Homeಮುಖಪುಟತನಿಷ್ಕ್ ಜಾಹೀರಾತಿಗೆ ಟ್ವಿಟ್ಟರ್‌ನಲ್ಲಿ ಭಾರಿ ಬೆಂಬಲ: ಅಂತರ್‌ಧರ್ಮೀಯ ವಿವಾಹಿತರ ಮನದಾಳದ ಮಾತು

ತನಿಷ್ಕ್ ಜಾಹೀರಾತಿಗೆ ಟ್ವಿಟ್ಟರ್‌ನಲ್ಲಿ ಭಾರಿ ಬೆಂಬಲ: ಅಂತರ್‌ಧರ್ಮೀಯ ವಿವಾಹಿತರ ಮನದಾಳದ ಮಾತು

ಅಂತರ್-ಧರ್ಮೀಯ ಕುಟುಂಬಗಳಲ್ಲಿ ಮದುವೆಯಾದ ಕಲಾವಿದರು, ಸಾಮಾಜಿಕ ಮಾಧ್ಯಮ ಬಳಕೆದಾರರು ತಮ್ಮ ಖಾತೆಗಳಲ್ಲಿ ಫೋಟೋಗಳನ್ನು ಶೇರ್ ಮಾಡಿ ತನಿಷ್ಕ್ ಜಾಹೀರಾತನ್ನು ಬೆಂಬಲಿಸುತ್ತಿದ್ದಾರೆ.

- Advertisement -
- Advertisement -

ಕೆಟ್ಟ ಟ್ರೋಲಿಂಗ್ ನಂತರ ಹಿಂದೂ-ಮುಸ್ಲಿಂ ದಂಪತಿಗಳು ಮತ್ತು ಅವರ ಕುಟುಂಬಗಳನ್ನು ಒಳಗೊಂಡ ಜಾಹೀರಾತನ್ನು ಹಿಂತೆಗೆದುಕೊಂಡಿರುವ ಟೈಟಾನ್‌ ಆಭರಣ ಬ್ರಾಂಡ್ ತನಿಷ್ಕ್‌ನ ಏಕತ್ವಂ ಜಾಹೀರಾತಿಗೆ ಸಾಮಾಜಿಕ ಮಾಧ್ಯಮದಲ್ಲಿ ಭಾರಿ ಬೆಂಬಲ ವ್ಯಕ್ತವಾಗುತ್ತಿದೆ.

ಅಂತರ್-ಧರ್ಮೀಯ ಕುಟುಂಬಗಳಲ್ಲಿ ಮದುವೆಯಾದ ಕಲಾವಿದರು, ಸಾಮಾಜಿಕ ಮಾಧ್ಯಮ ಬಳಕೆದಾರರು ತಮ್ಮ ಖಾತೆಗಳಲ್ಲಿ ಫೋಟೋಗಳನ್ನು ಶೇರ್ ಮಾಡಿ ತಮ್ಮ ಅನುಭವಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಈ ಮೂಲಕ ತನಿಷ್ಕ್ ಏಕತ್ವಂ ಜಾಹೀರಾತನ್ನು ಬೆಂಬಲಿಸುತ್ತಿದ್ದಾರೆ.

ನಟ ಮೊಹಮ್ಮದ್ ಜೀಶನ್ ಅಯೂಬ್ ಅವರನ್ನು ಮದುವೆಯಾದ ನಟಿ, ನಿರ್ದೇಶಕಿ ರಸಿಕಾ ಅಗಾಶೆ ತಮ್ಮ 6 ವರ್ಷಗಳ ಹಿಂದಿನ ಬೇಬಿ ಶವರ್(ಸೀಮಂತ) ಚಿತ್ರವನ್ನು ಹಂಚಿಕೊಂಡಿದ್ದಾರೆ.

“ಲವ್ ಜಿಹಾದ್ ಎಂದು ಕೂಗುವ ಮೊದಲು, ವಿಶೇಷ ಮದುವೆ ಕಾಯ್ದೆಯ ಬಗ್ಗೆ ತಿಳಿದುಕೊಳ್ಳೋಣ” ಎಂದು ರಸಿಕಾ ಅಗಾಶೆ ಹೇಳಿದ್ದಾರೆ. ಫೋಟೋದಲ್ಲಿ ಜೀಶನ್ ಅಯ್ಯೂಬ್ ಕೂಡ ಅವರ ಪಕ್ಕದಲ್ಲಿ ಕುಳಿತಿರುವುದನ್ನು ನೋಡಬಹುದು.

ಇದನ್ನೂ ಓದಿ: ಸೌಹಾರ್ದತೆ ಸಾರುವ ’ಏಕತ್ವಂ’ ಜಾಹೀರಾತು ನಿಲ್ಲಿಸಿದ ತನಿಷ್ಕ್ ಆಭರಣ ಕಂಪನಿ: ಅಂತದ್ದೇನಿದೆ ಅದರಲ್ಲಿ?

ಗ್ರಿಹಾ ಅತುಲ್, “ತನೀಶ್ಕ್ ಜಾಹೀರಾತು ಅವಳಂತಹ ಅನೇಕರ ನೈಜತೆಗಳನ್ನು ಆಧರಿಸಿದೆ. ನಾನು ಮುಸ್ಲಿಂ ಮನೆಯೊಂದರಲ್ಲಿ ಮದುವೆಯಾಗಿದ್ದೇನೆ. ಅದು ನನ್ನ ಧಾರ್ಮಿಕ ಗುರುತನ್ನು ಗೌರವಿಸುತ್ತದೆ ಮತ್ತು ಸ್ವೀಕರಿಸುತ್ತದೆ. ಆದ್ದರಿಂದ ತನೀಷ್ಕ್ ಜಾಹೀರಾತು ಕಲ್ಪನೆಯಲ್ಲ. ಇದು ಫ್ಯಾಸಿಸ್ಟ್ ಶಕ್ತಿಗಳಿಂದ ಉದ್ದೇಶಪೂರ್ವಕವಾಗಿ ನಿರಾಕರಿಸಲ್ಪಟ್ಟ ನಮ್ಮ ಕಾಲದ ವಾಸ್ತವವಾಗಿದೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.

 

ಇದನ್ನೂ ಓದಿ: ತನಿಷ್ಕ್ ಜಾಹೀರಾತು: ಗುಜರಾತ್‌ನ ಅಂಗಡಿ ಮಳಿಗೆಗಳಿಗೆ ಬೆದರಿಕೆ!

ಮದುವೆಯಾಗಿ 44 ವರ್ಷಗಳಾದ ಇನ್ನೊಂದು ದಂಪತಿ ತಮ್ಮ ಕಥೆಯನ್ನೂ ಹಂಚಿಕೊಂಡಿದ್ದಾರೆ. ಹಲವು ವರ್ಷಗಳ ಹೋರಾಟದ ನಂತರ ಈ ದಂಪತಿ ಈಗ ಶಾಂತಿಯನ್ನು ಕಂಡುಕೊಂಡಿದ್ದಾರೆ. ಗೋವಾದಲ್ಲಿ ತಮ್ಮ ಮನೆಗೆ ಹಿಂದಿಯಲ್ಲಿ “ಹಮ್” ಎಂದು ಹೆಸರಿಸಿದ್ದಾರೆ. ಅಲ್ಲಿ “ಎಚ್” ಎಂದರೆ ಹಿಂದೂ ಮತ್ತು”ಎಂ” ಮುಸ್ಲಿಂ.

“I saw her for the first time before Dussehra– we were neighbours and family friends. But because I was away at boarding…

Posted by Humans of Bombay on Wednesday, October 14, 2020

 

ತನಿಷ್ಕ್ ಜಾಹೀರಾತು ಲವ್ ಜಿಹಾದ್ ಎಂಬ ಕಾಮೆಂಟುಗಳಳ ಹಿನ್ನೆಲೆ ಈ ಸುಂದರ ಕಥೆಯನ್ನು ಅಕ್ಟೋಬರ್ 14, 2020 ರಂದು ಹ್ಯೂಮನ್ಸ್ ಆಫ್ ಬಾಂಬೆ ಪೋಸ್ಟ್ ಮಾಡಿದೆ.

ಇವುಗಳ ಜೊತೆಗೆ ಅನೇಕ ಮಂದಿ ತನಿಷ್ಕ್‌ನಲ್ಲಿ ಆಭರಣಗಳನ್ನು ಕೊಳ್ಳುವ ಮೂಲಕ, ಅಲ್ಲೇ ಆಭರಣ ಕೊಳ್ಳುವ ಯೋಜನೆಗಳ ಮೂಲಕ ತನಿಷ್ಕ್‌ಗೆ ಬೆಂಬಲ ಸೂಚಿಸುತ್ತಿದ್ದಾರೆ.

ಇನ್ನು ಕೆಲವರು ತಾವು ತನಿಷ್ಕ್‌ನಲ್ಲಿ ಆಭರಣ ಕೊಂಡುಕೊಂಡಿರುವುದಕ್ಕೆ ಹೆಮ್ಮೆಯಿದೆ ಎಂದು ಪೋಸ್ಟ್ ಮಾಡಿದ್ದಾರೆ.

ಏಕತ್ವಂ ಅಭಿಯಾನದ ಜಾಹೀರಾತಿನ ಮೂಲಕ ತನಿಷ್ಕ್ ‘ಲವ್ ಜಿಹಾದ್’ ಹಾಗೂ ‘ನಕಲಿ ಜಾತ್ಯತೀತತೆ’ಯನ್ನು ಪ್ರೋತ್ಸಾಹಿಸುತ್ತಿದೆ ಎಂದು ಹಲವು ಟ್ವಿಟ್ಟಿರಿಗರು ಆರೋಪಿಸಿದ್ದರು. ಇದನ್ನು ಕಾಂಗ್ರೆಸ್ ಮುಖಂಡ ಶಶಿ ತರೂರ್, ಲೇಖಕ ಚೇತನ್ ಭಗತ್, ಖ್ಯಾತ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ಸೇರಿದಂತೆ ಹಲವು ಮಂದಿ ಖಂಡಿಸಿದ್ದಾರೆ.

’ತನಿಷ್ಕ್ ತಮ್ಮ ಉದ್ಯೋಗಿಗಳು ಮತ್ತು ಮಳಿಗೆಗಳ ಸುರಕ್ಷತೆಗಾಗಿ ಜಾಹೀರಾತನ್ನು ವಾಪಸ್ ಪಡೆಯುವ ನಿರ್ಧಾರ ತೆಗೆದುಕೊಂಡರು. ನಾವು ಆರ್ಥಿಕ ಬಿಕ್ಕಟ್ಟಿನಲ್ಲಿದ್ದೇವೆ ಮತ್ತು ತನಿಷ್ಕ್ ಹಲವು ಆಭರಣ ಮಳಿಗೆಗಳನ್ನು ಹೊಂದಿದೆ. ಇವುಗಳ ಸುರಕ್ಷತೆ ಮುಖ್ಯ ಹಾಗಾಗಿ ಜಾಹೀರಾತು ವಾಪಸ್ ಪಡೆದಿದ್ದಾರೆ’ ಎಂದು ಜಾಹೀರಾತು ನಿರ್ದೇಶಕಿ ಜೊಯೀತಾ ಹೇಳಿದ್ದಾರೆ.


ಇದನ್ನೂ ಓದಿ: ನಾವು ಜಾತ್ಯಾತೀತರು, ಜಾತ್ಯಾತೀತರಾಗೇ ಇರುತ್ತೇವೆ- ತನಿಷ್ಕ್ ಜಾಹೀರಾತು ನಿರ್ದೇಶಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...