Homeಕರ್ನಾಟಕಹುಕ್ಕೇರಿ: ಶಿಕ್ಷಕಿಯಿಂದ ಅಸ್ಪೃಶ್ಯತೆ ಆಚರಣೆ; ಶಾಲಾ ಆವರಣದಲ್ಲಿ ಪೋಷಕರ ಪ್ರತಿಭಟನೆ

ಹುಕ್ಕೇರಿ: ಶಿಕ್ಷಕಿಯಿಂದ ಅಸ್ಪೃಶ್ಯತೆ ಆಚರಣೆ; ಶಾಲಾ ಆವರಣದಲ್ಲಿ ಪೋಷಕರ ಪ್ರತಿಭಟನೆ

ಶಿಕ್ಷಕಿಯನ್ನು ವರ್ಗಾವಣೆ ಮಾಡುವಂತೆ ಶಿಕ್ಷಣಾಧಿಕಾರಿಯ ಕಾಲಿಗೆ ಬಿದ್ದ ಪೋಷಕರು

- Advertisement -
- Advertisement -

“ಸಂವಿಧಾನದ ಭಾರತದಲ್ಲಿ ಈಗಲೂ ಅಸಮಾನತೆ, ತಾರತಮ್ಯ, ಶ್ರೇಣಿಕೃತ ವ್ಯವಸ್ಥೆ ಕಾಡುತ್ತಿದೆ. ಕೊಳಕು ಜಾತಿವ್ಯವಸ್ಥೆಯಿಂದ ಹೊರಗಡೆ ಬರಲು ಸಾಧ್ಯವಾಗಿಲ್ಲ. ಮಹಿಳೆಯರು, ಮಕ್ಕಳ ಮೇಲೆ ಅತ್ಯಾಚಾರಗಳು ನಿರಂತರವಾಗಿವೆ. ಈ ಥರದ ಸಮಾಜವನ್ನು ಬದಲಾಯಿಸಲು ಸಂವಿಧಾನ ಕಟ್ಟಿಕೊಂಡಿದ್ದೇವೆ. ಶಿಕ್ಷಣ ವ್ಯವಸ್ಥೆಯೇ ಸಂವಿಧಾನದ ತೊಟ್ಟಿಲು. ನಿಜವಾದ ಸಂವಿಧಾನ ಆಶಯಗಳನ್ನು ಈಡೇರಿಸಬೇಕಾದರೆ ನೀವು ಬಲಿಷ್ಠ ಶಿಕ್ಷಣ ವ್ಯವಸ್ಥೆಯನ್ನು ರೂಪಿಸಬೇಕು” ಎನ್ನುತ್ತಾರೆ ಶಿಕ್ಷಣ ತಜ್ಞ ವಿ.ಪಿ.ನಿರಂಜನಾರಾಧ್ಯ. ಆದರೆ ಶಿಕ್ಷಕರೇ ಮತೀಯವಾಗಿಗಳು, ಜಾತಿವಾದಿಗಳು ಆದರೆ ಏನು ಮಾಡುವುದು? ಶಿಕ್ಷಕರ ಮೇಲೆಯೇ ಇಂತಹ ಆರೋಪಗಳು ಬಂದರೆ?

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಮದಿಹಳ್ಳಿ ಗ್ರಾಮದ ಸರಕಾರಿ ಶಾಲೆಯಲ್ಲಿ ಶಿಕ್ಷಕಿಯೊಬ್ಬರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆಂಬ ಆರೋಪ ಬಂದಿದ್ದು, ದಲಿತ ಸಮುದಾಯದ ಪೋಷಕರು ಶಾಲಾ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಮಕ್ಕಳ ಮನಸ್ಸಿನಲ್ಲಿ ಜಾತಿ ವಿಷ ಬೀಜ ಬಿತ್ತುವ ಶಿಕ್ಷಕಿಯನ್ನು ತಕ್ಷಣ ಬೇರೆಡೆಗೆ ವರ್ಗಾವಣೆ ಮಾಡಿ ನಮ್ಮ ಮಕ್ಕಳಿಗಾಗಿ ಉತ್ತಮ ಶಿಕ್ಷಕರನ್ನು ನೇಮಿಸಿ ಎಂದು ಬೇಡಿಕೆ ಇಟ್ಟಿರುವ ಹುಕ್ಕೇರಿ ತಾಲೂಕಿನ ದಲಿತ ಮುಖಂಡರು ಹುಕ್ಕೇರಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾಲಿಗೆ ಬಿದ್ದಿರುವ ಪ್ರಸಂಗವೂ ನಡೆದಿದೆ.

ಇಲ್ಲಿನ ಶಿಕ್ಷಕಿ ಎಂ.ಟಿ.ಅನುಪಮಾ ಅವರು ನಮ್ಮ ಗ್ರಾಮದ ಶಾಲೆಗೆ ಬಂದಾಗಿಲಿಂದ ದಲಿತ ಮಕ್ಕಳ ಬಗ್ಗೆ ಅಸಮಾನತೆಯ ಬೀಜ ಬಿತ್ತುವುದಲ್ಲದೆ, ದಲಿತ ಮಕ್ಕಳಿಗೆ ಅವಾಚ್ಯ ಪದಗಳನ್ನು ಬಳಸಿ ನಿಂದಿಸುತ್ತಾರೆ. ಮಕ್ಕಳ ಪಾಲಕರು ಈ ಬಗ್ಗೆ ಪ್ರಶ್ನಿಸಿದರೆ ಉಡಾಫೆ ಮಾತುಗಳನ್ನಾಡಿ ಬೇಜವಾಬ್ದಾರಿಯಿಂದ ವರ್ತಿಸುತ್ತಾರೆ ಎಂದು ಮದಿಹಳ್ಳಿ ಗ್ರಾಮದ ಗ್ರಾಮಸ್ಥರು ದಿಢೀರನೆ ಪ್ರತಿಭಟನೆ ಮಾಡುವ ಮೂಲಕ ನಮಗೆ ಈ ಶಿಕ್ಷಕಿ ಬೇಡ ಎಂದು ಪಟ್ಟು ಹಿಡಿದಿದ್ದಾರೆ.

ಇದನ್ನೂ ಓದಿರಿ: ಮ್ಯಾನ್ಯುಯಲ್‌ ಸ್ಕ್ಯಾವೆಂಜಿಂಗ್‌: ಪ್ರಶ್ನಿಸಿದ್ದಕ್ಕೆ ‘ಈ ಕೆಲಸ ಮಾಡಲೆಂದೇ ಜಾತಿಗಳಿವೆ’ ಎಂದ ಇಂಜಿನಿಯರ್‌‌‌!

ಕಳೆದ ಆಗಸ್ಟ್‌ 15ರ ಸ್ವಾತಂತ್ರ್ಯ ಉತ್ಸವ ದಿನದಂದು ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್‌ ಅಂಬೇಡ್ಕರ್ ಅವರ ಭಾವಚಿತ್ರವನ್ನು ಪೂಜೆಗೆ ಇರಿಸಿರಲಿಲ್ಲ. ಅಲ್ಲದೆ ದಲಿತ ಮಕ್ಕಳನ್ನು ಎರಡನೇ ದರ್ಜೆಯ ಪ್ರಜೆಗಳ ರೀತಿ ನೋಡಿಕೊಳ್ಳುತ್ತಾರೆ. ಹೀಗಾಗಿ ಈ ಕೂಡಲೇ ಮುಖ್ಯಶಿಕ್ಷಕಿ ಅನುಪಮಾ ಅವರನ್ನು ಇಲ್ಲಿಂದ ವರ್ಗಾವಣೆ ಮಾಡಬೇಕು ಎಂದು ದಲಿತಪರ ಸಂಘಟನೆಗಳು ಈ ಹಿಂದೆಯೂ ಪ್ರತಿಭಟಿಸಿದ್ದವು.

ಪ್ರತಿಭಟನೆಗೆ ಸ್ಪಂದಿಸಿ ಮುಖ್ಯ ಶಿಕ್ಷಕಿ ಅನುಪಮಾ ಅವರನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು ಬೇರೆ ಶಾಲೆಗೆ ವರ್ಗಾವಣೆ ಮಾಡಿದ್ದರು. ಆದರೆ ಇದೀಗ ಮತ್ತೆ ಕೆಲವು ಮೇಲ್ಜಾತಿಯ ಪ್ರಭಾವಿಗಳ ಒತ್ತಡಕ್ಕೆ ಮಣಿದು ಅನುಪಮಾ ಅವರನ್ನು ಮತ್ತೆ ಇದೇ ಶಾಲೆಗೆ ಮರು ನೇಮಿಸಲಾಗಿದೆ ಎಂದು ಪೋಷಕರು ಹಾಗೂ ದಲಿತ ಸಂಘಟನೆಗಳ ಮುಖಂಡರು ಬೇಸರ ವ್ಯಕ್ತಪಡಿಸಿದ್ದಾರೆ. ಶಿಕ್ಷಕಿ ಅನುಪಮಾ ಅವರನ್ನು ಕೂಡಲೇ ಅಮಾನತು ಮಾಡಬೇಕು ಎಂದು ಆಗ್ರಹಿಸಿದ್ದಾರೆ.

‘ಮಾತೆತ್ತಿದರೆ ನಾವೆಲ್ಲ ಹಿಂದೂ, ದುಡ್ಡಿನ ಆಸೆಗೆ ಮತಾಂತರ ಮಾಡ್ತಾರೆ ಎಂದೆಲ್ಲ ಹೋರಾಟ ಮಾಡುವ ಹಿಂದೂ ಸಂಘಟನೆಗಳು ಅಸ್ಪೃಶ್ಯತೆ ವಿರುದ್ಧ ಯಾಕೆ ಧ್ವನಿ ಎತ್ತುತ್ತಿಲ್ಲ’ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿದ ಕ್ಷೇತ್ರ ಶಿಕ್ಷಣಾಧಿಕಾರಿಯವರಿಗೆ ಪೋಷಕರು ತಮ್ಮ ಅಳಲು ತೋಡಿಕೊಂಡಿದ್ದಾರೆ. “ಶಿಕ್ಷಕಿ ಅನುಪಮಾ ನಮ್ಮ ಗ್ರಾಮದ ಶಾಲೆಗೆ ಬಂದಾಗಿಲಿಂದ ದಲಿತ ಮಕ್ಕಳ ಬಗ್ಗೆ ಅಸಮಾನತೆಯ ಬೀಜ ಬಿತ್ತುವುದಲ್ಲದೆ, ದಲಿತ ಮಕ್ಕಳಿಗೆ ಅವಾಚ್ಯ ಪದಗಳನ್ನು ಬಳಸಿ ನಿಂದಿಸುತ್ತಾರೆ. ಮಕ್ಕಳ ಪಾಲಕರು ಈ ಬಗ್ಗೆ ಪ್ರಶ್ನಿಸಿದರೆ ಉಡಾಫೆ ಮಾತುಗಳನ್ನಾಡಿ ಬೇಜವಾಬ್ದಾರಿಯಿಂದ ವರ್ತಿಸುತ್ತಾರೆ” ಎಂದು ತಿಳಿಸಿದ್ದಾರೆ.

ಆದೇಶ: ಪೋಷಕರ ಆಗ್ರಹಕ್ಕೆ ಸ್ಪಂದಿಸಿರುವ ಶಿಕ್ಷಣಾಧಿಕಾರಿ, ಜಾತಿವಾದದ ಆರೋಪ ಹೊತ್ತಿರುವ ಶಿಕ್ಷಕಿಯನ್ನು ಬೇರೆ ಶಾಲೆಗೆ ವರ್ಗಾವಣೆ ಮಾಡಿದ್ದಾರೆ ಎನ್ನಲಾಗಿದೆ.

ಉತ್ತರಪ್ರದೇಶದಲ್ಲೂ ಇಂತಹದ್ದೇ ಪ್ರಕರಣ ಬಯಲಿಗೆ

ಶಿಕ್ಷಕರೇ ಜಾತಿಯನ್ನು ಪ್ರಚೋದಿಸುವ ಬೆಳವಣಿಗೆ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿರುವಂತಿದೆ. ಉತ್ತರ ಪ್ರದೇಶದಲ್ಲಿ ಇಂತಹದ್ದೇ ಪ್ರಕರಣ ಇತ್ತೀಚೆಗೆ ವರದಿಯಾಗಿತ್ತು. ಮಧ್ಯಾಹ್ನದ ಬಿಸಿಯೂಟಕ್ಕಾಗಿ ದಲಿತ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ತಟ್ಟೆಗಳನ್ನು ಇರಿಸಿದ್ದರಿಂದ ಶಾಲೆಯ ಮುಖ್ಯಶಿಕ್ಷಕಿಯನ್ನು ಅಮಾನತು ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿತ್ತು.

ಇದನ್ನೂ ಓದಿರಿ: ಬೆಂಗಳೂರು: ಪೌರಕಾರ್ಮಿಕರ ಘನತೆಯ ಬದುಕು, ಗೌರವ, ವಸತಿ, ಶಿಕ್ಷಣಕ್ಕಾಗಿ 15 ದಿನಗಳ ಜಾಥಾ

ಶಾಲೆಯ ಬಿಸಿಯೂಟ ನೌಕರರು ದಲಿತ ವಿದ್ಯಾರ್ಥಿಗಳ ತಟ್ಟೆಗಳನ್ನೂ ಮುಟ್ಟುವುದಿಲ್ಲ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿತ್ತು. ಮೈನ್‌‌ಪುರಿ ಜಿಲ್ಲೆಯ ದೌಡಾಪುರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿರುವ 80 ಮಕ್ಕಳಲ್ಲಿ 60 ಮಕ್ಕಳು ಪರಿಶಿಷ್ಟ ಜಾತಿಯವರು. ಆದಾಗ್ಯೂ, ಸಾಮಾನ್ಯ ಮತ್ತು ಹಿಂದುಳಿದ ವರ್ಗಗಳ ಮಕ್ಕಳ ಪಾತ್ರೆಗಳನ್ನು ಮಾತ್ರ ಅಡುಗೆಮನೆಯಲ್ಲಿ ಇರಿಸಲಾಗಿತ್ತು. ಈ ಕುರಿತ ವಿಡಿಯೋ ಕೆಲವು ದಿನಗಳ ಹಿಂದೆ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌‌ ಆಗಿತ್ತು.

ಗ್ರಾಮದ ಜನಸಂಖ್ಯೆಯಲ್ಲಿ ಶೇ. 35ರಷ್ಟು ದಲಿತರು, ಅಷ್ಟೇ ಪ್ರಮಾಣದಲ್ಲಿ ಠಾಕೂರರು ಇದ್ದು, ಉಳಿದವರು ಹಿಂದುಳಿದ ವರ್ಗಗಳಿಗೆ ಸೇರಿದವರಾಗಿದ್ದಾರೆ ಎಂದು ಸಾಹಬ್ ಸಿಂಗ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದರು.

ಇದನ್ನೂ ಓದಿರಿ: ರೈತರ ಹತ್ಯಾಕಾಂಡ ವಿರೋಧಿಸಿ ಮಹಾರಾಷ್ಟ್ರ ಬಂದ್: ಅಂಗಡಿ ಮುಂಗಟ್ಟು, ಮಾರುಕಟ್ಟೆ ಸಂಪೂರ್ಣ ಬಂದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...