿದೆ ಎಂದು ಹಲವು ಟ್ವಿಟ್ಟಿರಿಗರು ಆರೋಪಿಸಿದ್ದರು. ಇದನ್ನು ಕಾಂಗ್ರೆಸ್ ಮುಖಂಡ ಶಶಿ ತರೂರ್, ಲೇಖಕ ಚೇತನ್ ಭಗತ್, ಖ್ಯಾತ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ಸೇರಿದಂತೆ ಹಲವು ಮಂದಿ ಖಂಡಿಸಿದ್ದಾರೆ.

’ತನಿಷ್ಕ್ ತಮ್ಮ ಉದ್ಯೋಗಿಗಳು ಮತ್ತು ಮಳಿಗೆಗಳ ಸುರಕ್ಷತೆಗಾಗಿ ಜಾಹೀರಾತನ್ನು ವಾಪಸ್ ಪಡೆಯುವ ನಿರ್ಧಾರ ತೆಗೆದುಕೊಂಡರು. ನಾವು ಆರ್ಥಿಕ ಬಿಕ್ಕಟ್ಟಿನಲ್ಲಿದ್ದೇವೆ ಮತ್ತು ತನಿಷ್ಕ್ ಹಲವು ಆಭರಣ ಮಳಿಗೆಗಳನ್ನು ಹೊಂದಿದೆ. ಇವುಗಳ ಸುರಕ್ಷತೆ ಮುಖ್ಯ ಹಾಗಾಗಿ ಜಾಹೀರಾತು ವಾಪಸ್ ಪಡೆದಿದ್ದಾರೆ’ ಎಂದು ಜಾಹೀರಾತು ನಿರ್ದೇಶಕಿ ಜೊಯೀತಾ ಹೇಳಿದ್ದಾರೆ.


ಇದನ್ನೂ ಓದಿ: ನಾವು ಜಾತ್ಯಾತೀತರು, ಜಾತ್ಯಾತೀತರಾಗೇ ಇರುತ್ತೇವೆ- ತನಿಷ್ಕ್ ಜಾಹೀರಾತು ನಿರ್ದೇಶಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...